ರಾಜ್ಯದಲ್ಲಿ ಜಾತಿ ಗಣತಿ‌ ನಡೆಸುವ ವಿಚಾರವಾಗಿ ಹಲವಾರು ಗೊಂದಲಗಳಿದ್ದು ಅದನ್ನು ಪರಿಹರಿಸಿದ ಬಳಿಕ ಜಾತಿ ಗಣತಿ ಮಾಡಿದರೆ ಒಳಿತು – ಸತೀಶ್ ಕುಂಪಲ

ಮಂಗಳೂರು:ರಾಜ್ಯದಲ್ಲಿ ಜಾತಿ ಗಣತಿ‌ ನಡೆಸುವ ವಿಚಾರವಾಗಿ ಹಲವಾರು ಗೊಂದಲಗಳಿದ್ದು ಅದನ್ನು ಪರಿಹರಿಸಿದ ಬಳಿಕ ಜಾತಿ ಗಣತಿ ಮಾಡಿದರೆ ಒಳಿತೆಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು . ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ಈಗಾಗಲೇ ಮನೆಗಳಲ್ಲಿ ಜಾತಿ ಗಣತಿಯ ಅಂಗವಾಗಿ ಸ್ಟಿಕ್ಕರ್ ಅಂಟಿಸಲಾಗುತ್ತಿದೆ . ಆದರೆ ಜನರಿಗೆ ಈ ಬಗ್ಗೆ ಹಲವು ಗೊಂದಲಗಳಿವೆ . ಜನಜಾಗೃತಿ ಮೂಡಿಸಿದ ನಂತರ ಈ ಸಮೀಕ್ಷೆಯನ್ನು ಕೈಗೊಂಡರೆ ಒಳ್ಳೆಯದಿತ್ತು . ಜಿಲ್ಲಾ ಪಂಚಾಯತ್ ನಲ್ಲಿ ಈ…

Read More

ಮುಡಿಪು ಎಜು ಪಾರ್ಕ್‌ನಲ್ಲಿ ‘ಫರ್ಹೇ ಮೀಲಾದ್ ’ಸಂಭ್ರಮ ಸಮಾವೇಶ

ಸಂಭ್ರಮ ಪ್ರವಾದಿ ಪೈಗಂಬರರ 1,500ನೇ ಜನ್ಮ ಮಾಸಾಚರಣೆಯ ಅಂಗವಾಗಿ ಮಜ್ಲಿಸ್ ಎಜುಕೇಶನ್ ಆ ಂಡ್ ಚಾರಿಟೇಬಲ್ ಟ್ರಸ್ಟ್ ಮುಡಿಪು ಸಂಸ್ಥೆಯ ವತಿಯಿಂದ ‘ಫರ್ಹೇ ಮೀಲಾದ್ ’ಸಂಭ್ರಮ ಸಮಾವೇಶವು ಸೆಪ್ಟೆಂಬರ್ 19 ಶುಕ್ರವಾರ ಮುಡಿಪುವಿನ ಮಜ್ಲಿಸ್ ಎಜು ಪಾರ್ಕ್‌ನಲ್ಲಿ ನಡೆಯಲಿದೆ. ಜನಸೇವೆಯೇ ಅತ್ಯಂತ ಶ್ರೇಷ್ಠ ಸತ್ಕರ್ಮ ಎಂಬ ಪ್ರವಾದಿಗಳ ಸಂದೇಶವನ್ನು ಅಳವಡಿಸಿಕೊಂಡು ಪ್ರಸ್ತುತ ಸಮಾವೇಶದ ಅಂಗವಾಗಿ ವಿವಿಧ ಜನಸೇವಾ ಕಾರ್ಯಕ್ರಮಗಳ್ನು ಹಮ್ಮಿಕೊಳ್ಳಲಾಗಿದೆ. ವಿಶೇಷವಾಗಿ ಕೈ ಮತ್ತು ಕಾಲುಗಳನ್ನು ಕಳೆದುಕೊಂಡಿರುವ ಅಂಗವಿಕಲರ ಜೀವನದಲ್ಲಿ ಹೊಸ ಭರವಸೆ ಮೂಡಿಸುವ ಉದ್ದೇಶದಿಂದ ಕೃತಕ…

Read More

ವಿಶ್ವ ಹೃದಯ ದಿನದ ಅಂಗವಾಗಿ ಕೆಎಂಸಿ ಆಸ್ಪತ್ರೆ ವತಿಯಿಂದ ‘ವಿಶ್ವ ಹೃದಯ ದಿನದ ವಾಕಥಾನ್’ ಸೆ. 21ಕ್ಕೆ

ಮಂಗಳೂರು: ಮಂಗಳೂರಿನ ಕೆಎಂಸಿ ಆಸ್ಪತ್ರೆಯು ವಿಶ್ವ ಹೃದಯ ದಿನದ ಅಂಗವಾಗಿ ಸೆ.21ರಂದು ‘ವಿಶ್ವ ಹೃದಯ ದಿನದ ವಾಕಥಾನ್-2025’ (“World Heart Day Walkathon 2025”) ಅನ್ನು ಆಯೋಜಿಸುವುದಾಗಿ ಆಸ್ಪತ್ರೆಯ ಡೀನ್ ಡಾ.ಉಣ್ಣಿಕೃಷ್ಣನ್ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಈ ಕುರಿತು ಮಾಹಿತಿ ನೀಡಿದ ಕೆಎಂಸಿ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ನರಸಿಂಹ ಪೈ ಅವರು, ‘ಒಂದು ಬೀಟ್ ಕೂಡ ತಪ್ಪಿಸಿಕೊಳ್ಳಬೇಡಿ’ ಎನ್ನುವುದು ಈ ವರ್ಷದ ವಿಶ್ವ ಹೃದಯ ದಿನದ ಥೀಮ್ ಆಗಿದೆ. ಹೃದಯ ಕಾಯಿಲೆಗಳ ಪ್ರಮಾಣವು, ವಿಶೇಷವಾಗಿ ಯುವಕರಲ್ಲಿ ಹೆಚ್ಚುತ್ತಿರುವುದು…

Read More

ಕೇರಳ ಸರಕಾರದ ಜನ ವಿರೋಧಿ,ಕಾರ್ಮಿಕ ವಿರೋಧಿ ನೀತಿಗೆದುರಾಗಿ ಕಾಲ್ನಡೆ ಜಾಥಾ.

ಕೇರಳ ಸರಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗೆದುರಾಗಿ ಕೇರಳ ರಾಜ್ಯಾದ್ಯಂತ ನಡೆಯುವ ಕಾಲ್ನಡೆ ಜಾಥ ಅಂಗವಾಗಿ ಮಂಜೇಶ್ವರ ಪಂಚಾಯತ್ ವತಿಯಿಂದ ನಡೆದ ಕಾಲ್ನಡೆ ಜಾಥ ವನ್ನು BMS ಜಿಲ್ಲಾ ಅಧ್ಯಕ್ಷರಾದ ಉಪೇಂದ್ರನ್ ಕೋಟೆಕಣಿ ಉದ್ಘಾಟನೆ ಗೆಯ್ದರು. ಜಾಥಾ ಕ್ಯಾಪ್ಟನ್ ಪ್ರಕಾಶ್ ಕೆ. ಪಿ ರವರ ನೇತ್ತ್ವದಲ್ಲಿ ನಡೆದ ಕಾಲ್ನಡೆ ಜಾಥಾದಲ್ಲಿ ಜಿಲ್ಲಾ ಜೊತೆ ಕಾರ್ಯದರ್ಶಿ ದಿನೇಶ್ ಬಂಬ್ರಾಣ. ಯಶವಂತಿ ಬೆಜ್ಜ ,ವಲಯ ಅಧ್ಯಕ್ಷ ರವಿ ಎಂ ಕೆ ಕೊಲ್ಯೂರು,ರವಿ ಮಜಲ್, ಕಿಶೂರ್ ಶೆಟ್ಟಿ ಕುಂಜತ್ತೂರು, ಶ್ರೀಧರ…

Read More

ಜಿ.ವಿ.ಎಚ್.ಎಸ್.ಎಸ್ ಕುಂಜತ್ತೂರು ಶಾಲೆಗೆ ಡೆಸ್ಕ್ ಟಾಪ್ , ಪ್ರಿಂಟರ್ ನೀಡಿದ 24ನ್ಯೂಸ್ ಹಾಗೂ ಕೆ ಚಿಟ್ಟಿಲಪ್ಪಿಲ್ಲಿ ಸಂಸ್ಥೆ.

ಮಂಜೇಶ್ವರ : ಜಿ.ವಿ.ಎಚ್.ಎಸ್.ಎಸ್ ಕುಂಜತ್ತೂರು ಶಾಲೆಯಲ್ಲಿ 24ನ್ಯೂಸ್ ಹಾಗೂ ಕೆ ಚಿಟ್ಟಿಲಪ್ಪಿಲ್ಲಿ ಸಂಸ್ಥೆಯವರು ಶಾಲೆಗೆ ದೇಣಿಗೆಯಾಗಿ ನೀಡಿದ 8 ಡೆಸ್ಕ್ ಟಾಪ್ ಹಾಗೂ ಒಂದು ಪ್ರಿಂಟರ್ ಗಳ ಉದ್ಘಾಟನಾ ಸಮಾರಂಭ ಜರುಗಿತು. ಕಾಸರಗೋಡು ಜಿಲ್ಲಾ ಕ್ರೈಂ ಬ್ರಾಂಚ್ ಡಿ. ವೈ. ಎಸ್. ಪಿ. ಶ್ರೀ ಟಿ. ಉತ್ತಮ್ ದಾಸ್ ಇವರು ಕಂಪ್ಯೂಟರ್‌ಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿದರು. ಕುಂಜತ್ತೂರು ಶಾಲೆಯ ಪ್ರಾಂಶುಪಾಲರಾದ ಶ್ರೀ ಶಿಶು ಪಾಲನ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಂತರ ವಿದ್ಯಾರ್ಥಿಗಳಿಂದ ಲಹರಿ ವಿರುದ್ಧ ಪ್ರತಿಜ್ಞೆ ಕೈಗೊಳ್ಳಲಾಯಿತು. ಈ…

Read More

ಬಾಯಾರು: ಶಾಲಾ ಬಸ್ಸು ಸ್ಕೂಟರ್ ಡಿಕ್ಕಿ .ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ.

ಮಂಜೇಶ್ವರ : ಬಾಯಾರು ಪೆಟ್ರೋಲ್ ಬಂಕ್ ಮುಂಬಾಗದಲ್ಲಿ ಇಂದು ಬೆಳಿಗ್ಗೆ ಶಾಲಾ ಬಸ್ಸೊಂದು ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಒಂದು ವಿದ್ಯಾರ್ಥಿ ಸ್ಥಿತಿ ಚಿಂತಾಜನಕವೆಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಬಾಯಾರು ಪೊನ್ನಂಗಳ ಮುಜಮ್ಮ ಸಶಾಫತ್ ಸುನ್ನಿ ಶಾಲಾ ಬಸ್ಸು ಸ್ಕೂಟರಿಗೆ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಪೈವಳಿಕೆ ಅಕಾಡೆಮಿಕ್ ಶಾಲೆಯ ಪ್ಲಸ್ 2 ವಿದ್ಯಾರ್ಥಿಗಳಾದ ಸಾದಿಖ್ ಹಾಗೂ ಮೊಯಿನುದ್ದೀನ್ ಅಪಘಾತದಿಂದ ಗಾಯಗೊಂಡಿದ್ದಾರೆ.

Read More

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಮಂಜೇಶ್ವರ ಉಪ ಜಿಲ್ಲಾ ಸಮಿತಿಯ ರೂಪೀಕರಣ.

ಮೀಯಪದವು:ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಮಂಜೇಶ್ವರ ಉಪ ಜಿಲ್ಲಾ ಸಮ್ಮೇಳನ ಹಾಗೂ ಮಹಾಸಭೆ ವಿದ್ಯಾವರ್ಧಕ ಪ್ರೌಢ ಶಾಲೆ ಮೀಯಪದವು ಶಾಲೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ 2025-26ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರುಅಶೋಕ್ ಕೊಡ್ಲಮೊಗರು ಉಪಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಡಾಜೆ ಇಲ್ಲಿಯ ಶಿಕ್ಷಕರಾದ ಶ್ರೀ ಅಶೋಕ್ ಕುಮಾರ್ ಕೊಡ್ಲಮೊಗರು, ಉಪಾಧ್ಯಕ್ಷರುಗಳಾಗಿ ಶ್ರೀ ಶಿವರಾಮ ಭಟ್ ಮುಖ್ಯ ಶಿಕ್ಷಕರು ಸರಕಾರಿ ಶಾಲೆ ಕಾಯರ್ ಕಟ್ಟೆ , ಶ್ರೀ…

Read More

ಬುರುಡೆ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾ.

ಬುರುಡೆ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾಗೊಂಡಿದೆ.ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತುಹಾಕಿರುವುದಾಗಿ ಹೇಳಿ ಬುರುಡೆ ಜೊತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ ಬಳಿಕ ಹಲವಾರು ಬೆಳವಣಿಗಳು ನಡೆದಿದ್ದವು. ಬೆಳ್ತಂಗಡಿ ಎಸ್‌‌‌ಐಟಿ ಅಧಿಕಾರಿಗಳು ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.23ರಂದು ಚಿನ್ನಯ್ಯನನ್ನು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ, 12 ದಿನಗಳ ಕಾಲ ಕಸ್ಟಡಿಗೆ ಪಡೆದ ತನಿಖೆ ನಡೆಸಿ ಸೆ.3 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿ ಚಿನ್ನಯ್ಯನನ್ನು ಮತ್ತೆ…

Read More

ದ.ಕ-ಉಡುಪಿ ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರಕಾರದಿಂದ “ಮಾಸ್ಟರ್ ಪ್ಲಾನ್”!ಶಾಸಕ ಮಂಜುನಾಥ ಭಂಡಾರಿ ಮನವಿಗೆ ಸಚಿವರ ಸ್ಪಂದನೆ.

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಮಂಜುನಾಥ ಭಂಡಾರಿಯವರು ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು, ಜಲಪಾತಗಳು, ಕಡಲ ತೀರಗಳು ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಈ ಪ್ರದೇಶವನ್ನು“ಟೂರಿಸಂ ಹಬ್” ಆಗಿ ರೂಪಿಸಲು ಮಾಸ್ಟರ್ ಪ್ಲಾನ್ ತಯಾರಿಸುವ ಕುರಿತಂತೆ ಸರ್ಕಾರದ ಗಮನಕ್ಕೆ ತಂದಿದ್ದು ಸರ್ಕಾರವು ಈ ಕುರಿತು ನೀಡಿರುವ ಭರವಸೆಯ ಹಿನ್ನೆಲೆಯಲ್ಲಿ ಇಂದು ನಡೆದ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು. ಈ ಕುರಿತು…

Read More

ಸಾಮ್ರಾಜ್ಯಶಾಹಿ ವಿರುದ್ಧ ಪ್ರತಿಭಟನೆ: ಇಸ್ರೇಯಿಲ್ ನರಮೇಧ ವಿರೋಧಿಸಿ ಸಿಪಿಐಎಂ ನೇತೃತ್ವದಲ್ಲಿ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ.

ಮಂಜೇಶ್ವರ: ಇಸ್ರೇಯಿಲ್ ನಡೆಸುತ್ತಿರುವ ನರಮೇಧವನ್ನು ತೀವ್ರವಾಗಿ ಖಂಡಿಸಿ ಹಾಗೂ ಅದರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ, ಕುಂಜತೂರಿನಲ್ಲಿ ಸಿಪಿಐಎಂ ನೇತೃತ್ವದಲ್ಲಿ ಸಾಮ್ರಾಜ್ಯಶಾಹಿ ವಿರುದ್ಧ ಬೃಹತ್ ಪ್ರತಿಭಟನೆ, ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು. ಸಿಪಿಐಎಂ ಮಂಜೇಶ್ವರ ಏರಿಯಾ ಸದಸ್ಯ ಕೆ. ಕಮಲಾಕ್ಷ ಸಭೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು “ಇಸ್ರೇಯಿಲ್ ನಡೆಸುತ್ತಿರುವ ದಾಳಿಗಳು ಮನುಷ್ಯತ್ವದ ವಿರುದ್ಧದ ಕ್ರೂರ ದಾಳಿಗಳಾಗಿವೆ. ಗಾಜಾ ಮತ್ತು ಪ್ಯಾಲಸ್ತೀನಾ ಜನರ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನು ತಕ್ಷಣ ನಿಲ್ಲಿಸಬೇಕು. ಭಾರತ ಸೇರಿದಂತೆ ಎಲ್ಲ…

Read More
error: Content is protected !!