ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬ
ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ ಮೋರೆಯಲ್ಲಿ ಶಾಲೆ ಕಡೆ ಹೆಜ್ಜೆ ಹಾಕುವ ಮಕ್ಕಳು ಶಾಲೆಯಲ್ಲಿ ಮತ್ತೆ ನಿತ್ಯದ ಪಾಠ ನೋಟ್ಸ್ ಗಳಲ್ಲಿ ಒಗ್ಗಿಕೊಳ್ಳಲು ಸ್ವಲ್ಪ ದಿನಗಳಾದರು ಬೇಕೆನ್ನುವುದು ಸಾಮಾನ್ಯ ಸಂಗತಿ. ಮಕ್ಕಳು ಸಂತಸದ ಕಲಿಕೆಯಲ್ಲಿ ಪಾಲ್ಗೊಳ್ಳುವಂತಾಗಬೇಕು ಮತ್ತು ಇಷ್ಟಪಟ್ಟು ಓದಿಕೊಳ್ಳುವಂತಾಗಬೇಕೆನ್ನುವ ಉದ್ದೇಶದಿಂದ ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ಮಳೆ ಹಬ್ಬ…
