ಬಂಗ್ರಮಂಜೇಶ್ವರದಲ್ಲಿ ‘ವಿಶ್ವ ರೂಪಂ’ ಯುವಜನೋತ್ಸವದ ಮಹಾಸಮಾರೋಪ ಸಂಪನ್ನ

ಬಂಗ್ರಮಂಜೇಶ್ವರ: ಇಲ್ಲಿನ ಶ್ರೀ ಕಾಳಿಕಾಪರಮೇಶ್ವರೀ ದೇವಸ್ಥಾನದ ಆಶ್ರಯದಲ್ಲಿ, ಓಜ ಸಾಹಿತ್ಯ ಕೂಟದ ನೇತೃತ್ವದಲ್ಲಿ ಕಳೆದ 12 ವಾರಗಳಿಂದ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಹಬ್ಬ “ವಿಶ್ವ ರೂಪಂ’ ಯುವಜನ ಓಜಸ್ವರೂಪಂ – ಸೀಸನ್ 2.0 (2025–26) ರ ಭವ್ಯ ಸಮಾರೋಪ ಸಮಾರಂಭವು ಫೆಬ್ರವರಿ 1, 2026ರಂದು ವಿಜೃಂಭಣೆಯಿಂದ ಜರುಗಿತು. ಈ ಭವ್ಯ ಸಮಾರೋಪ ಸಮಾರಂಭವು ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಉಪಸ್ಥಿತಿ ಹಾಗೂ ಆಶೀರ್ವಚನದೊಂದಿಗೆ ಸಂಪನ್ನಗೊಂಡಿತು. ಪೂಜ್ಯ…

Read More

ಮೇರು ಕವಯತ್ರಿ ಲತಾ ಧನು ಸೀತಾಂಗೋಳಿ ಯವರೀಗೆ “ಚುಟುಕು ಸಿರಿ ರತ್ನ “ಪ್ರಶಸ್ತಿ.

ಮೇರು ಕವಯತ್ರಿ ಲತಾ ಧನು ಸೀತಾಂಗೋಳಿ ಇವರೀಗೆ, ಡಾ. ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಿದ “ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026.ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ “ಚುಟುಕು ಯುಗಾಚಾರ್ಯ ಎಂ. ಜಿ. ಆರ್. ಅರಸ್ ” ಭವ್ಯ ಸಮ್ಮೇಳನ ವೇದಿಕೆಯಲ್ಲಿ “ಚುಟುಕು ಸಿರಿ ರತ್ನ ” ಪ್ರಶಸ್ತಿ ನೀಡಿ ಗೌರವಿಸಲಿದ್ದೇವೆ ಎಂದು ಪರಿಷತ್ತು ಸಂಸ್ಥಾಪಕರಾದ ಡಾ….

Read More

ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತ -ಕಾರ್ಮಿಕ ವರ್ಗ ಮತ್ತೆ ಗುಲಾಮಗಿರಿಯತ್ತ – ಫಣೀಂದ್ರ ಕೆ

ಮಂಗಳೂರು: ಕಾರ್ಮಿಕ ವರ್ಗದ ಹಿತಾಸಕ್ತಿಗಳನ್ನು ಕಾಪಾಡಬೇಕಾದ ಕೇಂದ್ರ ಸರಕಾರವು ನಿತ್ಯ ನಿರಂತರವಾಗಿ ಕಾರ್ಪೊರೇಟ್ ಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆ.ಆ ಮೂಲಕ ಕಾರ್ಪೊರೇಟ್ ಸರಕಾರವಾಗಿದೆ. ಹಸಿವು ಮುಕ್ತ,ಬಡತನ ಮುಕ್ತ, ನಿರುದ್ಯೋಗ ಮುಕ್ತ ಭಾರತವಾಗಿ ನಿರ್ಮಾಣ ಮಾಡುವ ಬದಲು ಯೂನಿಯನ್ ಮುಕ್ತ ಭಾರತವನ್ನಾಗಿ ನಿರ್ಮಿಸಲು ಹೊರಟಿದೆ.ಈ ಮೂಲಕ ಕಾರ್ಮಿಕ ವರ್ಗವನ್ನು ಮತ್ತೆ ಗುಲಾಮರನ್ನಾಗಿಸಿ ಅತ್ಯಂತ ಹೀನಾಯವಾಗಿ ಶೋಷಣೆ ಮಾಡಲು ಹೊರಟಿದೆ ಎಂದು ಕರ್ನಾಟಕ ಬ್ಯಾಂಕ್ ನೌಕರರ ಸಂಘಟನೆಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಫಣೀಂದ್ರ ಕೆ ಯವರು ಆಕ್ರೋಶ ವ್ಯಕ್ತಪಡಿಸಿದರು. ಅವರು…

Read More

ಪ್ರಯಾಣಿಕರಿಗೆ ರಿಲೀಫ್: ಕಾಸರಗೋಡು–ಮಂಗಳೂರು ಮಾರ್ಗದ ಟೋಲ್ ರದ್ದು, ಬಸ್ ದರ ಹಿಂಪಡೆ

ಮಂಜೇಶ್ವರ: ಕ್ರಿಯಾ ಸಮಿತಿಯ ಹೋರಾಟಕ್ಕೆ ಮಣಿದು ನ್ಯಾಯಾಲಯದ ತೀರ್ಪು ಬರುವ ಮುನ್ನವೇ ಕಾಸರಗೋಡು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅನಧಿಕೃತವಾಗಿ ಜಾರಿಯಲ್ಲಿದ್ದ ಟೋಲ್ ವಸೂಲಾತಿಯನ್ನು ಕೇಂದ್ರ ಹೆದ್ದಾರಿ ಇಲಾಖೆ ರದ್ದುಪಡಿಸಿ ಆದೇಶ ಹೊರಡಿಸಿದೆ. ಇದರ ಪರಿಣಾಮ, ಕರ್ನಾಟಕ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇತ್ತೀಚೆಗೆ ಜಾರಿಗೊಳಿಸಿದ್ದ ಟಿಕೆಟ್ ದರ ಏರಿಕೆ ಹಿಂಪಡೆಯಲಾಗಿದೆ. ಈ ಕುರಿತು ಕರ್ನಾಟಕ ಸಾರಿಗೆ ಇಲಾಖೆಯ ಮಂಗಳೂರು ವಿಭಾಗ ಅಧಿಕೃತ ಪ್ರಕಟಣೆ ಹೊರಡಿಸಿದೆ. ಟೋಲ್ ಗೇಟ್ ಆರಂಭವಾದಂದಿನಿಂದ ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ನೇತಾರರು, ಸಾರಿಗೆ ಸಂಘಟನೆಗಳು ಹಾಗೂ ಸಾರ್ವಜನಿಕರು…

Read More

ರೈತರೊಂದಿಗೆ ಉತ್ಪಾದಕ ಮೈತ್ರಿಗಳನ್ನು ರೂಪಿಸಲು KERA ಯೋಜನೆಯಡಿ ಕಂಪನಿಗಳಿಗೆ ಆಹ್ವಾನ….. !

ಮಂಗಳೂರು:ಕೇರಳ ಸರ್ಕಾರವು ವಿಶ್ವಬ್ಯಾಂಕ್‌ ಸಹಕಾರದೊಂದಿಗೆ ಅನುಷ್ಠಾನಗೊಳಿಸುತ್ತಿರುವ ಕೇರಳ ಹವಾಮಾನ ಸ್ಥಿತಿಸ್ತಾಪಕ ಕೃಷಿ-ಮೌಲ, ಸರಪಳಿ ಆಧುನೀಕರಣ (KERA)ಯೋಜನೆಯಡಿಯಲ್ಲಿ, ರೈತ ಉತ್ಪಾದಕ ಕಂಪನಿಗಳು (FPG) ಹಾಗೂ ಪ್ರಮುಖ ಕೃಷಿ ವ್ಯವಹಾರ ಸಂಸ್ಥೆಗಳ ನಡುವಿನ ಬಲಿಷ್ಠ , ಉತ್ಪಾದಕ ಮೈತ್ರಿಗಳನ್ನು ರೂಪಿಸುವ ಉದ್ದೇಶದಿಂದ ಒಂದು ಐತಿಹಾಸಿಕ ಉಪಕ್ರಮವನ್ನು ಆರಂಭಿಸಿದೆ. ಈ ಯೋಜನೆಯಡಿಯಲ್ಲಿ ಸಂಬಂಧಿತ ಕೃಷಿ ಮತ್ತು ಕೃಷಿಯೇತರ ಸಂಸ್ಥೆಗಳು, ಸೂಪರ್‌ಮಾರ್ಕೆಟ್ ಸರವಳಿಗಳು, ರಫ್ತುದಾರರು ಹಾಗೂ ಇ-ಕಾಮರ್ಸ್ ವೇದಿಕೆಗಳನ್ನು ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ ಎಂದು KERA ಯೋಜನಾ ಇದರ ಉಪ ಕೃಷಿ ನಿರ್ದೇಶಕರಾದ…

Read More

ಅಳಿವಿನ ಅಂಚಿನಲ್ಲಿರುವ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರಿಗಿದೆ : ಡಾ. ಡಿ. ವೀರೇಂದ್ರ ಹೆಗ್ಗಡೆ

ಕಾಸರಗೋಡು : ಯಕ್ಷಗಾನ ಬೊಂಬೆಯಾಟವೂ ಸೇರಿದಂತೆ ಅಳಿವಿನ ಅಂಚಿನಲ್ಲಿರುವ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಜ ವಾಬ್ದಾರಿ ನಮ್ಮೆಲ್ಲರಿಗಿದೆ. ಈ ನಿಟ್ಟಿನಲ್ಲಿ ಮಾದರಿಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸುತ್ತಿರುವ ಕಾಸರಗೋಡಿನ ಕೆ. ವಿ. ರಮೇಶ ಅಭಿ ನಂದನಾರ್ಹರು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಗೋಪಾಲಕೃಷ್ಣಯಕ್ಷಗಾನ ಬೊಂಬೆಯಾಟ ಸಂಘದ ನೂತನ ಅಭಿಯಾನವಾದ ‘ಗಣ್ಯರೆಡೆಗೆ ಬೊಂಬೆ ನಡಿಗೆ’ಯನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಧರ್ಮಸ್ಥಳ ದೇವಸ್ಥಾನದ ಮುಂಭಾಗದಲ್ಲಿ ನಡೆದ ಸರಳ ಸಮಾರಂಭದಲ್ಲಿ ಡಾ. ಹೆಗ್ಗಡೆಯವರಯ…

Read More

ಮಂಜೇಶ್ವರ: ಫೈನ್ ಇಂಡಿಯಾ ಫೈಬರ್ ನೆಟ್ LLP ಸಂಸ್ಥೆಯ ಕಾರ್ಯಾರಂಭ

ಮಂಜೇಶ್ವರ: ಫೈನ್ ಇಂಡಿಯಾ ಫೈಬರ್ ನೆಟ್ LLP ಸಂಸ್ಥೆಯ ಕಾರ್ಯಾರಂಭವು ಉಪ್ಪಳದ ಲಂಸ್ ಬೇಕರಿ ಅಂಡ್ ರೆಸ್ಟೋರೆಂಟ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಡೆಯಿತು. ಸಮಾರಂಭವನ್ನು ಸಿಒಎ ಜಿಲ್ಲಾ ಅಧ್ಯಕ್ಷ ವಿ.ವಿ. ಮನೋಜ್ ಕುಮಾರ್ ಉದ್ಘಾಟಿಸಿದರು. KCCL ನಿರ್ದೇಶಕ ಎಂ. ಲೋಹಿತಾಕ್ಷನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಜಿಲ್ಲೆಯಲ್ಲಿ ಹಿರಿಯ ಕೇಬಲ್ ಟಿವಿ ಆಪರೇಟರ್ ಹಾಗೂ ಫೈನ್ ಟಿವಿ ಮಾಲೀಕರಾದ ಉಸ್ಮಾನ್ ಪಾಂಡಿಯಾಲ್ ಅಧ್ಯಕ್ಷತೆ ವಹಿಸಿದ್ದರು. ಏಕೀಕೃತ ವ್ಯವಸ್ಥೆಯನ್ನು ಅಳವಡಿಸುವ ಉದ್ದೇಶದಿಂದ ವ್ಯಕ್ತಿಗತ ನಿಯಂತ್ರಣದಲ್ಲಿದ್ದ ಫೈನ್ ಟಿವಿ ಇದೀಗ LLP ರೂಪದಲ್ಲಿ…

Read More

ನಂತೂರು ವೃತ್ತದಲ್ಲಿ ಭೀಕರ ಅಪಘಾತ: ಸ್ಕೂಟರ್‌ಗೆ ಬಸ್ ಡಿಕ್ಕಿ, ಯುವತಿ ಸ್ಥಳದಲ್ಲೇ ಸಾವು

ಮಂಗಳೂರು: ನಗರದ ನಂತೂರು ವೃತ್ತದ ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿದ್ದು ಹಿಂಬದಿ ಸವಾರೆಯಾಗಿದ್ದ ಯುವತಿಯ ಮೇಲೆ ಬಸ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಮೃತಪಟ್ಟ ಯುವತಿ. ಈಕೆ ತನ್ನ ಭಾವೀ ಪತಿಯೊಂದಿಗೆ ಶಿವಭಾಗ್ ಕಡೆಯಿಂದ ಸ್ಕೂಟರ್ ನಲ್ಲಿ ವಾಮಂಜೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ, ಕದ್ರಿ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಸಾಗುತ್ತಿದ್ದ ಬಸ್ ತಾಗಿದ್ದು ಹಿಂಬದಿಯಿದ್ದ ಸವಾರೆ ನೆಲಕ್ಕೆ ಬಿದ್ದಿದ್ದಾರೆ. ಈ ವೇಳೆ,…

Read More

ಫೆ.12ರಂದು ಅಖಿಲ ಭಾರತ ಮಹಾಮುಷ್ಕರಕ್ಕೆ ವಿವಿಧ ಸಂಘಟನೆಗಳ ಬೆಂಬಲ : ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್

ಮಂಗಳೂರು: ಪ್ರಮುಖ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿರುವುದರ ವಿರುದ್ಧ ಕಾರ್ಮಿಕ ವಿರೋಧಿ ಕಾರ್ಪೊರೇಟ್ ಪರ 4 ಕಾರ್ಮಿಕ ಸಂಹಿತೆಗಳ ವಿರುದ್ಧ ರೈತ ವಿರೋಧಿ ಬೀಜ ಮಸೂದೆ, ವಿದ್ಯುತ್ ಮಸೂದೆ ವಿರುದ್ಧ ಹಾಗೂ ಉದ್ಯೋಗ ಖಾತ್ರಿ ಯೋಜನೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ರೈತ ಕಾರ್ಮಿಕರ ನೇತೃತ್ವದಲ್ಲಿ ಫೆ.12ರಂದು ಅಖಿಲ ಭಾರತ ಮಹಾಮುಷ್ಕರ ನಡೆಯಲಿದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಹೇಳಿದ್ದಾರೆ. ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಕೇಂದ್ರ…

Read More

ಬಾಕುಡ ಸಮುದಾಯ ಕುರಿತು ತಪ್ಪು ಮಾಹಿತಿ ಹರಡಿದ ಆರೋಪ: ನವೀನ್ ಸೂರಿಂಜೆ ವಿರುದ್ಧ ಖಂಡನೆ:ಬಾಲಕೃಷ್ಣ ವಿ.ಎನ್.(ಬಾಕುಡ ಪ್ರತಿನಿಧಿ)

ಕಾಸರಗೋಡು: ಬಾಕುಡ ಸಮುದಾಯದ ದೈವದಪಾತ್ರಿ–ಕಾರ್ನವರ ಒಕ್ಕೂಟದ ಇತ್ತೀಚಿನ ವಾರ್ಷಿಕ ಸಭೆಯಲ್ಲಿ ಮುಖ್ಯ ಧಾರ್ಮಿಕ ಭಾಷಣಗಾರರಾಗಿ ಭಾಗವಹಿಸಿದ್ದ ಪತ್ರಕರ್ತ ನವೀನ್ ಸೂರಿಂಜೆ ಅವರು ತಮ್ಮ ಸಾಮಾಜಿಕ ಜಾಲತಾಣದ ಮುಖಪುಟದಲ್ಲಿ ಹಂಚಿಕೊಂಡ ಭಾಷಣದ ಕೆಲವು ಭಾಗಗಳು ವಿವಾದಕ್ಕೆ ಕಾರಣವಾಗಿವೆ. ಕರಾವಳಿಯ ನಾಗಬನಗಳ ಮೇಲಿನ ಅಧಿಕಾರ ಬಾಕುಡರಿಗೆ ಮಾತ್ರ ಇದ್ದು, ಕೋಟಿಗಟ್ಟಲೆ ಆದಾಯದ ವ್ಯವಹಾರವನ್ನು ಬ್ರಾಹ್ಮಣರು ಕಸಿದುಕೊಂಡಿದ್ದಾರೆ, ಬಾಕುಡರ ಹಕ್ಕಿನ ನಾಗಾರಾಧನೆಯಿಂದ ಅವರನ್ನು ಹೊರಹಾಕಲಾಗಿದೆ, ಬಾಕುಡರ ಜಮೀನನ್ನು ಬ್ರಾಹ್ಮಣರು ಕಬಳಿಸಿದ್ದಾರೆ ಎಂಬ ರೀತಿಯ ಅಕ್ಷರಶಃ ಸುಳ್ಳು ಮಾಹಿತಿಯನ್ನು ಅವರು ಹರಡಿದ್ದಾರೆ ಎಂದು…

Read More
error: Content is protected !!