ಜಾತಿಗಣತಿ ಮುಗಿಯದ ಹಿನ್ನಲೆ , ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಸಮೀಕ್ಷೆಯ ಅವಧಿ ವಿಸ್ತರಣೆ .

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಇನ್ನೂ ಕೂಡ ಜಾತಿ ಗಣತಿ ಸಂಪೂರ್ಣವಾಗಿಲ್ಲ. ಈ ಮಧ್ಯೆ ಇದೀಗ ದೀಪಾವಳಿ ಹಬ್ಬ ಸನಿಹದಲ್ಲಿದ್ದು ಹೀಗಾಗಿ ರಾಜ್ಯ ಸರ್ಕಾರ ಅಕ್ಟೋಬರ್.23ರವರೆಗೆ 3 ದಿನಗಳ ಕಾಲ ಜಾತಿಗಣತಿ ಸಮೀಕ್ಷೆಗೆ ತಾತ್ಕಾಲಿಕ ವಿರಾಮ ನೀಡಿದೆ. ಹೀಗೆ ಸಮೀಕ್ಷ ಅವಧಿ ವಿಸ್ತರಣೆ ವೇಳೆ ಶಿಕ್ಷಕರನ್ನು ನಿಯೋಜಿಲ್ಲ. ಸರ್ವೆಗೆ ಇತರೆ ಇಲಾಖೆಗಳ ಸಿಬ್ಬಂದಿಯನ್ನೂ ಬಳಕೆ ಮಾಡಿಕೊಳ್ಳಲಾಗುತ್ತಿದೆ.ಸದ್ಯ ಬೆಂಗಳೂರಿನಲ್ಲಿ ಸರ್ವೆ ಕಾರ್ಯ ಪೂರ್ಣವಾಗಿಲ್ಲ. ಇನ್ನುಳಿದಂತೆ ರಾಮನಗರ, ಬೀದರ್ ನಲ್ಲಿ ಶೇ 90 ಗಿಂತ ಕಡಿಮೆ ಸರ್ವೆಯಾಗಿದ್ದು ಅ.31ರವರೆಗೆ ಸರ್ವೆ ವಿಸ್ತರಣೆ…

Read More

ಬೈಂದೂರು: ಆಟೋ ರಿಕ್ಷಾಕ್ಕೆ ಪಿಕಪ್ ಡಿಕ್ಕಿ : ರಿಕ್ಷಾ ಚಾಲಕ ಸಾವು

ಉಡುಪಿ: ಪಿಕಪ್ ವಾಹನವೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೆ ಮೃತಪಟ್ಟ ಘಟನೆ ಶಿರೂರು ಕೆಳಪೇಟೆಯಲ್ಲಿ ಇಂದು ಸಂಭವಿಸಿದೆ. ಶಿರೂರು ಗ್ರಾಮದ ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕರಾ ಇಲಿಯಾಸ್‌(49) ಮೃತಪಟ್ಟ ಚಾಲಕ. ಮಲ್ಪೆಯಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಮೀನಿನ ವಾಹನ ಶಿರೂರು ಮಾರ್ಕೆಟ್ ಕಡೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ರಿಕ್ಷಾ ಚಾಲಕ ಸ್ಥಳದಲ್ಲೆ ಕೊನೆಯುಸಿರೆಳೆದಿದ್ದಾನೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಿಷ ಜಂತುಗಳಿಗೆ ತಾಣವಾದ ಮಂಜೇಶ್ವರ ಪಂಚಾಯತ್ ರಸ್ತೆ ಗಳ ಬದಿಯಲ್ಲಿ ಬೆಳೆದು ನಿಂತ ಪೊದೆಗಳು .

ಮಂಜೇಶ್ವರ : ಮಂಜೇಶ್ವರ ಗ್ರಾಮ ಪಂಚಾಯತು ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ರಸ್ತೆಗಳ ಬದಿಗಳಲ್ಲಿ ಕಾಡು ಪೊದರುಗಳು ನಿಕ್ಕಿಲವಾಗಿ ಬೆಳೆದು ನಿಂತಿದ್ದು, ಇದು ಈಗ ವಿಷಜಂತುಗಳ ತಾಣವಾಗಿ ಮಾರ್ಪಟ್ಟಿದೆ. ಸರ್ಪಗಳು, ವಿಷಪೂರಿತ ಕೀಟಗಳು ಹಾಗೂ ಇತರೆ ಹಾನಿಕರ ಜಂತುಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಈ ಮಾರ್ಗಗಳಿಂದ ನಿತ್ಯವೂ ನೂರಾರು ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರು ನಡೆದು ಹೋಗುತ್ತಿದ್ದು, ಅವರ ಜೀವದ ಸಲಾಮತಿ ಇದೀಗ ಪ್ರಶ್ನೆಗೆ ಒಳಪಟ್ಟಿದೆ. ಶಾಲಾ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ವಿಶೇಷವಾಗಿ…

Read More

ಕೆಂಜಾರಿನ ಕಪಿಲಾ ಪಾರ್ಕ್ ಗೋ ಶಾಲೆಯಲ್ಲಿ ಸಾರ್ವಜನಿಕ ಗೋಪೂಜಾ ಕಾರ್ಯಕ್ರಮ ಅ.22ರಂದು .

ಮಂಗಳೂರು : ಪ್ರಕೃತಿ- ಪಶು ಸಂರಕ್ಷಣೆ, ಅಳಿವಿನಂಚಿನ ದೇಸಿ ಗೋವು ಸಂತತಿ ರಕ್ಷಣೆ ಹಾಗೂ ಗೋವಿನ ಪಾವಿತ್ರೃತೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಆರಂಭಗೊಂಡ ಕೆಂಜಾರಿನ ಕಪಿಲಾ ಪಾರ್ಕ್ ಗೋ ಶಾಲೆಯಲ್ಲಿ ಅ.22ರಂದು ಬೆಳಗ್ಗೆ 6ರಿಂದ 11.30ರ ವರೆಗೆ 108 ಕಪಿಲಾ ಗೋವುಗಳಿಗೆ ಸಾರ್ವಜನಿಕ ಗೋಪೂಜಾ ಕಾರ್ಯಕ್ರಮ ನಡೆಯಲಿದೆ. ಕಪಿಲಾ ಗೋ ಶಾಲೆಯ ಮುಖ್ಯಸ್ಥರಾದ ಪ್ರಕಾಶ್ ಶೆಟ್ಟಿ ಈ ವಿಷಯ ತಿಳಿಸಿದರು ಮತ್ತು ದೀಪಾವಳಿಯ ವಿಶೇಷ ಸಂದರ್ಭ ಸಾರ್ವಜನಿಕರಿಗೆ ಗೋವಿನ ಅನುಗ್ರಹ ಪ್ರಾಪ್ತಿಗಾಗಿ ಕಪಿಲಾ ಗೋ ಶಾಲೆಯಲ್ಲಿ ನಡೆಯಲಿರುವ…

Read More

ಧರ್ಮಸ್ಥಳ ಪ್ರಕರಣ ಅಸ್ಥಿಪಂಜರಕ್ಕೆ ಸೀಮಿತ ಮಾಡದೆ ದೌರ್ಜನ್ಯದ ದೃಷ್ಠಿಯಲ್ಲಿ ನೋಡಬೇಕಾಗಿದೆ: ಪತ್ರಕರ್ತ ನವೀನ್ ಸೂರಿಂಜೆ ಹೇಳಿಕೆ .

ಉಡುಪಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಚಿನ್ನಯ್ಯ ತನ್ನ ದೂರನ್ನು ಯಾಕೆ ವಾಪಾಸ್ಸು ಪಡೆದುಕೊಂಡರು ಮತ್ತು ಅದರಿಂದ ಯಾಕೆ ಹಿಂದಕ್ಕೆ ಸರಿದರು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಅದರ ಹಿಂದಿನ ಕೈಗಳು ಬಯಲು ಆಗುತ್ತದೆ. ಈ ಇಡೀ ಪ್ರಕರಣವನ್ನು ಬುರುಡೆ, ಅಸ್ಥಿಪಂಜರಕ್ಕೆ ಮಾತ್ರ ಸ್ಥೀಮಿತ ಗೊಳಿಸದೆ ಭೂಮಿ, ಮೈಕ್ರೋ ಫೈನಾನ್ಸ್ ದೌರ್ಜನ್ಯ, ಜಮೀನ್ದಾರಿ ಅದೃಷ್ಟ ಸರಕಾರದ ದೌರ್ಜನ್ಯದ ಹಿನ್ನೆಲೆಯಲ್ಲಿ ನೋಡಬೇಕಾಗಿದೆ ಎಂದು ಪತ್ರಕರ್ತ ನವೀನ್ ಸೂರಿಂಜೆ ಹೇಳಿದ್ದಾರೆ. ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಉಡುಪಿ ಜಿಲ್ಲೆ…

Read More

ಮಣಿಪಾಲ: ಹಣಕಾಸು ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯ ಮೃತದೇಹ ಕೊಳತ ಸ್ಥಿತಿಯಲ್ಲಿ ಪತ್ತೆ!

ಉಡುಪಿ: ಮಣಿಪಾಲ ರಾಹುಲ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ಕೊಳತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತವ್ಯಕ್ತಿಯನ್ನು ಆರ್. ಸೆಲ್ವರಾಜ್ ಎಂದು ಗುರುತಿಸಲಾಗಿದೆ. ಇವರು ಹಣಕಾಸು ವ್ಯವಹಾರ ನಡೆಸುತ್ತಿದ್ದು, ರಾಹುಲ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು ಎನ್ನಲಾಗಿದೆ. ಇವರು‌ ಬೆಡ್ ನಲ್ಲಿ ಮಲಗಿದ ಸ್ಥಿತಿಯಲ್ಲೇ ಮೃತಪಟ್ಟಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬಂದ ಮಣಿಪಾಲ ಪೋಲಿಸ್ ಠಾಣೆಯ‌ ಎಎಸ್ ಐ ವಿಜಯ್, ಸಿಬ್ಬಂದಿ ಶಶಿಧರ್, ಸುರೇಶ್ ಶೆಟ್ಟಿ ಕಾನೂನು ಪ್ರಕ್ರಿಯೆ ನಡೆಸಿದರು. ‌ಸಮಾಜಸೇವಕ ನಿತ್ಯಾನಂದ‌…

Read More

ವಾಮಂಜೂರು ಎಸ್‌ಜೆಇಸಿಯಲ್ಲಿ ನವೆಂಬರ್ 1ರಿಂದ 2ರ ತನಕ ‘Career Expo – 2025’ ಬೃಹತ್ ಉದ್ಯೋಗ ಮೇಳ .

ಮಂಗಳೂರು: ಕರ್ನಾಟಕ ರಾಜ್ಯ ಯುವ ಆಯೋಗದ 40ನೇ ವಾರ್ಷಿಕೋತ್ಸವ ಮತ್ತು ಕ್ರಿಸ್ತ ಜಯಂತಿ ಜುಬಿಲಿ ವರ್ಷ 2025ರ ಪ್ರಯುಕ್ತ, ಮಂಗಳೂರು ಧರ್ಮಪ್ರಾಂತ್ಯದ ಭಾರತೀಯ ಕಥೋಲಿಕ ಯುವ ಸಂಚಾಲನ (ICYM), ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (SJEC), ಯುವ ಆಯೋಗ ಮಂಗಳೂರು ಧರ್ಮಪ್ರಾಂತ್ಯ ಹಾಗೂ ಕರ್ನಾಟಕ ಪ್ರಾದೇಶಿಕ ಯುವ ಆಯೋಗದ ಸಹಯೋಗದಲ್ಲಿ “Career Expo – 2025” ಎಂಬ ಭವ್ಯ ಉದ್ಯೋಗ ಮೇಳವನ್ನು ನವೆಂಬರ್ 1 ಮತ್ತು 2 ರಂದು ಮಂಗಳೂರಿನ ವಾಮಂಜೂರು ಎಸ್‌ಜೆಇಸಿಯಲ್ಲಿ ಆಯೋಜಿಸಲಾಗಿದೆ ಎಂದು ರೆವರೆಂಡ್…

Read More

ಮಂಜೇಶ್ವರ ಗ್ರಾಮ ಪಂಚಾಯತ್‌ನಲ್ಲಿ ನೂತನ ಡಿಜಿಟಲ್ ಬೋರ್ಡ್ ಉದ್ಘಾಟನೆ .

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತಿನಲ್ಲಿ ಅಭಿವೃದ್ಧಿಯತ್ತ ಮತ್ತೊಂದು ಹೆಜ್ಜೆಯಾಗಿ ನೂತನ ಡಿಜಿಟಲ್ ಬೋರ್ಡ್‌ನ್ನು ಸ್ಥಾಪಿಸಲಾಗಿದೆ. ಈ ಡಿಜಿಟಲ್ ಬೋರ್ಡ್‌ನ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೀನ್ ಲವೀನಾ ಮಾಂತೇರೋ ಲೋಕಾರ್ಪಣೆ ಗೈದರು.ಉಪಾಧ್ಯಕ್ಷ ಮೊಹಮ್ಮದ್ ಸಿದ್ದೀಖ್ ಅಧ್ಯಕ್ಷತೆ ವಹಿಸಿದರು. ಗ್ರಾಮದ ನಾಗರಿಕರಿಗೆ ನವೀನ ಮಾಹಿತಿ ತಕ್ಷಣ ಲಭ್ಯವಾಗುವಂತಾಗಿಸಲು ಹಾಗೂ ಪಾರದರ್ಶಕ ಆಡಳಿತಕ್ಕೆ ಮತ್ತಷ್ಟು ಬಲ ನೀಡುವ ಉದ್ದೇಶದಿಂದ ಈ ಬೋರ್ಡ್‌ನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ದಿನನಿತ್ಯದ ಪಠ್ಯಗಳು, ಯೋಜನೆಗಳು, ಪ್ರಕಟಣೆಗಳು ಹಾಗೂ ಸರ್ಕಾರಿ ಸೂಚನೆಗಳ ಬಗ್ಗೆ ಈ ಮೂಲಕ…

Read More

ಜಪಾನಿನ ಭಾರತೀಯ ರಾಯಭಾರಿಯಾಗಿ ಕಾಸರಗೋಡಿನ ಮಹಿಳೆ ನೇಮಕ .

ಕಾಸರಗೋಡು: ಕಾಸರಗೋಡಿನ ಮಹಿಳೆ ನಗ್ಮಾ ಮೊಹಮ್ಮದ್ ಮಾಲೀಕ್‌ರನ್ನು ಕೇಂದ್ರ ಸರಕಾರ ಜಪಾನಿನ ಭಾರತೀಯ ರಾಯಭಾರಿಯಾಗಿ ನೇಮಿಸಿದೆ. ಈಕೆ ಕಾಸರಗೋಡು ಕೋಟೆ ರಸ್ತೆಯ ಮೊಹಮ್ಮದ್ ಹಬೀಬುಲ್ಲಾ-ಸುಲುಭಾನು ದಂಪತಿ ಪುತ್ರಿಯಾಗಿದ್ದಾರೆ. ತಂದೆ ಮೊಹಮ್ಮದ್ ಹಬೀಬುಲ್ಲಾರಿಗೆ ಕೇಂದ್ರ ಸರಕಾರದ ಓವರ್‌ಸ್‌ ಕಮ್ಯೂನಿಕೇಶನ್ ಇಲಾಖೆಯಲ್ಲಿ ಉದ್ಯೋಗ ಲಭಿಸಿದ ಹಿನ್ನೆಲೆಯಲ್ಲಿ ಅವರು ವರ್ಷಗಳ ಹಿಂದೆ ತಮ್ಮ ಕುಟುಂಬದ ಸಹಿತ ದಿಲ್ಲಿಯಲ್ಲಿ ವಾಸವಾಗಿದ್ದರು. ದಿಲ್ಲಿಯಲ್ಲೇ ಜನಿಸಿದ ನಗ್ಮಾ ಮೊಹಮ್ಮದ್ ಮಾಲೀಕ್ ದಿಲ್ಲಿಯ ಸೈಂಟ್ ಸ್ಟೀಫನ್ ಕಾಲೇಜು ಮತ್ತು ಡೆಲ್ಲಿ ಸ್ಕೂಲ್ ಆಫ್‌ ಇಕಾನೋಮಿಕ್ಸ್‌ನಲ್ಲಿ ಶಿಕ್ಷಣ ಪಡೆದರು….

Read More

ಪಾಕಿಸ್ತಾನದ ವಾಯುದಾಳಿಯಲ್ಲಿ ಮೂವರು ಅಫ್ಘಾನ್‌ ಕ್ರಿಕೆಟಿಗರು ಮೃತ್ಯು

ಕಾಬೂಲ್: ಪಕ್ತಿಕಾ ಪ್ರಾಂತ್ಯದಲ್ಲಿ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ಮೂವರು ಅಫ್ಘಾನ್ ದೇಶೀಯ ಕ್ರಿಕೆಟಿಗರು ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ACB) ಪಾಕಿಸ್ತಾನ ಮತ್ತು ಶ್ರೀಲಂಕಾ ಒಳಗೊಂಡ ಮುಂಬರುವ ತ್ರಿಕೋನ T20 ಸರಣಿಯಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದೆ. ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ACB, ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ಈ ದಾಳಿಯನ್ನು “ಪಾಕಿಸ್ತಾನ ಆಡಳಿತದ ಹೇಡಿತನದ ಕೃತ್ಯ” ಎಂದು ಬಣ್ಣಿಸಿದೆ. ಮಾನವೀಯ ಮೌಲ್ಯಗಳ ವಿರುದ್ಧ ನಡೆದ ಈ ಕ್ರಮವು ಕ್ರೀಡಾ ಬಾಂಧವ್ಯದ ಆತ್ಮವನ್ನು…

Read More
error: Content is protected !!