“ದುಬೈ ಗಡಿನಾಡ ಉತ್ಸವ -2025” ಅ. 25 ರಂದು

ದುಬೈ : ಯುಎಇಯಲ್ಲಿ ಇರುವ ಎಲ್ಲಾ ಗಡಿನಾಡಿನ ಹಾಗೂ ಕರುನಾಡಿನ ಕನ್ನಡಿಗರನ್ನು ಒಟ್ಟುಗೂಡಿಸಿ “ದುಬೈ ಗಡಿನಾಡ ಉತ್ಸವ -2025″ವನ್ನು ಅದ್ದೂರಿಯಾಗಿ ಆಚರಿಸುವ ಹಾಗೂ ಈ ಕಾರ್ಯಕ್ರಮ ಒಳ್ಳೆಯ ರೀತಿಯಲ್ಲಿ ಮೂಡಿಬರಲಿ ಎಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ಗಲ್ಫ್ ನ ಅಧ್ಯಕ್ಷರಾದ ಅಶ್ರಫ್ ಶಾ ಮಾಂತುರು ರವರು ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡುತ್ತಾ ಶುಭವನ್ನು ಹಾರೈಸಿದರು. ಅಕ್ಟೋಬರ್ 25 ರಂದು ಸಂಜೆ ನಾಲ್ಕರಿಂದ ರಾತ್ರಿ ಹನ್ನೊಂದರ ವರೆಗೆ ಔದ್ ಮೇಥದ ಗ್ಲೆಂಡೇಲ್ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ…

Read More

ದಕ್ಷಿಣ ಕನ್ನಡ ಜಿಲ್ಲಾ 10ನೇ ಗಮಕ ಕಲಾ ಸಮ್ಮೇಳನ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಅ.17 ಮತ್ತು 18ರಂದು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ 10ನೇ ಗಮಕ ಕಲಾ ಸಮ್ಮೇಳನ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಅ.17 ಮತ್ತು 18ರಂದು ನಡೆಯಲಿದೆ. ಸಮ್ಮೇಳನದ ಅಧ್ಯಕ್ಷತೆಯನ್ನು ಪ್ರವಚನಗಾರ, ಸಾಹಿತಿ, ಹಿರಿಯ ವಿದ್ವಾಂಸ ಮುಳಿಯ ಶಂಕರ ಭಟ್ಟ ಅವರು ವಹಿಸಲಿದ್ದಾರೆ ಎಂದು ಸಮ್ಮೇಳನದ ಗೌರವ ಮಾರ್ಗದರ್ಶಕ ಪ್ರದೀಪ ಕುಮಾರ ಕಲ್ಕೂರ ತಿಳಿಸಿದರು. ಅವರು ಪತ್ರಿಕಾಭವನದಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಅ.17 ರಂದು ಮಧ್ಯಾಹ್ನ 2.30ಕ್ಕೆ ಒಡಿಯೂರಿನ ಸಾಧ್ಯ ಶ್ರೀ ಮಾತಾನಂದಮಯೀ ಉಪಸ್ಥಿತಿಯಲ್ಲಿ ಡಾ.ಹರಿಕೃಷ್ಣ ಪುನರೂರು ಅವರು…

Read More

ಅ. 11 ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಜನ್ಮದಿನಾಚರಣೆ

ಮಂಗಳೂರು ನಗರದ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಆವರಣದಲ್ಲಿ ಅಕ್ಟೋಬರ್ 11 ರಂದು ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ 72 ನೆಯ “ಅಮೃತೋತ್ಸವ 2025” ನ್ನು ಶದ್ಧಾ ಭಕ್ತಿಯಿಂದ ವೈವಿಧಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದೆಂದು ಸೇವಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಅಮೀನ್ ತಿಳಿಸಿದರು .ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿದರು. ಅಂದು ಪೂರ್ವಾಹ್ನ 11.45 ಕೆ.ಸಾಮಿನಿ ಮಂಗಳಾಮೃತ ಪ್ರಾಣ ರವರು ಅಮೃತ ಜ್ಯೋತಿಯನ್ನು ಬೆಳಗಿಸುವ ಮೂಲಕ ಚಾಲನೆ ನೀಡಲಿರುವರು. ಬೆಳಗ್ಗೆ 9.00…

Read More

13 ವರ್ಷಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಯುವಕ ಪತ್ತೆ!

ಉಡುಪಿ: 13 ವರ್ಷಗಳಿಂದ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಮನೆಯವರಿಗೆ ಹೆದರಿ ನಿಗೂಢವಾಗಿ ನಾಪತ್ತೆಯಾಗಿದ್ದ ಕಾರ್ಕಳದ ಯುವಕನೋರ್ವನನ್ನು ಕೊನೆಗೂ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.2012ರಲ್ಲಿ ಕಾಣೆಯಾಗಿದ್ದ ಅನಂತ ಕೃಷ್ಣ ಪ್ರಭು (29) ಅವರನ್ನು ಇದೀಗ ಬೆಂಗಳೂರು ನಗರದಲ್ಲಿ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಇಲ್ಲಿನ ನಿವಾಸಿ ಪ್ರಭಾಕರ ಪ್ರಭು ಅವರ ಪುತ್ರ ಅನಂತ ಕೃಷ್ಣ ಪ್ರಭು (ಆಗ 16 ವರ್ಷ) ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು, ಮುಂಡ್ಕೂರು ಅಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. 2012 ಡಿಸೆಂಬರ್ ತಿಂಗಳಲ್ಲಿ ದೇವಸ್ಥಾನಕ್ಕೆ…

Read More

ಪ್ರತಿಭೆಗಳ ಅನಾವರಣಕ್ಕೆ ಸೃಜನೋತ್ಸವ ಸಹಕಾರಿ : ಕಮಲಾಕ್ಷ ಡಿ

ಕೊಡ್ಲಮೊಗರು : ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ವೇದಿಕೆಯನ್ನು ನೀಡುವುದರೊಂದಿಗೆ ಪ್ರತಿಭೆಗಳ ಅನಾವರಣಕ್ಕೆ ಸೃಜನೋತ್ಸವ ಸೂಕ್ತ ವೇದಿಕೆಯನ್ನು ನೀಡುತ್ತದೆ.ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಮಕ್ಕಳ ಬೆಳವಣಿಗೆಗೆ ಉತ್ತೇಜನ ನೀಡುವ ಗ್ರಂಥಾಲಯದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಕಾರ್ಯದರ್ಶಿ ಕಮಲಾಕ್ಷ ಡಿ ರವರು ತಿಳಿಸಿದರು. ಅವರು ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಸಹಕಾರದಲ್ಲಿ ವರ್ಕಾಡಿ ಪಂಚಾಯತ್ ನೇತೃತ್ವ ಸಮಿತಿಯ ಆಶ್ರಯದಲ್ಲಿ ಜರಗಿದ ವರ್ಕಾಡಿ ಪಂಚಾಯತ್ ಮಟ್ಟದ ಸೃಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಮಂಜೇಶ್ವರ…

Read More

ಅಧಿಕೃತ ಮಾರುಕಟ್ಟೆಗೆ ಬಿಡುಗಡೆಯಾಗಲಿರುವ ‘ತುಝರ್’ ಫರ್ಪ್ಯೂಮ್ ಬ್ರಾಂಡ್

ಮಂಗಳೂರು: ಅಲ್ ನಜೀಂ ಉಸ್ ಸಕೀಬ್ ಪರ್ಪ್ಯೂಮ್ ಟ್ರೇಡರ್ಸ್ ಸಂಸ್ಥೆಯ ಹೊಸ ಫರ್ಪ್ಯೂಮ್ ಬ್ರಾಂಡ್ ‘ ತುಝರ್ (TUZHAR)’ ಬಿಡುಗಡೆ ಕಾರ್ಯಕ್ರಮವು ಅಕ್ಟೋಬರ್ 9ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಬೆಂಡೋರ್‌ವೆಲ್‌ನ ಅಗ್ನೆಸ್ ಕಾಲೇಜು ಪಕ್ಕದ ಸೇಂಟ್ ಸೆಬಾಸ್ಟಿಯನ್ ಮಿನಿ ಹಾಲ್ನಲ್ಲಿ ನಡೆಯಲಿದೆ ಎಂದು ಎಂಡಿ ಅಬ್ದುಲ್ ಹಮೀದ್ ತಿಳಿಸಿದರು . ಮಂಗಳೂರಿನ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಕಾರ್ಯಕ್ರಮವನ್ನು ಯೆನೆಪೊಯ ಡೀಮ್ ಟು ಬಿ ಯೂನಿವರ್ಸಿಟಿಯ ಕುಲಪತಿ ಡಾ. ಯೆನೆಪಯ ಅಬ್ದುಲ್ಲಾ ಕುಂಗ್…

Read More

ಎಂ ಎಲ್ ಸಿ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ 11ನೇ ವರ್ಷದ ಭಾವೈಕ್ಯತೆಯ ದೀಪಾವಳಿ ಸಂಭ್ರಮಾಚರಣೆ ಮತ್ತು ಗೂಡುದೀಪ ಸ್ಪರ್ಧೆ.

ಮಂಗಳೂರು: ಕರ್ನಾಟಕ ಸರಕಾರದ ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ ಕಳೆದ 10 ವರ್ಷಗಳಿಂದ ಸರ್ವಧರ್ಮಗಳ ಭಾವೈಕ್ಯತೆಯ ಸಂಗಮವಾದ ದೀಪಾವಳಿ , ಕ್ರಿಸ್ಮಸ್ ಹಬ್ಬ ಹಾಗೂ ರಂಜಾನ್ ಹಬ್ಬಗಳನ್ನು ಸರ್ವಧರ್ಮಿಯರ ಜೊತೆಗೆ ಸೇರಿ ಆಚರಿಸುತ್ತ ಬಂದಿದ್ದು , ಇದೀಗ 11ನೇ ವರ್ಷದ ದೀಪಾವಳಿ ಸಂಭ್ರಮಾಚರಣೆ ಮತ್ತು ಗೂಡುದೀಪ ಸ್ಪರ್ಧೆಯು ಅಕ್ಟೋಬರ್ 20 ರಂದು ನರಕಚತುರ್ದಶಿ ದಿನದಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದ ಸಭಾಭವನದಲ್ಲಿ ಸಂಜೆ ಗಂಟೆ 3:00ರಿಂದ ರಾತ್ರಿಯವರೆಗೆ ನಡೆಯಲಿದೆ ಎಂದು ಸಮಿತಿಯ ಸದಸ್ಯರಾದ ಜೆ….

Read More

ವಿಶ್ವಕರ್ಮ ಸಂತ್ರಸ್ತೆಯ ಹೆಣ್ಣು ಮಗಳ ಪರವಾಗಿ ಧ್ವನಿ ಎತ್ತಿದ ವಿಶ್ವಕರ್ಮ ಯುವ ಮಿಲನ್ ಸಂಘ

ಮಂಗಳೂರು: ವಿಶ್ವ ಕರ್ಮ ಸಮಾಜದ ಹೆಣ್ಣುಮಗಳಿಗಾದ ಅನ್ಯಾಯವನ್ನು ಖಂಡಿಸುತ್ತೇನೆ , ಕಾನೂನಿನ ನಿರ್ಣಯ ಜಾರಿಗೆ ಬಂದ ಕೂಡಲೇ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುವುದು , ಸಂತ್ರಸ್ತೆಯ ಹೆಣ್ಣು ಮಗಳ ಪರವಾಗಿ ನಾವಿದ್ದೇವೆ ಎಂದು ವಿಶ್ವಕರ್ಮ ಯುವ ಮಿಲನ್ ಸ್ಥಾಪಕಾಧ್ಯಕ್ಷ ವಿಕ್ರಮ್ ಐ ಆಚಾರ್ಯ ತಿಳಿಸಿದರು. ಜಗನ್ನಿವಾಸ ರಾವ್ ಮನವೊಲಿಸಿ ಅವರ ಮಗ ಕೃಷ್ಣ ಜಿ ರಾವ್ ನ ವಿವಾಹಕ್ಕಾಗಿ ಪ್ರಯತ್ನವನ್ನು ಮಾಡುವ ಪ್ರಯತ್ನಗಳು ನಡೆದಿದೆ . ಮುಂದೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ಮೂಲಕ ಜಗನ್ನಿವಾಸ…

Read More

ಕರ್ನಾಟಕದಲ್ಲಿ ಆರ್ಥಿಕ , ಸಾಮಾಜಿಕ , ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಬೇಕೆಂದು ಜಾತಿ ಸಮೀಕ್ಷೆ

ಮಂಗಳೂರು: ಕರ್ನಾಟಕದಲ್ಲಿ ಆರ್ಥಿಕ , ಸಾಮಾಜಿಕ , ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಬೇಕೆಂದು ಜಾತಿ ಸಮೀಕ್ಷೆಯನ್ನು ಕೈಗೊಳ್ಳಗಾಗಿದೆ . ಇಂದು ಈ ಭಾಗದ ಕಾಂಗ್ರೆಸ್ ಪಕ್ಷದ ಹಿಂದುಳಿದ ಮುಖಂಡರನ್ನು ಒಗ್ಗೂಡಿಸಿಕೊಂಡು ಸಾಮಾಜಿಕ ನ್ಯಾಯ – ನಮ್ಮ ಸಂವಿಧಾನ ಬದ್ಧವಾದ ಹಕ್ಕು ನಾವೆಲ್ಲರೂ ಒಂದೇ ಎನ್ನುವ ಕಲ್ಪನೆಯಲ್ಲಿ ಸಭೆಯನ್ನು ಕೈಕೊಳ್ಳಲಾಗಿದೆ . ಅದರ ಪ್ರಕಾರ ಸಮೀಕ್ಷೆಯಲ್ಲಿ ಬರುವ ಅಂಕಿ ಅಂಶವೇ ಮಾನದಂಡವಾಗಿ ನಾವು ಸ್ವೀಕರಿಸಬೇಕೆಂದು ವಿಧಾನ ಪರಿಷತ್ತಿನ ಮಾಜಿ ಅಧ್ಯಕ್ಷರಾದ ವಿ ಆರ್ ಸುದರ್ಶನ್ ಕುಮಾರ್ ತಿಳಿಸಿದರು. ಅವರು ನಗರದ…

Read More

ಪುತ್ತೂರು: ರಸ್ತೆ ಅಪಘಾತ ಗಾಯಗೊಂಡ ಮಹಿಳೆ ಸಾವು

ಪುತ್ತೂರು,ಅ. 08: ಪುತ್ತೂರು: ಕೆಲ ತಿಂಗಳ ಹಿಂದೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿನ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕೆದಿಲ ನಿವಾಸಿ ಅಪೂರ್ವ ಕೆ. ಭಟ್ (32) ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ನಿಧನರಾದರು. ಮೇ 27ರಂದು ಪುತ್ತೂರಿನ ಹೊರವಲಯದ ಮುರ ಜಂಕ್ಷನ್ ಬಳಿ ಈ ದುರ್ಘಟನೆ ನಡೆದಿತ್ತು. ಮಾಣಿ-ಮೈಸೂರು ಹೆದ್ದಾರಿಯಲ್ಲಿ ಪುತ್ತೂರು ಪೇಟೆಯಿಂದ ತಮ್ಮ ತಂದೆ ಈಶ್ವ‌ರ್ ಭಟ್ ಅವರ ಜತೆ ಕಾರಿನಲ್ಲಿ ಮನೆಗೆ ತೆರಳುತ್ತಿದ್ದಾಗ, ಪಡ್ನರಿಗೆ ತಿರುಗುವ…

Read More
error: Content is protected !!