ಉಚಿತ ಬಸ್ ಸೇವೆ ಮಂಜೇಶ್ವರ ವ್ಯಾಪ್ತಿಗೆ ಇಲ್ಲ: ಶಾಸಕರ ವಿರುದ್ಧ ಬಿಜೆಪಿ ವಾಗ್ದಾಳಿ

ಮಿಯಪದವು, ಜೂ.12: ಕೇರಳ ಸರ್ಕಾರದ ಉಚಿತ ಬಸ್ ಸೇವೆ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಜನರಿಗೆ ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ ಎಂದು ಆರೋಪಿಸಿರುವ ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ, ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸ್ಥಳೀಯ ಶಾಸಕರು ಬೇಜವಾಬ್ದಾರಿ ತೋರಿದ್ದಾರೆ ಎಂದು ಟೀಕಿಸಿದೆ. ಮಂಡಲ ಸಭೆಯಲ್ಲಿ ಮಾತನಾಡಿದ ಬಿಜೆಪಿ ಮುಖಂಡರು, ಅಧಿಕಾರಕ್ಕೆ ಬರಲು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಶಾಸಕರು ವಿಫಲರಾಗಿದ್ದು, ಮಂಜೇಶ್ವರ ಜನತೆಗೆ ಮತ್ತೊಮ್ಮೆ ನಿರಾಸೆ ಮೂಡಿಸಿದ್ದಾರೆ ಎಂದು ಆರೋಪಿಸಿದರು. ಪ್ರಾದೇಶಿಕ ಬಸ್‌ಗಳಲ್ಲಿ ಮಾತ್ರ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಾಸರಗೋಡು–ಮಂಗಳೂರು…

Read More

ಜೂನ್ 13ರವರೆಗೆ ಶ್ರೀ ಗ್ರಂಥರಾಜ ಜ್ಞಾನೇಶ್ವರಿ ಸಾಮುದಾಯಿಕ ಪಾರಾಯಣ ಹಾಗೂ ಅಖಂಡ ಹರಿನಾಮ ಸಪ್ತಾಹ…. !

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದಲ್ಲಿರುವ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದಲ್ಲಿ ಜೂನ್ 13ರವರೆಗೆ ನಡೆಯಲಿರುವ ಶ್ರೀ ಗ್ರಂಥರಾಜ ಜ್ಞಾನೇಶ್ವರಿ ಸಾಮುದಾಯಿಕ ಪಾರಾಯಣ ಹಾಗೂ ಅಖಂಡ ಹರಿನಾಮ ಸಪ್ತಾಹಕ್ಕೆ ಬಹಳ ವಿಜೃಂಣೆಯಿಂದ ನಡೆಯುತ್ತಿದೆ . ಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರ ಸಾನ್ನಿಧ್ಯದಲ್ಲಿ, ಪಂಡರಾಪುರದ ಶ್ರೀ ಚೈತನ್ಯ ಸದ್ಗುರು ಹರಿಪ್ರಸಾದ ಶರದಸ್ವಾಮಿ ಶಿವೂರಕರ ಅವರ ನೇತೃತ್ವದಲ್ಲಿ ಅಧಿಕ ಮಾಸದ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ…

Read More

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಗಳೂರು, 2026-27ನೇ ಶೈಕ್ಷಣಿಕ ಸಾಲಿಗೆ ಮಂಗಳೂರಿನ ಬೊಂದೇಲ್‌ನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ವಿವಿಧ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಈ ಸಂಸ್ಥೆಯಲ್ಲಿ ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್ ಹಾಗೂ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗಗಳಲ್ಲಿ ಲ್ಯಾಟರಲ್ ಎಂಟ್ರಿ ಯೋಜನೆಯಡಿ ದ್ವಿತೀಯ ವರ್ಷದ (ಮೂರನೇ ಸೆಮಿಸ್ಟರ್) ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ನೀಡಲಾಗುತ್ತಿದೆ. ಎರಡು ವರ್ಷಗಳ ಐಟಿಐ, ದ್ವಿತೀಯ ಪಿಯುಸಿ (ವಿಜ್ಞಾನ) ಅಥವಾ ದ್ವಿತೀಯ ಪಿಯುಸಿ (ತಾಂತ್ರಿಕ ವಿಷಯಗಳು) ಉತ್ತೀರ್ಣರಾಗಿರುವ ಅರ್ಹ…

Read More

ಮೋದಿ ನೇತೃತ್ವದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ: ಪುತ್ತೂರಿನಲ್ಲಿ ಬಿಜೆಪಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಕಿಶೋರ್ ಕುಮಾರ್ ಹೇಳಿಕೆ

ಪುತ್ತೂರು, ಜೂ.12: ಕಾಂಗ್ರೆಸ್ ಆಡಳಿತವು ಭ್ರಷ್ಟಾಚಾರದ ಆಡಳಿತವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 12 ವರ್ಷಗಳಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಸ್ವಚ್ಛ ರಾಜಕಾರಣದ ಮಾದರಿಯನ್ನು ದೇಶಕ್ಕೆ ತೋರಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 12ನೇ ವರ್ಷದ ಸೇವೆ, ಸುಶಾಸನ ಮತ್ತು ಜನಕಲ್ಯಾಣ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಪುತ್ತೂರು ಗ್ರಾಮಾಂತರ ಹಾಗೂ ನಗರ…

Read More

ಶಿವರಾಮ ಕಾಸರಗೋಡು ಅವರಿಗೆ ಪ್ರತಿಷ್ಠಿತ ಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿ ಪ್ರದಾನ

ಕಾಸರಗೋಡು/ಬೆಂಗಳೂರು, ಜೂ.12: ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಮೂರುವರೆ ದಶಕಕ್ಕೂ ಹೆಚ್ಚು ಕಾಲ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಅಧ್ಯಕ್ಷ ಶಿವರಾಮ ಕಾಸರಗೋಡು ಅವರಿಗೆ ಪ್ರತಿಷ್ಠಿತ “ಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿ” ಪ್ರದಾನ ಮಾಡಲಾಗಿದೆ. ಬೆಂಗಳೂರು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಜೂನ್ 8ರಿಂದ 10ರವರೆಗೆ ವಿ.ಕೆ.ಎಂ. ಕಲಾವಿದರು (ರಿ.) ಬೆಂಗಳೂರು ನೇತೃತ್ವದಲ್ಲಿ, ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ…

Read More

ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಸೂಚನೆ

ಮಂಗಳೂರು, ಜೂನ್ 21ರಂದು ನಡೆಯಲಿರುವ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ರಾಜು ಕೆ. ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಗವು ದೇಹ ಮತ್ತು ಮನಸ್ಸಿನ ನಡುವಿನ ಸಮತೋಲನವನ್ನು ಕಾಪಾಡುವ ಮಹತ್ವದ ಸಾಧನವಾಗಿದ್ದು, ಅದರ ಮಹತ್ವವನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಬೇಕು…

Read More

ಶಾಲೆ, ಅಂಗನವಾಡಿಗಳ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಸಿಇಒ ಸೂಚನೆ

ಮಂಗಳೂರು, ಜೂ.12: ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕುಡಿಯುವ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೀರಿನಿಂದ ಹರಡುವ ರೋಗಗಳನ್ನು ತಡೆಗಟ್ಟಲು ಎಲ್ಲಾ ನೀರಿನ ಮೂಲಗಳನ್ನು ನಿರಂತರವಾಗಿ ಪರೀಕ್ಷೆಗೆ ಒಳಪಡಿಸುವುದು…

Read More

ಮುಂಗಾರು ಅಬ್ಬರಕ್ಕೆ ಮುನ್ನೆಚ್ಚರಿಕೆ: ರಸ್ತೆ ಡಿವೈಡರ್‌ಗಳ ಫ್ಲೆಕ್ಸ್, ಬ್ಯಾನರ್‌ಗಳನ್ನು ತುರ್ತಾಗಿ ತೆರವುಗೊಳಿಸಲು ಜಿಲ್ಲಾಧಿಕಾರಿ ಆದೇಶ

ಮಂಗಳೂರು, ಜೂ.11: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಡಿವೈಡರ್‌ಗಳಿಗೆ ಅಳವಡಿಸಲಾಗಿರುವ ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್‌ಗಳನ್ನು ತುರ್ತಾಗಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಬಿರುಗಾಳಿ ಹಾಗೂ ಮಳೆಯ ಪರಿಣಾಮದಿಂದ ರಸ್ತೆ ಬದಿಗಳು ಮತ್ತು ಮಧ್ಯದ ಡಿವೈಡರ್‌ಗಳಲ್ಲಿ ಅಳವಡಿಸಲಾದ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳು ಕಳಚಿ ವಾಹನಗಳು ಮತ್ತು ಪಾದಚಾರಿಗಳ ಮೇಲೆ ಬೀಳುವ ಸಾಧ್ಯತೆ ಇರುವುದರಿಂದ ಅಪಘಾತ ಹಾಗೂ ಜೀವಹಾನಿ ಸಂಭವಿಸುವ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಎಲ್ಲಾ…

Read More

ಫಿಫಾ ವಿಶ್ವಕಪ್ 2026ಕ್ಕೆ ಮೆಕ್ಸಿಕೊ ಭರ್ಜರಿ ಆರಂಭ: ದಕ್ಷಿಣ ಆಫ್ರಿಕಾ ವಿರುದ್ಧ 2-0 ಜಯ, ಪಂದ್ಯದಲ್ಲಿ ಮೂರು ಕೆಂಪು ಕಾರ್ಡ್

ಮೆಕ್ಸಿಕೊ ಸಿಟಿ, 2026ರ ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಮೆಕ್ಸಿಕೊ ತಂಡವು ದಕ್ಷಿಣ ಆಫ್ರಿಕಾವನ್ನು 2-0 ಗೋಲುಗಳ ಅಂತರದಲ್ಲಿ ಸೋಲಿಸಿ ಅಭಿಯಾನವನ್ನು ಗೆಲುವಿನೊಂದಿಗೆ ಆರಂಭಿಸಿದೆ. ಜೂನ್ 11ರಂದು ಐತಿಹಾಸಿಕ ಎಸ್ಟಾಡಿಯೋ ಅಜ್ಟೆಕಾ ಕ್ರೀಡಾಂಗಣದಲ್ಲಿ ನಡೆದ ‘ಎ’ ಗುಂಪಿನ ಪಂದ್ಯವು ರೋಚಕ ಕ್ಷಣಗಳ ಜೊತೆಗೆ ಮೂರು ಕೆಂಪು ಕಾರ್ಡ್‌ಗಳ ಕಾರಣಕ್ಕೂ ವಿಶೇಷ ಗಮನ ಸೆಳೆಯಿತು. ಪಂದ್ಯ ಆರಂಭವಾದ ಕೇವಲ 9ನೇ ನಿಮಿಷದಲ್ಲೇ ಜೂಲಿಯನ್ ಕ್ವಿನೋನ್ಸ್ ಗೋಲು ದಾಖಲಿಸುವ ಮೂಲಕ ಮೆಕ್ಸಿಕೊಗೆ ಮುನ್ನಡೆ ತಂದುಕೊಟ್ಟರು. ಆರಂಭದಿಂದಲೇ…

Read More

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ವಿಜಯ್ ಭೇಟಿ: ಅರ್ಧ ಗಂಟೆ ಸಾರ್ವಜನಿಕ ದರ್ಶನಕ್ಕೆ ತಾತ್ಕಾಲಿಕ ನಿರ್ಬಂಧ

ಕೊಲ್ಲೂರು, ಜೂನ್ 12: ತಮಿಳುನಾಡಿನ ರಾಜಕೀಯ ನಾಯಕ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಅಧ್ಯಕ್ಷ ವಿಜಯ್ ಅವರು ಜೂನ್ 12ರಂದು ಮಧ್ಯಾಹ್ನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ವಿಜಯ್ ಅವರ ಭೇಟಿಯ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ಮಧ್ಯಾಹ್ನ 3 ಗಂಟೆಯಿಂದ 3.30 ಗಂಟೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದ್ದು, ಈ ಅವಧಿಯಲ್ಲಿ ಭಕ್ತರಿಗೆ ದೇವಸ್ಥಾನ ಪ್ರವೇಶ…

Read More
error: Content is protected !!