ಮನೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ ಮಹಿಳೆಗೆ ಕುಟುಂಬಕ್ಕೆ ಧೈರ್ಯ ತುಂಬಿದ ಇನಾಯತ್ ಅಲಿ
ಮಂಗಳೂರು: ಮನೆ ಕುಸಿತದಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಆಕಾಶಭವನದ ಕಾಪಿಗುಡ್ಡೆ ನಿವಾಸಿ ಶ್ರೀಮತಿ ಭವಾನಿ ಅವರ ನಿವಾಸಕ್ಕೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು. ಈ ವೇಳೆ ಭವಾನಿ ಅವರ ನೋವು, ಸಂಕಷ್ಟ ಹಾಗೂ ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದ ಇನಾಯತ್ ಅಲಿ ಅವರು, ಮನೆ ಕುಸಿತದಿಂದ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಒಂದು ಮನೆಯ ನಷ್ಟ ಎಂದರೆ ಕೇವಲ ಕಟ್ಟಡದ ನಷ್ಟವಲ್ಲ, ಅದು ಕುಟುಂಬದ ಭದ್ರತೆ,…
