ಅ.15ರಂದು ಮಂಜೇಶ್ವರದಲ್ಲಿ ‘ಪುವೆಂಪು ನೆನಪು’ ಪ್ರಶಸ್ತಿ ಪ್ರಧಾನ
ಮಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರ್ಕಾರ, ಬೆಂಗಳೂರು – ಡಾ. ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಪ್ರತಿಷ್ಠಾನ, ಕಾಸರಗೋಡು ಹಾಗೂ ಕೇರಳ ತುಳು ಅಕಾಡೆಮಿ, ಮಂಜೇಶ್ವರ ಇವುಗಳ ಸಂಯುಕ್ತ ಆಶ್ರಯದಲ್ಲಿ “ಪುವೆಂಪು ನೆನಪು-2025” ಕಾರ್ಯಕ್ರಮವು ಅಕ್ಟೋಬರ್ . 15ರಂದು ಬೆಳಿಗ್ಗೆ 9 ರಿಂದ ದುರ್ಗಿಹಳ್ಳದ ಕೇರಳ ತುಳು ಅಕಾಡೆಮಿ ಸಭಾಂಗಣದಲ್ಲಿ ಜರುಗಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ತಿಳಿಸಿದರು. ಅವರು ಪತ್ರಿಕಾಭವನದಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ…