ಮುಕ್ರಂಪಾಡಿಯಲ್ಲಿ ತೃತೀಯ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಗೆ ಸಿದ್ಧತೆ: ನೂತನ ಪದಾಧಿಕಾರಿಗಳ ಆಯ್ಕೆ
ಬಂಟ್ವಾಳ, ಜೂ.12: ಮುಕ್ರಂಪಾಡಿಯ ಸುಭದ್ರಾ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ತೃತೀಯ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಮತಿ ಪ್ರತಿಭಾ ಓಕುಣ್ಣಾಯ ಬೊಳ್ಳಿಂಬಳ ಹಾಗೂ ಶ್ರೀಮತಿ ರಜತಾ ಭಟ್ ಮುಕ್ರಂಪಾಡಿ ಅವರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶ್ರೀಮತಿ ವೀಣಾ ಬಲ್ಲಾಳ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ ಶ್ರೀಮತಿ ಪವಿತ್ರಾ ದೊಡ್ಡಡ್ಕ ಮತ್ತು ಶ್ರೀಮತಿ ಸ್ವಯಂಪ್ರಭಾ…
