ಇಂಧನ ದರ ಏರಿಕೆಯಿಂದ ಜನಸಾಮಾನ್ಯರ ಬದುಕು ಸಂಕಷ್ಟಕ್ಕೆ: ಪದ್ಮರಾಜ್ ಪೂಜಾರಿ
ಮಂಗಳೂರು:ಕೇಂದ್ರ ಸರ್ಕಾರದ ಇತ್ತೀಚಿನ ಗ್ಯಾಸ್, ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಿಂದ ಜನಸಾಮಾನ್ಯರ ಜೀವನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ಬೆಲೆ ಏರಿಕೆಯ ಹೊರೆ ನೇರವಾಗಿ ಬಡ ಹಾಗೂ ಮಧ್ಯಮ ವರ್ಗದ ಜನರ ಮೇಲೆ ಬಿದ್ದಿದೆ ಎಂದು ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆರೋಪಿಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗುತ್ತಿದ್ದರೂ ಅದರ ಪ್ರಯೋಜನವನ್ನು ಕೇಂದ್ರ ಸರ್ಕಾರ ಜನರಿಗೆ ತಲುಪಿಸುತ್ತಿಲ್ಲ ಎಂದು ಟೀಕಿಸಿದರು….
