ಶಿರ್ವದಲ್ಲಿ ಜಾನುವಾರು ವಧೆ ಪ್ರಕರಣ ಭೇದಿಸಿದ ಪೊಲೀಸರು; ಆರೋಪಿ ಬಂಧನ

ಉಡುಪಿ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಗಿನ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳನ್ನು ಎಸೆದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಜೂನ್ 1ರಂದು ಹೊಳೆಯಲ್ಲಿ ಜಾನುವಾರದ ಅವಶೇಷಗಳು ಪತ್ತೆಯಾದ ಹಿನ್ನೆಲೆಯಲ್ಲಿ ಶಿರ್ವ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ಮರಬದ ಅವರು ಕಾಪು ಪಶುವೈದ್ಯಕೀಯ ಆಸ್ಪತ್ರೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಅಪರಾಧ ಪರಿಶೀಲನಾ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಿದ್ದರು. ಈ ವೇಳೆ ಜಾನುವಾರದ ಮೇಲ್ದವಡೆಯ ಭಾಗ, ಎರಡು ಗೆರಸುಗಳು, ಮಾಂಸ…

Read More

ಮಂಗಳೂರಿನಲ್ಲಿ ‘ಉದ್ಗಮ್-2026’ ರಾಷ್ಟ್ರೀಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

ಮಂಗಳೂರು, ಜೂನ್ 5: ದಕ್ಷಿಣ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ವಿದ್ಯಾರ್ಥಿಗಳ ಸಂಘ (SICASA) ಆಯೋಜಿಸಿರುವ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ‘ಉದ್ಗಮ್-2026’ ಗುರುವಾರ ನಗರದ ಟೌನ್ ಹಾಲ್‌ನಲ್ಲಿ ಅದ್ದೂರಿಯಾಗಿ ಆರಂಭಗೊಂಡಿತು. ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಚಾರ್ಟರ್ಡ್ ಅಕೌಂಟೆನ್ಸಿ ವಿದ್ಯಾರ್ಥಿಗಳು, ವೃತ್ತಿಪರರು ಹಾಗೂ ತಜ್ಞರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿದ ಈ ಸಮ್ಮೇಳನ ಜ್ಞಾನ ವಿನಿಮಯ, ವೃತ್ತಿಪರ ಮಾರ್ಗದರ್ಶನ ಮತ್ತು ನೆಟ್‌ವರ್ಕಿಂಗ್‌ಗೆ ಅವಕಾಶ ಕಲ್ಪಿಸಿತು. ಸೆಬಿ ನೋಂದಾಯಿತ ಸಂಶೋಧನಾ ವಿಶ್ಲೇಷಕ ಹಾಗೂ ಸ್ಪೇಡ್ ಕ್ಯಾಪಿಟಲ್ ಅಡ್ವೈಸರ್ಸ್ ಸಂಸ್ಥಾಪಕ ಶ್ರೇಯಸ್…

Read More

ಮಂಗಳೂರಿನಲ್ಲಿ ದೀಪಾ ಭಸ್ತಿ ವಿಶೇಷ ಉಪನ್ಯಾಸ: ಭಾಷೆ ಮತ್ತು ಸಂಸ್ಕೃತಿ ಕುರಿತು ಚಿಂತನೆ

ಮಂಗಳೂರು: ಪ್ರತಿವರ್ಷ ಆಯೋಜಿಸಲಾಗುವ ಪಿ.ಪಿ. ಗೋಮತಿ ಸ್ಮಾರಕ ಉಪನ್ಯಾಸ ಮಾಲಿಕೆ-2026ರ ಅಂಗವಾಗಿ ಖ್ಯಾತ ಲೇಖಕಿ ಹಾಗೂ ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮವು ಜೂನ್ 9ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ, ಪಿ.ಪಿ. ಗೋಮತಿ ಎಜುಕೇಶನ್ ಟ್ರಸ್ಟ್ (ರಿ.), ಮಂಗಳೂರು ವಿಶ್ವವಿದ್ಯಾನಿಲಯ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು…

Read More

ಕುಂದಾಪುರ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು: ಇಬ್ಬರು ಆರೋಪಿಗಳ ಬಂಧನ

ಉಡುಪಿ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಕುಂಜೆ ಗ್ರಾಮದ ನೇರಳಕಟ್ಟೆಯಲ್ಲಿರುವ ನಿರಂಜನ್ ಭಟ್ ಅವರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು ₹11 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮೇ 23ರಂದು ಬೆಳಿಗ್ಗೆ 11.47ರಿಂದ ರಾತ್ರಿ 9.10 ಗಂಟೆಯ ನಡುವಿನ ಅವಧಿಯಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಒಡೆದು ಒಳನುಗ್ಗಿ ಚಿನ್ನ, ಬೆಳ್ಳಿ ಹಾಗೂ ನಗದು ಕಳವು ಮಾಡಿದ್ದರು. ಈ ಸಂಬಂಧ ಕುಂದಾಪುರ ಗ್ರಾಮಾಂತರ…

Read More

ಜಲಜೀವನ್ ಮಿಷನ್ ಕಾಮಗಾರಿ ಅವ್ಯವಸ್ಥೆ: ಕೃಷಿಕರ ತೋಟಕ್ಕೆ ನುಗ್ಗಿದ ಮಳೆನೀರು

ಉಡುಪಿ: ಹೊಸಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬದ್ರಾಪುರದ ಕಪ್ಪೆ ಹೊಂಡ ಪ್ರದೇಶದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ನಡೆದಿರುವ ಕಾಮಗಾರಿಯ ಅವ್ಯವಸ್ಥೆಯಿಂದ ಸ್ಥಳೀಯ ಕೃಷಿಕರೊಬ್ಬರು ಸಂಕಷ್ಟಕ್ಕೆ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. ಕಾಮಗಾರಿ ವೇಳೆ ರಸ್ತೆ ಬದಿಯ ಚರಂಡಿಯನ್ನು ಮುಚ್ಚಿರುವ ಪರಿಣಾಮ ಮೊದಲ ಮಳೆಯಲ್ಲೇ ನೀರು ಕೃಷಿ ಭೂಮಿಗೆ ನುಗ್ಗಿ ಕೃತಕ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯ ಕೃಷಿಕ ಮಾಧವ ಭಂಡಾರಿ ಅವರ ತೋಟಕ್ಕೆ ಮಳೆನೀರು ಹರಿದು ಬಂದು ಭೂಮಿ ಜಲಾವೃತಗೊಂಡಿದ್ದು, ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದೆ. ರಸ್ತೆ…

Read More

ಹಾರ್ಮುಜ್ ಜಲಸಂಧಿ ಬಳಿ ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕ; ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ

ಚಿಪೆವಾ ಫಾಲ್ಸ್: ಹಾರ್ಮುಜ್ ಜಲಸಂಧಿಯತ್ತ ಸಾಗುತ್ತಿದ್ದ ನಾಲ್ಕು ಇರಾನ್ ಡ್ರೋನ್‌ಗಳನ್ನು ಅಮೆರಿಕ ಸೇನೆ ಹೊಡೆದುರುಳಿಸಿದ್ದು, ಇರಾನ್‌ನ ಹಲವು ರಾಡಾರ್ ಕೇಂದ್ರಗಳ ಮೇಲೂ ವೈಮಾನಿಕ ದಾಳಿ ನಡೆಸಿದೆ. ಈ ಬೆಳವಣಿಗೆಯಿಂದ ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಕದನ ವಿರಾಮದ ಪ್ರಯತ್ನಗಳಿಗೆ ಹೊಸ ಸವಾಲು ಎದುರಾಗಿದೆ. ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಇರಾನ್‌ನಿಂದ ಉಡಾಯಿಸಲಾದ ಡ್ರೋನ್‌ಗಳು ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಹಡಗುಗಳು ಹಾಗೂ ಅಂತರರಾಷ್ಟ್ರೀಯ ಸಾಗರ ಸಂಚಾರಕ್ಕೆ ತಕ್ಷಣದ ಭದ್ರತಾ ಅಪಾಯವನ್ನು ಉಂಟುಮಾಡಿದ್ದವು….

Read More

ಉಡುಪಿ ಜಿಲ್ಲೆಯಲ್ಲಿ ಜೂ.20ರಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಆರಂಭ

ಉಡುಪಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಸಹಿತ 10ಕ್ಕೂ ಹೆಚ್ಚು ರಾಜ್ಯದಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ – 2026 ನಡೆಯಲಿದ್ದು, ಅದರಂತೆ ಉಡುಪಿ ಜಿಲ್ಲೆಯಲ್ಲಿ ಜೂ. 20ರಂದು ಈ ಪ್ರಕ್ರಿಯೆ ಆರಂಭವಾಗಲಿದ್ದು ಜೂ. 30ರಿಂದ ಬಿಎಲ್‌ಒಗಳು ಮನೆ ಮನೆ ಭೇಟಿ ಶುರು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧಿಸಿದಂತೆ ಪೂರ್ವತಯಾರಿ, ತರಬೇತಿ ಹಾಗೂ ಮುದ್ರಣ ಪ್ರಕ್ರಿಯೆಗಳು…

Read More

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ – ಜಿಲ್ಲಾಧಿಕಾರಿ

ಮಂಗಳೂರು:ಪರಿಸರ, ನೀರು, ಆಹಾರ ಶುಚಿಯಾಗಿದ್ದರೆ ಜೀವ ಸಂಕುಲ ರಕ್ಷಣೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಸುತ್ತಲಿನ ಪರಿಸರವನ್ನು ಶುಚಿಯಾಗಿಟ್ಟು ರಕ್ಷಿಸಬೇಕಿದೆ. ಪರಿಸರದ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಹೇಳಿದರು. ಅವರು ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಶುಕ್ರವಾರದ ನಗರದ ಕೆಪಿಟಿಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರ ರಕ್ಷಿಸಿದರೆ ಸಮಾಜ ತನ್ನಿಂತಾನೆ ಉತ್ತಮ ಪರಿಸರವನ್ನು ಹೊಂದುತ್ತದೆ….

Read More

ಭಾರತೀಯ ಮೂಲದ ಪತ್ರಕರ್ತನಿಗೆ ಟ್ರಂಪ್ ಟೀಕೆ? ಹಾಸ್ಯವೇ, ಜಾತೀಯತೆಯೇ? ಹೇಳಿಕೆ ವಿವಾದಕ್ಕೆ ಗ್ರಾಸ

ವಾಷಿಂಗ್ಟನ್, ಜೂನ್ 6: ಅಮೆರಿಕ ಅಧ್ಯಕ್ಷ Donald Trump ಅವರು ಮತ್ತೊಮ್ಮೆ ತಮ್ಮ ಹೇಳಿಕೆಯಿಂದ ವಿವಾದಕ್ಕೆ ಸಿಲುಕಿದ್ದಾರೆ. ಶ್ವೇತಭವನದಲ್ಲಿ ನಡೆದ ಮಾಧ್ಯಮ ಸಂವಾದದ ವೇಳೆ ಭಾರತೀಯ ಮೂಲದ ಪತ್ರಕರ್ತರೊಂದಿಗೆ ನಡೆಸಿದ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ಭಾರತದ ಪ್ರಧಾನಿ Narendra Modi ಅವರೊಂದಿಗಿನ ಸಂಬಂಧದ ಕುರಿತು ಪ್ರಶ್ನೆ ಕೇಳಲು ಮುಂದಾದಾಗ, ಟ್ರಂಪ್ ಅಚಾನಕ್‌ವಾಗಿ, “ನೀವು ಇಂಡಿಯಾದವರಾ? ಹೌದಾ? ನಾನು ನೀವು ಜರ್ಮನಿಯಿಂದ ಬಂದಿರಬಹುದು ಎಂದುಕೊಂಡೆ” ಎಂದು ಪ್ರಶ್ನಿಸಿದರು. ಪತ್ರಕರ್ತರು…

Read More

ನಾಡೋಜ ಡಾ| ಕೃಷ್ಣ ಪ್ರಸಾದ್ ಕೂಡ್ಲು ರವರಿಗೆ ರಾಮಕ್ಷತ್ರಿಯ ರತ್ನ ಪ್ರಶಸ್ತಿ ಪುರಸ್ಕಾರ

ಉಡುಪಿಯ ನೀಲಾವರದಲ್ಲಿ ದಿನಾಂಕ 31-5-2026 ರಂದು “ರಾಮಕ್ಷತ್ರಿಯ ಜ್ಞಾನ- ಶಕ್ತಿ- ಅರ್ಥ ಸಮಾಗಮ” ಶೀರ್ಷಿಕೆಯ ಬೃಹತ್ ರಾಮಕ್ಷತ್ರಿಯ ಸಮಾಜದ ಸಮ್ಮೇಳನ ಜರುಗಿತು. ಈ ಕಾರ್ಯಕ್ರಮದ ಪ್ರಮುಖ ಅಂಗವಾಗಿ “ರಾಜ್ಯಲಕ್ಷ್ಮಿ ವಿಜಯೋತ್ಸವ”, “ಕ್ಷತ್ರಿಯ ಹನುಮ ಧ್ವಜ” ಅನಾವರಣ ಹಾಗೂ “ಆರ್. ಕೆ. ಸಾಮ್ರಾಟ್” ರಾಮಕ್ಷತ್ರಿಯ ಡಿಜಿಟಲ್ ಸುದ್ದಿ ಮಾಧ್ಯಮ (E-Channel) ಲೋಕಾರ್ಪಣೆ ಮಾಡಲಾಯಿತು, ಹಾಗೂ ರಾಮಕ್ಷತ್ರಿಯ ಸಮಾಜದ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಪ್ರಸ್ತುತ ವಿವಿಧ ಇಲಾಖೆಗಳಲ್ಲಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳಿಗೆ, ರಾಜಕೀಯ ನೇತಾರರುಗಳಿಗೆ, ರಕ್ಷಣಾ ಇಲಾಖೆಯವರಿಗೆ (ಪೊಲೀಸ್ ಮತ್ತು ಮಿಲಿಟರಿ),…

Read More
error: Content is protected !!