ಪಂಜಾಬ್ ಪ್ರವಾಹ ಸಂತ್ರಸ್ತರಿಗೆ ನೆರವಿಗೆ ಕೋರಿ ಮಂಗಳೂರಿನ ಸಿಖ್ ಸಮುದಾಯದ ವತಿಯಿಂದ ನಾಳೆ ದೇಣಿಗೆ ಸಂಗ್ರಹಣೆ ಅಭಿಯಾನವು ನಡೆಯಲಿದೆ – ಕಮಲ್ ಜಿತ್ ಸಿಂಗ್
ಕಾಸರಗೋಡು: ಪಂಜಾಬ್ ಪ್ರವಾಹ ಸಂತ್ರಸ್ತರಿಗೆ ನೆರವಿಗೆ ಕೋರಿ ಮಂಗಳೂರಿನ ಸಿಖ್ ಸಮುದಾಯದ ವತಿಯಿಂದ ನಾಳೆ ಬೆಳ್ಳಿಗೆ 10 ರಿಂದ 5 ಗಂಟೆಯ ತನಕ ಕೊಟ್ಟಾರ ಚೌಕಿಯಲ್ಲಿ ದೇಣಿಗೆ ಸಂಗ್ರಹಣೆ ಅಭಿಯಾನವು ನಡೆಯಲಿದೆ ಎಂದು ಕಮಲ್ ಜಿತ್ ಸಿಂಗ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಸುಖ್ವಿಂದರ್ ಸಿಂಗ್ , ಇಂದು ಪಂಜಾಬ್ ರಾಜ್ಯದಲ್ಲಿ ತೀವ್ರ ಪ್ರವಾಹದ ಪರಿಣಾಮ ಸಾವಿರಾರು ಕುಟುಂಬಗಳು ತಮ್ಮ ಮನೆ, ಹೊಲ ಹಾಗೂ ಜೀವನೋಪಾಯ ಕಳೆದುಕೊಂಡಿವೆ. ಬೆಳೆಗಳು, ಜಾನುವಾರುಗಳು ಹಾಗೂ ಆಸ್ತಿ-ಪಾಸ್ತಿಗಳು…