ಯುವತಿ ಜತೆಗಿನ ಖಾಸಗಿ ವಿಡಿಯೋ ವೈರಲ್ ಮಾಡುವ ಬೆದರಿಕೆ; ಗೆಳೆಯರ ಬ್ಲ್ಯಾಕ್ ಮೇಲ್ ಒತ್ತಡ ತಾಳಲಾರದೆ ಯುವಕ ಆತ್ಮಹತ್ಯೆ

ಉಡುಪಿ: ಗೆಳೆಯರ ಬ್ಲ್ಯಾಕ್ ಮೇಲ್ ಒತ್ತಡ ತಾಳಲಾರದೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ನ ಖಾಸಗಿ ಲಾಡ್ಜ್ ನಲ್ಲಿ ನಡೆದಿದೆ. ನಿಟ್ಟೆಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಆತ್ಮಹತ್ಯೆಗೆ ಶರಣಾದ ಯುವಕ. ಪ್ರೇಯಸಿಯ ಜೊತೆಗಿರುವ ಖಾಸಗಿ ವಿಡಿಯೋವನ್ನು ವೈರಲ್ ಮಾಡುವುದಾಗಿ ಗೆಳೆಯರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.ಆತ ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಬ್ಲ್ಯಾಕ್ ಮೇಲ್ ಮಾಡಿರುವ ನಾಲ್ಕು ಮಂದಿಯ ಹೆಸರು…

Read More

ಸಿಜೆಐ ಗವಾಯಿ ಮೇಲೆ ಶೂ ಎಸೆದ ವಕೀಲನ ಕೃತ್ಯ ಖಂಡಿಸಿ ಅಂಬೇಡ್ಕರ್ ಯುವಸೇನೆಯಿಂದ ಪ್ರತಿಭಟನೆ.

ಉಡುಪಿ: ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆದ ವಕೀಲನ ಕೃತ್ಯ ಖಂಡಿಸಿ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆಯ ವತಿಯಿಂದ ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ವಕೀಲ ರಾಕೇಶ್ ಕಿಶೋರ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಮಾತನಾಡಿ, ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರನ್ನು ಗುರಿಯಾಗಿಸಿ ಶೂ ಎಸೆದ ಸನಾತನಿ ವಕೀಲ ರಾಕೇಶ್ ಕಿಶೋರ್‌ನನ್ನು ಭಾರತದಿಂದ ತಕ್ಷಣ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು. ಭಾರತದ…

Read More

ಅರಣ್ಯ ಇಲಾಖೆಯ ಮಂಗಳೂರಿನ ಅರಣ್ಯಾಧಿಕಾರಿ ಜಿತೇಶ್ .ಪಿ ಅವರಿಗೆ ಮುಖ್ಯಮಂತ್ರಿ ಪದಕ..

ಬಂಟ್ವಾಳ : ಅರಣ್ಯ ಇಲಾಖೆಯ ಬಂಟ್ವಾಳ ವಲಯದ ಗಸ್ತುಪಾಲಕ ಜಿತೇಶ್.ಪಿ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ. ಕರ್ನಾಟಕ ಸರಕಾರದಿಂದ ಕರ್ನಾಟಕ ಅರಣ್ಯ ಇಲಾಖೆಯಲ್ಲಿ ವಿವಿಧ ವಿಭಾಗಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿರುವ ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನೀಡುವ ಮುಖ್ಯಮಂತ್ರಿ ಪದಕವನ್ನು ಮಂಗಳೂರು ವಿಭಾಗದ ಬಂಟ್ವಾಳ ವಲಯದ ಗಸ್ತುಪಾಲಕ ಜಿತೇಶ್.ಪಿ ಅವರು ಅಕ್ರಮ ಮರ ಕಡಿಯುವುದು ಮತ್ತು ಕಳ್ಳ ಸಾಗಾಣಿಕೆ ತಡೆಗಟ್ಟುವಿಕೆಯ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಅ.08ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕೆಟ್ ಹಾಲ್ ನಲ್ಲಿ ಸ್ವೀಕರಿಸಿದರು. ಬಂಟ್ವಾಳ ವಲಯದ…

Read More

ಕಾಂತಾರದಲ್ಲಿ ದೈವಾರಾಧನೆಯ ಅಣಕ; ವಿಷಯ ಪ್ರಸ್ತಾಪ ಮಾಡಿದ್ದಕ್ಕೆ ತೇಜೋವಧೆ- ಸಹನಾ ಕುಂದರ್

ಉಡುಪಿ: ಕಾಂತಾರ ಲೆಜೆಂಡ್ ಚಾಪ್ಟರ್ ನಲ್ಲಿ ಕರಾವಳಿಯ ದೈವಾರಾಧನೆ ನಂಬಿಕೆಯನ್ನು ಅಣಕ ಮಾಡಿ ವಾಣಿಜ್ಯೀಕರಣ ಮಾಡಿದ್ದಾರೆ. ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತಾಪ ಮಾಡಿದ್ದಕ್ಕೆ ತೇಜೋವಧೆ ಮಾಡುತ್ತಿದ್ದಾರೆ. ತುಳು ಮತ್ತು ಕುಂದಾಪುರ ಕನ್ನಡದ ಭಾಷೆಯ ವಿಚಾರವನ್ನು ಎಳೆದು ತಂದಿದ್ದಾರೆ ಎಂದು ವಾಗ್ಮೀ ವಕೀಲೆ ಸಹನಾ ಕುಂದರ್ ಆರೋಪಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಹನಾ ಕುಂದರ್ ದೂರು ನೀಡಿದ್ದಾರೆ. ನಾನು ಖಾಸಗಿ ವಾಹಿನಿಯಲ್ಲಿ ನಡೆದ ಚರ್ಚೆಯ ಸಂದರ್ಭ ಕುಂದಾಪುರ ಕನ್ನಡಕ್ಕೆ ಧಕ್ಕೆ ಆಗುವಂತಹ ಯಾವುದೇ…

Read More

ಕಾರ್ಕಳ ಆತ್ಮಹತ್ಯೆಗೈದ ಯುವಕನ ಡೆತನೋಟ್ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ , ಏನಿದೆ ಅಸಲಿಯತ್ತು ….. ?

ಮಂಗಳೂರು: ಕಾರ್ಕಳ ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ(23) ಬೆಳ್ಳ ಖಾಸಗಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈತ ಬರೆದ ಡೆತ್ ನೋಟ್‌ ಸಿಕ್ಕಿದೆ. ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಬಯೋಮೆಡಿಕಲ್ ಆಗಿದ್ದ ಅಭಿಷೇಕ್‌ತನ್ನ ಡೆತನೋಟ್‌ನಲ್ಲಿ ತನ್ನ ಗೆಳೆಯರಿಂದಾದ ಅನ್ಯಾಯದ ಬಗ್ಗೆ, ಎಳೆಎಳೆಯಾಗಿ ಬಿಚ್ಚಿಟ್ಟಿದ್ದು, ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ ಈತ ಬರೆದಿದ್ದಾನೆ ಎನ್ನಲಾದ ಮುದ್ದಾದ ಅಕ್ಷರಗಳುಳ್ಳ ಏಳು ಪುಟಗಳ ಡೆತ್‌ನೋಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪ್ರಕರಣದ ಬಗ್ಗೆ ಉಡುಪಿ ಎಸ್‌ಪಿಪಿ ಹರಿರಾಂ…

Read More

ಆರೋಗ್ಯ ಕ್ಷೇತ್ರಕ್ಕೆ ಅಮ್ಮನವರ ಸೇವೆ ಮಹತ್ತರ – ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್.

ಮಂಗಳೂರು: ಆಧುನಿಕ ಭಾರತದ ಅಭಿವೃದ್ಧಿಯ ಕಲ್ಪನೆಯಲ್ಲಿ ಆರೋಗ್ಯ ರಕ್ಷಣೆಯು ಪ್ರಮುಖ ಪಾತ್ರವಹಿಸಿದ್ದು ಈ ಕ್ಷೇತ್ರಕ್ಕೆ ಮಾತಾ ಅಮೃತಾನಂದಮಯಿ ದೇವಿಯವರ ಕೊಡುಗೆ ಅಪಾರ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು. .ಅವರು ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಅಮ್ಮನವರ 72 ನೆಯ ಜನ್ಮ ದಿನಾಚರಣೆಯ ಪ್ರಯುಕ್ತ ಜರುಗಿದ ಅಮೃತೋತ್ಸವ 2025 ನ್ನು ಉದ್ಘಾಟಿಸಿ ಮಾತನಾಡಿ, ಮಠದ ವತಿಯಿಂದ ಇತ್ತೀಚೆಗೆ ಏರ್ಪಡಿಸಿದ್ದ ಬೃಹತ್ ಮಕ್ಕಳ ಹೃದಯ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಭಾಗವಹಿಸಿ 100 ಉಚಿತ ಹೃದಯ…

Read More

ಕಲ್ಕೂರ ಪ್ರತಿಷ್ಠಾನದ ಬಸವರಾಜ ಹೊರಟ್ಟಿಯವರಿಗೆ “ಕಾರಂತ ಪ್ರಶಸ್ತಿ – 2025° ; ಪ್ರತಿಷ್ಠಾನದ ಅಧ್ಯಕ್ಷರಾದ ಎಸ್. ಪ್ರದೀಪ್ ಕುಮಾರ್ ಕಲ್ಕೂರ

ಮಂಗಳೂರು: ಕಲ್ಕೂರ ಪ್ರತಿಷ್ಠಾನದ ಬಸವರಾಜ ಹೊರಟ್ಟಿಯವರಿಗೆ “ಕಾರಂತ ಪ್ರಶಸ್ತಿ – 2025° ; ಪ್ರತಿಷ್ಠಾನದ ಅಧ್ಯಕ್ಷರಾದ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಕಡಲತೀರದ ಭಾರ್ಗವ, ಖ್ಯಾತ ಸಾಹಿತಿ ಕೋಟ ಶ್ರೀನಿವಾಸ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದಿಂದ ನೀಡಲಾಗುವ “ಕಾರಂತ ಪ್ರಶಸ್ತಿ – 2025° ಈ ಬಾರಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಗೆ ಗೌರವಿಸಲಾಗುವುದೆಂದು ಪ್ರತಿಷ್ಠಾನದ ಅಧ್ಯಕ್ಷರಾದ ಎಸ್. ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದರು . ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,…

Read More

ರಾಜ್ಯ ಕಂಬಳ ಅಸೋಸಿಯೇಶನ್ (ರಿ.) ನಿಂದ 25 ಕಡೆಗಳಲ್ಲಿ ಮೇಳೈಸಲಿದೆ ಕಂಬಳ

ತುಳುನಾಡಿನ ಜನಪ್ರಿಯ ಜಾನಪದ ಕ್ರೀಡೆ ಕಂಬಳ ಇದೀಗ ರಾಜ್ಯ ಸರ್ಕಾರದ ಅಧಿಕೃತ ಮಾನ್ಯತೆ ಪಡೆದಿದೆ. ಯುವಜನ ಸಬಲೀಕರಣ ಮತ್ತು ಕ್ರೀಡಾ ಪ್ರಾಧಿಕಾರವು ಕಂಬಳ ಕ್ರೀಡೆಯ ಪರಂಪರೆ, ವೈಶಿಷ್ಟ್ಯತೆ ಮತ್ತು ಜನಪ್ರಿಯತೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್ (ರಿ.)ಗೆ ಅಧಿಕೃತ ಮಾನ್ಯತೆ ನೀಡಿದೆ ಎಂದು ಅಸೋಸಿಯೇಶನ್ ಅಧ್ಯಕ್ಷ ಡಾ. ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳವು ತಿಳಿಸಿದರು. ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಂಬಳ ನಮ್ಮ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಸಾಂಪ್ರದಾಯಿಕ…

Read More

ಲೋಕೋಪಯೋಗಿ ಇಲಾಖೆ ರಸ್ತೆ ದುರಸ್ಥಿ -ಕೂಡಲೇ ಸಂಚಾರ ಯೋಗ್ಯ ಮಾಡಲು ಬಿಜೆಪಿ ಅಗ್ರಹ

ಮಂಜೇಶ್ವರ: ಸಜಂಕಿಲ -ಬಾಯರ್ ರಸ್ತೆ, ಕುರುಡಪದವು ಲಾಲ್ ಬಾಗ್ ರಸ್ತೆ, ಹೊಸಂಗಡಿ- ಮಜೀಬೈಲ್ ಕಂಗುಮೆ ರಸ್ತೆ ವರ್ಕಾಡಿ ದೈಗೋಳಿ, ಗುವೇದಪಡ್ಪುರಸ್ತೆ ಮಂಜೇಶ್ವರ ಕೆದುoಬಾಡಿ ರಸ್ತೆ ಗಳನ್ನು ಸಂಚಾರ ಯೋಗ್ಯಗೊಳಿಸಬೇಕು, ಮತ್ತು ಕಾಮಗಾರಿ ಕೂಡಲೇ ಪೂರ್ಣ ಮಾಡಬೇಕೆಂದು ಬಿಜೆಪಿ ಮಂಡಲ ಸಮಿತಿ ಅಗ್ರಹಿಸಿದೆ. ಮಂಜೇಶ್ವರ ಶಾಸಕರ ಹಾಗೂ ಲೋಕಪಯೋಗಿ ಇಲಾಖೆಯ ಬೇಜವಾಬ್ದಾರಿ ಮತ್ತು ಸ್ಥಳೀಯ ಪಂಚಾಯತ್ ಆಡಳಿತದ ನಿಕ್ರಿಯತೆ ಇದಕೆಲ್ಲ ಕಾರಣ.ಜನರ ಸಮಸ್ಯೆಗೆ ಪರಿಹಾರ ಕಾಣದ ಶಾಸಕರು ವಿದೇಶ ಸುತ್ತುವುದು ಬಿಟ್ಟು ತಮ್ಮ ಕರ್ತವ್ಯ ನಿರ್ವಹಿಸಬೇಕೆಂದು ಬಿಜೆಪಿ ಮಂಜೇಶ್ವರ…

Read More

ಆಟೋ ರಿಕ್ಷಾದಲ್ಲಿ ಸಾಗಿಸಲಾಗುತಿದ್ದ 22.5 ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರಣ : ಆರೋಪಿಗಳಿಗೆ 10 ವರ್ಷ ಕಠಿಣ ಸಜೆ ಹಾಗೂ ದಂಡ

ಕಾಸರಗೋಡು : ಆಟೋ ರಿಕ್ಷಾದಲ್ಲಿ ಸಾಗಿಸಲಾಗುತಿದ್ದ 22.5 ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರಣದಲ್ಲಿ ಆರೋಪಿಗಳಿಗೆ ಹತ್ತು ವರ್ಷ ಕಠಿಣ ಸಜೆ ಹಾಗೂ ಒಂದು ಲಕ್ಷ ರೂ. ನಂತೆ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಕಾಸರಗೋಡು ಅಡಿಷನಲ್ ಜಿಲ್ಲಾ ಸೆಷನ್ಸ್ ನ್ಯಾಯಾಲಯ (ಧ್ವಿ) ನ್ಯಾಯಾಧೀಶೆ ಕೆ ಪ್ರಿಯಾ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದಾರೆ. ನೆಲ್ಲಿಕಟ್ಟೆ ಹಮೂಸ್ ನಗರದ ಅಬ್ದುಲ್ ರಹ್ಮಾನ್ (55), ಪೆರುಂಬಳ ಕಡವ್ ನಿವಾಸಿ ಸಿ ಎ ಆಹ್ಮದ್ ಕಬೀರ್ (43) ಹಾಗೂ ಆದೂರು ನಿವಾಸಿ ಕೆ…

Read More
error: Content is protected !!