ರಸ್ತೆ ವಿಚಾರದ ಗಲಾಟೆ ಹೊಡೆದಾಟಕ್ಕೆ ತಿರುಗು; ಬಿಸಿರೋಡಿನಲ್ಲಿ ಕುಟುಂಬದವರು ಪತ್ರಿಕಾಗೋಷ್ಠಿ ಮೂಲಕ ರಕ್ಷಣೆ ಮನವಿ

ಬಂಟ್ವಾಳ: ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆ ಇದೀಗ ಹೊಡೆದಾಟದವರೆಗೆ ತಲುಪಿದ್ದು ನಮಗೆ ರಕ್ಷಣೆ ಕೊಡಿ ಎಂದು ಕುಟುಂಬವೊಂದು ಪತ್ರಿಕಾಗೋಷ್ಠಿಯ ಮೂಲಕ ಮನವಿ ಮಾಡಿಕೊಂಡ ಘಟನೆ ಬಿಸಿರೋಡಿನಲ್ಲಿ ನಡೆದಿದೆ.ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರಕಾಡು ಅವರು ಕುಟುಂಬದ ಪರವಾಗಿ ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸುಣ್ಣಂಗಳ ನಾಗರಾಜ ಮತ್ತು ಸುರೇಶ್ ನಾಯ್ಕ ಕುಟುಂಬಕ್ಕೆ ರಕ್ಷಣೆ ಒದಗಿಸುವಂತೆ ಕೇಳಿಕೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಸುಣ್ಣಂಗಳ ನಾಗರಾಜ…

Read More

ಅನಿಲ ಸಾಗಾಟದ ಟ್ಯಾಂಕರ್‌ಗೆ ಟೆಂಪೋ ಡಿಕ್ಕಿ; ಚಾಲಕ ಗಾಯ, ಅನಿಲ ಸೋರಿಕೆ ಭೀತಿಯಲ್ಲಿ ರಕ್ಷಣೆ ಕಾರ್ಯಾಚರಣೆ

ಬಂಟ್ವಾಳ : ಖಾಸಗಿ ಸಂಸ್ಥೆಗೆ ಸೇರಿದ ಟೆಂಪೋ ವಾಹನವೊಂದು ಅನಿಲ‌ ಸಾಗಾಟದ ಟ್ಯಾಂಕರ್ ವಾಹನಕ್ಕೆ‌ ಹಿಂಬದಿಯಿಂದ‌ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುದ್ರೆಬೆಟ್ಟು ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಕಲ್ಲಡ್ಕ ಫ್ಲೈ ಓವರ್ ನಲ್ಲಿ‌ ಅತಿವೇಗದಿಂದ ಬಂದ‌ ಟೆಂಪೋ ವಾಹನ‌ ಸಮುದ್ರ ಹೋಟೆಲ್ ಬಳಿ ಚಾಲಕನ‌ ನಿಯಂತ್ರಣ ತಪ್ಪಿ‌ ಟ್ಯಾಂಕರ್ ಗೆ‌‌ ಹಿಂದಿನಿಂದ‌ ಡಿಕ್ಕಿಯಾಗಿದೆ. ಪರಿಣಾಮ ಚಾಲಕನ ಕೈ ವಾಹನಗಳ‌ನಡುವೆ ಸಿಲುಕಿಕೊಂಡಿತ್ತು. ಗ್ಯಾಸ್ ಟ್ಯಾಂಕರ್ ಗೆ ವಾಹನ‌‌ ಡಿಕ್ಕಿಯಾಗಿದ್ದರಿಂದ, ಅನಿಲ‌ ಸೋರಿಕೆಯ ಭಯದಿಂದ‌ ಯಾರೂ ವಾಹನಗಳ‌…

Read More

ತಾಳಮದ್ದಲೆ ಮತ್ತು ಕಲಾವಿದರಿಗೆ ವಿಶ್ವೇಶ್ವರ ಭಟ್ಟರಿಂದ ಅವಹೇಳನ: ವ್ಯಾಪಕ ಖಂಡನೆ- ಕ್ಷಮಾಪಣೆಗೆ ಆಗ್ರಹ

ಉಡುಪಿ: ಕರಾವಳಿ, ಮಲೆನಾಡು ಭಾಗದ ಪ್ರಮುಖ ಕಲೆಗಳಲ್ಲಿ ಒಂದಾದ ಯಕ್ಷಗಾನ ತಾಳಮದ್ದಲೆ ಹಾಗೂ ತಾಳಮದ್ದಲೆ ಅರ್ಥಧಾರಿಗಳ ಕುರಿತಂತೆ ಅವಹೇಳನ, ಲೇವಡಿ, ಅಪಮಾನದ ಮಾತುಗಳನ್ನು ಸತತವಾಗಿ ತಮ್ಮ ಮಾಧ್ಯಮಗಳಲ್ಲಿ ಬರೆಯುತ್ತಿರುವ ಹಿರಿಯ ಪತ್ರಕರ್ತ, ಸಂಪಾದಕ ವಿಶ್ವೇಶ್ವರ ಭಟ್ಟದ ನಡೆಗೆ ತಾಳಮದ್ದಲೆ ಕಲಾವಿದರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಭಟ್ಟರು ತಕ್ಷಣ ಈ ಬಗ್ಗೆ ಕ್ಷಮಾಪಣೆ ಕೇಳಿ, ವಿವಾದಕ್ಕೆ ಇತಿಶ್ರೀ ಹಾಡಬೇಕೆಂದು ಒಕ್ಕೊರನಿಂದ ಆಗ್ರಹಿಸಿದ್ದಾರೆ. ವಿಶ್ವೇಶ್ವರ ಭಟ್ಟರು ಕಳೆದ ಕೆಲ ಸಮಯದಿಂದ ತಮ್ಮ ಮಾಧ್ಯಮಗಳಲ್ಲಿ ತಾಳಮದ್ದಲೆ ಕಲಾವಿದರ ಕುರಿತಂತೆ ನಡೆಸುತ್ತಿರುವ ಅವಹೇಳನದ…

Read More

ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿ ರಾಷ್ಟ್ರಮಟ್ಟಕ್ಕೆ ಆಯ್ಕೆ.

ಪುತ್ತೂರು: ಆಂದ್ರಪ್ರದೇಶದಲ್ಲಿ ಜನವರಿ 15 ರಿಂದ ನಡೆಯಲಿರುವ ಜ್ಯೂನಿಯರ್ ವಿಭಾಗ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪುತ್ತೂರು ತಾಲೂಕಿನ ಕುಂಬ್ರದ ಯುವಕ ಅದೀಶ್ ಶೆಟ್ಟಿ ಆಯ್ಕೆಯಾಗಿರುವರು. ಇವರು ಕರ್ನಾಟಕ ತಂಡವನ್ನು ಪ್ರತಿನಿಧಿಸಲಿರುವರು. ಪ್ರಸ್ತುತ ಇವರು ಮಂಗಳೂರಿನ ತೃಷಾ ಕಾಲೇಜಿನ ಬಿ.ಕಾಂ ವಿದ್ಯಾರ್ಥಿ ಆಗಿದ್ದು, ತನ್ನ ಪದವಿ ಪೂರ್ವ ವಿದ್ಯಾಭ್ಯಾಸವನ್ನು ಮಂಗಳೂರಿನ ಶಕ್ತಿ ಕಾಲೇಜ್ ನಲ್ಲಿ , ಹೈಸ್ಕೂಲ್ ವಿದ್ಯಾಭ್ಯಾಸವನ್ನು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿಯೂ ಮತ್ತು ಪ್ರಾಥಮಿಕ ವಿದ್ಯಾಭ್ಯಾಸವನ್ನು ಕೋಡಿಂಬಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರೈಸಿದ ವಿದ್ಯಾರ್ಥಿಯಾಗಿರುವರು….

Read More

ಪಡೀಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿ ಕಾಮಗಾರಿ ಪೂರ್ಣ; ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತಿಯಲ್ಲಿ ಉದ್ಘಾಟನೆ

ಮ.ನ.ಪಾ ವ್ಯಾಪ್ತಿಯ ಪಡೀಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದ್ದು ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡಿತು. ನಂತರ ಮಾತನಾಡಿದ ಶಾಸಕರು, ಚಿಕಿತ್ಸೆಗಾಗಿ ಇಲ್ಲಿ ಬರುವ ಎಲ್ಲಾ ರೋಗಿಗಳಿಗೆ ಉತ್ತಮ ಸೌಲಭ್ಯ ನೀಡುವಂತಾಗಲು ನೂತನ ಕೊಠಡಿ ಹಾಗೂ ಸುಸಜ್ಜಿತ ಮೇಲ್ಚಾವಣಿಯನ್ನು ಶಾಸಕರ ಪ್ರದೇಶಾಭಿವೃದ್ಧಿ ಅನುದಾನದ ಸಹಾಯದಿಂದ ನಿರ್ಮಿಸಲಾಗಿದ್ದು ಸ್ಥಳೀಯ ನಿವಾಸಿ ಹಾಗೂ ನನ್ನ ಶಾಲಾ ದಿನಗಳ ಶಿಕ್ಷಕಿ ಲತಾ ಟೀಚರ್ ರವರು ಉದ್ಘಾಟನೆಗೊಳಿಸಿರುವುದು ಅತ್ಯಂತ ಸಂತೋಷ ತಂದಿದೆ. ಅಳಪೆ, ಕಣ್ಣೂರು, ಮರೋಳಿ, ಬಜಾಲ್, ಶಕ್ತಿನಗರ,…

Read More

‘ನೀ ಬಾಂಗ್ಲಾದೇಶದವನಾ’ ಎಂದು ಹೇಳಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕರಿಗೆ ಹಲ್ಲೆ: ಜೈ ಶ್ರೀರಾಮ್ ಹೇಳುವಂತೆ ಒತ್ತಾಯ

ಕಡಲನಗರಿ ಮಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಭಾರತೀಯನನ್ನೇ ಬಾಂಗ್ಲಾದೇಶದವನು ಎಂದು ಹೇಳಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ತಂಡವೊಂದು ಹಲ್ಲೆ ಮಾಡಿದೆ. ಅಂದಹಾಗೇ ಈ ಘಟನೆ ಮಂಗಳೂರಿನ ಕಾವೂರು ಠಾಣೆ ವ್ಯಾಪ್ತಿಯ ಕೂಳೂರು ಚರ್ಚ್ ಬಳಿ ನಡೆದಿದ್ದು ಘಟನೆ ಸಂಬಂಧಿಸಿ ನಾಲ್ವರು ಯುವಕರ ಮೇಲೆ ಕಾವೂರು ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್ ದಾಸ್ ಎಂಬುವವರನ್ನು ಬಂಧಿಸಲಾಗಿದೆ. ಜಾರ್ಖಂಡ್ ಮೂಲದ ದಿಲ್‌ಜಾನ್ ಅನ್ಸಾರಿ ಎಂಬಾತ ಕಳೆದ…

Read More

ಅತ್ತಾವರ–ಪಾಂಡೇಶ್ವರ ಪ್ರದೇಶಗಳಲ್ಲಿ ಕೃತಕ ನೆರೆಯ ಶಾಶ್ವತ ಪರಿಹಾರಕ್ಕೆ ಶಾಸಕ ವೇದವ್ಯಾಸ್ ಕಾಮತ್ ಸ್ಥಳ ವೀಕ್ಷಣೆ, ತುರ್ತು ಕ್ರಮಕ್ಕೆ ಸೂಚನೆ

ಮ.ನ.ಪಾ ವ್ಯಾಪ್ತಿಯ ಅತ್ತಾವರ 5ನೇ ಅಡ್ಡ ರಸ್ತೆ, ಪಾಂಡೇಶ್ವರ, ಶಿವನಗರ, ಸುಭಾಷ ನಗರ ಮೊದಲಾದೆಡೆ ಕಳೆದ ಮಳೆಗಾಲದಲ್ಲಿ ಕೃತಕ ನೆರೆಯಿಂದಾಗಿ ಅಪಾರ ಪ್ರಮಾಣದ ಹಾನಿಯಾಗಿದ್ದು ಅದಕ್ಕೆ ಕಾರಣ, ತುರ್ತಾಗಿ ನಡೆಯಬೇಕಿರುವ ಕಾರ್ಯ, ಭವಿಷ್ಯದಲ್ಲಿ ಪ್ರವಾಹ ಮರುಕಳಿಸದಂತೆ ಎಚ್ಚರವಹಿಸುವುದು ಸೇರಿದಂತೆ ಮುಂಜಾಗ್ರತಾ ಕ್ರಮದ ಬಗ್ಗೆ ಶಾಸಕ ವೇದವ್ಯಾಸ್ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳ ವೀಕ್ಷಣೆ ನಡೆಸಿದರು. ರಾಜಕಾಲುವೆಯ ನೀರು ಹಾದು ಹೋಗಿ ಹೊಯ್ಗೆ ಬಜಾರ್ ಬಳಿ ನದಿ ಸೇರುವ ಭಾಗದಲ್ಲಿ ನೀರು ಸರಾಗವಾಗಿ ಹರಿಯಲು ಅಡಚಣೆಯಾಗದಂತೆ ತಕ್ಷಣ ಹೂಳೆತ್ತುವ…

Read More

ಬಂಗ್ರಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರೀ ಕ್ಷೇತ್ರದಲ್ಲಿ ವಿಶೇಷ ದೀಪೋತ್ಸವದೊಂದಿಗೆ ಧನುರ್ಮಾಸ ಪೂಜೆ ಸಂಪನ್ನ.

ಮಂಜೇಶ್ವರ: ಬಂಗ್ರಮಂಜೇಶ್ವರ ಶ್ರೀ ಕಾಳಿಕಾಪರಮೇಶ್ವರೀ ದೇವಸ್ಥಾನದಲ್ಲಿ ಕಳೆದ ಡಿಸೆಂಬ‌ರ್ 16 ರಿಂದ ಆರಂಭಗೊಂಡ ಧನುರ್ಮಾಸ ಪೂಜಾ ಮಹೋತ್ಸವ ಇಂದು (14-01-2026) ಮಕರ ಸಂಕ್ರಮಣ ದಿನದಂಗವಾಗಿ ಮುಂಜಾನೆ ವಿಶೇಷ ದೀಪೋತ್ಸವದೊಂದಿಗೆ ಶ್ರೀ ಕಾಳಿಕಾ ಪರಮೇಶ್ವರೀ ದೇವಿಗೆ ಹಾಗೂ ಶ್ರೀ ಮಹಾಗಣಪತಿ, ಶ್ರೀ ವಿಶ್ವಕರ್ಮ ದೇವರಿಗೆ ಪೂಜೆ ನೆರವೇರುವುದರೊಂದಿಗೆ ಸಮಾಪ್ತಿಗೊಂಡಿತು. ಮುಂಜಾನೆ 3 ಗಂಟೆಯಿಂದ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ಸೀಯಾಳ ಅಭಿಷೇಕ ನಡೆಯಿತು.ಬಳಿಕ ಕಾಸರಗೋಡು ಉಳಿಯತಡ್ಕ ಶ್ರೀ ಗುರುಕೃಪಾ ವೈದಿಕ ಶಿಕ್ಷಣ ಸಮಿತಿಯ ಭಜನಾ ಮಂಡಳಿಯಿಂದ ಭಜನಾ ಸಂಕೀರ್ತನೆ…

Read More

“ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ 2026–27: ಪ್ರಶಾಂತ್ ಪೂಂಜಾಲಕಟ್ಟೆ ಅಧ್ಯಕ್ಷರಾಗಿ ಪದಗ್ರಹಣ”

ಬಂಟ್ವಾಳ: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2026-27ನೇ ಸಾಲಿನ ನೂತನ ಅಧ್ಯಕ್ಷ ಪ್ರಶಾಂತ್ ಪೂಂಜಾಲಕಟ್ಟೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸೋಮವಾರ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು.ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ, ಜಿಲ್ಲೆಯ ಪತ್ರಕರ್ತರ ಸಂಘವು ಗ್ರಾಮವಾಸ್ತವ್ಯದಂತಹ ಸಮಾಜಮುಖಿ ಕಾರ್ಯಗಳ ಮೂಲಕ ವಿಶೇಷ ಹೆಸರನ್ನು ಗಳಿಸಿಕೊಂಡಿದ್ದು, ಹಲವು ಸವಾಲುಗಳ ಮಧ್ಯೆ ಎಲ್ಲಾ ಪತ್ರಕರ್ತರ ಸಹಕಾರದೊಂದಿಗೆ ಸಂಘ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಪ್ರಶಾಂತ್ ಪೂಂಜಾಲಕಟ್ಟೆ ನೇತೃತ್ವದ ಬಂಟ್ವಾಳದ ಸಂಘವು…

Read More

ಬೆಳಗಾವಿಯ ಅಧಿವೇಶದಲ್ಲಿ ಚರ್ಚೆಯಾಗಿದ್ದು ಮುಖ್ಯ ಮಂತ್ರಿ ಬದಲಾವಣೆ ಬಗ್ಗೆ ಹೊರತು , ರಾಜ್ಯದ ಅಭಿವೃದ್ಧಿಯ ಕಾಮಗಾರಿಯ ಬಗ್ಗೆ ಅಲ್ಲ , ಅಲ್ಲಿ ನಡೆದದ್ದು ನಾಮಕಾವಸ್ತೆಯ ಅಧಿವೇಶನ : ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್

ಮಂಗಳೂರು:ಉತ್ತರ ಕರ್ನಾಟಕದ ಬೆಳಗಾವಿಯ ಅಧಿವೇಶದಲ್ಲಿ ರಾಜ್ಯದ ಅಭಿವೃದ್ಧಿಯ ಕುರಿತು ಚರ್ಚೆಗಳು ನಡೆಯದೆ ಮುಂದಿನ ಮುಖ್ಯಮಂತ್ರಿಗಳು ಯಾರು ಎನ್ನುವುದರ ಬಗ್ಗೆ ಚರ್ಚೆಗಳು ನಡೆದಿದೆ . ಈ ಮೂಲಕ ರಾಜ್ಯ ಸರಕಾರ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ನಿರ್ಲಕ್ಷ್ಯವನ್ನು ತೋರಿದೆ ಎಂದು ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಆರೋಪಿಸಿದ್ದಾರೆ. ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ನಾಯಕರಿಗೆ ಅಭಿವೃದ್ಧಿಯ ಕಾಮಗಾರಿಯ ಬಗ್ಗೆ ಆಸಕ್ತಿ ಇಲ್ಲ. ರಾಜ್ಯದ ರೈತರ , ಮಹಿಳೆಯರ ಕಲ್ಯಾಣ ಯೋಜನೆಗಳ ಬಗ್ಗೆ…

Read More
error: Content is protected !!