ರಾಮ ಮಂದಿರ ದೇಣಿಗೆ ವಿವಾದಕ್ಕೆ ಹೊಸ ತಿರುವು: 1,250 ಅಮೂಲ್ಯ ಇಟ್ಟಿಗೆಗಳು ನಾಪತ್ತೆ ಆರೋಪ
ಅಯೋಧ್ಯೆ, ಅಯೋಧ್ಯೆಯ ರಾಮ ಮಂದಿರ ದೇಣಿಗೆ ನಿರ್ವಹಣೆ ಕುರಿತ ವಿವಾದಕ್ಕೆ ಹೊಸ ತಿರುವು ಸಿಕ್ಕಿದ್ದು, ರಾಮ ಜನ್ಮಭೂಮಿ ಚಳವಳಿಯ ಕಾರ್ಯಕರ್ತ ಸಂತೋಷ್ ದುಬೆ ಅವರು ಸುಮಾರು 1,250 ಚಿನ್ನ, ಬೆಳ್ಳಿ, ವಜ್ರ ಹಾಗೂ ಅಷ್ಟಧಾತುವಿನಿಂದ ತಯಾರಿಸಲಾದ ಅಮೂಲ್ಯ ಇಟ್ಟಿಗೆಗಳು ನಾಪತ್ತೆಯಾಗಿವೆ ಎಂದು ಆರೋಪಿಸಿ ಪೊಲೀಸ್ ದೂರು ದಾಖಲಿಸಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ, ದೇವಾಲಯದ ಆಡಳಿತಾಧಿಕಾರಿ ಗೋಪಾಲ್ ರಾವ್ ಹಾಗೂ ರಾಮ್ ಶಂಕರ್…
