ರಾ.ಹೆ.66ರ ಅಂಬಲಪಾಡಿ ಮೇಲ್ಸೇತುವೆಯ ಒಂದು ಬದಿಯ ರಸ್ತೆ ಸಂಚಾರಕ್ಕೆ ಮುಕ್ತ
ಉಡುಪಿ: ಅಂಬಲಪಾಡಿ ಮೇಲ್ಸೇತುವೆಯ ಒಂದು ಬದಿಯನ್ನು ಮಂಗಳೂರಿನಿಂದ ಕುಂದಾಪುರ ಕಡೆಗೆ ಏಕಮುಖ ವಾಹನ ಸಂಚಾರಕ್ಕೆ ಭಾನುವಾರ ಮುಕ್ತಗೊಳಿಸಲಾಯಿತು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮೇಲ್ಸೇತುವೆಯ ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಚಾಲನೆ ನೀಡಿದರು.ಮೇಲ್ಸೇತುವೆಯ ಕೆಳಭಾಗದ ಸರ್ವಿಸ್ ರಸ್ತೆ ಹೊಂಡಗಳಿಂದ ಕೂಡಿದ್ದು, ಮಳೆ ನೀರು ನಿಂತ ಪರಿಣಾಮ ವಾಹನ ಸಂಚಾರ ದುಸ್ತರವಾಗಿತ್ತು. ಇದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ತಾತ್ಕಾಲಿಕ ಕ್ರಮವಾಗಿ ಮೇಲ್ಸೇತುವೆಯ ಒಂದು ಬದಿಯನ್ನು ಸಂಚಾರಕ್ಕೆ ತೆರೆಯಲಾಗಿದೆ ಎಂದು ಅಧಿಕಾರಿಗಳು…
