ಪೀಸ್ ಕ್ರಿಯೇಟಿವ್ ಶಾಲಾ ವಿದ್ಯಾರ್ಥಿಗಳ ಮೈಸೂರು ಅಧ್ಯಯನ ಪ್ರವಾಸ: ಇತಿಹಾಸ–ವಿಜ್ಞಾನ–ಕಲೆಯ ಅನುಭವ
ಮಂಜೇಶ್ವರ: ಕೇರಳ–ಕರ್ನಾಟಕ ಗಡಿ ಪ್ರದೇಶದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿಕೊಂಡಿರುವ ಪೀಸ್ ಕ್ರಿಯೇಟಿವ್ ಕುಂಜತ್ತೂರು ಹಾಗೂ ಹೊಸಂಗಡಿಯ ಆಂಗ್ಲ ಮಾಧ್ಯಮ ಶಾಲೆಗಳ 3 ನೇ ತರಗತಿಯಿಂದ 9 ನೇ ತರಗತಿ ವಿದ್ಯಾರ್ಥಿಗಳು 2025–26ನೇ ಶೈಕ್ಷಣಿಕ ವರ್ಷದ ಅಧ್ಯಯನ ಪ್ರವಾಸದ ಅಂಗವಾಗಿ ಐತಿಹಾಸಿಕ ನಗರಿ ಮೈಸೂರಿನ ವಿವಿಧ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿ ಅಪಾರ ಮಾಹಿತಿಯನ್ನು ಸಂಗ್ರಹಿಸಿದರು. ಶಾಲಾ ಪ್ರಾಂಶುಪಾಲ ಅಬ್ದುಲ್ ಖಾದರ್, ಆಡಳಿತ ಮಂಡಳಿ ಹಾಗೂ ಶಿಕ್ಷಕರ ನೇತೃತ್ವದಲ್ಲಿ ನಡೆದ ಈ ಅಧ್ಯಯನ ಪ್ರವಾಸವು…