ಉಡುಪಿ: ಸಾಸ್ತಾನ ಟೋಲ್‌ ಪ್ಲಾಜಾದಲ್ಲಿ ಯೋಧನಿಗೆ ಅವಮಾನ ವಿಚಾರ- ಕ್ಷಮೆಯಾಚಿಸಿದ ಟೋಲ್ ಸಿಬ್ಬಂದಿ!

ಉಡುಪಿ: ದೇಶಕ್ಕಾಗಿ ಹೋರಾಡಿದ ನಿವೃತ್ತ ಸೈನಿಕನಿಗೆ ಭಾನುವಾರ ರಾತ್ರಿ ಬ್ರಹ್ಮಾವರ ಸಾಸ್ತಾನ ಟೋಲ್‌ ಪ್ಲಾಜಾದಲ್ಲಿ ಅವಮಾನಪಡಿಸಿದ ಘಟನೆ ನಡೆದಿತ್ತು. ಇದೀಗ ತಮ್ಮ ತಪ್ಪಿನಿಂದ ಎಚ್ಚೆತ್ತುಕೊಂಡ ಟೋಲ್‌ ಸಿಬ್ಬಂದಿ ನಿವೃತ್ತ ಯೋಧನ ಕ್ಷಮೆಯಾಚಿಸಿದ್ದಾರೆ.ಸಾಸ್ತಾನ ಟೋಲ್‌ ಪ್ಲಾಜಾದ ಸಿಬ್ಬಂದಿಗಳಾದ ಶೀನ ಹಾಗೂ ಸುರೇಶ್ ವಿಡಿಯೋ ಮೂಲಕ‌ ಕ್ಷಮಾಪಣೆ ಕೇಳಿದ್ದಾರೆ. ನಿವೃತ್ತ ಸೈನಿಕ ಶ್ಯಾಮರಾಜ್ ಅವರು ಟೋಲ್‌ ವಿನಾಯಿತಿ ಪತ್ರವನ್ನು ತೋರಿಸಿದ್ದರೂ, ಟೋಲ್ ಸಿಬ್ಬಂದಿ ವಿನಾಯಿತಿ ನೀಡಲು ನಿರಾಕರಿಸಿದ್ದಾರೆ. ಈ ಬಗ್ಗೆ ಸ್ವತಃ ನಿವೃತ್ತ ಸೈನಿಕ ಶ್ಯಾಮರಾಜ್ ಅವರು ವಿಡಿಯೋ ದಾಖಲಿಸಿ…

Read More

ಬೆಂಕಿಯಿಲ್ಲದ ಅಡುಗೆ, ಆರೋಗ್ಯಕರ ಜೀವನದ ಪಾಠ: ಪೀಸ್ ಕ್ರಿಯೇಟಿವ್ ಶಾಲಾ ವಿದ್ಯಾರ್ಥಿಗಳ ಸೃಜನಶೀಲ ಕಾರ್ಯಕ್ರಮ

ಮಂಜೇಶ್ವರ : ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕುಂಜತ್ತೂರು ಹಾಗೂ ಹೊಸಂಗಡಿ ಶಾಲಾ ವಿದ್ಯಾರ್ಥಿಗಳ ಸೃಜನಶೀಲತೆ, ಆರೋಗ್ಯ ಜಾಗೃತಿ ಮತ್ತು ಸ್ವಯಂಸಾಮರ್ಥ್ಯವನ್ನು ಉತ್ತೇಜಿಸುವ ಉದ್ದೇಶದಿಂದ ಬೆಂಕಿ ಬಳಸದ ಅಡುಗೆ ಎಂಬ ವಿಶೇಷ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ರುಚಿಯ ಅನುಭವ ಆಕರ್ಷಕ ಆಹಾರಯೋಗ್ಯ ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಕಾರ್ಯಕ್ರಮವು ಆರೋಗ್ಯಕರ ಆಹಾರದ ಮಹತ್ವವನ್ನು ಮಕ್ಕಳಲ್ಲಿ ಬೆಳೆಸುವತ್ತ ಒಂದು ದೃಢವಾದ ಆರಂಭವಾಗಿತ್ತು. ಬೆಂಕಿ ಅಥವಾ ಗ್ಯಾಸಿನ ಬಳಕೆಯಿಲ್ಲದೆ ತಯಾರಿಸಬಹುದಾದ ಪೌಷ್ಟಿಕ, ರುಚಿಕರ ಹಾಗೂ ಆಕರ್ಷಕ ಆಹಾರ ಪದಾರ್ಥಗಳನ್ನು ವಿದ್ಯಾರ್ಥಿಗಳು…

Read More

ನಾಳೆ ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ವತಿಯಿಂದ ಮಾದಕ ದ್ರವ್ಯ ವಿರುದ್ಧ ಜನ ಜಾಗೃತಿ ಅಭಿಯಾನಕ್ಕೆ ಚಾಲನೆ

ಮಂಗಳೂರು:ಮನುಷ್ಯನ ಜೀವನಕ್ಕೆ ಮಾರಕವಾದ ಆರೋಗ್ಯಕರ ಜೀವನ ಶೈಲಿಗೆ ಮಾದಕ ವ್ಯಸನ ಅಡ್ಡಿಯಾಗಿದ್ದು ನಮ್ಮ ಜಿಲ್ಲೆಯಲ್ಲಿ ಈ ಮಾದಕ ದ್ರವ್ಯವನ್ನು ಬಹುಮಟ್ಟಿಗೆ ಹತೋಟಿ ತಂದಂತಹ ನಮ್ಮ ಮಂಗಳೂರಿನ ಪೊಲೀಸ್ ಕಮಿಷನರ್ ಹಾಗೂ ಪೊಲೀಸ್ ಇಲಾಖೆ ಮಾದಕ ದ್ರವ್ಯ ಬಳಕೆಯ ವಿರುದ್ಧ ಸಮರ ಸಾರಿರುವುದರಿಂದ ನಮ್ಮ ಜಿಲ್ಲೆಯ ಸಾರ್ವಜನಿಕರು ಹೆಮ್ಮೆ ಪಡುವಂತಾಗಿದೆ. ಮಾದಕ ದ್ರವ್ಯ ವಿರುದ್ಧ ಜನ ಜಾಗೃತಿ ಮೂಡಿಸುವ ಸದುದ್ದೇಶದಿಂದ ಜೀವನಕ್ಕೆ ಮಾರಕವಾದಂತಹ ಮಾದಕ ದ್ರವ್ಯದ ವಿರುದ್ಧ ಆಂದೋಲನವನ್ನು ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘವು ಪೊಲೀಸ್ ಇಲಾಖೆ…

Read More

ಮತ್ತೆ ಭಾರತದಲ್ಲಿ ನಿಪಾ ವೈರಸ್‌ನ ಹೊಸ ಪ್ರಕರಣಗಳು ದೃಢ, ಭಾರತದಾದಂತ್ಯ ಹೆಚ್ಚಿದ ಆತಂಕ

ಬೆಂಗಳೂರು :ಭಾರತದಲ್ಲಿ ನಿಪಾ ವೈರಸ್ ಪ್ರಕರಣಗಳು ವರದಿಯಾದ ನಂತರ ಥೈಲ್ಯಾಂಡ್, ನೇಪಾಳ ಮತ್ತು ತೈವಾನ್ ಸೇರಿದಂತೆ ಹಲವಾರು ಏಷ್ಯಾದ ದೇಶಗಳು ವಿಮಾನ ನಿಲ್ದಾಣಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಿವೆ. ಭಾರತದಲ್ಲಿ ನಿಪಾ ವೈರಸ್‌ನ ಹೊಸ ಪ್ರಕರಣಗಳು ದೃಢಪಟ್ಟಿರುವುದರಿಂದ, ದೇಶದಲ್ಲಿ ಮಾತ್ರವಲ್ಲದೆ ಏಷ್ಯಾದಾದ್ಯಂತ ಕಳವಳ ಹೆಚ್ಚುತ್ತಿದೆ. ಇದು 40 ರಿಂದ 75 ಪ್ರತಿಶತದಷ್ಟು ಮರಣ ಪ್ರಮಾಣವನ್ನು ಹೊಂದಿರುವ ವೈರಸ್ ಆಗಿದೆ. ಪಶ್ಚಿಮ ಬಂಗಾಳದಲ್ಲಿ ಇದರ ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆ, ಅನೇಕ ಏಷ್ಯಾದ ದೇಶಗಳು ವಿಮಾನ ನಿಲ್ದಾಣದ ತಪಾಸಣೆ, ಆರೋಗ್ಯ ತಪಾಸಣೆ ಮತ್ತು…

Read More

ಕಾಳಸಂತೆಯಲ್ಲಿ 2. ರಿಂದ 3 ಲಕ್ಷಕ್ಕೆ ಮಾರಾಟವಾಗುತ್ತಿದೆ ಆಟೋ ರಿಕ್ಷಾ ಪರವಾನಿಗೆ…? : ಗ್ರೀನ್ ಸಿಟಿ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಪ್ರಜೇಶ್

ಮಂಗಳೂರು:ಈ ಹಿಂದೆ ಇದ್ದ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಗಳಾದ ಮುಲೈ ಮುಗಿಲನ್ ಇ.ವಿ ರಿಕ್ಷಾಗಳಿಗೆ ದಕ್ಷಿಣ ಕನ್ನಡದಲ್ಲಿ ಮುಕ್ತ ಸಂಚಾರ ಮಾಡಬಹುದೆಂದು ಆದೇಶ ಹೊರಡಿಸಿದ್ದರು . ಈ ಕಾರಣದಿಂದಲೇ ನಾವು ಕಪ್ಪು ರಿಕ್ಷಾವನ್ನು ಮಾರಿ, 4 ಲಕ್ಷ 30,000 ಸಾವಿರ ಬ್ಯಾಂಕ್ ನಲ್ಲಿ ಸಾಲ ಮಾಡಿ ಇ ವಿ ಆಟೋವನ್ನು ಖರೀದಿಸಿದೆವು ಆದರೆ ಇತ್ತೀಚಿಗೆ ಹೊಸದಾಗಿ ಬಂದ ಜಿಲ್ಲಾಧಿಕಾರಿಗಳು ಗ್ರಾಮಾಂತರ ಭಾಗದವರು ನಗರಕ್ಕೆ ಬಂದು ಬಾಡಿಗೆ ಮಾಡಬಾರದೆಂದು ಹೊಸ ಆದೇಶವನ್ನು ಹೊಸ ನಿಯಮ ಬಂದು ಆರು ತಿಂಗಳು ಮುಗಿಯುವುದರೊಳಗೆ…

Read More

ಭೂಮಿ ಮಂಜೂರಾತಿ ಆಗ್ರಹಿಸಿ ಬಂಟ್ವಾಳದಲ್ಲಿ ಕೊರಗ ಸಮುದಾಯದ ಆಹೋರಾತ್ರಿ ಧರಣಿ

ಬಂಟ್ವಾಳ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ,ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ, ಹಾಗೂ ಕೊರಗ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಮಂಜೂರಾತಿ ನೀಡುವಂತೆ ಒತ್ತಾಯಿಸಿ ಆಹೋರಾತ್ರಿ ನಿರಂತರ ಧರಣಿ ಸತ್ಯಾಗ್ರಹ ಬಿಸಿರೋಡಿನ ಮಿನಿವಿಧಾನ ಸೌಧದ ( ಆಡಳಿತ ಸೌಧ) ಮುಂಭಾಗದಲ್ಲಿ ನಡೆಯಿತು. ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟದ ಕರ್ನಾಟಕ – ಕೇರಳ ರಾಜ್ಯದ ಅಧ್ಯಕ್ಷೆ ಸುಶೀಲಾ ನಾಡ ಅವರು ಮಾತನಾಡಿ, ಸರಕಾರದ ಎಲ್ಲಾ ಯೋಜನೆಗಳು…

Read More

ಕೊರಗ ಸಮುದಾಯಕ್ಕೆ ಭೂಮಿಯ ಹಕ್ಕು ನೀಡುವಂತೆ ಆಗ್ರಹ: ಬಿಸಿರೋಡಿನ ಮಿನಿ ವಿಧಾನಸೌಧದ ಎದುರು ನಿರಂತರ ಸತ್ಯಾಗ್ರಹ

ಬಂಟ್ವಾಳ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ,ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ, ಹಾಗೂ ಕೊರಗ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಮಂಜೂರಾತಿ ನೀಡುವಂತೆ ಒತ್ತಾಯಿಸಿ ಆಹೋರಾತ್ರಿ ನಿರಂತರ ಧರಣಿ ಸತ್ಯಾಗ್ರಹ ಬಿಸಿರೋಡಿನ ಮಿನಿವಿಧಾನ ಸೌಧದ ( ಆಡಳಿತ ಸೌಧ) ಮುಂಭಾಗದಲ್ಲಿ ನಡೆಯಿತು. ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟದ ಕರ್ನಾಟಕ – ಕೇರಳ ರಾಜ್ಯದ ಅಧ್ಯಕ್ಷೆ ಸುಶೀಲಾ ನಾಡ ಅವರು ಮಾತನಾಡಿ, ಸರಕಾರದ ಎಲ್ಲಾ ಯೋಜನೆಗಳು…

Read More

ಆಯುಷ್‌ ಕಾಲೇಜುಗಳಿಂದ ಜನಜಾಗೃತಿ, ವಿಶೇಷ ನಾಡೀ ಪರೀಕ್ಷೆ….!

ಮಂಗಳೂರು:ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆಯುಷ್ ಕಾಲೇಜುಗಳ ವತಿಯಿಂದ ಜನವರಿ ದಿನಾಂಕ 31 ಮತ್ತು ಫೆಬ್ರವರಿ1 ರಂದು ಮಂಗಳೂರಿನ ಡಾ.ಟಿ.ಎಂ ಎ ಪೈ ಇಂಟರ್ನ್ಯಾಷನಲ್ ಕನ್ವೆನ್ ಸೆಂಟರ್ ನಲ್ಲಿ ಜರಗುವ ಆಯುಷ್ ಹಬ್ಬ 2026 ನಡೆಯಲಿದೆ ಎಂದು ಶಾರದ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ ಸಂದೀಪ್ ಬೇಕಲ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮದಲ್ಲಿ ಆಯುಷ್ ಕಾಲೇಜುಗಳು ಸಾರ್ವಜನಿಕ ಸ್ವಾಸ್ಥ್ಯ ಸಂರಕ್ಷಣೆಗಾಗಿ ಸಾರ್ವಜನಿಕರಿಗೆ ಜನಜಾಗೃತಿ ಅಭಿಯಾನ, ವೈದ್ಯ…

Read More

ಮಾಲಾಡಿಯಲ್ಲಿ ಚಿರತೆ ದಾಳಿ; ಸಾಕು ನಾಯಿ ಬಲಿ, ಗ್ರಾಮಸ್ಥರಲ್ಲಿ ಆತಂಕ

ಬಂಟ್ವಾಳ: ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ.ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಲು ಬಣ್ಣದ ನಾಯಿಯನ್ನು ಮುಂಜಾನೆ 5 ಗಂಟೆ ವೇಳೆಗೆ ಅಂಗಳ ದಿಂದ ಕೊಂಡು ಹೋಗಿ ಅಲ್ಲೆ ಸಮೀಪದ ರಬ್ಬರ್ ತೋಟದಲ್ಲಿ ಕೊಂದು ಅರ್ಧ ತಿಂದು ಹಾಕಿದೆ ಎಂದು ಅವರು ತಿಳಿಸಿದ್ದಾರೆ. ಆದರೆ ನಾಯಿಯನ್ನು ಚಿರತೆಯೇ ಕೊಂದು ಹಾಕಿದೆ ಎಂಬುದನ್ನು ನೋಡಿದವರು ಯಾರು ಇಲ್ಲ.ಆದರೆ ವಾರಗಳ ಹಿಂದೆ ಅಲ್ಲೇ…

Read More

ತುಂಡರಿಸಿದರೂ ಒದ್ದಾಡಿದ ಬಂಗುಡೆ ಮೀನು: ಮಲ್ಪೆಯಲ್ಲಿ ಅಪರೂಪದ ಘಟನೆ

ಮಲ್ಪೆ: ಕತ್ತರಿಸಿದ ಬಳಿಕವೂ ಬಂಗುಡೆ ಮೀನೊಂದು ಜೀವಂತವಾಗಿದ್ದ ಅಪರೂಪದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ನಡೆದಿದೆ.ಗ್ರಾಹಕರೊಬ್ಬರು ಮಲ್ಪೆ ಬಂದರಿನಲ್ಲಿ ಮೀನು ಖರೀದಿಸಿ, ಮೀನು ಮಾರಾಟ ಮಹಿಳೆಯ ಬಳಿ ಬಂಗುಡೆ ಮೀನನ್ನು ಕತ್ತರಿಸಿ ಕೊಡುವಂತೆ ಕೇಳಿಕೊಂಡಿದ್ದಾರೆ. ಈ ವೇಳೆ ಮಹಿಳೆ ಮೀನನ್ನು ತುಂಡರಿಸಿ ಟಬ್‌ಗೆ ಹಾಕಿದ್ದು, ಅದರಲ್ಲಿ ಒಂದು ಮೀನಿನ ತುಂಡು ಜೀವಂತವಾಗಿ ಒದ್ದಾಡುತ್ತಿರುವುದನ್ನು ಗಮನಿಸಿದವರು ಬೆಚ್ಚಿಬಿದ್ದಿದ್ದಾರೆ. ಈ ಅಸಾಮಾನ್ಯ ದೃಶ್ಯವನ್ನು ಕಂಡ ಮೀನು ಮಾರಾಟ ಮಹಿಳೆಯರು ಹಾಗೂ ಬಂದರಿನಲ್ಲಿ ಇದ್ದ ಜನರು ನಿಬ್ಬೆರಗಾಗಿದ್ದಾರೆ. ಘಟನೆಯ ವಿಡಿಯೋ…

Read More
error: Content is protected !!