ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು !

ಉಡುಪಿ: ಯುವಪ್ರೇಮಿಗಳಿಬ್ಬರು ಮನೆಯಲ್ಲಿ ಚೂಡಿದಾರದ ವೇಲಿನಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ಯುವತಿ ವಾಸವಾಗಿರುವ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ. ಮೃತ ಯುವತಿ ವಲಸೆ ಕಾರ್ಮಿಕ ಕುಟುಂಬದ ಕಾಲೇಜು ವಿದ್ಯಾರ್ಥಿನಿ ಪವಿತ್ರ (17), ಯುವಕ ವಲಸೆ ಕಾರ್ಮಿಕ ಮಲ್ಲೇಶ (23) ಎಂದು ತಿಳಿದುಬಂದಿದೆ. ನಗರ ಪೋಲಿಸ್ ಠಾಣೆಯ‌ ಎಸ್.ಐ ಭರತೇಶ್, ಎ.ಎಸ್.ಐ…

Read More

ಅಕ್ಟೋಬರ್ 19 ರಂದು ಮಂಗಳೂರಿನ ಕುದ್ರೋಳಿ ಕ್ಷೇತ್ರದಲ್ಲಿ 25 ನೇ ವರ್ಷದ ನಮ್ಮ ಕುಡ್ಲ ಗೂಡುದೀಪ ಸ್ಪರ್ಧೆ , ವಿಜೇತರಿಗೆ ಆಕರ್ಷಕ ಚಿನ್ನದ ಪದಕ

ಮಂಗಳೂರು : ಪ್ರಪ್ರಥಮ ತುಳು ವಾರ್ತಾವಾಹಿನಿ ಎನ್ನುವ ಹೆಗ್ಗಳಿಕೆಯನ್ನು ಪಡೆದುಕೊಂಡಿರುವ ನಮ್ಮ ಕುಡ್ಲ ವಾಹಿನಿ ವತಿಯಿಂದ 25ನೇ ವರ್ಷದ ನಮ್ಮ ಕುಡ್ಲ ಗೂಡು ದೀಪ ಸ್ಪರ್ಧೆ ಅಕ್ಟೋಬರ್ 19 ರಂದು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆವರಣದಲ್ಲಿ ಸಂಜೆ 4.30ಕ್ಕೆ ಆರಂಭಗೊಳ್ಳಲಿದೆ ಎಂದು ನಮ್ಮ ಕುಡ್ಲ ನಿರ್ದೇಶಕ ಹರೀಶ್ ಬಿ ಕರ್ಕೇರ ತಿಳಿಸಿದರು .ಅವರು ನಗರದ ಪತ್ರಿಕಾಭವನದಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಗೂಡುದೀಪಗಳು ಮರೆಯಾಗುತ್ತಿರುವ ಕ್ಷಣದಲ್ಲಿ ನಮ್ಮ ಕುಡ್ಲ ವಾಹಿನಿ ಗೂಡುದೀಪ ರಚನೆಗೆ…

Read More

ಸರ್ಕಾರಿ ಸ್ಥಳಗಳಲ್ಲಿ ‘ನಮಾಜ್’ ನಿಷೇಧಿಸಲು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಯತ್ನಾಳ್ .!

ಬೆಂಗಳೂರು :ಸರ್ಕಾರಿ ಸ್ಥಳಗಳಲ್ಲಿ ನಮಾಜ್ ನಿಷೇಧಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ. ಆರ್ ಎಸ್ ಎಸ್ ಸರ್ಕಾರ ಅಂಕುಶ ಹಾಕಿದ ಬೆನ್ನಲ್ಲೇ ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದು ಸರ್ಕಾರ ಸೂಚನೆ ನೀಡಿದ ಬೆನ್ನಲ್ಲೇ ಸರ್ಕಾರಿ ಸ್ಥಳಗಳಲ್ಲಿ ನಮಾಜ್ ನಿಷೇಧಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ. ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಮಾನ್ಯ…

Read More

ಕೇರಳ ಮೂಲದ ಗಲ್ಫ್ ಉದ್ಯಮಿ ಹನಿಟ್ರ್ಯಾಪ್ ಬಲೆಗೆ ಬೀಳಿಸಿದ ಬಂಟ್ವಾಳ ಹನಿಟ್ರ್ಯಾಪ್ ಗ್ಯಾಂಗ್ನಿಂದ ಲಕ್ಷಾಂತರ ರೂಪಾಯಿಗಳ ವಂಚನೆ.

ಮಂಗಳೂರು: ಕರ್ನಾಟದಲ್ಲಿ ಹನಿಟ್ರ್ಯಾಪ್ ತಂಡಗಳು ಸಕ್ರಿಯವಾಗಿದ್ದು, ಅಪಾಯಕ ಹೆಣ್ಣು ಮಕ್ಕಳನ್ನು ಮುಂದಿಟ್ಟು ಉದ್ಯಮಿಗಳನ್ನು ಮೋಸದ ಜಾಲಕ್ಕೆಬೀಳಿಸುವ ಕಾರ್ಯಗಳು ಅನವರತವಾಗಿ ನಡೆಯುತ್ತಿದೆ. ತನ್ನ ಪ್ರತಿಷ್ಠೆ ಹಾಳಾಗುತ್ತೆ ಎಂದು ಹೆದರಿ ಹಲವು ಮಂದಿ ಲಕ್ಷಾಂತರ ರೂ. ನೀಡಿ ವಂಚನೆ ಹೋಗುತ್ತಿದ್ದಾರೆ. ಇಂತಹ ಸಂತ್ರಸ್ತರು ಮುಂದೆ ಬಂದಲ್ಲಿ ಅವರಿಗೆ ಉಚಿತವಾಗಿ ಕಾನೂನು ನೆರವು ನೀಡಲು ಸಿದ್ಧ ಎಂದು ಬೆಂಗಳೂರಿನ ನ್ಯಾಯವಾದಿ ಸೌದಾ ಹೇಳಿದರು . ಮಂಗಳೂರಿನಲ್ಲಿ ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಕೇರಳ ಮೂಲದ ಗಲ್ಫ್ ಉದ್ಯಮಿಯೊಬ್ಬರಿಗೆ ಬಂಟ್ವಾಳದ ಹನಿಟ್ರ್ಯಾಪ್…

Read More

ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ .

ಮಂಗಳೂರು: ಕದ್ರಿ ಯಕ್ಷ ಬಳಗವು ಈ ವರ್ಷದ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ ಯನ್ನು ಪಾವಂಜೆ ಮೇಳದ ಪ್ರಧಾನ ವೇಷಧಾರಿ, ಪ್ರಬಂದಕ ಡಿ.ಮಾಧವ ಬಂಗೇರ ಕೊಳತ್ತಮಜಲು ಅವರಿಗೆ ನೀಡಿ ಗೌರವಿಸಲಿದೆ. ಇವರು ಕಳೆದ ಮೂರು ದಶಕಗಳಿಂದ ಯಕ್ಷಗಾನ ರಂಗದಲ್ಲಿ ಶ್ರೀರಾಮ, ಶ್ರೀ ಕೃಷ್ಣ, ಶ್ರೀ ವಿಷ್ಣು, ಜಾಬಾಲಿ ಮೊದಲಾದ ಸಾತ್ವಿಕ ಪಾತ್ರ ಗಳನ್ನು ನಿರ್ವಹಿಸಿ, “ಮಾನಿಷಾದ ” ಪ್ರಸಂಗದ ಶ್ರೀ ರಾಮನ ಪಾತ್ರ ನಿರ್ವಹಣೆಯಲ್ಲಿ ಸಿದ್ದಿ ಪ್ರಸಿದ್ದಿ ಹೊಂದಿರುವ ” ಯಕ್ಷ ರಾಮ ”…

Read More

ಅಕ್ಟೋಬರ್ 19 ರಂದು ಮಂಗಳೂರಿನ ಬೆಂದೂರಿನಲ್ಲಿ ಶುಭಾರಂಭಗೊಳ್ಳಲಿರುವ ಬಿಂದು ಜ್ಯುವೆಲ್ಲರಿ ನೂತನ ಶಾಖೆ.

ಮಂಗಳೂರು: ನಂಬಿಕೆ, ಶುದ್ಧತೆ ಮತ್ತು ನಾವೀನ್ಯ ಕರಕುಶಲತೆಗೆ ಹೆಸರುವಾಸಿಯಾದ ಬಿಂದು ಜ್ಯುವೆಲ್ಲರಿಯ ನೂತನ ಶಾಖೆಯು ಅಕ್ಟೋಬರ್ 19 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಬೆಂದೂರಿನಲ್ಲಿ ಶುಭಾರಂಭಗೊಳ್ಳಲಿದೆ ಎಂದು ಬಿಂದು ಜ್ಯುವೆಲ್ಲರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಅಭಿಲಾಷ್ ಕೆವಿ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಕಳೆದ ನಾಲ್ಕು ದಶಕಗಳ ಶ್ರೇಷ್ಠತೆಯನ್ನು ಹೆಮ್ಮೆಯಿಂದ ಆಚರಿಸಿಕೊಂಡು ಬರುತ್ತಿರುವ ಈ ಸಂಸ್ಥೆಯು ಕರ್ನಾಟಕದಲ್ಲಿ ಎರಡನೇ ಮಳಿಗೆಯನ್ನು ತೆರೆಯುತ್ತಿರುವುದು ಸಂತಸವನ್ನು ತಂದಿದೆ…

Read More

ದಕ್ಷಿಣ ಕನ್ನಡದ ವಿವಿಧೆಡೆ ಅಕ್ರಮ ಜಾನುವಾರು ವಧೆ ಮಾಡುವ ಶೆಡ್‌ಗಳ ಮುಟ್ಟುಗೋಲು .

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ, ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆಗಳಲ್ಲಿ ಅಕ್ರಮ ಜಾನುವಾರು ವಧೆ ಮಾಡುವ ಶೆಡ್‌ಗಳನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ದ.ಕ. ಜಿಲ್ಲಾ ಎಸ್ಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣಾ ಅಕ್ರ:125/2025, ಕಲಂ: 303(2), BNS, ಕಲಂ: 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ  ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಲ್ಲಿ ತನಿಖೆಯ ವೇಳೆ ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಕೆರೆಬಳಿ ಎಂಬಲ್ಲಿ…

Read More

ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಲೋಕಾಯುಕ್ತ ದಾಳಿ .

ಮಂಗಳೂರು ನಗರ ಹೊರಲವಯದಲ್ಲಿರುವ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ನಡೆಸಿದ್ದಾರೆ.ಮಂಗಳೂರು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕಿ ಡಾ. ಗಾನ ಪಿ. ಕುಮಾರ್, ಸುರೇಶ್ ಕುಮಾರ್ ಪಿ., ಪೊಲೀಸ್ ನಿರೀಕ್ಷಕಿ ಭಾರತಿ ಜಿ, ರವಿ ಪೀರು ಪವಾರ್ ಹಾಗೂ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ನಿರೀಕ್ಷಕ ರಾಜೇಂದ್ರ ನಾಯ್ಕ್ ಎಂ.ಎನ್. ಅವರು ಮಂಗಳೂರು ಮತ್ತು ಉಡುಪಿ ಲೋಕಾಯುಕ್ತ ಕಚೇರಿಯ ಸಿಬ್ಬಂದಿಯವರೊಂದಿಗೆ ಪಿಲಿಕುಳ ನಿಸರ್ಗಧಾಮದ ಅಭಿವೃದ್ಧಿ ಪ್ರಾಧಿಕಾರಕ್ಕೆ ಗೌರವಾನ್ವಿತ ಲೋಕಾಯುಕ್ತರಿಂದ ಸರ್ಚ್ ವಾರಂಟ್ ಪಡೆದು…

Read More

ಜಪಾನ್‌ಗೆ ಭಾರತದ ನೂತನ ರಾಯಭಾರಿಯಾಗಿ ಕಾಸರಗೋಡು ಮೂಲದ ನಗ್ಮಾ ಮುಹಮ್ಮದ್ ಮಲಿಕ್ ನೇಮಕ.

ಹೊಸದಿಲ್ಲಿ: ಭಾರತ ಸರ್ಕಾರವು ಪ್ರಸ್ತುತ ಪೋಲೆಂಡ್ ನಲ್ಲಿ ಭಾರತದ ನೂತನ ರಾಯಭಾರಿಯಾಗಿ ಸೇವೆ ಸಲ್ಲಿಸುತ್ತಿರುವ 1991 ಬ್ಯಾಚ್ ನ ಹಿರಿಯ ಐಎಫ್ಎಸ್ ಅಧಿಕಾರಿ ಭಾರತೀಯ ವಿದೇಶಾಂಗ ಸೇವಾ ಅಧಿಕಾರಿ ನಗ್ಮಾ ಮುಹಮ್ಮದ್ ಮಲಿಕ್ ಅವರನ್ನು ಜಪಾನ್‌ ನಲ್ಲಿನ ಭಾರತದ ನೂತನ ರಾಯಭಾರಿಯಾಗಿ ನೇಮಿಸಿದೆ. ಕಾಸರಗೋಡು ಮೂಲದ ನಗ್ಮಾ ಮಲಿಕ್ ಅವರು ವಿದೇಶಾಂಗ ಸೇವೆಯಲ್ಲಿ ಮೂರು ದಶಕಗಳಿಗಿಂತ ಹೆಚ್ಚು ಕಾಲ ವಿವಿಧ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದು, ತಮ್ಮ ವೃತ್ತಿಜೀವನದಲ್ಲಿ ಅಪಾರ ರಾಜತಾಂತ್ರಿಕ ಅನುಭವವನ್ನು ಗಳಿಸಿದ್ದಾರೆ. ದೀಪಾ ಗೋಪಾಲನ್…

Read More

ಕೇರಳದಲ್ಲಿ ರಾಜಕೀಯ ಬದಲಾವಣೆ ಅನಿವಾರ್ಯ: ಎಂ.ಎಲ್. ಅಶ್ವಿನಿ

ಮಂಜೇಶ್ವರ: ಕೇರಳ ಎದುರಿಸುತ್ತಿರುವ ನಿರುದ್ಯೋಗ ಮತ್ತು ಅಭಿವೃದ್ಧಿ ಕುಂಠಿತವನ್ನು ಪರಿಹರಿಸಲು ರಾಜಕೀಯ ಬದಲಾವಣೆ ಅತ್ಯಗತ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಹೇಳಿದರು. ಅವರು ಬಿಜೆಪಿ ಮಂಜೇಶ್ವರ ಪಂಚಾಯತ್ ಚುನಾವಣಾ ಸಮಿತಿ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು . ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ.ಎಂ. ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯರಾದ ಅಡ್ವ. ಬಾಲಕೃಷ್ಣ ಶೆಟ್ಟಿ,ಕೆ.ಸತೀಶ್ ಚಂದ್ರ ಭಂಡಾರಿ, ರಾಜ್ಯ ಪರಿಷತ್ ಸದಸ್ಯ ಹರಿಶ್ಚಂದ್ರ ನಾಯ್ಕ್, ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡ, ಜಿಲ್ಲಾ ಸಮಿತಿ ಸದಸ್ಯ…

Read More
error: Content is protected !!