”ಆರೆಸ್ಸೆಸ್ ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಯಾಕೆ ಲಾಠಿ, ಗನ್ ಟ್ರೈನಿಂಗ್ ಕೊಡ್ತಿಲ್ಲ?“-ಶಾಸಕ ಮಂಜುನಾಥ ಭಂಡಾರಿ

ಮಂಗಳೂರು: “ಬಿಜೆಪಿಯವರಿಗೆ ಒಂದು ಪಾಕಿಸ್ತಾನ ಇನ್ನೊಂದು ಮುಸ್ಲಿಂ ಇವೆರಡು ಬಿಟ್ರೆ ಏನೂ ಗೊತ್ತಿಲ್ಲ. ಬಿಜೆಪಿ 10 ವರ್ಷಗಳಲ್ಲಿ ನಡೆಸಿರುವ ಆಡಳಿತದಲ್ಲಿ ಯಾವುದನ್ನು ಹಿಡ್ಕೊಂಡು ಮತ ಕೇಳಿದ್ರಿ? ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ಬಗ್ಗೆ ಮಾತಾಡಿದ್ರೆ ದೇಶದ್ರೋಹಿ ಪಟ್ಟ ಕಟ್ಟುತ್ತೀರಿ. ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ರಲ್ಲಿ ಏನು ತಪ್ಪಿದೆ? ಆರೆಸ್ಸೆಸ್ ಹಿಂದುಳಿದ ವರ್ಗದ ಮಕ್ಕಳನ್ನು ಲಾಠಿ, ಗನ್ನು ಕೊಟ್ಟು ಕೊಡ್ತಾ ಇರೋ ತರಬೇತಿ ಏನು? ಸರಕಾರ ಹೇಳಿದ್ದು ಆರೆಸ್ಸೆಸ್ ಸಹಿತ ಖಾಸಗಿ ಸಂಘಟನೆಗಳಿಗೆ ಸರಕಾರಿ ಮೈದಾನ, ರಸ್ತೆ,…

Read More

ಹನಿ ಟ್ರ್ಯಾಪ್ ಕಿಂಗ್ ಪಿನ್ ನಿರೀಕ್ಷಾಳ ಬಂಧನ !

ಮಂಗಳೂರು: ತನ್ನ ರೂಮ್ ಮೇಟ್ ಗೆಳತಿಯರದ್ದೆ ಬಟ್ಟೆ ಬದಲಿಸುವ ನಗ್ನ ವಿಡಿಯೋ ಸೆರೆಹಿಡಿದು ಬ್ಲ್ಯಾಕ್ ಮೇಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕದ್ರಿ ಠಾಣಾ ಪೊಲೀಸರು ಆರೋಪಿ ನಿರೀಕ್ಷಳನ್ನು ಸದ್ಯ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಲೇಡಿಗೋಷನ್ ಆಸ್ಪತ್ರೆ ನರ್ಸ್ ಆಗಿದ್ದ ಕಳಸ ಮೂಲದ ನಿರೀಕ್ಷಾ ಕಾರ್ಕಳ ಮೂಲದ ತೀರಾ ಬಡ ಕುಟುಂಬಕ್ಕೆ ಸೇರಿದ ಅಭಿಷೇಕ್ ಆಚಾರ್ಯನನ್ನು ಪ್ರೀತಿಸುವ ನೆಪದಲ್ಲಿ ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ದೋಚಿದ್ದಳು. ನಿರೀಕ್ಷಾ ಕಿರುಕುಳ ತಾಳಲಾರದೆ ಅಭಿಷೇಕ್ ಬೆಳ್ಳಣ್ಣೆ ಸೂರ್ಯ ಲಾಡ್ಜ್…

Read More

ವೆನ್ಲಾಕ್ ನಲ್ಲಿ ಐಸಿಯು ಘಟಕಗಳ ಇಳಿಕೆಯಿಂದಾಗಿ ರೋಗಿಗಳ ಪರದಾಟ:- ಶಾಸಕ ಕಾಮತ್

ರಾಜ್ಯ ಕಾಂಗ್ರೆಸ್ ಸರ್ಕಾರವು ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದರಿಂದ ರೋಗಿಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಕೂಡಲೇ ಈ ಬಗ್ಗೆ ಆರೋಗ್ಯ ಸಚಿವರು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಪತ್ರದ ಮೂಲಕ ಆಗ್ರಹಿಸಿದರು. ನಾನು ಶಾಸಕನಾಗಿ ಆಯ್ಕೆಯಾದ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಯಾದ ವೆನ್ಲಾಕ್ ನಲ್ಲಿ ಕೇವಲ 16 ತೀವ್ರ ನಿಗಾ ಘಟಕಗಳಿದ್ದವು. ಆ ನಂತರ ರೋಗಿಗಳಿಗೆ ಅನುಕೂಲವಾಗಲು ಹಂತ ಹಂತವಾಗಿ ಅವುಗಳ ಸಂಖ್ಯೆಯನ್ನು ಹೆಚ್ಚಿಸಲಾಯಿತು. ಅಂತಿಮವಾಗಿ…

Read More

ಮಾನ್ಯತೆ ಇಲ್ಲದ ಚೆಕ್ ಗಳನ್ನು ನೀಡಿದ ಹಿನ್ನಲೆ ಆರೋಪಿತೆ ಫರಿಧಾ ಬೇಗಂನ ಬಂಧನ .

ಮಂಗಳೂರು: ಮಾನ್ಯತೆ ಇಲ್ಲದ ಚೆಕ್ ನೀಡಿ ,ಹಣ ಪಾವತಿಸದೇ ಬೆಲೆಬಾಳುವ ವಸ್ತುಗಳನ್ನು ಖರೀದಿಸಿ ವಂಚನೆ ಮಾಡಿದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳೂರು ನಗರ, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ದೂರು ನೀಡಿದ ಜಯರಾಯ ಅವರು ಮಂಗಳೂರು ನಗರದ ಎಂಪಾಯರ್ ಮಾಲ್ ನಲ್ಲಿ ಲ್ಯಾಪ್ ಟಾಪ್ ಬಜಾರ್ ಎಂಬ ಸ್ಟೋರ್ ಇಟ್ಟುಕೊಂಡಿದ್ದು ಎಲ್ಲಾ ಕಂಪನಿಗಳ ಲ್ಯಾಪ್ ಟಾಪ್ ಗಳನ್ನು ಸೇಲ್ಸ್…

Read More

ಶಿಕ್ಷಣದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಲೇ ಬಾರದು : ಎಂಎಲ್‌ಸಿ ಭೋಜೇ ಗೌಡ .

ಮಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಲೇ ಬಾರದು, ಹಾಗಿದ್ದರೆ ಮಾತ್ರ ಶಿಕ್ಷಣ ಕ್ಷೇತ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಭೋಜೇ ಗೌಡ ಹೇಳಿದರು . ಅವರು ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಭಾನುವಾರ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ಕುಷ್ಮಾ ಇದರ ದ.ಕ. ಜಿಲ್ಲಾ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ , ಐಎಎಸ್ , ಐಪಿಎಸ್ ಅಧಿಕಾರಿಗಳು ತಾವು ಕೂಡ ತಳಮಟ್ಟದ ಇಂತಹ ಶಿಕ್ಷಣ…

Read More

ಬಿಲ್ಲವರು ಮತ್ತು ಮೊಗವೀರರು ಪಕ್ಷ ಬೇಧ ಮರೆತು ಒಂದಾಗ ಬೇಕು ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬ ಬೇಕು ಮೊಗವೀರ ರತ್ನ ನಾಡೋಜ ಡಾ.ಜಿ.ಶಂಕರ್ .

ಮಂಗಳೂರು ದಸರಾ ಗೌರವ ಸಮ್ಮಾನ್ 2025 ಪ್ರಶಸ್ತಿ ಸ್ವೀಕರಿಸಲು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಆಗಮಿಸಿದ ಹಿಂದುಳಿದ ವರ್ಗಗಳ ನಾಯಕ ಮೊಗವೀರ ರತ್ನ ನಾಡೋಜ ಡಾ. ಜಿ. ಶಂಕರ್ ರವರು ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ವಂದಿಸಿ ಕ್ಷೇತ್ರದ ದೇವರ ದರ್ಶನ ಮಾಡಿದರು. ಬಿಲ್ಲವರು ಮತ್ತು ಮೊಗವೀರ ಸಮಾಜ ರಾಜಕೀಯ ರಹಿತವಾಗಿ ಒಂದಾಗ ಬೇಕು. ಬಿಲ್ಲವ ಸಮಾಜ ಮತ್ತು ಮೊಗವೀರ ಸಮಾಜದ ನಡುವೆ ರಾಜಕೀಯ ಪ್ರಜ್ಞೆಯ ಕೊರತೆಯಿಂದ ಬಿಲ್ಲವ ಸಮಾಜದ ಅಭ್ಯರ್ಥಿಗಳು ಚುನಾವಣೆ ನಿಂತಾಗ ಮೊಗವೀರ ಸಮಾಜ…

Read More

ಕುಲಶೇಖರದಲ್ಲಿ ಅತಿ ಮಳೆ ಗುಡುಗು ಸಿಡಿಲು ಬಡಿದು ಮನೆಗಳಿಗೆ ಹಾನಿ. ಸ್ಥಳಕ್ಕೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ ಭೇಟಿ ಮತ್ತು ಅಧಿಕಾರಿ ಗಳೊಂದಿಗೆ ಚರ್ಚೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅಳಪೆ ವಾರ್ಡ್ ನಂಬರ್ 51 ಸಿರ್ಲಾಪಡ್ಪು ನಲ್ಲಿ ನಿನ್ನೆ ಸಂಜೆ ಬಿದ್ದ ಅತಿಯಾದ ಮಳೆ, ಗುಡುಗು ಮತ್ತು ಸಿಡಿಲಿನಿಂದ ಸಿರ್ಲಾಪಡ್ಪು ನಲ್ಲಿ ಹೈಟೆನ್ಷನ್ ಲೈನ್ ಪ್ರಭಾವದಿಂದ ಸಿಡಿಲು ಬಡಿದು ಒಂದು ತೆಂಗಿನ ಮರ ಮತ್ತು ಮನೆಗಳಿಗೆ ಹಾನಿಯಾಗಿದ್ದು ಅನೇಕ ಮನೆಗಳ ವಿದ್ಯುತ್ ಸಂಪರ್ಕ ಕಡಿತಗೊಂಡು ಎಲ್ಲಾ ಮನೆಯ ಎಲೆಕ್ಟ್ರಿಕ್ ವಸ್ತುಗಳು ಸುಟ್ಟು ಹೋಗಿ ಮನೆ ಒಳಗೆ ಹಾನಿಯಾಗಿ ತುಂಬಲಾರದ ನಷ್ಟವಾಗಿದೆ, ಈ ಬಗ್ಗೆ ಈಗಾಗಲೇ ಸ್ಥಳಯ ಗ್ರಾಮ ಲೆಕ್ಕಾಧಿಕಾರಿಗಳಿಗೆ, ಮೆಸ್ಕಾಂ ಅಧಿಕಾರಿಗಳಿಗೆ…

Read More

ಆಟೋ ಚಾಲಕನ ಮೇಲೆ ಹಲ್ಲೆ: ಇಬ್ಬರು ಸಂಚಾರಿ ಪೊಲೀಸರ ಅಮಾನತು

ಆಟೋ ಚಾಲಕನ ಮೇಲೆ ಹಲ್ಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಸಂಚಾರ ಪೊಲೀಸರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.ಅ.17ರಂದು ಸಂಜೆ ಆಟೋ ಚಾಲಕ ಬಶೀರ್ ಕುರಿಯ ಎಂಬವರು ಸಮವಸ್ತ್ರ ಧರಿಸದೆ ಆಟೋ ಚಲಾಯಿಸುತ್ತಿದ್ದಾಗ, ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರ ಠಾಣೆಯ ಎಎಸ್ಐ ಚಿದಾನಂದ ರೈ ಹಾಗೂ ಸಿಪಿಸಿ ಶೈಲ ಎಂ.ಕೆ. ಅವರು ಕೈಸನ್ನೆ ಮೂಲಕ ನಿಲ್ಲಿಸಲು ಸೂಚಿಸಿದ್ದರು. ಆದರೆ ಚಾಲಕ ಆಟೋ ನಿಲ್ಲಿಸದೇ ವೇಗವಾಗಿ ಚಲಾಯಿಸಿದ ಕಾರಣ ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆಯಾಗಿದೆ. ಈ ವೇಳೆ ಪೊಲೀಸರಿಬ್ಬರೂ ಆತನನ್ನು ಹಿಂಬಾಲಿಸಿ…

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ 25 ನೇ ವರ್ಷದ ‘ನಮ್ಮಕುಡ್ಲ ಗೂಡುದೀಪ ಸ್ಪರ್ಧೆ .

ಮಂಗಳೂರು: ಜಿಲ್ಲೆಯ ಪ್ರಪ್ರಥಮ ತುಳು ವಾರ್ತಾ ವಾಹಿನಿ ನಮ್ಮಕುಡ್ಲ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ 25 ನೇ ವರ್ಷದ ‘ನಮ್ಮಕುಡ್ಲ ಗೂಡುದೀಪ ಸ್ಪರ್ಧೆ’ ಭಾನುವಾರ ನಡೆಯಿತು. ಸ್ಪರ್ಧೆಯು ಯಾವುದೇ ವಯೋಮಾನದ ನಿರ್ಬಂಧವಿಲ್ಲದೆ ಸಾಂಪ್ರದಾಯಿಕ, ಆಧುನಿಕ ಹಾಗೂ ಪ್ರತಿಕೃತಿ ಎಂಬ ಮೂರು ವಿಭಾಗಗಳಲ್ಲಿ ನಡೆದಿದ್ದು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಿಂದ ನೂರಾರು ಮಂದಿ ಸ್ಪರ್ಧಿಗಳು ಭಾಗವಹಿಸಿದ್ದರು. ಸ್ಪರ್ಧಿಗಳು ತಮ್ಮ ಮನೆಗಳಲ್ಲಿ ತಯಾರಿಸಿ ತಂದು ಪ್ರದರ್ಶಿಸಿದ ವಿಭಿನ್ನ ವಿನ್ಯಾಸದ, ವರ್ಣ ರಂಜಿತ…

Read More

“ಯಕ್ಷ ಸಿರಿ” ಯಕ್ಷಗಾನ ತರಬೇತಿ ಕೇಂದ್ರದ ತೃತೀಯ ವಾರ್ಷಿಕೋತ್ಸವ .

ಸುರತ್ಕಲ್: ಬಂಟರ ಸಂಘ(ರಿ) ಸುರತ್ಕಲ್ ಇದರ ವತಿಯಿಂದ ನಡೆಸಲ್ಪಡುವ “ಯಕ್ಷ ಸಿರಿ” ಯಕ್ಷಗಾನ ತರಬೇತಿ ಕೇಂದ್ರದ ತೃತೀಯ ವಾರ್ಷಿಕೋತ್ಸವ ಸಮಾರಂಭ ಸುರತ್ಕಲ್ ಬಂಟರ ಸಂಘದ ವಠಾರದಲ್ಲಿ ಜರುಗಿತು. ಗೋವಿಂದದಾಸ ಕಾಲೇಜು ಸುರತ್ಕಲ್ ಇದರ ಆಡಳಿತಾತ್ಮಕ ನಿರ್ದೇಶಕ ರಮೇಶ್ ಭಟ್ ಎಸ್.ಜಿ. ಇವರು ದೀಪ ಬೆಳಗಿಸಿ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿದ ಅವರು, “ನಾನು ಸುರತ್ಕಲ್ ಬಂಟರ ಸಂಘವನ್ನು ಹತ್ತಿರದಿಂದ ಗಮನಿಸುತ್ತ ಬಂದವನು. ಪ್ರತೀ ಸ್ಪರ್ಧೆಯಲ್ಲೂ ಸುರತ್ಕಲ್ ಬಂಟರ ಸಂಘ ಪ್ರಶಸ್ತಿ ಪಡೆದುಕೊಂಡೇ ಬಂದಿದೆ. ಸಾಂಸ್ಕೃತಿಕ…

Read More
error: Content is protected !!