ರಸ್ತೆ ವಿಚಾರದ ಗಲಾಟೆ ಹೊಡೆದಾಟಕ್ಕೆ ತಿರುಗು; ಬಿಸಿರೋಡಿನಲ್ಲಿ ಕುಟುಂಬದವರು ಪತ್ರಿಕಾಗೋಷ್ಠಿ ಮೂಲಕ ರಕ್ಷಣೆ ಮನವಿ
ಬಂಟ್ವಾಳ: ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆ ಇದೀಗ ಹೊಡೆದಾಟದವರೆಗೆ ತಲುಪಿದ್ದು ನಮಗೆ ರಕ್ಷಣೆ ಕೊಡಿ ಎಂದು ಕುಟುಂಬವೊಂದು ಪತ್ರಿಕಾಗೋಷ್ಠಿಯ ಮೂಲಕ ಮನವಿ ಮಾಡಿಕೊಂಡ ಘಟನೆ ಬಿಸಿರೋಡಿನಲ್ಲಿ ನಡೆದಿದೆ.ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರಕಾಡು ಅವರು ಕುಟುಂಬದ ಪರವಾಗಿ ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸುಣ್ಣಂಗಳ ನಾಗರಾಜ ಮತ್ತು ಸುರೇಶ್ ನಾಯ್ಕ ಕುಟುಂಬಕ್ಕೆ ರಕ್ಷಣೆ ಒದಗಿಸುವಂತೆ ಕೇಳಿಕೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಸುಣ್ಣಂಗಳ ನಾಗರಾಜ…