ಸಾಹಿತ್ಯ ಲೋಕದಿಂದ ಬೆಳ್ಳಿಪರದೆಗೆ: ‘ಅದಿತಿ’ ಚಿತ್ರದ ಮೂಲಕ ಹೊಸ ಹೆಜ್ಜೆ ಇಟ್ಟ ಕಥಾಬಿಂದು ಪಿ.ವಿ. ಪ್ರದೀಪ್ ಕುಮಾರ್
ಮಂಗಳೂರು: ಎರಡು ದಶಕಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಖ್ಯಾತ ಲೇಖಕ ಹಾಗೂ ಕಾದಂಬರಿಕಾರ ಪಿ.ವಿ. ಪ್ರದೀಪ್ ಕುಮಾರ್ ಅವರ ಕಲ್ಪನೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ ಬಹುನಿರೀಕ್ಷಿತ ಎ ಐ ಆಧಾರಿತ ‘ಅದಿತಿ’ ಚಲನಚಿತ್ರ ಬುಧವಾರ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಪತ್ರಿಕಾ ಭವನದ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, ಪ್ರದೀಪ್ ಕುಮಾರ್ ಅವರು 50ಕ್ಕೂ ಹೆಚ್ಚು ಕಾದಂಬರಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ್ದು, ಅವುಗಳಲ್ಲಿ 30ಕ್ಕೂ ಅಧಿಕ ಕೃತಿಗಳು ‘ಸುಧಾ’, ‘ತರಂಗ’, ‘ಮಂಗಳ’, ‘ಕರ್ಮವೀರ’…
