ವರ್ಕಾಡಿ ಮಂಡಲ ಕಾಂಗ್ರೆಸ್ ಕಚೇರಿಯಲ್ಲಿ ಮತದಾರರ ಪಟ್ಟಿ ವಾರ್ಡ್ ಕಾಂಗ್ರೆಸ್ ಅಧ್ಯಕ್ಷರಿಗೆ ಹಂಚುವ ಕಾರ್ಯಕ್ರಮ.

ಮಂಜೇಶ್ವರ :ವರ್ಕಾಡಿ ಮಂಡಲ ಕಾಂಗ್ರೆಸ್ ಕಚೇರಿಯಲ್ಲಿ ಮತದಾರರ ಪಟ್ಟಿ ವಾರ್ಡ್ ಕಾಂಗ್ರೆಸ್ ಅಧ್ಯಕ್ಷರಿಗೆ ಹಂಚುವ ಕಾರ್ಯಕ್ರಮ ನಡೆಯಿತು. .ಕಾರ್ಯಕ್ರಮದಲ್ಲಿ ವರ್ಕಾಡಿ ಮಂಡಲ ಅಧ್ಯಕ್ಷ ಪುರುಷೋತ್ತಮ ಅರಿಬೈಲ್ ಅಧ್ಯಕ್ಷತೆ ವಹಿಸಿದ್ದರು ಕಾರ್ಯಕ್ರಮದಲ್ಲಿ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮ್ಮರ್ ಬೋರ್ಕಳ. U. D.F.ಅಧ್ಯಕ್ಷ ಮಜಲ್ ಮಹಮ್ಮದ್. ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಗಣೇಶ್ ಪಾವೂರು. ಕಾಂಗ್ರೆಸ್ ಕಾರ್ಯದರ್ಶಿವಸಂತ ರಾಜ್ ಸದಾಶಿವ ಆಜೀಸ್ ಕಲ್ಲೂರು ಮಹಮ್ಮದ್ ಕೆದುoಬಾಡಿ ಇನ್ನು ಹಲವು ನಾಯಕರು ಕಾರ್ಯಕರ್ತರು ಭಾಗವಹಿಸಿದರು

Read More

ಮಂಗಳೂರಿಗೂ ಉದ್ಯಮ ವಿಸ್ತರಿಸಿದ ರೆಸೊಲೆಕ್ಸ್-ನೋವಾ ಸ್ಟೀಪ್ ಕಂಫರ್ಟ್ಸ್ ಸಹಭಾಗಿತ್ವದಲ್ಲಿ ನೂತನ ಮಳಿಗೆ ಪ್ರಾರಂಭ

ಮಂಗಳೂರು: ಸ್ವಿಂಗ್, ಕಾಯಿರ್ ಮತ್ತು ಫೋಮ್ ಹಾಸಿಗೆಗಳ ಉತ್ಕೃಷ್ಟ ಶ್ರೇಣಿಗೆ ಹೆಸರುವಾಸಿಯಾದ ಪ್ರಮುಖ ಹಾಸಿಗೆ ಬ್ರಾಂಡ್ ರೆಸೊಲೆಕ್ಸ್, ಮಂಗಳೂರಿನ ಬಲ್ಲಾಳಭಾಗ್‌ನಲ್ಲಿ ತನ್ನ ಹೊಸ ವಿಶೇಷ ಪ್ರಾಂಚೈಸಿ ಮಳಿಗೆಗೆ ಚಾಲನೆ ನೀಡಿದೆ. ನೋವಾ ಸೇಲ್ಸ್ ಸ್ಟೀಪ್ ಕಂಫರ್ಟ್ಸ್ ಎಂಬ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಮಳಿಗೆಯು, ಈ ಪ್ರದೇಶದ ಗ್ರಾಹಕರಿಗೆ ಗುಣಮಟ್ಟದ ನಿದ್ರೆಗೆ ಅಗತ್ಯ ಪರಿಕರಗಳನ್ನು ಒದಗಿಸಲಿದೆ. 850 ಚದರ ಅಡಿ ವಿಸ್ತೀರ್ಣದಲ್ಲಿ ವ್ಯಾಪಿಸಿರುವ ಈ ಮಳಿಗೆಯು ರೆಸ್ಟೋಲೆಕ್ಸ್‌ ನ ಸಂಪೂರ್ಣ ಶ್ರೇಣಿಯ ಕೊಡುಗೆಗಳನ್ನು ಒಳಗೊಂಡಿದೆ. ಇದರಲ್ಲಿ ಹಾಸಿಗೆಗಳು, ದಿಂಬುಗಳು,…

Read More

7ರಂದು ನಗರದಲ್ಲಿ ಫಾತಿಮಾ ರಲಿಯಾ ಅವರ ‘ಕೀಮೋ’ ಪುಸ್ತಕ ಬಿಡುಗಡೆ.

ಭಾನುವಾರ  ಸಂಜೆ‌ ನಾಲ್ಕು ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್‌ ಸಿಕ್ವೇರಾ ಸಭಾಂಗಣದಲ್ಲಿ ಫಾತಿಮಾ ರಲಿಯಾ ಅವರ ಅನುಭವ ಕಥನ ‘ಕೀಮೋ’ ಬಿಡುಗಡೆಯಾಗಲಿದೆ.  ಡಾ. ಶ್ರೀನಿವಾಸ ಕಕ್ಕಿಲ್ಲಾಯ ಅವರು ಪುಸ್ತಕ ಬಿಡುಗಡೆ ಮಾಡಲಿದ್ದು, ಪುಸ್ತಕದ ಕುರಿತು ರಮ್ಯ ಕೆ.ಜಿ. ಮೂರ್ನಾಡು ಮತ್ತು ಶರೀಫ್ ಹಿಮಮಿ ಶುಟ್ಟಿಕೊಪ್ಪ ಮಾತನಾಡಲಿದ್ದಾರೆ‌. ಈ ಪುಸ್ತಕವನ್ನು ‘ಜೀರುಂಡೆ ಪುಸ್ತಕ’ ಪ್ರಕಟಿಸಿದ್ದು ಇದು ಫಾತಿಮಾ ರಲಿಯಾರ ನಾಲ್ಕನೇ ಕೃತಿಯಾಗಿದೆ. ‘ಜೀರುಂಡೆ ಪುಸ್ತಕ’ದ ಎಲ್ಲಾ ಕೃತಿಗಳು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಿದೆ ಎಂದು ಪ್ರಕಟಣೆ…

Read More

ಧರ್ಮಸ್ಥಳ ಕೇಸ್ ; ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ಮನಾಫ್‌ ಗೆ ಎಸ್‌ಐಟಿ ನೋಟಿಸ್

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮೇಲೆ ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್‌ನನ್ನು ಎಸ್‌ಐಟಿ ವಿಚಾರಣೆ ನಡೆಸಿದೆ. ಈ ಮಧ್ಯೆ ಬುರುಡೆ ಕಥೆಯನ್ನು ಕೇರಳಕ್ಕೆ ಹಬ್ಬಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಯೂಟ್ಯೂಬರ್ ಮನಾಫ್‌ಗೂ ಎಸ್‌ಐಟಿ ನೋಟಿಸ್ ನೀಡಿದೆ. ಬುರುಡೆ ಕೇಸ್​​ನಲ್ಲಿ ಕೇರಳ ಮೂಲದ ಯೂಟ್ಯೂಬರ್ ಮನಾಫ್​ಗೆ ಎಸ್ಐಟಿ ನೊಟೀಸ್ ನೀಟಿದೆ. ಬುರುಡೆ ಪ್ರಕರಣ ಸಂಬಂಧಿಸಿದಂತೆ ಆರಂಭದಿಂದಲೂ ತನ್ನ ಯೂಟ್ಯೂಬ್ ನಲ್ಲಿ ಈ ಮುನಾಫ್​ ನಾನಾ ಕಥೆಗಳನ್ನು ಕಟ್ಟಿದ್ದ ಎನ್ನಲಾಗ್ತಿದೆ. ಜಯಂತ್…

Read More

ಕೈಕಂಬದಲ್ಲಿ ರಾಶಿ ಬಿದ್ದಿರುವ ತ್ಯಾಜ್ಯ. ಪರಿಹಾರವನ್ನು ಕಲ್ಪಿಸದ ಅಧಿಕಾರಸ್ಥರ ವಿರುದ್ಧ ಪ್ರತಿಭಟನೆ.

ಮಂಜೇಶ್ವರ : ಕೈಕಂಬದಲ್ಲಿ ರಾಶಿ ಬಿದ್ದಿರುವ ತ್ಯಾಜ್ಯಗಳಿಗೆ ಯಾವುದೇ ಪರಿಹಾರವನ್ನು ಕಲ್ಪಿಸದ ಅಧಿಕಾರಸ್ಥರ ವಿರುದ್ಧ ಹಾಗೂ ಕೈಕಂಬದ ಅಪಾರ್ಟ್‌ಮೆಂಟೊಂದರ ಮಲಿನ ಜಲವನ್ನು ಸಾರ್ವಜನಿಕ ಸ್ಥಳಕ್ಕೆ ಹರಿಯಬಿಡುವುದರ ವಿರುದ್ಧ ಕೈಕಂಬ ಮಾಲಿನ್ಯಮುಕ್ತ ಕ್ರಿಯಾ ಸಮಿತಿ ಪ್ರತಿಭಟನೆ ನಡೆಸಿತು. ಕೈಕಂಬ ಅಪಾರ್ಟ್‌ಮೆಂಟ್‌ನಿಂದ ಸಮೀಪ ನಿವಾಸಿಗಳ ಕುಡಿಯುವ ನೀರಿನ ಮೂಲ ಕೂಡಾ ಮಲಿನೀಕರಣಗೊಳ್ಳುತ್ತಿದ್ದು ಹಲವು ವರ್ಷಗಳಿಂದ ಕಾನೂನು ಹೋರಾಟ ನಡೆಸಲಾಗುತಿದ್ದರೂ ಇವರ ವಿರುದ್ಧ ನಿರಂತರ ದೂರು ನೀಡಲಾಗುತಿದ್ದರೂ ಇದ್ಯಾವುದನ್ನೂ ಲೆಕ್ಕಿಸದೆ ನಿರಂತರವಾಗಿ ಫ್ಲಾಟ್‌ನಿಂದ ಮಲಿನ ಜಲವನ್ನು ಸಾರ್ವಜನಿಕ ಸ್ಥಳಗಳಿಗೆ ಹರಿಯಬಿಡಲಾಗುತ್ತಿದ್ದರೂ ಈ…

Read More

ಹಯಾತುಲ್ ಇಸ್ಲಾಂ ಮದ್ರಸದಲ್ಲಿ ಮೀಲಾದ್ ಆಚರಣೆ.

ಪುಚ್ಚತ್ತವಯಲ್: ಪ್ರವಾದಿ ಹಜ್ರತ್ ಮುಹಮ್ಮದ್ ಮುಸ್ತಫಾ (ಸ.ಅ) ಅವರ 1500ನೇ ಜನ್ಮದಿನಾಚರಣೆ ಅಂಗವಾಗಿ ಹಯಾತುಲ್ ಇಸ್ಲಾಂ ಮದ್ರಸ, ಪುಚ್ಚತ್ತವಯಲ್‌ನಲ್ಲಿ ಭಕ್ತಿಪೂರ್ಣ ಮೀಲಾದ್ ರ‍್ಯಾಲಿ ಹಾಗೂ ಇತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಜಮಾಅತ್ ಖತೀಬ್ ಉಮರುಲ್ ಫಾರೂಖ್ ಹನೀಫಿ ಅವರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ನಂತರ ಮದ್ರಸ ವಿದ್ಯಾರ್ಥಿಗಳು ವರ್ಣರಂಜಿತ ಘೋಷಯಾತ್ರೆಯಲ್ಲಿ ಭಾಗವಹಿಸಿದರು. ದಫ್, ಸ್ಕೌಟ್ ಮತ್ತು ಹೂವಿನಿಂದ ಅಲಂಕರಿಸಿದ ಫ್ಲವರ್‌ಶೋಗಳು ಮೀಲಾದ್ ರ‍್ಯಾಲಿಗೆ ಮೆರುಗು ನೀಡಿದವು. ಮೀಲಾದ್ ರ‍್ಯಾಲಿಯು ಮಚ್ಚಂಬಾಡಿ ಜುಮಾ ಮಸೀದಿಯಿಂದ ಕೋಡಿ…

Read More

ಓಣಂ

ಓಣಂ ಹಬ್ಬವನ್ನು ಮಲಯಾಳಿಗಳು ಆಚರಿಸುವಂತಹ ವಿಶಿಷ್ಟ ಬಗೆಯ ಹಬ್ಬವಾಗಿದೆ . ಕರಾವಳಿ ಜಿಲ್ಲೆಗಳಲ್ಲಿಯೂ ಈ ಹಬ್ಬದ ಆಚರಣೆಯನ್ನು ತುಂಬಾನೇ ಸಂಭ್ರಮದಿಂದ ಆಚರಿಸುತ್ತಾರೆ . ಈ ಹಬ್ಬವು ಮಹಾಬಲಿ ಚಕ್ರವರ್ತಿ ಅಥವಾ ಮಾವೇಲಿ ಎಂದು ಕರೆಯುವ ಮಹಾರಾಜನೊಂದಿಗೆ ನಂಟನ್ನು ಆತನ ನೆನೆಪಿಗಾಗಿ ಆಚರಣೆಯನ್ನು ಮಾಡುವ ದೇವರ ನಾಡಿನ ಹಬ್ಬವಾಗಿದೆ . ಈ ಹಬ್ಬ ತನ್ನದೇ ಆದ ಹಿನ್ನಲೆಯನ್ನು ಹೊಂದಿದೆ , ತಲೆ ತಲೆ ಮಾರುಗಳ ಹಿಂದೆ ಮಲಯಾಳಂ ನಾಡನ್ನು ಮಹಾಬಲಿ ಎಂಬ ಅಸುರರಾಜನು ಆಳುತ್ತಿದ್ದನು .ಆತ ಅಸುರನಾದರೂ ಅತ್ಯಂತ…

Read More

ಕಾಞಂಗಾಡ್ ಭಾಗದಲ್ಲಿ ಓಣಂ ಹಬ್ಬದ ಅಂಗವಾಗಿ-ಹೂವಿನ ಮಾರಾಟದ ಝಲಕ್

ಕಾಸರಗೋಡು ಜಿಲ್ಲೆಯ ಪ್ರಮುಖ ನಗರಗಳಲ್ಲಿ ಒಂದಾದ ಕಾಞಂಗಾಡ್ ಭಾಗದಲ್ಲಿ ಓಣಂ ಹಬ್ಬದ ಅಂಗವಾಗಿ ಹೂವಿನ ಮಾರಾಟ ಜಬರ್ದಸ್ತ್ ಆಗಿತ್ತು. ನಗರದ ಬಸ್ ನಿಲ್ದಾಣ ದಲ್ಲಿ ಹೂವು ಮಾರಾಟಕ್ಕೆ ಅವಕಾಶವನ್ನು ಕಲ್ಪಿಸಲಾಗಿತ್ತು. ಕರ್ನಾಟಕದ ಘಟ್ಟ ಪ್ರದೇಶಗಳಲ್ಲಿನ ಹೂವು ವ್ಯಾಪಾರಿಗಳು ಇಲ್ಲಿಗೆ ಬಂದು ವ್ಯಾಪಾರ ಮಾಡಿದ್ದರು. ವಿಸ್ತಾರವಾದ ಪ್ರದೇಶದಲ್ಲಿ ಹೂವನ್ನು ಮಾರಾಟಕ್ಕೆಂದು ಹರಡಿತ್ತು. ಇದು ನೋಡುಗರ ಕಣ್ಣನ್ನು ಸೆಳೆಯುತ್ತಿತ್ತು. ಪುಷ್ಪ ಕಾಶಿಯೇ ಈ ಭಾಗದಲ್ಲಿ ಮೇಳೈಸ್ತ ಇರುವುದು ಕಂಡು ಬಂದಿದೆ. ಕೇರಳ ದಾದಂತ್ಯ ಇಂದು ಓಣಂ ಹಬ್ಬವನ್ನು ಮಹಾಬಲಿಯ ಸ್ಮರಣಾರ್ಥಕವಾಗಿ…

Read More

ಕೆನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ಫೈನಲ್ ಪಿಚ್ ಡೇ’

ಮಂಗಳೂರು:ಕೆನರಾ ಎಂಜಿನಿಯರಿಂಗ್ ಕಾಲೇಜಿನ ಉದ್ಯಮಶೀಲತಾ ಅಭಿವೃದ್ಧಿ ಕೋಶ (ಇ.ಡಿ.ಸಿ.) ವತಿಯಿಂದ ಎಕ್ಸ್‌ಪ್ಲೋರಿಂಗ್ ಎಂಟ್ರಪ್ರಿನರ್ಶಿಪ್ ಪ್ರೋಗ್ರಾಂನ ಫೈನಲ್ ಪಿಚ್ ಡೇ ಆಯೋಜಿಸಲಾಯಿತು. ಉಡುಪಿ ಎಸ್.ಎಂ.ವಿ.ಐ.ಟಿ.ಎಂ. ಮತ್ತು ಮಂಗಳೂರು ಕೆನರಾ ಎಂಜಿನಿಯರಿಂಗ್ ಕಾಲೇಜುಗಳಿಂದ ಆಯ್ಕೆಯಾದ 14 ವಿದ್ಯಾರ್ಥಿ ತಂಡಗಳು ತಮ್ಮ ಸ್ಟಾರ್ಟ್‌ಅಪ್ ಕಲ್ಪನೆಗಳನ್ನು ಸೆಕ್ಷನ್ ಇನ್ಫಿನ್–8 ಫೌಂಡೇಶನ್ (ಎಸ್‌.ಐ.–8) ನೇಮಕ ಮಾಡಿದ ತೀರ್ಪುಗಾರರ ಮುಂದಿಡಿದರು. ತೀರ್ಪುಗಾರರಾಗಿ ಶ್ರೀ ಅಜಯ್ ಪ್ರಭು, ವ್ಯವಸ್ಥಾಪಕ ನಿರ್ದೇಶಕ, ಕೆ.ವಿ.ಪಿ. ಬಿಸಿನೆಸ್ ಸೊಲ್ಯೂಶನ್ಸ್, ಶ್ರೀ ಪುನೀತ್ ರೈ, ಇಂಕ್ಯುಬೇಶನ್ ಮ್ಯಾನೇಜರ್, ಅಟಲ್ ಇಂಕ್ಯುಬೇಶನ್ ಸೆಂಟರ್, ನಿಟ್ಟೆ,…

Read More

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರಕಟಿತ ಪುಸ್ತಕ- ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಿಗೆ ಉಚಿತವಾಗಿ ವಿತರಣೆ

ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ಕೇರಳದ ಶ್ರೀಮದ್ ಎಡನೀರು ಮಠ, ಕಾಸರಗೋಡು ಇವರ ಸಹಯೋಗದೊಂದಿಗೆ ದಿನಾಂಕ:03.09.2025ರಂದು ಸಂಜೆ 7.15 ಗಂಟೆಗೆ ಕಾಸರಗೋಡು ಜಿಲ್ಲೆಯ ಗಡಿ ಭಾಗದ ಕನ್ನಡ ಶಾಲಾ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತೆ ಎಲ್ಲಾ ಕನ್ನಡ ಶಾಲೆಗಳಿಗೆ ಹಾಗೂ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳನ್ನು ವಿತರಿಸಲಾಯಿತು. ಪ್ರೋ. ಕೆ.ಸಿ ಶಿವಪ್ಪನವರು ರಚಿಸಿದ ಮುದ್ದುರಾಮನ 10 ಆವೃತ್ತಿ ಕೃತಿಗಳನ್ನು ಕೂಡ ಈ ಸಂದರ್ಭದಲ್ಲಿ ವಿತರಿಸಲಾಯಿತು. ಹೊರನಾಡು ಗಡಿ ಕನ್ನಡಿಗರ ಸಮಸ್ಯೆಗಳ ಬಗ್ಗೆ ಗಡಿ ಅಭಿವೃದ್ಧಿ ಪ್ರಾಧಿಕಾರ ಹೊರತಂದಿರುವ…

Read More
error: Content is protected !!