ಇ-ಖಾತಾ ಸಮಸ್ಯೆ ಕಾಂಗ್ರೆಸ್ ಕೃಪಾಪೋಷಿತ ಗ್ಯಾರಂಟಿ :- ಶಾಸಕ ಕಾಮತ್
ಮ.ನ.ಪಾ. ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಇನ್ನೂ ಸಹ ಜನರು ಹರಸಾಹಸ ಪಡುವಂತಾಗಿದ್ದು ದಪ್ಪ ಚರ್ಮದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈ ಬಗ್ಗೆ ಚಿಂತೆಯೇ ಇಲ್ಲವಾಗಿರುವುದು ದುರಂತವೆಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರವು ಅವೈಜ್ಞಾನಿಕವಾಗಿ ಆಸ್ತಿ ನೋಂದಣಿಗೆ ಇ–ಖಾತಾ ಕಡ್ಡಾಯ ಮಾಡಿದ ದಿನದಿಂದಲೂ ನಗರ ವ್ಯಾಪ್ತಿಯಲ್ಲಿ ಅವ್ಯವಸ್ಥೆ ಉಂಟಾಗಿದೆ. ದೂರದ ಊರುಗಳಲ್ಲಿ, ವಿದೇಶಗಳಲ್ಲಿ ನೆಲೆಸಿರುವ ಖರೀದಿದಾರರು, ಮಾರಾಟಗಾರರು ಇಲ್ಲಿಗೆ ಬಂದು ಹಲವು ದಿನಗಳ ನಂತರವೂ ತಮ್ಮ ಕೆಲಸವಾಗದೇ ಬರಿಗೈಯಲ್ಲಿ ಮರಳುತ್ತಿದ್ದಾರೆ. ಮೊನ್ನೆ…