ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ ವಿದ್ಯಾರ್ಥಿಗಳ ” ಪೀಸ್ ಟ್ಯಾಲೆಂಟ್ ಹಂಟ್” ಸಾಂಸ್ಕೃತಿಕ ಕಾರ್ಯಕ್ರಮ

ಮಂಜೇಶ್ವರ : ಗಡಿ ಪ್ರದೇಶದಲ್ಲಿ ಗಮನ ಸೆಳೆಯಿತ್ತಿರುವ ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲಾ ವಿದ್ಯಾರ್ಥಿಗಳು ತಮ್ಮ ಅನೇಕ ಪ್ರತಿಭೆಗಳ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ನೂತನ ಮೈಲಿಗಲ್ಲುಗಳನ್ನು ಸೃಷ್ಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರದಂದು ನಡೆದ “ಪೀಸ್ ಟ್ಯಾಲೆಂಟ್ ಹಂಟ್” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಕಲೆಗಳನ್ನು ಪ್ರದರ್ಶಿಸಿ ಪ್ರೇಕ್ಷಕರ ಪ್ರಶಂಶೆಗೆ ಪಾತ್ರರಾದರು. ಸಕಲ ಸಿದ್ಧತೆಗಳೊಂದಿಗೆ ಅದ್ದೂರಿಯಾಗಿ ನಡೆದ ಕಾರ್ಯಕ್ರಮಕ್ಕೆ ಶೈಕ್ಷಣಿಕ ಕ್ಷೇತ್ರದ ಶಿಸ್ತು ಪಾಲನೆಯಲ್ಲಿ ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್‌ನ ತೀರ್ಪುಗಾರರ ಪರಿಶೀಲನೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗಿನ್ನೆಸ್ ದಾಖಲೆಯಲ್ಲಿ ಸ್ಥಾನ…

Read More

“ಭೂದಾನ ಚಳುವಳಿಯೇ, ಭೂಮಸೂದೆ ಕಾಯ್ದೆಗೆ ಪ್ರೇರಣೆ : ಪಿ .ಸೋಮಪ್ಪ

ಮಂಜೇಶ್ವರ : ಮಹಾತ್ಮಾ ಗಾಂಧಿಜಿಯವರ ಅನುಯಾಯಿ, ಸ್ವಾತಂತ್ರ್ಯ ಹೋರಾಟಗಾರ ಆಚಾರ್ಯ ವಿನೋಬಾ ಭಾವೆಯವರ ಭೂದಾನ ಚಳುವಳಿಯಿಂದ ಪ್ರೇರಿತರಾಗಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರು ಭೂಮಸೂದೆ ಕಾಯ್ದೆಯನ್ನು ಜಾರಿಗೆ ತಂದರು. ಉಳುವವನೇ ಹೊಲದೊಡೆಯ ಎಂಬ ಪರಿಕಲ್ಪನೆ ವಿನೋಬಾ ಭಾವೆಯವರದ್ದಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಸೋಮಪ್ಪ ಹೇಳಿದ್ದಾರೆ. ಅವರು ವರ್ಕಾಡಿಯಲ್ಲಿ ಜರುಗಿದ ಆಚಾರ್ಯ ವಿನೋಬಾ ಭಾವೆಯವರ 130 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿನೋಬಾ – ವೆಂಕಟೇಶರಾವ್ ಶಾಂತಿ ಸೇನಾ ಫೌಂಡೇಶನ್ ಪ್ರಧಾನ ಸಂಚಾಲಕ…

Read More

ಮನೆಗೆ ಕಳ್ಳರು ನುಗ್ಗಿ ಹಣ ಹಾಗೂ ಚೆಕ್ ಲೀಫ್ ಕಳವು.

ಮಂಜೇಶ್ವರ: ಮನೆಗೆ ಬೀಗ ಹಾಕಿ ಮಸೀದಿಯ ಕಾರ್ಯಕ್ರಮಕ್ಕೆ ತೆರಳಿದ ಸಂದರ್ಭದಲ್ಲಿ ಮನೆಗೆ ಕಳ್ಳರು ನುಗ್ಗಿ ಹಣ ಹಾಗೂ ಚೆಕ್ ಲೀಫ್ ಕಳವುಗೈದಿರುವ ಬಗ್ಗೆ ದೂರಲಾಗಿದೆ. ಪೆರ್ಮುದೆ ನಿವಾಸಿ ಹಾಗೂ ಗಲ್ಫ್ ಉದ್ಯೋಗಿಯಾಗಿರುವ ರಫೀಕ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ 3೦ ಸಾವಿರ ರೂಪಾಯಿ ಹಾಗೂ ಬ್ಯಾಂಕ್‌ನ ಚೆಕ್ ಲೀಫ್ ಕಳವುಗೈದಿದ್ದಾರೆ. ಈ ಬಗ್ಗೆ ರಫೀಕ್‌ರ ಪತ್ನಿ ಶಮ್ನ ಕೆ.ಎ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಶಮ್ನ ಹಾಗೂ ಮಕ್ಕಳು ಈ…

Read More

ಕೆ ಎಸ್‌ ಆರ್‌ ಟಿ ಸಿ ಬಸ್‌ನಲ್ಲಿ ಮದ್ಯ ಸಾಗಾಟ: ಮೊಗ್ರಾಲ್ ನಿವಾಸಿ ಸೆರೆ.

ಮಂಜೇಶ್ವರ: ಸಾರಿಗೆ ಬಸ್‌ನಲ್ಲಿ ಸಾಗಿಸುತ್ತಿದ್ದ ಕರ್ನಾಟಕ ಮದ್ಯವನ್ನು ಅಬಕಾರಿ ತಂಡ ವಶಪಡಿಸಿ ಒಬ್ಬನನ್ನು ಬಂಧಿಸಿದ್ದಾರೆ.ಮೊಗ್ರಾಲ್ ನೀರೋಳ್ ನಿವಾಸಿ ಬಿ. ಶಿವಪ್ರಸಾದ್ (26) ಬಂಧಿತ ವ್ಯಕ್ತಿ. ಈತನ ಬ್ಯಾಗ್‌ನಿಂದ 9 ಲೀಟರ್ ಕರ್ನಾಟಕ ಮದ್ಯ ವಶಪಡಿಸಲಾಗಿದೆ. ಮಂಜೇಶ್ವರ ಅಬಕಾರಿ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ತಂಡ ಬಸ್‌ನಲ್ಲಿ ತಪಾಸಣೆ ನಡೆಸಿದಾಗ ಮದ್ಯ ಪತ್ತೆಯಾಗಿದೆ. ಅಬಕಾರಿ ಇನ್‌ಸ್ಪೆಕ್ಟರ್ ಜಿನು ಜೇಮ್ಸ್ ನೇತೃತ್ವದಲ್ಲಿ ಪ್ರಿವೆಂಟೀವ್ ಆಫೀಸರ್ ಎಂ.ವಿ. ಜಿಜಿನ್, ಗ್ರೇಡ್ ಪ್ರಿವೆಂಟೀವ್ ಆಫೀಸರ್ ಪಿ.ಕೆ. ಬಾಬು ರಾಜ್, ಸಿವಿಲ್ ಎಕ್ಸೆಸ್ ಆಫೀಸರ್ ಸುನೀಲ್ ಎಂಬಿವರು…

Read More

ಸೆ. 12ರಂದು ರಾಷ್ಟ್ರೀಯ ಹೆದ್ದಾರಿ ದುರಸ್ಥಿ ಒತ್ತಾಯಿಸಿ, ರಾಷ್ಟ್ರೀಯ ಹೆದ್ಧಾರಿ ಕಛೇರಿಗೆ ಮುತ್ತಿಗೆ ಮತ್ತು ಪ್ರತಿಭಟನೆ

ದಿನಾಂಕ:12.09.2025 ರಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚಿಗೆ ನಡೆದ ಅನೇಕ ಅಪಘಾತಗಳು ಅಮಾಯಕರ ಜೀವವನ್ನು ಬಲಿದಾನ ಪಡೆದಿದ್ದು, ರಾಷ್ಟ್ರೀಯ ಹೆದ್ದಾರಿಯ ದುರಸ್ಥಿಯೇ ಪ್ರಮುಖ ಕಾರಣವಾಗಿರುತ್ತದೆ. ರಾಷ್ಟ್ರೀಯ ಹೆದ್ಧಾರಿ ಯಾವುದೇ ದುರಸ್ಥಿ ಕಾರ್ಯಕ್ರಮ ಮಾಡದೇ ಇರುವುದರಿಂದ ದಿನಾಂಕ:12.09.2025 (ಶುಕ್ರವಾರ ಬೆಳಿಗ್ಗೆ 10:30 ಗಂಟೆಗೆ ನಂತೂರಿನ ಜಂಕ್ಷನಲ್ಲಿ ಪ್ರತಿಭಟನೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಛೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ತೀರ್ಮಾನಿಸಲಾಗಿದೆ.ಶಾಸಕರು,ಕರ್ನಾಟಕ ವಿಧಾನ ಪರಿಷತ್‌ ಮತ್ತು ಕೆ.ಪಿ.ಸಿ.ಸಿ ಉಪಾಧ್ಯಕ್ಷರು ಐವನ್‌ ಡಿʼಸೋಜಾ ತಿಳಿಸಿದರು.

Read More

“ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ 2025 ” ಕಾರ್ಯಕ್ರಮ ಸೆ. 12 ರಂದು.

ಮಂಗಳೂರು: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ರಾಜ್ಯ ಸಮಿತಿ ವತಿಯಿಂದ ಯುವ ನಾಯಕತ್ವ, ವೃತ್ತಿ ಮಾರ್ಗದರ್ಶನ ಮತ್ತು ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಕರ ಪಾಲ್ಗೊಳ್ಳುವಿಕೆಯನ್ನು ಬಲಪಡಿಸುವ ನಿಟ್ಟಿನಲ್ಲಿ ದಿನಾಂಕ 12/09/2025 ನೇ ಶುಕ್ರವಾರ ಸಂಜೆ ಮಂಗಳೂರಿನ ಇಂಡಿಯಾನ ಕನ್ನೆನ್ನನ್ ಹಾಲ್‌ನಲ್ಲಿ “ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ 2025” ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಯು.ಟಿ ಖಾದರ್ ಸೇರಿದಂತೆ ಹಲವಾರು ಸಮುದಾಯದ ಗಣ್ಯರು ಭಾಗವಹಿಸಲಿದ್ದಾರೆ.ಯುನೈಟೆಡ್ ಎಂಪವ‌ಮೆಂಟ್ ಅಸೋಸಿಯೇಷನ್ (ಯುಇಎ) ಕ್ರೀಡೆಗಳ ಮೂಲಕ ಸಮುದಾಯದ ಸಬಲೀಕರಣ ಮತ್ತು…

Read More

ಅತ್ಯಾಚಾರ ಪ್ರಕರಣ : ರ‍್ಯಾಪರ್ ವೇಡನ್ ಬಂಧನ

ಕೊಚ್ಚಿ: ವೈದ್ಯೆಯೊಬ್ಬರು ನೀಡಿದ ಅತ್ಯಾಚಾರ ದೂರಿಗೆ ಸಂಬಂಧಿಸಿದಂತೆ ವೇಡನ್ ಎಂದೇ ಖ್ಯಾತಿಯಾದ ಮಲಯಾಳಂ ರ‍್ಯಾಪರ್ ಹಿರಂದಾಸ್ ಮುರಳಿಯನ್ನು ಬಂಧಿಸಲಾಗಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ದಿನದ ವಿಚಾರಣೆ ಬಳಿಕ ಕೊಚ್ಚಿಯ ತ್ರಿಕ್ಕಾಕರ ಪೊಲೀಸರು ವೇಡನ್ ಅವರನ್ನು ಬಂಧಿಸಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ. ಕೇರಳ ಹೈಕೋರ್ಟ್ ವೇಡನ್‌ಗೆ ಈಗಾಗಲೇ ನಿರೀಕ್ಷಣಾ ಜಾಮೀನು ನೀಡಿರುವುದರಿಂದ ವೈದ್ಯಕೀಯ ಪರೀಕ್ಷೆ ಮತ್ತು ಬಂಧನ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Read More

ಹೋಟೆಲೊಂದರಿಂದ ಖರೀದಿಸಲಾದ ಶವರ್ಮ ಸೇವಿಸಿ 8 ರಿಂದ 14 ರ ಮಧ್ಯೆ ಪ್ರಾಯದ 14 ಮಕ್ಕಳು ತೀವ್ರ ಅಸ್ವಸ್ಥ.

ಹೋಟೆಲೊಂದರಿಂದ ಖರೀದಿಸಲಾದ ಶವರ್ಮ ಸೇವಿಸಿ 8 ರಿಂದ 14 ರ ಮಧ್ಯೆ ಪ್ರಾಯದ 14 ಮಕ್ಕಳು ತೀವ್ರ ಅಸ್ವಸ್ಥಗೊಂಡಿದ್ದಾರೆ.ಪಳ್ಳಿಕ್ಕೆರೆ ಸಮೀಪದ ಪೂಚಕ್ಕಾಡಿನ ಹೋಟೆಲೊಂದರಿಂದ ಖರೀದಿಸಲಾದ ಶವರ್ಮ ಸೇವಿಸಿ ಈ ದುರ್ಘಟನೆ ಸಂಭವಿಸಿದೆ. ಇವರೆಲ್ಲರಿಗೂ ಹೊಸದುರ್ಗ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆ ಪಡೆದ ವಿದ್ಯಾರ್ಥಿಗಳು ಪಳ್ಳಿಕ್ಕೆರೆಯಲ್ಲಿ ನಡೆದ ನಬಿ ದಿನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮಕ್ಕಳಿಗೆ ನಬಿ ದಿನ ಸಂಘಟಕರು ಆಹಾರ ಪೂರೈಸಲು ತರಿಸಲಾಗಿದ್ದ ಆಹಾರ ಸಾಕಾಗದಿದ್ದಾಗ ಸಮೀಪದ ಹೋಟೆಲೊಂದರಿಂದ ಶವರ್ಮ ಖರೀದಿಸಿ ವಿತರಿಸಿದ್ದರು. ಅದನ್ನು ಸೇವಿಸಿದ ಅರ್ಧ…

Read More

ಕಾಸರಗೋಡು-ಕಾಞ್ಞಂಗಾಡು ನಡುವಿನ ರಾಜ್ಯ ಹೆದ್ದಾರಿಯಲ್ಲಿ ಬೀದಿ ದೀಪ ಕೊರತೆ.ಜನಸಾಮಾನ್ಯರ ಪರದಾಟ

ಕಾಸರಗೋಡು – ಕಾಞ್ಞಂಗಾಡು ನಡುವಿನ ರಾಜ್ಯ ಹೆದ್ದಾರಿಯ ಮೂಲಕ ಹಾದುಹೋಗುವಾಗ ಸಿಗುವ ತ್ರಿಕನಾಡ್ ಪ್ರದೇಶವು ಮುಸ್ಸಂಜೆಯ ಸಮಯದಲ್ಲಿ ಸೂರ್ಯ ಮುಳುಗುತ್ತಿದಂತೆ ಕಡು ಕತ್ತಲು ಸುತ್ತಲೂ ಮೂಡುತ್ತದೆ . ತ್ರಿಕನಾಡ್ ತ್ರಯಂಬಕೇಶ್ವರ ದೇವಾಲಯದ ಸಮೀಪವೇ ಇರುವ ಪ್ರದೇಶವು ಭಯಂಕರ ಕತ್ತಲೆಯಲ್ಲಿ ರಾತ್ರಿ ಕಳೆಯುವಂತೆ ಮಾಡುತ್ತದೆ . ಯಾಕೆಂದರೆ ಇಲ್ಲಿ ಕತ್ತಲನ್ನು ದೂರ ಮಾಡುವ ಬೀದಿ ದೀಪ ಇರದೇ ಇರುವುದು ಆ ಊರಿನ ಭಯಾನಕ ಚಿತ್ರಣವನ್ನು ಕಾಣಿಸುತ್ತದೆ . ಸ್ಥಳೀಯರು ಈ ಸನ್ನಿವೇಶದಿಂದ ಕರಾಳ ರಾತ್ರಿಯನ್ನು ಕಳೆಯುವಂತೆ ಮಾಡುತ್ತಿದೆ ….

Read More

ಹಿಂದೂ ವಿರೋಧಿ ಭ್ರಷ್ಟ, ಭಂಡ ಕಾಂಗ್ರೆಸ್ ಸರಕಾರದಿಂದ ರಾಜ್ಯಕ್ಕೆ ಅಧೋಗತಿ: ರಾಜಗೋಪಾಲ್ ರೈ

ಮಂಗಳೂರು: ಕಾಂಗ್ರೆಸ್ ಸರಕಾರದ ಎರಡೂವರೆ ವರ್ಷದ ಆಡಳಿತದಲ್ಲಿ ರಾಜ್ಯವು ಸಂಪೂರ್ಣ ಅಧೋಗತಿಗೆ ಇಳಿದಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹಿಂದೂ ವಿರೋಧಿ ಮಾನಸಿಕತೆ, ಪಾಕ್ ಪರ ಘೋಷಣೆಗಳು, ದೇಶದ್ರೋಹಿ ಶಕ್ತಿಗಳು ವಿಜೃಂಭಿಸುತ್ತಿವೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ವಕ್ತಾರರಾದ ರಾಜಗೋಪಾಲ್ ರೈ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮುಸ್ಲಿಂ ಓಲೈಕೆ ರಾಜಕಾರಣ ಮಿತಿಮೀರಿ ನಡೆಯುತ್ತಿದ್ದು, ನಾಡಹಬ್ಬ ದಸರಾದ ಉದ್ಘಾಟನೆಗೆ ಹಿಂದೂ ವಿರೋಧಿ ಮಾನಸಿಕತೆಯ ಬಾನು ಮುಷ್ತಾಕ್‌ಗೆ ಆಹ್ವಾನ ನೀಡಲಾಗಿದೆ. ರಾಜ್ಯಾದ್ಯಂತ ಜನರು…

Read More
error: Content is protected !!