ಇಂಧನ ದರ ಏರಿಕೆಯಿಂದ ಜನಸಾಮಾನ್ಯರ ಬದುಕು ಸಂಕಷ್ಟಕ್ಕೆ: ಪದ್ಮರಾಜ್ ಪೂಜಾರಿ

ಮಂಗಳೂರು:ಕೇಂದ್ರ ಸರ್ಕಾರದ ಇತ್ತೀಚಿನ ಗ್ಯಾಸ್, ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಿಂದ ಜನಸಾಮಾನ್ಯರ ಜೀವನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ಬೆಲೆ ಏರಿಕೆಯ ಹೊರೆ ನೇರವಾಗಿ ಬಡ ಹಾಗೂ ಮಧ್ಯಮ ವರ್ಗದ ಜನರ ಮೇಲೆ ಬಿದ್ದಿದೆ ಎಂದು ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆರೋಪಿಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗುತ್ತಿದ್ದರೂ ಅದರ ಪ್ರಯೋಜನವನ್ನು ಕೇಂದ್ರ ಸರ್ಕಾರ ಜನರಿಗೆ ತಲುಪಿಸುತ್ತಿಲ್ಲ ಎಂದು ಟೀಕಿಸಿದರು….

Read More

ಪ್ರೊ.ಬಾಲಕೃಷ್ಣ ಗಟ್ಟಿ ನಿಧನಕ್ಕೆ ಪತ್ರಕರ್ತರಿಂದ ಸಂತಾಪ ಸೂಚಕ ಸಭೆ

ಮಂಗಳೂರು, ಜೂ.16;ಹಿರಿಯ ಪತ್ರಕರ್ತ ಪ್ರೊ.ಬಾಲಕೃಷ್ಣ ಗಟ್ಟಿ ಯವರ ನಿಧನಕ್ಕೆದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ,ಮಂಗಳೂರುಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸಂತಾಪ ಸೂಚಕ ಸಭೆ ನಡೆಸಿ ನುಡಿನಮನ ಸಲ್ಲಿಸಲಾಯಿತು.ಈ ಸಂತಾಪ ಸೂಚಕ ಸಭೆಯಲ್ಲಿಹಿರಿಯ ಪತ್ರಕರ್ತರಾದ ಚಿದಂಬರ ಬೈಕಂಪಾಡಿ ಮಾತನಾಡುತ್ತಾ, ಬಾಲಕೃಷ್ಣ ಗಟ್ಟಿಯವರು ಶಿಕ್ಷಣ, ಪತ್ರಿಕೋದ್ಯಮದ ಜೊತೆಗೆ ಸಾಹಿತ್ಯ ಕ್ಷೇತ್ರಕ್ಕೂ ತಮ್ಮದೇ ಆದ ಕೊಡುಗೆ ನೀಡಿದವರು ಜೊತೆಗೆ ಸಂಘಟ ನೆಗೂ ಒತ್ತು ನೀಡಿದವರು ಎಂದು ಅವರ ಜೊತೆಗಿನ ಅನುಭವ…

Read More

ಹೊಸ ನಾಯಕತ್ವದಲ್ಲಿ ಸರ್ಕಾರ, ಪಕ್ಷ ಇನ್ನಷ್ಟು ಬಲಿಷ್ಠ: ಜಿಲ್ಲಾ ಕಾಂಗ್ರೆಸ್

ಮಂಗಳೂರು:ರಾಜ್ಯ ಕಾಂಗ್ರೆಸ್ ಸಂಘಟನೆಯಲ್ಲಿ ನಡೆದಿರುವ ಇತ್ತೀಚಿನ ನೇಮಕಾತಿಗಳು ಪಕ್ಷದ ಸಂಘಟನೆಗೆ ಹೊಸ ಚೈತನ್ಯ ಮತ್ತು ಬಲವನ್ನು ನೀಡಲಿದ್ದು, ಹೊಸ ನಾಯಕತ್ವದಡಿ ಸರ್ಕಾರ ಹಾಗೂ ಪಕ್ಷ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಸಂತಸ ವ್ಯಕ್ತಪಡಿಸಿದರು . ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ ಎಂದರು. ಇದೇ ವೇಳೆ…

Read More

ಉದ್ಯೋಗದಿಂದ ತೆಗೆದ ದ್ವೇಷಕ್ಕೆ ಹೋಟೆಲ್ ಕಳ್ಳತನ: ಆರೋಪಿ ಅಶ್ರಫ್ ಅಲಿ ಬಂಧನ

ಮಂಜೇಶ್ವರ: ಕೆಲಸದಿಂದ ತೆಗೆದುಹಾಕಿದ ಸಿಟ್ಟಿನಿಂದ ಮಾಜಿ ಮಾಲಿಕರ ಹೋಟೆಲ್‌ಗೆ ನುಗ್ಗಿ ಕಳ್ಳತನ ಮಾಡಿದ್ದ ವ್ಯಕ್ತಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಮಂಗಲ್ಪಾಡಿ ಬೇಕೂರಿನ ಅಶ್ರಫ್ ಅಲಿ (40) ಬಂಧಿತ ಆರೋಪಿ. ಬಂದ್ಯೋಡಿನ ‘ಇರಾನಿ ಅಬ್ಬಾಸಿ ಕಬಾಬ್‌’ ಹೋಟೆಲ್‌ನಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಅಶ್ರಫ್, ಕೆಲಸದಿಂದ ತೆಗೆದುಹಾಕಿದ ದ್ವೇಷಕ್ಕೆ ಜೂನ್ 13ರಂದು ರಾತ್ರಿ ಹೋಟೆಲ್‌ನ ಬೀಗ ಮುರಿದು ನುಗ್ಗಿದ್ದನು. ಘಟನೆಯಲ್ಲಿ 53,000 ರೂ. ಮೌಲ್ಯದ ವಸ್ತುಗಳನ್ನು ಕಳವು ಮಾಡಲಾಗಿತ್ತು. ಕುಂಬಳೆ ಎಸ್‌ಐ ಗಣೇಶ್ ನೇತೃತ್ವದ ತಂಡ ಆರೋಪಿಯನ್ನು ಪತ್ತೆ…

Read More

ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ; ಕೇವಲ ಪರಿಷ್ಕರಣೆ ಮಾತ್ರ: ಕಾಂಗ್ರೆಸ್ ಸ್ಪಷ್ಟನೆ

ಮಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂಬ ಬಿಜೆಪಿ ನಾಯಕರ ಆರೋಪಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳು ಮತ್ತು ಅಪಪ್ರಚಾರ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಸ್ಪಷ್ಟಪಡಿಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನತೆಗೆ ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಅದರ ಪ್ರಯೋಜನ ರಾಜ್ಯದ ಮನೆಮನೆಗೂ ತಲುಪಿದೆ ಎಂದರು….

Read More

ಕಡಬದಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ಬಂಧನ

ದಕ್ಷಿಣ ಕನ್ನಡ :ಕಡಬದ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ರಸ್ತೆಯಲ್ಲಿ ದಿನಾಂಕ:13 ರಂದು ಬೆಳಗ್ಗಿನ ಜಾವ ಪಿಕಪ್ ವಾಹನವೊಂದು ಆಯತಪ್ಪಿ ಬಿದ್ದಿದ್ದು, ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ. ಇದರಲ್ಲಿ ಜಾನುವಾರು ಸಾಗಿಸುತ್ತಿದ್ದ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ಉಪ-ನಿರೀಕ್ಷಕರಿಗೆ ಮಾಹಿತಿ ಬಂದಿತ್ತು. ಅದನ್ನು ಆಧರಿಸಿ, ಪಿಕಪ್ ವಾಹನದ ಚಾಲಕ ಹಾಸನ ಅರಕಲಗೂಡು ನಿವಾಸಿಗಳಾದ ಚಂದ್ರು @ ಚಂದ್ರಶೇಖರ ಮತ್ತು ಕ್ಲೀನರ್ ಮೋಹನ ಎಂಬವರುಗಳನ್ನು ಪೊಲೀಸರು ವಿಚಾರಣೆಗಾಗಿ ಠಾಣೆಗೆ ಕರೆತಂದಿದ್ದರು. ವಿಚಾರಣೆಗೊಳಪಡಿಸಿದಾಗ ಈ ಪಿಕಪ್ ವಾಹನದಲ್ಲಿ…

Read More

ಕೇರಳದ ಪ್ರಿಯದರ್ಶಿನಿ ಯೋಜನೆಗೆ ಗಡಿ ಭಾಗದ ಮಹಿಳೆಯರಿಂದ ಭಾರಿ ಮೆಚ್ಚುಗೆ

ಮಂಗಳೂರು: ಮಹಿಳೆಯರು ಮತ್ತು ಲಿಂಗಪರಿವರ್ತಿತರಿಗೆ ಕೇರಳ ಸರ್ಕಾರ ಜಾರಿಗೆ ತಂದಿರುವ ಪ್ರಿಯದರ್ಶಿನಿ ಉಚಿತ ಬಸ್ ಪ್ರಯಾಣ ಯೋಜನೆ ಗಡಿ ಭಾಗದ ಜನರಲ್ಲಿ ಸಂತಸ ಮೂಡಿಸಿದೆ. ಕಾಸರಗೋಡಿನಿಂದ ಮಂಗಳೂರಿಗೆ ಶಿಕ್ಷಣಕ್ಕಾಗಿ ಪ್ರತಿದಿನ ಪ್ರಯಾಣಿಸುವ ವಿದ್ಯಾರ್ಥಿನಿಯರಿಗೆ ಈ ಯೋಜನೆ ಹೆಚ್ಚಿನ ಅನುಕೂಲವಾಗಿದ್ದು, ಪ್ರಯಾಣ ವೆಚ್ಚದ ಹೊರೆ ಕಡಿಮೆಯಾಗಿದೆ. ಅಷ್ಟೇ ಅಲ್ಲದೆ, ಆರೋಗ್ಯ ಸೇವೆಗಳಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಅವಲಂಬಿಸಿರುವ ಕಾಸರಗೋಡು ಭಾಗದ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣ ಯೋಜನೆ ನೆರವಾಗುತ್ತಿದೆ. ಗಡಿ ಪ್ರದೇಶದ ಜನರ ದೈನಂದಿನ ಸಂಚಾರವನ್ನು ಸುಲಭಗೊಳಿಸಿರುವ ಈ…

Read More

ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡದ ಕಾಮಗಾರಿ ತುರ್ತಾಗಿ ಪೂರ್ಣಗೊಳಿಸಿ: ಪವನ್ ಕುಮಾರ್ ಶಿರ್ವ ಆಗ್ರಹ

ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವಂತೆ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಂದೇಶವನ್ನು ಹಂಚಿಕೊಂಡ ಅವರು , ಉಡುಪಿ ಜಿಲ್ಲೆಯ ಐದು ತಾಲೂಕುಗಳ ಜನತೆಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸಬೇಕಾದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿ ಆರಂಭವಾಗಿ ಹಲವು ವರ್ಷಗಳಾದರೂ ಇನ್ನೂ ಪೂರ್ಣಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಬಡ ಹಾಗೂ ಮಧ್ಯಮ ವರ್ಗದ…

Read More

ಜುಲೈ 5ರಂದು ಬಜ್ಪೆ ಬಂಟರ ಸಂಘದ ನೂತನ ಭವನಕ್ಕೆ ಶಿಲಾನ್ಯಾಸ

ಮಂಗಳೂರು:ಬಜ್ಪೆ ಬಂಟರ ಸಂಘ (ರಿ) ವಲಯದ ಮಹತ್ವಾಕಾಂಕ್ಷೆಯ ಕನಸಿನ ಕೂಸಾಗಿರುವ ನೂತನ ಬಂಟರ ಭವನ ನಿರ್ಮಾಣ ಯೋಜನೆಗೆ ಜುಲೈ 5ರಂದು ಬೆಳಿಗ್ಗೆ 10.30 ಗಂಟೆಗೆ ತಾರಿಕಂಬಳ – ಮುಂಡಾರಿನಲ್ಲಿ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಬಂಟರ ಸಂಘ (ರಿ) ಬಜ್ಪೆ ವಲಯದ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜ್ಪೆ ಬಂಟರ ಸಂಘ ವಲಯವು 16 ಗ್ರಾಮಗಳನ್ನು ಒಳಗೊಂಡಿದ್ದು, ಕಳೆದ 14 ವರ್ಷಗಳಿಂದ ಸಂಸ್ಥಾಪಕ ಅಧ್ಯಕ್ಷ ವಿಜಯನಾಥ್ ವಿಠ್ಠಲ್ ಶೆಟ್ಟಿ…

Read More

SIR ಕುರಿತು ಮಹಿಳೆಯರಲ್ಲಿ ಜಾಗೃತಿ ಮೂಡಿಸಿ: ಉಷಾ ಅಂಚನ್ ಕರೆ

SIR ಕುರಿತು ಮಹಿಳೆಯರಲ್ಲಿ ಜಾಗೃತಿ ಮೂಡಿಸಿ: ಮಹಿಳಾ ಕಾಂಗ್ರೇಸ್ ಅದ್ಯಕ್ಷೆ ಉಷಾ ಅಂಚನ್,ಆಟಿಡೊಂಜಿ ಕೂಟ, ಕ್ರೀಡಾಕೂಟಗಳ ಮೂಲಕ ಮಹಿಳೆಯರನ್ನು ಸಂಘಟಿಸಿ ಬ್ಲಾಕ್ ಅದ್ಯಕ್ಷೆ ಐಡಾ ಸುರೇಶ್ ಪಾಣೆಮಂಗಳೂರು: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳ ಮಾಸಿಕ ಸಭೆಯು ಇಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಐಡಾ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ…

Read More
error: Content is protected !!