ಕಾಸರಗೋಡು ಗಡಿನಾಡ ಕನ್ನಡಿಗರ ಸಮಸ್ಯೆ ಪರಿಹಾರಕ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕೇರಳ ಸಿಎಂ ಭೇಟಿ….!

ಕಾಸರಗೋಡು:ಕೇರಳ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಪಿಣರಾಯಿ ವಿಜಯನ್ ರನ್ನು ಇಂದು ಭೇಟಿ ಮಾಡಿ ಕಾಸರಗೋಡು ಕನ್ನಡಿಗರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಮನವಿ ಸಲ್ಲಿಸಲಾಯಿತು. ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ, ಶ್ರೀ ಪ್ರಕಾಶ ಮತ್ತೀಹಳ್ಳಿ, ಕಾಸರಗೋಡು ಶಾಸಕರಾದ ಶ್ರೀ ಎನ್.ಎ. ನೆಲ್ಲಿಕುನ್ನು, ಮಂಜೇಶ್ವರ ಶಾಸಕರಾದ ಶ್ರೀ ಎ.ಕೆ.ಎಂ. ಅಶ್ರಫ್, ಶ್ರೀ ಎ.ಆರ್. ಸುಬ್ಬಯ್ಯ ಕಟ್ಟೆ, ಸದಸ್ಯರು, ಗಡಿ ಪ್ರಾಧಿಕಾರ ಹಾಗೂ ಇತರೆ ಕನ್ನಡಿಗರು ಜೊತೆಗಿದ್ದರು ಹಾಗೂ ಬದಿಯಡ್ಕದ ಕಯ್ಯಾರ ಕಿಞ್ಞಣ್ಣ ರೈ ಕನ್ನಡ…

Read More

“ಕರಾವಳಿ ಕರ್ನಾಟಕದ ಅನೇಕ ಉದ್ಯಮಿಗಳು ಹಾಗೂ ಸ್ಮಾರ್ಟ್ ಅಪ್‌ಗಳು ವಿವಿಧ ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸಿ ಅಳಿಸಲಾಗದ ಕೊಡುಗೆಯನ್ನು ನೀಡಿದ್ದಾರೆ-ಸಿಎ ಎಸ್.ಎಸ್. ನಾಯಕ್

ಮಂಗಳೂರು:ಉದ್ಯಮೇನ ಹಿ ಕ್ರಾಂತಿ- ಉದ್ಯಮದಿಂದಲೇ ಕ್ರಾಂತಿ ಎಂಬ ಧೈಯವಾಕ್ಯದೊಂದಿಗೆ ಮಂಗಳೂರು ಪ್ರೊಡಕ್ಕಿವಿಟಿ ಕೌನ್ಸಿಲ್ ಹಾಗೂ ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ಇವರ ಸಂಯುಕ್ತ ಆಶಯದಲ್ಲಿ ಕರಾವಳಿ ಎಂಎಸ್‌ಎಂಇ ಹಾಗೂ ಸ್ಮಾರ್ಟ್‌ ಅಪ್ ಕಾನ್‌ವ್ – 2025 ಅನ್ನು ಸೆಪ್ಟೆಂಬರ್ 20 ರಂದು ಶನಿವಾರ ಮಂಗಳೂರಿನ ರೆಡ್ ಕ್ರಾಸ್ ಪೇರಣಾ ಸಭಾಭವನದಲ್ಲಿ ಆಯೋಜಿಸಲಾಗುತ್ತಿದೆ. ಮಂಗಳವಾರ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾನ್‌ ಕೇವ್ ನಿರ್ದೇಶಕ ಸಿಎ ಎಸ್.ಎಸ್. ನಾಯಕ್ ಮಾತನಾಡಿ, “ಕರಾವಳಿ ಕರ್ನಾಟಕದ ಅನೇಕ ಉದ್ಯಮಿಗಳು ಹಾಗೂ ಸ್ಮಾರ್ಟ್…

Read More

ದ. ಕ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಯನ್ನು‌ ನಿವಾರಿಸಲು ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯವಾಗಿದೆ. ಬಿಜೆಪಿ ಪಕ್ಷದ ನೇತೃತ್ವದಲ್ಲಿ ಪ್ರತಿಭಟನಾ ಧರಣಿ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಯನ್ನು‌ ನಿವಾರಿಸಲು ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯವಾಗಿದೆ ಎಂದು ಆರೋಪಿಸಿ ಬಿಜೆಪಿ ಪಕ್ಷದ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ಮಂಗಳೂರು ಮಿನಿ ವಿಧಾನ ಸೌಧದ ಎದುರು ಇಂದು ನಡೆಯಿತು‌. ಈ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಜಿಲ್ಲೆಯ ಬಿಜೆಪಿ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು. ಇದೇ ವೇಳೆ ‘ಬಾವಾ ಬಂದರೋ’ ಹಾಡಿನ ಶೈಲಿಯಲ್ಲಿ ‘ಗುಂಡೂರಾವ್ ಓಡಿ ಹೋದರು’ ಎಂಬ ಹಾಸ್ಯಸ್ಯದ ಶೈಲಿಯಲ್ಲಿ ಹಾಡನ್ನು…

Read More

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ 2024-25 ರಲ್ಲಿ 1174 ಕೋಟಿ ರೂ. ವ್ಯವಹಾರ ವಹಿವಾಟು ನಡೆಸಿ 12.79 ಕೋಟಿ ರೂ. ನಿವ್ವಳ ಲಾಭವನ್ನು ದಾಖಲಿಸಿದೆ – ರವಿರಾಜ್ ಹೆಗ್ಡೆ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟವು 2024-25ರಲ್ಲಿ 1174 ಕೋಟಿ ರೂ. ವ್ಯವಹಾರ ವಹಿವಾಟು ನಡೆಸಿ 12.79 ಕೋಟಿ ರೂ. ನಿವ್ವಳ ಲಾಭವನ್ನು ದಾಖಲಿಸಿದೆ ಎಂದು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ತಿಳಿಸಿದ್ದಾರೆ. ಸೋಮವಾರ ಒಕ್ಕೂಟದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 751 ಹಾಲು ಸಂಘಗಳು ಪ್ರಸ್ತುತ ಪ್ರತಿದಿನ 3.97 ಲಕ್ಷ ಲೀಟರ್ ಹಾಲು ಸಂಗ್ರಹಿಸುತ್ತಿವೆ ಎಂದು ಹೇಳಿದರು. “2024-25ರಲ್ಲಿ, ಸಂಗ್ರಹವು ದಿನಕ್ಕೆ 3.42 ಲಕ್ಷ ಲೀಟರ್…

Read More

ಬನ್ನಂಜೆ ಗೋವಿಂದಾಚಾರ್ಯರ ಜನ್ಮದ 90ನೇ ವರ್ಷದ ಅಂಗವಾಗಿ ‘ವಿಶ್ವ ಬನ್ನಂಜೆ 90ರ ನಮನ’ ಕಾರ್ಯಕ್ರಮ ಸೆಪ್ಟೆಂಬರ್ 21ರಂದು

ಮಂಗಳೂರು:ಬನ್ನಂಜೆ ಗೋವಿಂದಾಚಾರ್ಯರ ಜನ್ಮದ 90ನೇ ವರ್ಷದ ಅಂಗವಾಗಿ ‘ವಿಶ್ವ ಬನ್ನಂಜೆ 90ರ ನಮನ’ ಕಾರ್ಯಕ್ರಮವನ್ನು ಸೆಪ್ಟೆಂಬರ್ 21ರಂದು ಮಂಗಳೂರಿನ ಶ್ರೀರಾಮಕೃಷ್ಣ ಮಠದ ಆವರಣದಲ್ಲಿ ಪೂರ್ಣ ದಿನದ ಕಾರ್ಯಕ್ರಮದೊಂದಿಗೆ ನಡೆಸಲಾಗುವುದು ಎಂದು ತುಳುನಾಡು ಶಿಕ್ಷಣ ಸಂಸ್ಥೆ ಹಾಗೂ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್ ತಿಳಿಸಿದ್ದಾರೆ. ನಗರದ ಪತ್ರಿಕಾಭನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಬನ್ನಂಜೆಯವರು ಬದುಕಿದ್ದರೆ ಈಗ 90 ವರ್ಷ ಪೂರೈಸುತ್ತಿದ್ದರು. ಆ ನೆನಪಿಗಾಗಿ ಕರ್ನಾಟಕ ಮಾತ್ರವಲ್ಲದೆ ಹೃಷಿಕೇಶ ಮತ್ತು ಅಮೆರಿಕ ಸೇರಿದಂತೆ…

Read More

ಶ್ರೀ ಮಂಜುನಾಥನ ಹೆಸರಿನಲ್ಲಿ ನಡೆಯುತ್ತಿದೆಯಾ ಅವ್ಯವಹಾರ …… !

ಮಂಗಳೂರು: ಸತ್ಯಮೇವ ಜಯತೇ ಸಂಘಟನೆಗಳ ಒಕ್ಕೂಟ-ಕರ್ನಾಟಕ ಮತ್ತು ನಾಗರಿಕ ಸೇವಾ ಟ್ರಸ್ಟ್ ನ ವತಿಯಿಂದ ಚಿಂತಕರು, ಸಾಹಿತಿಗಳಾದ ಲಕ್ಷ್ಮೀಶ ತೋಳ್ವಾಡಿ ನೇತ್ರಿತ್ವದಲ್ಲಿ ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯು ನಡೆಯಿತು . ಈ ಕುರಿತು ಮಾತನಾಡಿದ ಅವರು , ಧರ್ಮಸ್ಥಳದ ಶ್ರೀ ವೀರೇಂದ್ರ ಹೆಗ್ಗಡೆಯವರ ಕುಟುಂಬ ಮತ್ತು ಹೆಗ್ಗಡೆಯವರು ಅಧ್ಯಕ್ಷರೂ ಫಲಾನುಭವಿಗಳೂ ಆಗಿರುವ ಅವರ ಸಂಸ್ಥೆಗಳು ದಶಕಗಳಿಂದ ಅವ್ಯಾಹತವಾಗಿ ನಡೆಸಿಕೊಂಡು ಬಂದಿರುವ ಮತ್ತು ನಡೆಸಿಕೊಂಡು ಬರುತ್ತಿರುವ ರಾಶಿ ರಾಶಿ ಅಪರಾಧಗಳ ಕುರಿತು ಸರ್ವಾಂಗೀಣವಾದ ತನಿಖೆಯೊಂದು ನಡೆಯಲೇಬೇಕಾದ ತುರ್ತು ಅಗತ್ಯವಿದೆ. ಮುಖ್ಯಮಂತ್ರಿಗಳು…

Read More

‘ಬದ್ರಿಯಾ ಅಲುಮಿನಿ ಅಸೋಸಿಯೇಷನ್ ‘ ಬದ್ರಿಯಾ ಹಳೆ ವಿದ್ಯಾರ್ಥಿಗಳ ಸಮಾವೇಶ ಸೆಪ್ಟೆಂಬರ್19 ರಂದು

ಮಂಗಳೂರಿನ ಪ್ರತಿಷ್ಠಿತ ಬದ್ರಿಯಾ ವಿದ್ಯಾಸಂಸ್ಥೆ 1928ರಲ್ಲಿ ಸ್ಥಾಪನೆಗೊಂಡು 2028ರಲ್ಲಿ ಸಂಸ್ಥೆಯು ಶತಮಾನೋತ್ಸವ ಆಚರಿಸಲಿದೆ . ಇದರ ಪೂರ್ವ ತಯಾರಿಯ ಭಾಗವಾಗಿ ಬದ್ರಿಯಾ ವಿದ್ಯಾಸಂಸ್ಥೆಯ ಹಳೆ ವಿದ್ಯಾರ್ಥಿ ಸಂಘ ‘ಬದ್ರಿಯಾ ಅಲುಮಿನಿ ಅಸೋಸಿಯೇಷನ್ ‘ ನನ್ನು ರೂಪಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್19 ರಂದು ಬದ್ರಿಯಾ ಹಳೆ ವಿದ್ಯಾರ್ಥಿಗಳ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮುಹಮ್ಮದ್ ಕುಂಞ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು , ಬದ್ರಿಯಾ ಹಳೆ ವಿದ್ಯಾರ್ಥಿಗಳ ಸಮಾವೇಶವು ಸಂಜೆ 4:00ರಿಂದ 6:00 ಗಂಟೆ ತನಕ…

Read More

ಕಾಸರಗೋಡು,ಬಂದಡ್ಕ :ಬಾಲಸಂಘದ ವಿಲೇಜ್ ಘಟಕ ಅಧ್ಯಕ್ಷೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿನಿ ದೇವಕಿ (16 )ನೇಣುಬಿಗಿದು ಆತ್ಮಹತ್ಯೆಗೆ ಶರಣು

ಕಾಸರಗೋಡು : ಬಂದಡ್ಕದಲ್ಲಿ 10ನೇ ತರಗತಿ ಶಾಲಾ ವಿದ್ಯಾರ್ಥಿನಿ ಮಲಗುವ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ನಡೆಸಿರುವ ಘಟನೆ ನಡೆದಿದೆ. ಕುಂಡಾಂಗುಳಿ ಸರಕಾರಿ ಹಯರ್ ಸೆಕಂಡರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ದೇವಕಿ (16)ಆತ್ಮಹತ್ಯೆ ನಡೆಸಸಿದೆ. ಮಂಗಳವಾರ ಬೆಳಿಗ್ಗೆ ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಸ್ಥಿತಿಯಲ್ಲಿ ಈಕೆಯ ಮೃತದೇಹ ಪತ್ತೆಯಾಯಿತು. ಮೃತ ವಿದ್ಯಾರ್ಥಿನಿ ಬಂದಡ್ಕ ಗ್ರಾಮೀಣ ಬೇಂಕಿನ ಬಳಿಯಲ್ಲಿ ಗಂಜಿ ಕ್ಯಾಂಟೀನ್ ನಡೆಸುವ ಮಹಿಳೆ ಸಾವಿತ್ರಿ ಎಂಬವರ ಮಗಳಾಗಿದ್ದು, ಆತ್ಮಹತ್ಯೇಗೆ ಕಾರಣ ಏನೆಂದು ತಿಳಿದು…

Read More

ಕರಾವಳಿ ಕೆಂಪುಕಲ್ಲು ಸಮಸ್ಯೆಗೆ ಶಾಶ್ವತ ಪರಿಹಾರ ; ಸ್ಪೀಕ‌ರ್ ಯು.ಟಿ. ಖಾದರ್

ಮಂಗಳೂರು:ಇತ್ತೀಚಿಗೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಕೆಂಪು ಕಲ್ಲಿನ ಸಮಸ್ಯೆಗಳೆಲ್ಲವನ್ನೂ ಬಗೆಹರಿಸಲಾಗಿದೆ. ಇನ್ನು ಮುಂದೆ ಕೆಂಪು ಕಲ್ಲಿನ ದರ ಹಿಂದಿನ ದರಕ್ಕಿಂತ ಅಧಿಕವಾಗಲು ಸಾಧ್ಯವಿಲ್ಲ. ಸರ್ಕಾರಕ್ಕೆ ಸಲ್ಲಿಸಬೇಕಾದ ರಾಜಧನವನ್ನು ಕಡಿಮೆಗೊಳಿಸಲಾಗಿದ್ದು ಹಿಂದೆ ಇದ್ದ ನಿಯಮಗಳನ್ನು ಸರಳೀಕರಣಗೊಳಿಸಲಾಗಿದೆ. ಇನ್ನು ಮುಂದೆ ವ್ಯಾಪಾರಸ್ಥರು ಕೆಂಪು ಕಲ್ಲು ವ್ಯಾಪಾರವನ್ನು ಧೈರ್ಯದಿಂದ ಮಾಡಬಹುದು ಎಂದು ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಫರೀದ್ ತಿಳಿಸಿದರು . ಅವರು ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೊನ್ನೆಯ ಕ್ಯಾಬಿನೆಟ್‌ನಲ್ಲಿ ಅಧಿಕಾರಿಗಳು, ಶಾಸಕರು, ಕೆಂಪು ಕಲ್ಲಿನ…

Read More

ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲುಗಳ ಸಂಚಾರ ಆರಂಭ

ಅನೇಕ ದಿನಗಳ ಕನಸಾಗಿರುವ ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲುಗಳ ಸಂಚಾರ ಆರಂಭಗೊಂಡಿದೆ. ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ರೈಲು ಆರಂಭಗೊಳ್ಳುವುದರೊಂದಿಗೆ ಈ ಭಾಗದ ಪ್ರಯಾಣಿಕರ ಬಹುಕಾಲದ ಕನಸು ನನಸಾಗಿದೆ. ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ರೈಲು ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ ಯೋಜನೆ ಪೂರ್ಣಗೊಂಡು ಇದೀಗ ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ನಡುವೆ ವಿದ್ಯುತ್‌ಚಾಲಿತ ರೈಲುಗಳ ಓಡಾಟ ಆರಂಭಗೊಂಡಿದೆ. ಸೆ.11 ರಂದು ವಿದ್ಯುತ್‌ ಚಾಲಿತ ರೈಲು ಇಂಜಿನ್‌ನ…

Read More
error: Content is protected !!