ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ: ಮನೆಯ ಅಂಗಳಕ್ಕೆ ಕುಸಿದ ತೆಂಗಿನ ಮರ!

ಮನೆಯ ಮುಂಭಾಗದಲ್ಲಿದ್ದ ತೆಂಗಿನ ಮರ ತುಂಡಾಗಿ ಮನೆಯ ಅಂಗಳಕ್ಕೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೈಚಾರ್ ಎಂಬಲ್ಲಿ ನಡೆದಿದೆ.ಮನೆಯ ಅಂಗಳದಲ್ಲಿ ನಿಂತಿದ್ದ ಶಾಫಿ ಪ್ರಗತಿಯವರ ಹಿರಿಯ ಸಹೋದರ ಹಸೈನಾರ್‌ ಎಂಬುವವರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಮನೆಯ ಸ್ಲ್ಯಾಬ್ ಮೇಲಿನಿಂದ ಬೀಳುತ್ತಿದ್ದ ಮಳೆ ನೀರನ್ನು ಬಕೆಟ್‌ನಲ್ಲಿ ತುಂಬುತ್ತಿದ್ದ ವೇಳೆ ಈ ಘಟನೆ ನಡೆದಿದೆ. ತುಂಡಾಗಿ ತೆಂಗಿನ ಮರ ಬೀಳುವುದನ್ನು ಕಂಡ ಇವರು ಅಲ್ಲಿಂದ ಓಡಿ ಅಪಾಯದಿಂದ ಪಾರಾದರು. ಇದೇ ಸ್ಥಳದಲ್ಲಿ ಘಟನೆ ಸಂಭವಿಸುವ ಮೊದಲು ಶಾಫಿಯವರ…

Read More

ಶಿಕ್ಷಣದಲ್ಲಿ ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳ ಪಾತ್ರ ಕುರಿತು ಸಂವಾದ

ಮೂಡುಬಿದಿರೆ ತಾಲೂಕಿನ ಜ್ಞಾನವಿಕಾಸ ಯೋಜನೆಯ ಅಂತರ್ಗತವಾಗಿ ವಾಲ್ಪಾಡಿ ಗ್ರಾಮದ ಪೆರಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 15ರಂದು ಶಿಕ್ಷಣದಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪಾತ್ರದ ಕುರಿತು ಸಂವಾದ ಚರ್ಚೆ ನಡೆಯಿತು. ಸಂವಾದ ಚರ್ಚೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರು ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ರಾಜ್ಯ ಗ್ರಾಹಕ ಸಂಘಟನೆಯ ಸಂಪನ್ಮೂಲ ವ್ಯಕ್ತಿ, ಕಾರ್ಯನಿರತ ಪತ್ರಕರ್ತ ರಾಯಿ ರಾಜ ಕುಮಾರ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಅವರು ತಮ್ಮ ಭಾಷಣದಲ್ಲಿ ಶಿಕ್ಷಕರ ಹಾಗೂ ಪೋಷಕರಿಂದ ನಿರೀಕ್ಷಿಸುವ ವಿವಿಧ ಅಂಶಗಳ…

Read More

ಚಿಲಿಂಬಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ; ₹50 ಲಕ್ಷ ವಿಶೇಷ ಅನುದಾನದಲ್ಲಿ ಅಭಿವೃದ್ಧಿ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 26ನೇ ದೇರೆಬೈಲ್ ನೈರುತ್ಯ ವಾರ್ಡಿನ ಚಿಲಿಂಬಿ ಶ್ರೀ ಮಲರಾಯ ದೈವಸ್ಥಾನದ ದ್ವಾರದಿಂದ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಯು 50ಲಕ್ಷ ರೂ. ವಿಶೇಷ ಅನುದಾನದಲ್ಲಿ ನಡೆಯಲಿದ್ದು ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ನಡೆಯಿತು. ನಂತರ ಮಾತನಾಡಿದ ಶಾಸಕರು ಈ ಭಾಗದ ಸ್ಥಳೀಯರ ಬೇಡಿಕೆಯ ಮೇರೆಗೆ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಈ ಸಂದರ್ಭದಲ್ಲಿ ಉಂಟಾಗುವ ಅಡಚಣೆಗೆ ಸಾರ್ವಜನಿಕರು ಸಹಕರಿಸಬೇಕು. ಅದೇ ರೀತಿಯಲ್ಲಿ ಕಾಮಗಾರಿ ವಹಿಸಿಕೊಂಡವರೂ ಸಹ ಯಾವುದೇ ವಿಳಂಬಕ್ಕೆ ಆಸ್ಪದವಿಲ್ಲದಂತೆ…

Read More

​ಗಡಿನಾಡ ಮಹಿಳೆಯರ ಸಂಚಾರಕ್ಕೆ ಸಿಕ್ಕಿತು ಉಚಿತ ಭಾಗ್ಯ: ಮಂಜೇಶ್ವರದಲ್ಲಿ ‘ಪ್ರಿಯದರ್ಶಿನಿ’ ಯೋಜನೆಗೆ ಚಾಲನೆ

​ಮಂಜೇಶ್ವರ: ಕೇರಳದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಬಹುನಿರೀಕ್ಷಿತ ‘ಪ್ರಿಯದರ್ಶಿನಿ’ ಯೋಜನೆಗೆ ಮಂಜೇಶ್ವರ ಕ್ಷೇತ್ರದಲ್ಲಿ ಇಂದು ಅಧಿಕೃತವಾಗಿ ಚಾಲನೆ ದೊರೆತಿದೆ. ಉಪ್ಪಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎ.ಕೆ.ಎಂ. ಅಶ್ರಫ್ ಅವರು ಬಸ್ಸಿನ ಧ್ವಜ ಹಾರಿಸಿ, ಡಬಲ್ ಬೆಲ್ ಬಾರಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದರು. ​ಮೊದಲ ಟಿಕೆಟ್ ವಿತರಣೆ ಮತ್ತು ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಬಸ್ಸಿನೊಳಗೆ ಎಣ್ಮಕಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮಾವತಿ ಅವರಿಗೆ ಶಾಸಕರು ಸಾಂಕೇತಿಕವಾಗಿ ಮೊದಲ ಟಿಕೆಟ್ ನೀಡಿದರು. ಬಳಿಕ ಬಸ್ಸಿನ…

Read More

ಇನೋಳಿಗೆ ಸರ್ಕಾರಿ ಬಸ್ ಓಡಾಟಕ್ಕೆ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನ

ಕೊಣಾಜೆ: ಪಾವೂರು ಗ್ರಾಮದ ಇನೋಳಿಗೆ ಸರ್ಕಾರಿ ಬಸ್ ಸೇವೆ ಆರಂಭಿಸುವಂತೆ ಆಗ್ರಹಿಸಿ ಸರ್ಕಾರಿ ಬಸ್ ಹೋರಾಟ ಸಮಿತಿಯ ನೇತೃತ್ವದಲ್ಲಿ ಮಲಾರ್ ಪದವಿನ ಸೆಂಟ್ರಲ್ ಮುಸ್ಲಿಂ ಶಾಲೆ ಬಳಿ ಭಾನುವಾರ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಇನೋಳಿಗೆ ಸರ್ಕಾರಿ ಬಸ್ ಓಡಾಟ ಆರಂಭಿಸುವಂತೆ ಗ್ರಾಮ ಪಂಚಾಯಿತಿ, ಸಚಿವರು ಹಾಗೂ ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಈಗಾಗಲೇ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸಮಿತಿ ಮುಖಂಡರು ಆರೋಪಿಸಿದ್ದಾರೆ. ಸರ್ಕಾರಿ ಬಸ್ ಸೇವೆ ಇಲ್ಲದ ಕಾರಣ ರಾಜ್ಯ ಸರ್ಕಾರದ ಮಹತ್ವದ…

Read More

ಸಮುದ್ರ ಪಾಲಾದ ಇಬ್ಬರು ಯುವಕರ ಮೃತದೇಹ ಪತ್ತೆ

ಕಾಸರಗೋಡು: ಬೇಕಲ ಕೋಟೆ ಸಮೀಪದ ಪಳ್ಳಿಕೆರೆ ಸಮುದ್ರ ತೀರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಇಬ್ಬರು ಯುವಕರ ಮೃತದೇಹಗಳು ಸೋಮವಾರ ಮಧ್ಯಾಹ್ನ ಪತ್ತೆಯಾಗಿವೆ. ಮೃತರನ್ನು ಕೊಟ್ಟಾಯಂ ಜಿಲ್ಲೆಯ ಚಂಗನಕ್ಕೇರಿ ಮೂಲದ ಅಪ್ಪುಟಿ ಅಬ್ರಹಾಂ (20) ಹಾಗೂ ಅಂಕಿತ್ (20) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ನಾಲ್ವರು ಯುವಕರು ಕೊಟ್ಟಾಯಂನಿಂದ ಪಳ್ಳಿಕೆರೆ ಸಮುದ್ರ ತೀರಕ್ಕೆ ಆಗಮಿಸಿ ಸಮುದ್ರದಲ್ಲಿ ಸ್ನಾನಕ್ಕೆ ಇಳಿದಿದ್ದರು. ಈ ವೇಳೆ ಭಾರಿ ಅಲೆಗಳ ಹೊಡೆತಕ್ಕೆ ಸಿಲುಕಿದ ನಾಲ್ವರಲ್ಲಿ ಇಬ್ಬರು ಸುರಕ್ಷಿತವಾಗಿ ದಡ ಸೇರಿದ್ದರೆ, ಅಪ್ಪುಟಿ ಅಬ್ರಹಾಂ…

Read More

ರೈತರ ಸಮಸ್ಯೆ ಪರಿಹಾರಕ್ಕೆ ಎಸ್‌ಪಿಗೆ ಮನವಿ ಸಲ್ಲಿಕೆ

ಮಂಗಳೂರು: ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆ ರಕ್ಷಣೆಗಾಗಿ ಅಗತ್ಯವಿರುವ ಕೋವಿ ಪರವಾನಗಿ ನವೀಕರಣಕ್ಕೆ ನಿರಪೇಕ್ಷಣಾ ಪತ್ರ (ಎನ್‌ಒಸಿ) ಪಡೆಯುವಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ನಿಯೋಗವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ಮುಂದಾಳತ್ವದಲ್ಲಿ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ನಿಯೋಗವು ಎಸ್‌ಪಿ ಅವರನ್ನು…

Read More

ಅಮೆರಿಕ-ಇರಾನ್ ಶಾಂತಿ ಒಪ್ಪಂದಕ್ಕೆ ಪ್ರಧಾನಿ ಮೋದಿ ಸ್ವಾಗತ; ಮಧ್ಯಪ್ರಾಚ್ಯದಲ್ಲಿ ಸ್ಥಿರತೆ ನಿರೀಕ್ಷೆ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹಲವು ತಿಂಗಳುಗಳಿಂದ ಮುಂದುವರಿದಿದ್ದ ಉದ್ವಿಗ್ನತೆಯನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದಿರುವ ಶಾಂತಿ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸ್ವಾಗತಿಸಿದ್ದಾರೆ. ಈ ಒಪ್ಪಂದದಿಂದ ಜಾಗತಿಕ ಆರ್ಥಿಕತೆಯಲ್ಲಿ ಉಂಟಾಗಿದ್ದ ಅಡಚಣೆಗಳು ನಿವಾರಣೆಯಾಗುವ ಜೊತೆಗೆ, ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಮರುಸ್ಥಾಪನೆಯಾಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. ಯುರೋಪ್ ಪ್ರವಾಸದ ಅಂಗವಾಗಿ ಸ್ಲೋವಾಕಿಯಾದ ರಾಜಧಾನಿ ಬ್ರಾಟಿಸ್ಲಾವಾದಲ್ಲಿ ಇರುವ ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯೆ ನೀಡಿದ್ದು, “ಮಧ್ಯಪ್ರಾಚ್ಯ ಸಂಘರ್ಷವನ್ನು ಅಂತ್ಯಗೊಳಿಸುವ…

Read More

ಶಬರಿಮಲೆ ಯಾತ್ರೆಗೆ ತೆರಳಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಪಂಪ: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಸೋಮವಾರ ಮುಂಜಾನೆ ಕೊಚ್ಚಿನ್‌ನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿ, ಶ್ರೀ ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿದರು. ಬಳಿಕ ದೇವಸ್ಥಾನದಲ್ಲಿಯೇ ಇರುಮುಡಿ ಕಟ್ಟಿ ಶಬರಿಮಲೆ ಯಾತ್ರೆಗೆ ಚಾಲನೆ ನೀಡಿದರು. ಮಧ್ಯಾಹ್ನದ ವೇಳೆಗೆ ಪಂಪಾ ನದಿ ತೀರ ತಲುಪಲಿರುವ ಸಚಿವರು, ಪವಿತ್ರ ಸ್ನಾನ ನೆರವೇರಿಸಿದ ಬಳಿಕ ಶಬರಿಮಲೆಯತ್ತ ಪಾದಯಾತ್ರೆ ಮುಂದುವರಿಸಲಿದ್ದಾರೆ….

Read More

ಇಸ್ರೇಲ್ ದಾಳಿಯಿಂದ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಪ್ರಕ್ರಿಯೆಗೆ ಹಿನ್ನಡೆ: ಟ್ರಂಪ್

ವಾಷಿಂಗ್ಟನ್: ಇಸ್ರೇಲ್ ಪ್ರಧಾನಿಬೆಂಜಮಿನ್ ನೆತನ್ಯಾಹು ಲೆಬನಾನ್‌ನ ಬೈರುತ್ ಮೇಲೆ ನಡೆಸಿದ ವೈಮಾನಿಕ ದಾಳಿಯಿಂದ ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಪ್ರಕ್ರಿಯೆ ಹಿನ್ನಡೆ ಕಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟ್ರಂಪ್, ನೆತನ್ಯಾಹು ಅವರನ್ನು “ತುಂಬಾ ಕಠಿಣ ವ್ಯಕ್ತಿ” ಎಂದು ಬಣ್ಣಿಸಿ, ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದುವುದನ್ನು ತಡೆಯುವ ಒಪ್ಪಂದಕ್ಕಾಗಿ ಇಸ್ರೇಲ್ ಅಮೆರಿಕಕ್ಕೆ ಕೃತಜ್ಞರಾಗಿರಬೇಕು ಎಂದರು. ಜೂನ್ 19ರಂದು ಸ್ವಿಟ್ಜರ್ಲೆಂಡ್‌ನಲ್ಲಿ ಸಹಿಯಾಗಲಿರುವ ಒಪ್ಪಂದವು ಲೆಬನಾನ್ ಸೇರಿದಂತೆ ಎಲ್ಲ ರಂಗಗಳಲ್ಲಿನ ಸಂಘರ್ಷಕ್ಕೆ ಅಂತ್ಯ ಹಾಡುವುದು, ಹಾರ್ಮುಜ್ ಜಲಸಂಧಿಯ ಮೂಲಕ…

Read More
error: Content is protected !!