ಪಂತಡ್ಕ ರಸ್ತೆ ಬದಿಯಲ್ಲಿ ತ್ಯಾಜ್ಯ ರಾಶಿ; ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರ ಆಗ್ರಹ
ಬಂಟ್ವಾಳ: ನೆಟ್ಲ ಮುಡ್ನೂರು ಗ್ರಾ.ಪಂ ವ್ಯಾಪ್ತಿಯ ಪಂತಡ್ಕದ ರಸ್ತೆ ಬದಿಯಲ್ಲಿ ತ್ಯಾಜ್ಯ ರಾಶಿ ಬಿದ್ದಿದ್ದು, ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಪಂಚಾಯಿತಿಯು ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಕಸ, ಕೊಳೆತ ಹಣ್ಣು, ತರಕಾರಿ ಮತ್ತು ಹೋಟೆಲ್ ಗಳ ಉಳಿಕೆ ಆಹಾರವನ್ನು ಎಸೆಯಲಾಗುತ್ತಿದೆ. ತ್ಯಾಜ್ಯ ರಾಶಿ ದುರ್ವಾಸನೆ ಬೀರುತ್ತಿದ್ದರೂ ಗ್ರಾಪಂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಗಮನ ಹರಿಸಿಲ್ಲ ಎಂದು ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದುರ್ವಾಸನೆ ಈ ಪ್ರದೇಶ ವ್ಯಾಪಿಸಿ…
