ಕುಟುಂಬ ಕಲಹದ ಕರಾಳ ಅಧ್ಯಾಯ; ಮಂಜೇಶ್ವರದಲ್ಲಿ ಜುಮ್ಲಾ–ಶೇಕುಂಞ ದಫನ
ಮಂಜೇಶ್ವರ: ಮಂಜೇಶ್ವರ ತೊಮಿನಾಡು ಹಿಲ್ಟಾಪ್ನಲ್ಲಿ ದಾಂಪತ್ಯ ವೈಮನಸ್ಸು ಹಾಗೂ ಸೊತ್ತು ವಿಚಾರದ ಕಲಹದಿಂದ ಮೃತಪಟ್ಟ ಜುಮ್ಲಾ ಮತ್ತು ಆಕೆಯ ಚಿಕ್ಕಪ್ಪ ಶೇಕುಂಞ ಅವರ ಮೃತದೇಹಗಳನ್ನು ಸಹಸ್ರಾರು ಮಂದಿಯ ಸಮ್ಮುಖದಲ್ಲಿ ಮಂಜೇಶ್ವರ ಮುಯ್ಯುದ್ದೀನ್ ಜುಮಾ ಮಸೀದಿ ಅಂಗಳದಲ್ಲಿ ದಫನ ಮಾಡಲಾಯಿತು. ಸೋಮವಾರ ಶೇಕುಂಞ ಅವರ ಮನೆಯಲ್ಲಿ ನಡೆದ ಹಲ್ಲೆಯ ವೇಳೆ ತಂದೆಯ ಇರಿತಕ್ಕೆ ಒಳಗಾದ ಜುಮ್ಲಾ ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನೆಯ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಿಗ್ಗೆ…