ಗ್ರಾಂಡ್ ರಾವ್ಸ್ ಚೆಸ್ಸ್ ಕಾರ್ನರ್ ವತಿಯಿಂದ ಅಂತರಾಷ್ಟ್ರೀಯ ಫಿಡೆ ರೇಟೆಡ್ ಚೆಸ್ ಫೆಸ್ಟಿವಲ್ ಪಂದ್ಯಕೂಟ

ಮಂಗಳೂರು:ಗ್ರಾಂಡ್ ರಾವ್ಸ್ ಚೆಸ್ಸ್ ಕಾರ್ನರ್ ವತಿಯಿಂದ ಅಂತರಾಷ್ಟ್ರೀಯ ಫಿಡೆ ರೇಟೆಡ್ ಚೆಸ್ ಫೆಸ್ಟಿವಲ್ ಪಂದ್ಯಕೂಟವು ಸೆಪ್ಟೆಂಬರ್ 25 ರಿಂದ 30 ರ ತನಕ ಮಂಗಳೂರಿನ ಶಾರದಾ ವಿದ್ಯಾಲಯದ ಭುವರಹ ಅಟ್ರಿಯಂ ನಲ್ಲಿ ನಡೆಯಲಿದೆ ಎಂದು ಆರ್.ಸಿ.ಸಿ ಸಂಸ್ಥೆಯ ಸಲಹೆಗಾರರು ಹಾಗೂ ಸಂಘಟಕರೂ ಆಗಿರುವ ಡಾ ಶುಭಾನಂದ್ ರಾವ್ ತಿಳಿಸಿದರು. ಅವರು ಪತ್ರಿಕಾಭವನದಲ್ಲಿ ನಡೆದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಆರ್ ಸಿ ಸಿ ಯನ್ನು 2012 ರಲ್ಲಿ ಐ ಎಂ ಶರಣ್ ರಾವ್ ಮತ್ತು ಡ ಬ್ಲ್ಯೂ…

Read More

ಸೆಪ್ಟೆಂಬರ್ -23 ರಂದು ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ 2025

ಮಂಗಳೂರು: ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕಳೆದ ಹಲವು ವರ್ಷಗಳಿಂದ ತಲಪಾಡಿ ಪರಿಸರದಲ್ಲಿ ಸಾರ್ವಜನಿಕ ಆರೋಗ್ಯ ಸುಧಾರಣೆಯ ನಿಟ್ಟಿನಲ್ಲಿ ತಿಂಗಳಿಗೆ ಕನಿಷ್ಠ ಎರಡರಂತೆ ಆರೋಗ್ಯ ಅರಿವು ಕಾರ್ಯಕ್ರಮ ಮತ್ತು ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರಗಳನ್ನು ನಡೆಸುತ್ತಾ ಬಂದಿದ್ದು ಇದೇ ತಿಂಗಳ ತಾರೀಕು 23 ರಂದು ರಾಷ್ಟ್ರೀಯ ಆಯುರ್ವೇದ ದಿನಾಚರಣೆ ೨೦೨೫ ನ್ನು ಕಾಲೇಜಿನಲ್ಲಿ ಆಯೋಜಿಸಿದೆ ಎಂದು ಶಾರದಾ ಸಮೂಹ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಡಾ ಎಂ ಬಿ ಪುರಾಣಿಕ್ ತಿಳಿಸಿದರು. ಪತ್ರಿಕಾ…

Read More

ಸೆಪ್ಟೆಂಬರ್ ೨೧ ರಂದು ಸಂಘನಿಕೇತನ ಪ್ರತಾಪ ನಗರದಲ್ಲಿ-“ಯೋಗ ಏಕಾಹ 2025”

ಮಂಗಳೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನವು ಪ್ರತಾಪನಗರದ ಕೇಶವ ಸ್ಮೃತಿ ಸಂವರ್ಧನ ಸಮಿತಿಯೊಂದಿಗೆ ಜಂಟಿಯಾಗಿ ಒಂದು ದಿನದ ಯೋಗಾಸನ ಪ್ರದರ್ಶನದ ಯೋಗೋತ್ಸವ “ಯೋಗ ಏಕಾಹ 2025” ಕಾರ್ಯಕ್ರಮವನ್ನು ಸೆಪ್ಟೆಂಬರ್ ೨೧ ರಂದು ಸಂಘನಿಕೇತನ ಪ್ರತಾಪ ನಗರದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಧನಂಜಯ ಕೆ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಈ ಕಾರ್ಯಕ್ರಮದಲ್ಲಿ ಜಿಲ್ಲೆಯ 10 ಪ್ರತಿಷ್ಠಿತ ಯೋಗಾಭ್ಯಾಸವನ್ನು ಕಲಿಸುವ ಸಂಸ್ಥೆಗಳು ಇದರಲ್ಲಿ ಪಾಲ್ಗೊಳ್ಳಲಿದೆ . ಪ್ರತೀ…

Read More

ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಕಾಸರಗೋಡು ಜಿಲ್ಲೆಯಲ್ಲೇ ಗಮನ ಸೆಳೆಯುತ್ತಿರುವ ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆ

ಮಂಜೇಶ್ವರ: ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಕಾಸರಗೋಡು ಜಿಲ್ಲೆಯಲ್ಲೇ ಗಮನ ಸೆಳೆಯುತ್ತಿರುವ ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ ಇತ್ತೀಚೆಗೆ “ಟ್ಯಾಲೆಂಟ್ ಹಂಟ್ ಡೇ” ಉತ್ಸವ ಸಂಭ್ರಮದಿಂದ ಆಚರಿಸಲಾಯಿತು. ಈ ವಿಶೇಷ ದಿನಾಚರಣೆಯ ಉದ್ದೇಶ, ವಿದ್ಯಾರ್ಥಿಗಳಲ್ಲಿರುವ ಅಡಗಿದ ಪ್ರತಿಭೆಗಳನ್ನು ಗುರುತಿಸಿ, ಅವುಗಳನ್ನು ಪ್ರೋತ್ಸಾಹಿಸುವುದಾಗಿತ್ತು. ಈ ಸಂಭ್ರಮದಲ್ಲಿ ವಿದ್ಯಾರ್ಥಿಗಳು ನೃತ್ಯ, ಹಾಡು, ಚಿತ್ರಕಲೆ, ನಾಟಕ, ಭಾಷಣ, ಕರಾಟೆ ಹಾಗೂ ವಿವಿಧ ಕಲಾತ್ಮಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತಮ್ಮ ವೈಯಕ್ತಿಕ ಪ್ರತಿಭೆಯನ್ನು ಮೆರೆದರು. ಪ್ರತಿ ತರಗತಿಯಿಂದ ವಿದ್ಯಾರ್ಥಿಗಳು ಭಾಗಿ ಆಗಿದ್ದು,…

Read More

ಚಲಿಸುತ್ತಿದ್ದ ಟ್ಯಾಂಕರ್ ಲಾರಿಯಿಂದ ಸ್ಪಿರಿಟ್ ಸೋರಿಕೆ

ಮಂಜೇಶ್ವರ: ಚಲಿಸುತ್ತಿದ್ದ ಟ್ಯಾಂಕರ್ ಲಾರಿಯಿಂದ ಸ್ಪಿರಿಟ್ ಸೋರಿಕೆಯಾಗಿ ಆತಂಕದ ಪರಿಸ್ಥಿತಿ ಎದುರಾಗಿದೆ. ಮಂಜೇಶ್ವರ ಹೊಸಂಗಡಿ ವಾಮಂಜೂರು ಅಬಕಾರಿ ತಪಾಸಣಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಬಳಿಕ ಟ್ಯಾಂಕರ್ ಲಾರಿಯಿಂದ ಪಾತ್ರೆಗೆ ಸ್ಪಿರಿಟ್ ಹರಿಯುವ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಪ್ರದೇಶದಿಂದ ಕೋಝಿಕ್ಕೋಡ್ ಗೆ ತೆರಳುತಿದ್ದ ಟ್ಯಾಂಕರ್ ಲಾರಿಯಲ್ಲಿ ಈ ರೀತಿಯ ಸೋರಿಕೆ ಕಂಡು ಬಂದಿದೆ.ಸ್ಥಳಕ್ಕೆ ಅಗ್ನಿಶಾಮಕದಳ, ಪೊಲೀಸರು ಆಗಮಿಸಿ ಸುರಕ್ಷತೆಯಲ್ಲಿ ಬೇರೊಂದು ಟ್ಯಾಂಕರಿಗೆ ಸ್ಪಿರಿಟ್ ವರ್ಗಾಯಿಸಿದ್ದಾರೆ.

Read More

ವರ್ಕಾಡಿ ಕಜೆಪದವಿನಲ್ಲಿ ಭೂಮಿ ಬಿರುಕು ಉಂಟಾದ ಪ್ರದೇಶಕ್ಕೆ ಕೇಂದ್ರ ತಂಡ ಭೇಟಿ

ಮಂಜೇಶ್ವರ: ವರ್ಕಾಡಿ ಗ್ರಾಮಪಂಚಾಯತ್ತಿನ ಕೆಜೆಪದವಿಯಲ್ಲಿ ಭಯಾನಕವಾಗಿ ಉಂಟಾಗುತ್ತಿರುವ ಭೂಮಿ ಬಿರುಕುಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರದ ವಿಶೇಷ ತಂಡ ಸ್ಥಳಕ್ಕೆ ಭೇಟಿ ನೀಡಿತು. 2019ರಿಂದ ಆರಂಭವಾದ ಈ ಸಮಸ್ಯೆ, ಕಳೆದ ವರ್ಷ (2024) ಅತ್ಯಂತ ಗಂಭೀರ ಸ್ವರೂಪವನ್ನು ಪಡೆದಿದ್ದು, ಈ ವರ್ಷ ಭೂಭಾಗವು ಹೆಚ್ಚು ತಳಮಟ್ಟಕ್ಕೆ ಇಳಿಯುತ್ತಿದ್ದಂತೆ, ಆ ಪ್ರದೇಶದ ಮೂವರು ಕುಟುಂಬಗಳನ್ನು ತುರ್ತು ಅವಸ್ಥೆಯಲ್ಲಿ ಸ್ಥಳಾಂತರಿಸಬೇಕಾದ ಪರಿಸ್ಥಿತಿ ಉಂಟಾಯಿತು. ಭೂಮಿ ಬಿರುಕುಗಳಿಂದಾಗಿ ಕೃಷಿಭೂಮಿಗಳು ನಾಶವಾಗಿದ್ದು, ಸ್ಥಳೀಯರ ಪ್ರಮುಖ ಆರ್ಥಿಕ ಆಧಾರವಾದ ಕೃಷಿಯೇ ದುರ್ಬಲಗೊಂಡಿದೆ. ಪ್ರದೇಶದಲ್ಲಿನ ಮನೆಗಳು ಕೂಡ…

Read More

ಲಯನ್ಸ್ ಇಂಟರ್ ನ್ಯಾಷನಲ್ ಜಿಲ್ಲೆ 317ಡಿ ವತಿಯಿಂದ ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ

ಮಂಗಳೂರು: ಲಯನ್ಸ್‌ ಇಂಟರ್ ನ್ಯಾಷನಲ್ ಜಿಲ್ಲೆ 317 ಡಿ ಇದರ ಆಶ್ರಯದಲ್ಲಿ “ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ ನೆಪ್ಟೆಂಬರ್ 21 ರಂದು ಭಾನುವಾರ ಬೆಳಿಗೆ, 8.30 ಕ್ಕೆ, ಕುದ್ಮಲ್ ರಂಗರಾವ್ ಪುರಭವನ ಮಂಗಳೂರಿನಲ್ಲಿ ನಡೆಯಲಿದೆ ಎಂದು ಲಯನ್ ರಾಜೇಶ್ ಶೆಟ್ಟಿ ಶಬರಿ ತಿಳಿಸಿದರು. ಅವರು ನಗರದ ಲಯನ್ ಅಶೋಕದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಲಯನ್ಸ್ ಜಿಲ್ಲಾ ನಾಂಸ್ಕೃತಿಕ ಸ್ಪರ್ಧೆಯಲ್ಲಿ ಸುಮಾರು 25 ತಂಡಗಳು ಭಾಗವಹಿನಲಿದ್ದು, ನೆಟ್ಟಿಂಗ್ ಸೇರಿ ಒಂದು ತಂಡಕ್ಕೆ 20 ನಿಮಿಷಗಳ ಕಾಲಾವಧಿ…

Read More

ಸೆಪ್ಟೆಂಬರ್ 19ರಂದು ನಗರದಲ್ಲಿ ಬಸವ ಸಂಸ್ಕೃತಿ ಅಭಿಯಾನ

ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಸಾಂಸ್ಕೃತಿಕ ನಾಯಕ ಬಸವಣ್ಣ ಎಂದು ಘೋಷಿಸಿದ್ದು ತಮಗೆ ತಿಳಿದಿರುವ ವಿಚಾರ ಬಸವಾದಿ ಶಿವಶರಣರ ತತ್ವಾದರ್ಶಗಳನ್ನು ಜನಮನದಲ್ಲಿ ಬಿತ್ತುವ, ಜನರ ಮನಸ್ಸುಗಳನ್ನು ಕಟ್ಟುವ, ಜೊತೆಗೆ ಪರಸ್ಪರ ಭಾಂದವ್ಯದ ಬೆಸುಗೆ ಹಾಕುವ ಸದುದ್ದೇಶದಿಂದ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಆಶ್ರಯದಲ್ಲಿ ಕರ್ನಾಟಕ ರಾಜ್ಯದಾದ್ಯಂತ ಸಪ್ಟೆಂಬರ್ 1 ರಿಂದ ಅಕ್ಟೋಬರ್ 5 ರ ತನಕ ‘ಬಸವ ಸಂಸ್ಕೃತಿ ಅಭಿಯಾನ’ವನ್ನು ಹಮ್ಮಿಕೊಳ್ಳಲಾಗಿದೆ. ವ್ಯಸನ ಮುಕ್ತ ಸಮ ಸಮಾಜದ ನಿರ್ಮಾಣ, ಅಂಧಶ್ರದ ಅಳಿಸಿ ಸುಜ್ಞಾನ ಬೆಳೆಸುವುದು, ವಿದ್ಯಾರ್ಥಿ ಯುವಜನರಲ್ಲಿ ಆಧ್ಯಾತ್ಮದ…

Read More

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ ಮಂಗಳವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಮತ ಕಳ್ಳತನ ದೇಶದ ಅತಿ ದೊಡ್ಡ ಚುನಾವಣಾ ಹಗರಣವಾಗಿದ್ದು, ಇದರ ವಿರುದ್ಧ ಎಐಸಿಸಿ ಅ.15ರ ವರೆಗೆ ದೇಶವ್ಯಾಪಿ ‘ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ’ ಅಭಿಯಾನ ಆಯೋಜಿಸಿದೆ. ಈ ಅಭಿಯಾನವು ರಾಜಕೀಯ ಕಾರ್ಯಕ್ರಮವಲ್ಲ. ಸಂವಿಧಾನ ರಕ್ಷಣೆ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡುವ ನಿರ್ಣಾಯಕ ಹೆಜ್ಜೆಯಾಗಿದೆ. ಅಭಿಯಾನವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲೆಯ…

Read More

ಶ್ರೀಮತಿ ಸುಮನ್ ಆರ್. ವಾಲ್ಕೆ ಅವರ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಕೆನರಾ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನ .

ಕೆನರಾ ಶಿಕ್ಷಣ ಸಂಸ್ಥೆಯ ಹಳೆಯ ವಿದ್ಯಾರ್ಥಿನಿ ಮತ್ತು ಇಸ್ರೋ ವಿಜ್ಞಾನಿಯಾದ ಶ್ರೀಮತಿ ಸುಮನ್ ಆರ್. ವಾಲ್ಕೆ ಅವರ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಕೆನರಾ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು ಕೆನರಾದ ಹೆಮ್ಮಯ ಹಳೆಯ ವಿದ್ಯಾರ್ಥಿ ಹಾಗೂ ಪ್ರಸ್ತುತ ಮಂಗಳೂರು ದಕ್ಷಿಣದ ಶಾಸಕರಾದ ಶ್ರೀ ಡಿ. ವೇದವ್ಯಾಸ ಕಾಮತ್ ಅವರು ಈ ಸನ್ಮಾನವನ್ನು ನಡೆಸಿದ್ದು ಶ್ರೀಮತಿ ವಾಲ್ಕೆಯವರನ್ನು ಮರಳಿ ಈ ಸಂಸ್ಥೆಯಡಿ ಸನ್ಮಾನಿಸಲು ಹೆಮ್ಮೆಯಾಗುತ್ತದೆ ಎಂದರು. ಇದೇ ವೇಳೆ ಕೆನರಾ ಹೈಸ್ಕೂಲ್ ಅಸೋಸಿಯೇಷನ್…

Read More
error: Content is protected !!