ಮಕ್ಕಳನ್ನು ಸಮಾಜ, ದೇಶದ ಸಂಪತ್ತನ್ನಾಗಿ ರೂಪಿಸಿ: ಖಾದರ್

ಮಂಗಳೂರು: ವಿದ್ಯಾರ್ಥಿಗಳು ದೇಶದ ಪರಂಪರೆ ಉಳಿಸಿಕೊಂಡು ಹೋಗುವಂತೆ ಮಾಡುವಲ್ಲಿ ಶಿಕ್ಷಕರ ಶ್ರಮ ಅಗತ್ಯ. ಮಕ್ಕಳನ್ನು ತಂದೆ, ತಾಯಂದಿರ ಮಾತ್ರವಲ್ಲದೆ ಸಮಾಜ, ದೇಶದ ಸಂಪತ್ತನ್ನಾಗಿ ರೂಪಿಸಬೇಕಿದೆ ಎಂದು ವಿದಾನಸಭಾಧ್ಯಕ್ಷ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಜಪ್ಪಿನಮೊಗರು ಪ್ರೆಸ್ಟೀಜ್ ಶಾಲಾ ಸಭಾಂಗಣದಲ್ಲಿ ನಡೆದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ…

Read More

ಆನ್‌ಲೈನ್ ಟ್ರೇಡಿಂಗ್ ವಂಚನೆ: 6 ಮಂದಿ ಬಂಧನ

ಮಂಗಳೂರು: ಲೈನ್ ವಂಚನೆ ಪ್ರಕರಣಗಳಲ್ಲಿ ಒಟ್ಟು ಆರು ಮಂದಿ ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿ, ಒಟ್ಟು ೬ಲಕ್ಷ ರೂ. ನಗದು ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಪು ತಾಲೂಕಿನ ಶಂಕರಪುರದ ಜೊಸ್ಸಿ ರವೀಂದ್ರ ಡಿಕ್ರೂಸ್(೫೪), ಎಂಬವರಿಗೆ ಹೂಡಿಕೆ ಹೆಸರಿನಲ್ಲಿ ಒಟ್ಟು ೭೫,೦೦,೦೦೦ರೂ. ಹಣವನ್ನು ಆನ್‌ಲೈನ್ ವಂಚನೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸೆನ್ ಪೊಲೀಸರು, ಸುರತ್ಕಲ್ ಕೋಡಿಕೆರೆಯ ಮೊಹಮದ್ ಕೈಸ್(೨೦), ಹೆಜಮಾಡಿ ಕನ್ನಂಗಾರಿನ ಅಹಮದ್ ಅನ್ವೀಜ್ (೨೦), ಬಂಟ್ವಾಳ ಜೋಡುಮಾರ್ಗದ ಸಫ್ವಾನ್(೩೦), ತಾಸೀರ್(೩೧) ಎಂಬವರನ್ನು ಬಂಧಿಸಿ, ಮೊಬೈಲ್ ಫೋನ್‌ಗಳನ್ನು…

Read More

ಬಾವಿಯಲ್ಲಿ ಮಹಿಳೆಯ ಶವ ಪತ್ತೆ.

ಮಂಜೇಶ್ವರ:ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಮಂಜೇಶ್ವರ ಸಮೀಪದ ಮೀಯಪದವು ಅಡ್ಕದಗುರಿ ಎಂಬಲ್ಲಿ ನಡೆದಿದೆ.ಅಡ್ಕದಗುರಿಯ ಐರಿನ್ ಡಿಸೋಜ (60) ಮೃತಪಟ್ಟವರು. ಬುಧವಾರ ರಾತ್ರಿ ಮಲಗಿದ್ದ ಐರಿನ್ ಬೆಳಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದರು. ಶೋಧ ನಡೆಸಿದಾಗ ಮೃತದೇಹ ಮನೆ ಅಂಗಳದ ಬಾವಿಯಲ್ಲಿ ಪತ್ತೆಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ತಲಪಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಮೇಲಕ್ಕೆತ್ತಿದರು. ಮಂಜೇಶ್ವರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದರು.

Read More

ಗುರುಭ್ಯೋ ನಮಃ

ಅಂಧಕಾರದ ಕತ್ತಲನ್ನು ದೂರ ಮಾಡಿ ಬದುಕಿಗೆ ಜ್ಞಾನಜ್ಯೋತಿಯ ಬೆಳಗಿಸಿ ಜಗದ ಮಾಯೊಳಗಿನ ಮಹಿಮೆಯ ತಿಳಿಸಿದ ನನ್ನೆಲ್ಲಾ ಗುರುಗಳಿಗೆ ಪ್ರಣಾಮಗಳು. ಇಂದು ನನ್ನ ಬದುಕಿನ ಸುಂದರ ಕ್ಷಣಕ್ಕೆ ಕಾರಣರಾದ ನನ್ನ ಗುರುಗಳ ಬಗ್ಗೆ ನಾನು ಹೇಳಲೇಬೇಕು. ಸೋಮಾರಿಯಾದ ನನ್ನಂಥಹಾ ವಿದ್ಯಾರ್ಥಿಯಲ್ಲೂ ಬರವಣಿಗೆಯ ಅಭಿರುಚಿಯನ್ನು ಬೆಳಸಿ, ನನ್ನಿಂದ ಅಸಾಧ್ಯ ಎಂದುಕೊಂಡಿದ್ದ ಸಾಹಿತ್ಯ ರಚನೆಗೆ ನೆರಳಾಗಿ, ಪ್ರತೀ ಅಕ್ಷರದ ಹಿಂದಿನ ಶಕ್ತಿಯಾಗಿ , ಬಾಳಿಗೆ ನವ ಕನಸನ್ನು ಕಾಣಲು – ಅದರ ಸಾಕ್ಷಾತ್ಕಾರ ಮಾಡಲು ಸಾಧ್ಯ ಪಡಿಸುವ ಸೂರ್ತಿಯಾಗಿ, ಪತ್ರಕರ್ತ ದಿಟ್ಟ…

Read More

ಚಂದ್ರ ಗ್ರಹಣ 2025

ಚಂದ್ರ ಗ್ರಹಣವು 2025 ರ ಕೊನೆಯ ಇದೇ ಸೆಪ್ಟೆಂಬರ್ 7 ರಂದು ಸಂಭವಿಸಲಿದೆ. ಈ ಚಂದ್ರ ಗ್ರಹಣವನ್ನು ಭಾರತದಲ್ಲಿ ನೋಡಬಹುದಾಗಿದೆ. ಸೆಪ್ಟೆಂಬರ್ 7ರ ಮಧ್ಯರಾತ್ರಿ 9:57 ಕ್ಕೆ ಶುರುವಾಗಿ 8ರ ಮಧ್ಯರಾತ್ರಿ 1:26 ರವರೆಗೆ ಗ್ರಹಣ ಕಾಲ ಇರಲಿದೆ. ಚಂದ್ರ ಗ್ರಹಣದ ಪೂರ್ಣ ಪ್ರಭಾವದ ಆರಂಭ ಮಧ್ಯರಾತ್ರಿ 12.28 ರಿಂದ 1.56 ರವರೆಗೆ ಇರಲಿದೆ.

Read More

ಮಂಜೇಶ್ವರದೆಲ್ಲೆಡೆ ಸಂಭ್ರಮದ ಈದ್ ಮಿಲಾದ್.

ಮಂಜೇಶ್ವರ: ಪ್ರವಾದಿ ಹಜರತ್ ಮುಹಮ್ಮದ್ ನಬಿ (ಸ.ಅ.ವ) ಅವರ ಜನ್ಮ ದಿನಾಚರಣೆಯಾದ ಈದ್ ಮಿಲಾದ್ ಉಲ್ ನಬಿ ಪವಿತ್ರತೆಯೊಂದಿಗೆ ಹಾಗೂ ಭಕ್ತಿ ಭಾವದಿಂದ ಮಂಜೇಶ್ವರದಾದ್ಯಂತ ಆಚರಿಸಲಾಯಿತು. ಮಸೀದಿಗಳಲ್ಲಿ ವಿಶೇಷ ಮೌಲೂದ್ ಪಠಣ, ಧಾರ್ಮಿಕ ಉಪನ್ಯಾಸಗಳು ಮತ್ತು ಪ್ರಾರ್ಥನೆಗಳು ನೆರವೇರಿದವು. ಮಂಜೇಶ್ವರದ ಪ್ರಮುಖ ಬೀದಿಗಳು ಹಸಿರು ಧ್ವಜಗಳು, ಬೆಳಕಿನ ಅಲಂಕಾರ ಮತ್ತು ಧಾರ್ಮಿಕ ಸಂದೇಶಗಳಿಂದ ಕಂಗೊಳಿಸಿತು. ಮಕ್ಕಳಿಂದ ಹಿಡಿದು ವೃದ್ಧರ ವರೆಗೆ ಎಲ್ಲರೂ ಶೋಭಾಯಾತ್ರೆಗಳಲ್ಲಿ ಪಾಲ್ಗೊಂಡು ಪ್ರವಾದಿಯ ಜೀವನೋಪದೇಶಗಳನ್ನು ಸ್ಮರಿಸಿದರು. ಧಾರ್ಮಿಕ ಪಂಡಿತರು ಪ್ರವಾದಿಯ ಆದರ್ಶಗಳನ್ನು ಪಾಲಿಸುವ ಮಹತ್ವವನ್ನು…

Read More

ಮ . ನ . ಪಾ ದಲ್ಲಿ ಕನ್ನಡ ಬಾರದ ಅನ್ಯ ಭಾಷೆಯ ಅಧಿಕಾರಿಯ ನೇಮಕ: ಕನ್ನಡ ಪರ ಸಂಘಟನೆಗಳು ಕಿಡಿ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕನ್ನಡ ಓದಲು ಬರೆಯಲು ಬಾರದ ಅಧಿಕಾರಿ ಕಾನೂನು ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ಕನ್ನಡಪರ ಸಂಘಟನೆಗಳು ಕಿಡಿಕಾರಿವೆ. ಕೇರಳ ಮೂಲದ ಮಹಿಳೆಯು ಕೇರಳದ ಮಲಯಾಳಂ ಮಾಧ್ಯಮದಲ್ಲಿ ವಿಧ್ಯಾಭ್ಯಾಸವನ್ನು ಮಾಡಿರುವುದು ಕನ್ನಡ, ತುಳು ಭಾಷೆ ಬಾರದಿರುವುದು ಜನಸಾಮಾನ್ಯರಿಗೆ ವ್ಯವಹರಿಸಲು ಸಮಸ್ಯೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದರ ಹಿಂದೆ ರಾಜಕೀಯ ಒತ್ತಡ ಇದೆ ಎನ್ನುವುದು ಕನ್ನಡ ಸಂಘಗಳ ಆಕ್ರೋಶವಾಗಿದೆ. ಕೆ.ಸಿ.ಎಸ್.ಆರ್ ನಿಯಮಗಳು 1974ರಲ್ಲಿ ಸರಕಾರಿ SSLC/10ನೇ ತರಗತಿಯಲ್ಲಿ ಕನ್ನಡ ಭಾಷೆ…

Read More

ಮಾರ್ಗದೀಪ ಸಾಂಸ್ಕೃತಿಕ ಸಮಿತಿ ದುಬೈ ವತಿಯಿಂದ ನಡೆದ ಹನ್ನೊಂದನೇ ವರ್ಷದ ಗಣೇಶೋತ್ಸವ.

ದುಬೈ : ಮಾರ್ಗದೀಪ ಸಾಂಸ್ಕೃತಿಕ ಸಮಿತಿ ದುಬೈ ಇದರ ವತಿಯಿಂದ ನಡೆದ 11ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಆಗಸ್ಟ್ 31ರಂದು ಆದಿತ್ಯವಾರ ಇಂಡಿಯನ್ ಅಸೋಸಿಯೇಷನ್ ಹಾಲ್ ಅಜ್ಮಾನ್ ನಲ್ಲಿ ಸಾಂಸ್ಕೃತಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು. ಪುರೋಹಿತರಾದ ಸಂತೂರ್ ಶ್ರೀ ಲಕ್ಷ್ಮಿಕಾಂತ್ ಭಟ್ ಹಾಗೂ ಶ್ರೀ ರಾಜೇಶ್ ಅಡಿಗರವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳನ್ನು ನಡೆಸಿದರು.ಬೆಳಿಗ್ಗೆ ಗಣಹೋಮದೊಂದಿಗೆ ಪ್ರಾರಂಭವಾದ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ ಮಹಾ ಅನ್ನದಾನದಲ್ಲಿ ಸಹಸ್ರ ಭಕ್ತಾದಿಗಳು ಪಾಲ್ಗೊಂಡು ಸಂಜೆ ವಿಸರ್ಜನಾ ಮೆರವಣಿಗೆ ನಡೆಯಿತು. ನಡೆದ ಸಭಾ…

Read More

ಎ ಟಿ ಎಂ ಕಳ್ಳತನದ ವಿಫಲ ಯತ್ನ ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ

ಉಳ್ಳಾಲ: ರಾತ್ರೋ ರಾತ್ರಿ ಕೋಟೆಕಾರು ಬೀರಿ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ದೆಹಲಿಯ ಕಾವಲು ವ್ಯವಸ್ಥೆಯ ಎಚ್ಚರಿಕೆಯ ಮೇರೆಗೆ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿಯ ನಿವಾಸಿ ನಾಗಪ್ಪ ಕೇರಳಟ್ಟಿ (41) ಎಂಬಾತನನ್ನು ಮುಂಜಾನೆ 3 ಗಂಟೆ ಸುಮಾರಿಗೆ ಎಸ್‌ಬಿಐ ಎಟಿಎಂನಲ್ಲಿದ್ದ ಕ್ಯಾಶ್ ಬಾಕ್ಸ್ ಒಡೆಯಲು ಯತ್ನಿಸುತ್ತಿದ್ದಾಗ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಪೊಲೀಸರ ಪ್ರಕಾರ, ನಾಗಪ್ಪ ಬೆಳಗಿನ ಜಾವ 2:30 ರ ಸುಮಾರಿಗೆ ಎಟಿಎಂ ಒಳಗೆ ಪ್ರವೇಶಿಸಿ, ತಾನು ತಂದಿದ್ದ ಉಪಕರಣಗಳನ್ನು…

Read More

ವೈರಲ್ ಆದ ಕಟೀಲಿನ ಪಡಿತರ ಅಂಗಡಿಯ ಗೋಣಿ ಚೀಲ- ಸುದ್ದಿಗೋಷ್ಠಿಯಲ್ಲಿ ಸತೀಶ್ ಕಟೀಲ್ ಸ್ಪಷ್ಟತೆ

ಮಂಗಳೂರು: ಇತ್ತೀಚಿಗೆ ಬಾರಿ ಪ್ರಮಾಣದಲ್ಲಿ ವೈರಲ್ ಆದ ಕಟೀಲಿನ ಪಡಿತರ ಅಂಗಡಿಯ ಗೋಣಿ ಚೀಲದ ಸಮಸ್ಯೆಯನ್ನು ಮತ್ತು ಪಡಿತರ ಅಂಗಡಿಯಲ್ಲಿ ಏನೇನು ನಡೆಯಿತು ಎನ್ನುವುದರ ಕುರಿತು ಸತೀಶ್ ಕಟೀಲ್ ಸ್ಪಷ್ಟತೆ ನೀಡಿದರು . ಅವರು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಟೀಲು ಪಡಿತರ ಅಂಗಡಿಯನ್ನು ಹಲವು ವರ್ಷಗಳಿಂದ ಮಂಜುನಾಥ ನಾಯಕ್ ಎಂಬುವವರು ಕಟೀಲು ಸಮೀಪ ನ್ಯಾಯಬೆಲೆ ಅಂಗಡಿ‌ಮೂಲಕ ಸರಕಾರದಿಂದ ಸಿಗುವ ರೇಷನನ್ನು ನೀಡುತ್ತಿದ್ದು, ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದ್ದರು, ಆದರೆ ಇತ್ತೀಚಿನ ಕೆಲವರ್ಷಗಳಿಂದ ಈ…

Read More
error: Content is protected !!