ಬಿಎಂಎಸ್ ವರ್ಕಾಡಿ ಪಂಚಾಯತ್ ಸಮ್ಮೇಳನ: ನೂತನ ಪದಾಧಿಕಾರಿಗಳ ಆಯ್ಕೆ
ಸುಂಕದಕಟ್ಟೆ, ಜೂನ್ 8: ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ವರ್ಕಾಡಿ ಪಂಚಾಯತ್ ಸಮ್ಮೇಳನವು ಸುಂಕದಕಟ್ಟೆಯ ಬಿಜೆಪಿ ಕಾರ್ಯಾಲಯದಲ್ಲಿ ಯಶಸ್ವಿಯಾಗಿ ನಡೆಯಿತು. ಸಮಿತಿ ಅಧ್ಯಕ್ಷೆ ವನಿತಾ ಜೆ. ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮ್ಮೇಳನವನ್ನು ಬಿಎಂಎಸ್ ಜಿಲ್ಲಾ ಜಂಟಿ ಕಾರ್ಯದರ್ಶಿ ದಿನೇಶ್ ಬಂಬ್ರಾಣ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಜಂಟಿ ಕಾರ್ಯದರ್ಶಿ ಯಶವಂತಿ ಬೆಜ್ಜ, ಪಂಚಾಯತ್ ಸದಸ್ಯರಾದ ಚಂದ್ರಶೇಖರ ವರ್ಕಾಡಿ, ತುಳಸಿ ವರ್ಕಾಡಿ ಹಾಗೂ ರವಿ ಎಂ.ಕೆ. ಕೊಲ್ಯೂರು ಶುಭಾಶಯಗಳನ್ನು ತಿಳಿಸಿ ಮಾತನಾಡಿದರು. ಸಮ್ಮೇಳನದ ಸಮಾರೋಪ ಭಾಷಣವನ್ನು ಬಿಎಂಎಸ್ ಜಿಲ್ಲಾ…
