ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರಿಗೆ ಅನಿವಾಸಿ ಕನ್ನಡಿಗರ ಸಮ್ಮೇಳನ ಹೊರನಾಡ ಕನ್ನಡಿಗರ ಸಮ್ಮೇಳನದ ಗೌರವ ಪುರಸ್ಕಾರಕ್ಕೆ ಆಯ್ಕೆ .

ಮಂಜುನಾಥ ಎಜುಕೇಷನ್ ಟ್ರಸ್ಟ್ (ರಿ ),ಹೃದಯವಾಹಿನಿ ಕರ್ನಾಟಕ,ಮಂಗಳೂರು ಹಾಗೂ ಎಸ್. ಕೆ.ಮುನ್ಸಿಪಾಲ್ ಎಂಪ್ಲಾಯಿಸ್ ಯೂನಿಯನ್(ರಿ),ಮಂಗಳೂರು ಸಹಯೋಗದಲ್ಲಿ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ 2025 ಅಕ್ಟೋಬರ್ 9 ಗುರುವಾರದಂದು ನಡೆಯುವ ದ್ವಿತೀಯ ಅನಿವಾಸಿ ಕನ್ನಡಿಗರ ಸಮ್ಮೇಳನ ಹಾಗೂ ಹೊರನಾಡ ಕನ್ನಡಿಗರ ಸಮ್ಮೇಳನದಲ್ಲಿ ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ ),ಕನ್ನಡ ಗ್ರಾಮ ಕಾಸರಗೋಡು,ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ…

Read More

ಕಡಲ ತಡಿಯ ಭಾರ್ಗವ ಡಾ.ಶಿವರಾಮ ಕಾರಂತ ಅವರ 124ನೇ ವರ್ಷದ ಜನ್ಮದಿನಾಚರಣೆ ಹಾಗೂ ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅ. 10ರಂದು.

ಪುತ್ತೂರು; ಕಡಲ ತಡಿಯ ಭಾರ್ಗವ ಡಾ.ಶಿವರಾಮ ಕಾರಂತ ಅವರ 124ನೇ ವರ್ಷದ ಜನ್ಮದಿನಾಚರಣೆ ಹಾಗೂ ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅ.10ರಂದು ಪುತ್ತೂರಿನ ಬಾಲವನ ಬಯಲು ರಂಗಮಂದಿರದಲ್ಲಿ ನಡೆಯಲಿದೆ. 2024ನೇ ಸಾಲಿನ ಕಾರಂತ ಬಾಲವನ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಜನಪದ ವಿದ್ವಾಂಸ ಡಾ.ಬಿ.ಎ.ವಿವೇಕ ರೈ ಹಾಗೂ 2025ನೇ ಸಾಲಿನ ಪ್ರಶಸ್ತಿಯನ್ನು ಶಿಕ್ಷಣ ಸಾಹಿತಿ ಮಕ್ಕಳ ಮಂಟಪದ ರೂವಾರಿ ಡಾ.ಎನ್.ಸುಕುಮಾರ ಗೌಡ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ…

Read More

ಪೆರ್ಲದ ವಾಹನ ಚಾಲಕ ಕುಂಬಳೆಯಲ್ಲಿ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ.

ಕುಂಬಳೆ : ರೈಲ್ವೆ ಹಳಿಯಲ್ಲಿ ಯುವಕನೊರ್ವನ ಮೃತದೇಹ ರೈಲಿಗೆ ತಲೆ ಒಡ್ಡಿದ ಸ್ಥಿತಿಯಲ್ಲಿ ಕಂಡು ಬಂದಿದೆ. ಮೃತ ವ್ಯಕ್ತಿ ಪೆರ್ಲದಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಟುಕುಕ್ಕೆ ಸಮೀಪ ಸೂರ್ಡೇಲು ನಿವಾಸಿ ದಿ.ಶೀನಪ್ಪ ರೈಗಳ ಪುತ್ರ ತಾರನಾಥ ರೈ (46) ಎಂದು ಗುರುತಿಸಲಾಗಿದೆ. ಈ ಹಿಂದೆ ಪೆರ್ಲದಲ್ಲಿ ಬಾಡಿಗೆ ವಾಹನ ಚಲಾಯಿಸುತ್ತಿದ್ದ ಇವರು ಇದೀಗ ಸ್ವಲ್ಪ ಸಮಯಗಳ ಹಿಂದೆ ತನ್ನ ವಾಹನಗಳನ್ನು ಮಾರಿದ್ದು ಬಳಿಕ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರೆಂದು ತಿಳಿದು ಬಂದಿದೆ….

Read More

ಸಂಘಟಿತ ಮತ್ತು ಅಸಂಘಟಿಕ ಕಾರ್ಮಿಕ ವಲಯಗಳಲ್ಲಿ ಕನಿಷ್ಠ ವೇತನ ಜಾರಿಗೆ ಬರುವುದರಿಂದ ಸಾಕಷ್ಟು ಪ್ರಮಾಣದಲ್ಲಿ ಸುಧಾರಣೆಯನ್ನು ಕಾಣಲಿದೆ-ಟಿ.ಎಂ ಶಹೀದ್ ತೆಕ್ಕಿಲ್

ಮಂಗಳೂರು: ರಾಜ್ಯ ಕಾರ್ಮಿಕ ವಲಯವನ್ನು ಸುಧಾರಣೆಯನ್ನು ತರುವಲ್ಲಿ ಕನಿಷ್ಠ ವೇತನ ಸಲಹಾ ಮಂಡಳಿಯು ಪ್ರಧಾನ ಪಾತ್ರವನ್ನು ವಹಿಸಲಿದೆ . ರಾಜ್ಯದಲ್ಲಿ ಸರಿಯಾದ ಪ್ರಮಾಣದಲ್ಲಿ ಸಂಘಟಿತ ಮತ್ತು ಅಸಂಘಟಿಕ ಕಾರ್ಮಿಕ ವಲಯಗಳಲ್ಲಿ ಕನಿಷ್ಠ ವೇತನ ಜಾರಿಗೆ ಬರುವುದರಿಂದ ಅವರ ಜೀವನ ಸಾಕಷ್ಟು ಪ್ರಮಾಣದಲ್ಲಿ ಸುಧಾರಣೆಯನ್ನು ಕಾಣಲಿದೆ ಎಂದು ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು ,, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಟಿ.ಎಂ ಶಹೀದ್ ತೆಕ್ಕಿಲ್ ತಿಳಿಸಿದರು . ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ…

Read More

ಉಡುಪಿ ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಕಂಪೆನಿಯು 70 ಟನ್ ನ ಮೂರು ಬೋಲಾರ್ಡ್ ಪುಲ್ ಟಗ್‌ಗಳ ಸರಣಿಯ ಮೊದಲ ನೌಕೆ ಗೆ ಹಸಿರು ನಿಶಾನೆ.

ಉಡುಪಿ: ಭಾರತದ ಪ್ರಮುಖ ಶಿಪ್‌ಯಾರ್ಡ್ ಆಗಿರುವ ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನ ಮಾಲೀಕತ್ವದ ಅಂಗಸಂಸ್ಥೆಯಾದ ಉಡುಪಿ ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಕಂಪೆನಿಯು ಎಂ/ಸ್ ಓಷನ್ ಸ್ಪಾರ್ಕಲ್ ಲಿಮಿಟೆಡ್ ಗಾಗಿ ನಿರ್ಮಿಸುತ್ತಿರುವ ಮೂರು 70 ಟನ್ ಬೋಲಾರ್ಡ್ ಪುಲ್ ಟಗ್‌ಗಳ ಸರಣಿಯ ಮೊದಲ ನೌಕೆಯನ್ನು ಯಶಸ್ವಿಯಾಗಿ ಪ್ರಾರಂಭಿಸಿದೆ. ಈ ಟಗ್‌ನ ಪ್ರಾರಂಭವನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನ ತಾಂತ್ರಿಕ ನಿರ್ದೇಶಕರು, ಉಡುಪಿ ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಇತರ…

Read More

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ರೋಗಿಗಳಿಗಿಲ್ಲ ಇಎಸ್ಐ ಸೌಲಭ್ಯ :- ಶಾಸಕ ಕಾಮತ್.

ಕಾರ್ಮಿಕರ ಆರೋಗ್ಯ ವಿಮೆ (ಇಎಸ್ಐ) ಅಡಿಯಲ್ಲಿ ಚಿಕಿತ್ಸೆ ಪಡೆಯುವ ವಿಮೆದಾರರು ಹಾಗೂ ಅವರ ಕುಟುಂಬ ಸದಸ್ಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದಾಗಿ ವೈದ್ಯಕೀಯ ಸೌಲಭ್ಯ ಪಡೆಯುವಲ್ಲಿ ತೀವ್ರ ತೊಂದರೆಯಾಗುತ್ತಿದ್ದು ಇನ್ನೂ ಸಹ ಸರ್ಕಾರ ಎಚ್ಚೆತ್ತುಕೊಳ್ಳದಿರುವುದು ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಇಎಸ್ಐ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಹೊಂದಾಣಿಕೆ ಅವಧಿಯು ಕಳೆದ ಸಪ್ಟೆಂಬರ್ 30ನೇ ತಾರೀಕಿನಂದು ಅಂತ್ಯಗೊಂಡಿದೆ. ಹೀಗಾಗಿ ಅಕ್ಟೋಬರ್ 1 ರಿಂದ ರೋಗಿಗಳಿಗೆ ತುರ್ತು ಸಂದರ್ಭಗಳಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಮಟ್ಟದ…

Read More

ವಿವಿಧ ನಿಗಮ, ಪ್ರಾಧಿಕಾರ ಮತ್ತು ಅಕಾಡೆಮಿ ಅಧ್ಯಕ್ಷರೊಂದಿಗೆ ಶಾಸಕ ಮಂಜುನಾಥ ಭಂಡಾರಿ ಸಭೆ.ಪಕ್ಷದ ಬಲವರ್ಧನೆಗೆ ಸೂಚನೆ.

ಮಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಮಂಗಳವಾರ ವಿವಿಧ ನಿಗಮಗಳು, ಪ್ರಾಧಿಕಾರಗಳು ಮತ್ತು ಅಕಾಡೆಮಿಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿದರು.ಈ ಸಂದರ್ಭದಲ್ಲಿ ತಮ್ಮ ತಮ್ಮ ನಿಗಮ, ಪ್ರಾಧಿಕಾರ ಹಾಗೂ ಅಕಾಡೆಮಿಗಳಲ್ಲಿ ಎದುರಾಗುವ ಯಾವುದೇ ಸಮಸ್ಯೆಗಳಿಗೆ ಸರ್ಕಾರದಿಂದ ಸಿಗುವ ಪರಿಹಾರವನ್ನು ಒದಗಿಸಿಕೊಡಲು ನಿಮ್ಮೊಂದಿಗೆ ನಾನಿದ್ದೇನೆಂಬ ಭರವಸೆ ನೀಡಿದರು.ನಿಗಮದ ಅಧ್ಯಕ್ಷರುಗಳು ಸರ್ಕಾರದ ಅಧಿಕಾರಿಗಳು ಹಾಗೂ ಜನರೊಂದಿಗೆ ಸ್ಪಂದನಾಶೀಲವಾಗಿ ಸಮನ್ವಯತೆಯಿಂದ ವರ್ತಿಸಬೇಕೆಂದು ಈ ವೇಳೆ ಶಾಸಕರು ಸಲಹೆ ನೀಡಿದರು. ಪಕ್ಷವೂ ತಮ್ಮನ್ನು ಗುರುತಿಸಿ ನೀಡಿರುವ ಸ್ಥಾನಮಾನಗಳಿಗೆ…

Read More

ಡಿಸಿ ಮನ್ನಾ ಉಳಿಕೆ ಜಮೀನನ್ನು ದಲಿತರಿಗೆ ಮಂಜೂರು ಮಾಡಿ: ದಲಿತ ಸಂಘಟನೆಯಿಂದ ಶಾಸಕ ಅಶೋಕ್ ರೈ ಗೆ ಮನವಿ.

ಪುತ್ತೂರು: ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪ ಜಾತಿ ಮತ್ತು ಪಪಂಗಡದ ವರಿಗೆ ಮಂಜೂರು ಮಾಡುವಂತೆ ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ದ ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮನವಿ ಮಾಡಿದರು. ಶಾಸಕರನ್ನು ಭೇಟಿಯಾದ ನಿಯೋಗ ಈ ವಿಚಾರದಲ್ಲಿ ನಾವು ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ ಆದರೆ ಇದುವರೆಗೂ ಯಾವ ಜನಪ್ರತಿನಿಧಿಗಳೂ ನಮ್ಮ ಬೆಂಬಲಕ್ಕೆ ಬಂದಿಲ್ಲ. ಈ ಬಾರಿ ನಿಮ್ಮ ಮೂಲಕ ನಾವು ಮನವಿ…

Read More

ಶಾಲಾ ಕಾಲೇಜುಗಳ ಬಸ್‌ಗಳಿಗೆ ನಕಲಿ ವಿಮೆ ಪಾಲಿಸಿ ಮಾಡಿ ಕೋಟ್ಯಂತರ ರೂ. ವಂಚನೆ: ಇಬ್ಬರ ಬಂಧನ

ಉಡುಪಿ: ಶಾಲಾ ಕಾಲೇಜುಗಳ ಬಸ್‌ಗಳಿಗೆ ನಕಲಿ ವಿಮೆ ಪಾಲಿಸಿ ಮಾಡಿ ಕೋಟ್ಯಂತರ ರೂ. ವಂಚಿಸುತ್ತಿದ್ದ ಪ್ರಕರಣವನ್ನು ಬೇಧಿಸಿರುವ ಪೊಲೀಸರು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.ಸಾಸ್ತಾನ ಕುಂಜಿಕೆರೆ ರಸ್ತೆಯ ರಾಕೇಶ ಎಸ್.(33) ಹಾಗೂ ಶಿರಸಿಯ ಚರಣ ಬಾಬು ಮೇಸ್ತ ಬಂಧಿತ ಆರೋಪಿಗಳು. ಆರೋಪಿಗಳು ನಕಲಿ ವಿಮೆ ಮೂಲಕ ಕೋಟ್ಯಂತರ ರೂ. ಹಣ ವಂಚನೆ ಎಸಗಿದ್ದಾರೆ ಎಂದರು. 2024ರ ನ.25ರಂದು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಹೊಂಬಾಡಿ –…

Read More

ಅಕ್ಷಯ ಕಲ್ಲೇಗ ಕೊಲೆ ಪ್ರಕರಣದ‌ 3ನೇ ಆರೋಪಿಯ ಜಾಮೀನು ಅರ್ಜಿ ವಜಾ.

ಮಂಗಳೂರು: ಅಕ್ಷಯ ಕಲ್ಲೇಗ ಕೊಲೆ ಪ್ರಕರಣದ‌ 3ನೇ ಆರೋಪಿಯ ಜಾಮೀನು ಅರ್ಜಿ ವಜಾಗೊಂಡಿದೆ.ಎರಡು ವರ್ಷಗಳ ಹಿಂದೆ ಪುತ್ತೂರಿನ ನೆಹರೂ ನಗರದಲ್ಲಿ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪೈಕಿ ಜಾಮೀನು ಕೋರಿ 3ನೇ ಆರೋಪಿ ಮಂಜುನಾಥ್ ಅಲಿಯಾಸ್ ಹರಿ ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಆತ ಅನಾರೋಗ್ಯದ ಕಾರಣ ನೀಡಿ ಜಾಮೀನಿನಲ್ಲಿ ಬಿಡುಗಡೆ ಕೋರಿ ಅರ್ಜಿ ಸಲ್ಲಿಸಿದ್ದ. ದೂರುದಾರರ ಪರ ಸರಕಾರಿ…

Read More
error: Content is protected !!