ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ಔಷಧ ವಿಭಾಗದ ಮುಖ್ಯಸ್ಥನ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ, ಜೂನ್ 12: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಔಷಧ ವಿಭಾಗದ ಮುಖ್ಯಸ್ಥರಾಗಿರುವ ಚಂದ್ರಶೇಖರ್ ವಿರುದ್ಧ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಆಸ್ಪತ್ರೆಯ ಮಹಿಳಾ ಸಿಬ್ಬಂದಿಯೊಬ್ಬರಿಗೆ ಔಷಧಾಲಯದ ಉಗ್ರಾಣದಲ್ಲಿ ಲೈಂಗಿಕ ಕಿರುಕುಳ ನೀಡಿರುವುದಲ್ಲದೆ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೆಲಸದಿಂದ ತೆಗೆದುಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಮಹಿಳಾ ಸಿಬ್ಬಂದಿಯ ದೂರಿನ ಆಧಾರದಲ್ಲಿ ಗುರುವಾರ ಪ್ರಕರಣ ದಾಖಲಿಸಲಾಗಿದೆ. ಮೂಲತಃ ಬೆಳ್ತಂಗಡಿ…

Read More

ಗ್ಯಾಸ್ ಬೆಲೆ ಏರಿಕೆ ಖಂಡಿಸಿ ವಿಮೆನ್ ಇಂಡಿಯಾ ಮೂವ್‌ಮೆಂಟ್ ಪ್ರತಿಭಟನೆ

ಬಿಸಿ ರೋಡ್, ಜೂನ್ 12: ಗ್ಯಾಸ್ ಸಿಲಿಂಡರ್‌ಗಳ ನಿರಂತರ ಬೆಲೆ ಏರಿಕೆ ಹಾಗೂ ವಿತರಣೆಯಲ್ಲಿ ಉಂಟಾಗುತ್ತಿರುವ ವಿಳಂಬ ನೀತಿಯನ್ನು ಖಂಡಿಸಿ, ವಿಮೆನ್ ಇಂಡಿಯಾ ಮೂವ್‌ಮೆಂಟ್ (WIM) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯು ಬಿಸಿ ರೋಡ್ ಫ್ಲೈಓವರ್ ಕೆಳಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗಿ, ಗೃಹಬಳಕೆಯ ಗ್ಯಾಸ್ ದರವನ್ನು ಕಡಿಮೆಗೊಳಿಸುವಂತೆ ಹಾಗೂ ಗ್ರಾಹಕರಿಗೆ ಸಮಯಕ್ಕೆ ಸರಿಯಾಗಿ ಸಿಲಿಂಡರ್ ವಿತರಣೆ ಮಾಡುವಂತೆ ಆಗ್ರಹಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ವಿಮೆನ್ ಇಂಡಿಯಾ…

Read More

ಮುಂಗಾರು ಅಬ್ಬರ: ದಕ್ಷಿಣ ಕನ್ನಡದ ಬೀಚ್‌ಗಳಲ್ಲಿ ಹೈ ಅಲರ್ಟ್ – ವಾಟರ್ ಸ್ಪೋರ್ಟ್ಸ್‌ಗೆ ತಾತ್ಕಾಲಿಕ ನಿಷೇಧ

ಮಂಗಳೂರು, ಜೂ.12: ಕರಾವಳಿಯಲ್ಲಿ ಮುಂಗಾರು ಮಳೆ ತೀವ್ರಗೊಳ್ಳುತ್ತಿದ್ದಂತೆ ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಾಗಿದ್ದು, ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿವೆ. ಜಿಲ್ಲೆಯ ಪ್ರಮುಖ ಬೀಚ್‌ಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಸಮುದ್ರ ಆಧಾರಿತ ಎಲ್ಲಾ ಸಾಹಸ ಹಾಗೂ ಮನರಂಜನಾ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪ್ರವಾಸಿಗರ ನೆಚ್ಚಿನ ತಾಣಗಳಾದ ಪಣಂಬೂರು, ತಣ್ಣೀರುಬಾವಿ, ಸೋಮೇಶ್ವರ ಸೇರಿದಂತೆ ಜಿಲ್ಲೆಯ ಎಲ್ಲಾ ಬೀಚ್‌ಗಳಲ್ಲಿ ಮುಂಗಾರು ಅವಧಿ ಮುಗಿಯುವವರೆಗೆ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳಿಗೆ ಸಂಪೂರ್ಣ ನಿರ್ಬಂಧ…

Read More

ಸುಲಿಗೆ ಪ್ರಕರಣದ ತನಿಖೆಯನ್ನು ರಾಜಕೀಯಕ್ಕೆ ಬಳಸಬೇಡಿ: ಬಿಜೆಪಿ ಯುವ ಮೋರ್ಚಾ ಹೇಳಿಕೆಗೆ ಯುವ ಕಾಂಗ್ರೆಸ್ ಖಂಡನೆ

ಮಂಗಳೂರು, ಇತ್ತೀಚೆಗೆ ಬೆಳಕಿಗೆ ಬಂದಿರುವ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ನೀಡಿರುವ ಹೇಳಿಕೆಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಕಟುವಾಗಿ ಖಂಡಿಸಿದೆ. ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೊಹಮ್ಮದ್ ಬಶೀರ್ ಬುಧವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡು, ನಡೆಯುತ್ತಿರುವ ಕ್ರಿಮಿನಲ್ ತನಿಖೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಪ್ರಯತ್ನ ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ನಿಜಾಮ್ ವಿರುದ್ಧ ಆರೋಪಗಳು ಕೇಳಿಬಂದ…

Read More

ಸರಕಾರಿ ಆಸ್ಪತ್ರೆಗಳನ್ನು ಖಾಸಗಿಯವರಿಗೆ ಹಸ್ತಾಂತರಿಸಬೇಡಿ: ಉಳ್ಳಾಲದಲ್ಲಿ ಸಿಪಿಐಎಂ ನೇತೃತ್ವದಲ್ಲಿ ಮಾನವ ಸರಪಳಿ ಪ್ರತಿಭಟನೆ

ಳ್ಳಾಲ, ಜೂನ್ 12: ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದವನ್ನು ರದ್ದುಗೊಳಿಸಿ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಉಳಿಸಬೇಕು ಎಂದು ಒತ್ತಾಯಿಸಿ ಸಿಪಿಐಎಂ ಉಳ್ಳಾಲ ವಲಯ ಸಮಿತಿಯ ನೇತೃತ್ವದಲ್ಲಿ ಉಳ್ಳಾಲ ಸಮುದಾಯ ಆಸ್ಪತ್ರೆಯ ಮುಂಭಾಗ ಮಾನವ ಸರಪಳಿ ಪ್ರತಿಭಟನೆ ನಡೆಯಿತು. ಮಾನವ ಸರಪಳಿ ಬಳಿಕ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಆರೋಗ್ಯ ಕ್ಷೇತ್ರದ ವ್ಯಾಪಾರೀಕರಣವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದರು. ಖಾಸಗಿ ಆಸ್ಪತ್ರೆಗಳ ಏಕಸ್ವಾಮ್ಯದಿಂದ ಜಿಲ್ಲೆಯ…

Read More

ಕುದ್ರೋಳಿ ಭಗವತಿ ದೇವಸ್ಥಾನ–ಕಟ್ಟೆಮಾರು ರಸ್ತೆ ಅಗಲೀಕರಣಕ್ಕೆ ವೇಗ: ವಿಶೇಷ ಸಭೆಯಲ್ಲಿ ಚರ್ಚೆ

ನಗರದ ಕೊಡಿಯಲ್ ಬೈಲ್ ನಲ್ಲಿರುವ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದಿಂದ ಕಟ್ಟೆಮಾರುವರೆಗೆ ರಸ್ತೆ ಅಗಲೀಕರಣ ನಡೆಯಬೇಕಿರುವ ಕುರಿತು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳ ವಿಶೇಷ ಸಭೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಇಲ್ಲಿನ ರಸ್ತೆ ಅಗಲೀಕರಣವು ಸ್ಥಳೀಯ ನಾಗರಿಕರ ಹಲವಾರು ವರ್ಷಗಳ ಬೇಡಿಕೆಯಾಗಿದೆ. ಈ ಬಗ್ಗೆ ಹಿಂದಿನ ಹಲವು ಜನಪ್ರತಿನಿಧಿಗಳು ಪ್ರಯತ್ನಿಸಿದರೂ ಯಶಸ್ವಿಯಾಗಿರಲಿಲ್ಲ. ರಸ್ತೆಗಳು ಅಗಲವಾದಲ್ಲಿ ಸುತ್ತಮುತ್ತಲಿನ ಎಲ್ಲಾ ಸಾರ್ವಜನಿಕರಿಗೆ ಉಪಯೋಗವಾಗುತ್ತದೆ. ಬೆಳೆಯುತ್ತಿರುವ ನಗರ, ಇಲ್ಲಿಗೆ ಆಗಮಿಸುವ ಭಕ್ತರ ಸಹಿತ…

Read More

ಜನನ-ಮರಣ ಪ್ರಮಾಣ ಪತ್ರ ವಿತರಣೆಯಲ್ಲಿ ವಿಳಂಬ ಖಂಡನೀಯ: ಸಮಸ್ಯೆ ಬಗೆಹರಿಸದಿದ್ದರೆ ಹೋರಾಟ – ಯುವ ಕಾಂಗ್ರೆಸ್ ಎಚ್ಚರಿಕೆ

ಮಂಗಳೂರು, ಜೂನ್ 12: ಜನನ ಮತ್ತು ಮರಣ ಪ್ರಮಾಣ ಪತ್ರಗಳ ವಿತರಣೆಯಲ್ಲಿ ಉಂಟಾಗುತ್ತಿರುವ ವಿಳಂಬ ಹಾಗೂ ಇದರಿಂದ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನಿಯೋಗವು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಪ್ರಮಾಣ ಪತ್ರಗಳಿಗಾಗಿ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು, ಪಾಸ್‌ಪೋರ್ಟ್ ಅರ್ಜಿದಾರರು ಸೇರಿದಂತೆ ಅನೇಕ ನಾಗರಿಕರು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿರುವುದನ್ನು ನಿಯೋಗವು ಆಯುಕ್ತರ ಗಮನಕ್ಕೆ ತಂದಿತು. ಜನನ ಮತ್ತು ಮರಣ ಪ್ರಮಾಣ ಪತ್ರಗಳು ನಾಗರಿಕರ…

Read More

ಅಶ್ಲೀಲ ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ: ಬೆಂಗಳೂರು ಮೂಲದ ಆರೋಪಿ ಬಂಧನ

ಚಿಕ್ಕಮಗಳೂರು, ಜೂ.12: ಯುವತಿಯ ಅಶ್ಲೀಲ ಫೋಟೋಗಳನ್ನು ಆಕೆಯ ತಾಯಿಗೆ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರು ಮೂಲದ ಯೋಗೀಶ್ (25) ಎಂದು ಗುರುತಿಸಲಾಗಿದೆ. ಈತ ತರಿಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದ ಯುವತಿಯ ಅಶ್ಲೀಲ ಫೋಟೋಗಳನ್ನು ಆಕೆಯ ತಾಯಿಗೆ ಕಳುಹಿಸಿ ಹಣಕ್ಕಾಗಿ ಬೆದರಿಕೆ ಹಾಕಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿ ರಾತ್ರಿ ವೇಳೆ ಮಹಿಳೆಗೆ ಕರೆ ಮಾಡಿ ಅಶ್ಲೀಲ ಫೋಟೋಗಳನ್ನು…

Read More

ಪೋಕ್ಸೋ ಪ್ರಕರಣದ ವಾರಂಟ್ ಆರೋಪಿ ಬಂಧನ: ಬೆಂಗಳೂರಿನಲ್ಲಿ ಪುತ್ತೂರು ಪೊಲೀಸರ ಕಾರ್ಯಾಚರಣೆ

ಪುತ್ತೂರು, ಜೂ.12: ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನಮನ್ ನಾಯಕ್ ಬಂಧಿತ ಆರೋಪಿ. ಈತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 53/2018ರಡಿ ಭಾರತೀಯ ದಂಡ ಸಂಹಿತೆಯ ಕಲಂ 448, 506, 354 ಹಾಗೂ ಪೋಕ್ಸೋ ಕಾಯ್ದೆಯ ಕಲಂ 12ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬೆಂಗಳೂರಿನ ಕೂಡ್ಲುಪೇಟೆ ಪ್ರದೇಶದಲ್ಲಿ…

Read More

ಎರಡು ವರ್ಷಗಳಿಂದ ಆತಂಕ ಸೃಷ್ಟಿಸಿದ್ದ ಹುಲಿ ಬೋನಿಗೆ ಬಿತ್ತು; ಗ್ರಾಮಸ್ಥರ ನಿಟ್ಟುಸಿರು

ಹುಣಸೂರು: ಕಳೆದ ಎರಡು ವರ್ಷಗಳಿಂದ ಗ್ರಾಮಸ್ಥರು ಹಾಗೂ ರೈತರಲ್ಲಿ ಆತಂಕ ಸೃಷ್ಟಿಸಿದ್ದ ಹೆಣ್ಣು ಹುಲಿಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿರುವ ಘಟನೆ ಹನಗೋಡು ಹೋಬಳಿಯ ಕೂಡ್ಲೂರು ಸಮೀಪ ನಡೆದಿದೆ. ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ಅವರಿಗೆ ಸೇರಿದ ತೋಟದಲ್ಲಿ ಅಳವಡಿಸಲಾಗಿದ್ದ ಬೋನಿನಲ್ಲಿ ಬುಧವಾರ ಮುಂಜಾನೆ ಸುಮಾರು 3ರಿಂದ 4 ವರ್ಷ ವಯಸ್ಸಿನ ಹೆಣ್ಣು ಹುಲಿ ಸೆರೆಯಾಗಿದೆ. ಹುಲಿ ಬಂಧನದಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಈ ಭಾಗದಲ್ಲಿ ಸಂಚರಿಸುತ್ತಿದ್ದ ಹುಲಿ ಹತ್ತಾರು ಜಾನುವಾರುಗಳನ್ನು…

Read More
error: Content is protected !!