Headlines

ಕಾಸರಗೋಡು ಗುಡುಗು ಮಿಂಚು ಸಹಿತ ಬಿರುಸಿನ ಮಳೆಗೆ ಸಾಧ್ಯತೆ

ಕಾಸರಗೋಡು/ತಿರುವನಂತಪುರ: ರಾಜ್ಯದಲ್ಲಿ ಮಳೆಯ ಮುನ್ಸೂಚನೆಯಲ್ಲಿ ಬದಲಾವಣೆ ಮಾಡಲಾಗಿದ್ದು, ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ​ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ನಾಳೆ ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ. ಈ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ​ಮುಂದಿನ 3 ಗಂಟೆಗಳ ಹವಾಮಾನ ಮುನ್ಸೂಚನೆ​ರಾಜ್ಯದ ಎರ್ನಾಕುಲಂ, ತ್ರೆಶೂರ್, ಪಾಲ್ಘಾಟ್ (ಪಾಲಕ್ಕಾಡ್), ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು…

Read More

ಕುಪ್ಪೆಪದವಿನಲ್ಲಿ ಭವಿಷ್ಯ ನಿಧಿ ಪಿಂಚಣಿದಾರರ ಸಮಾವೇಶ; ಪಿಂಚಣಿ ಹೆಚ್ಚಳಕ್ಕೆ ಆಗ್ರಹ

ಬೀಡಿ ಕಾರ್ಮಿಕರಾಗಿ ನಿವೃತ್ತರಾದ ಕುಪ್ಪೆಪದವು ವ್ಯಾಪ್ತಿಯ ಭವಿಷ್ಯ ನಿಧಿ ಪಿಂಚಣಿದಾರರ ಸಮಾವೇಶವು ಕುಪ್ಪೆಪದವು ಅನಂತರಾಜ ಸಭಾ ಭವನದಲ್ಲಿ ನಡೆಯಿತು. ಭವಿಷ್ಯ ನಿಧಿ ಪಿಂಚಣಿದಾರರ ಸಂಘದ ದ.ಕ. ಜಿಲ್ಲಾ ಕಾರ್ಯದರ್ಶಿ ಸುಕುಮಾರ್ ತೊಕ್ಕೊಟ್ಟು ಸಮಾವೇಶವನ್ನು ಉದ್ಘಾಟಿಸಿದರು. ಅವರು ಮಾತನಾಡುತ್ತಾ, ಬೀಡಿ ಮತ್ತಿತರ ಅಸಂಘಟಿತ ವಲಯದಲ್ಲಿ ಕಾರ್ಮಿಕರಾಗಿ ದುಡಿದು ನಿವೃತ್ತರಾದವರಿಗೆ ಭವಿಷ್ಯ ನಿಧಿ ಪಿಂಚಣಿ ವೃದ್ಧಾಪ್ಯದಲ್ಲಿ ಸಣ್ಣ ಆಸರೆಯಾಗಿದೆ. ಅವರ ಔಷಧಿ, ಚಕಿತ್ಸೆ ಮುಂತಾದ ಅಗತ್ಯಗಳಿಗೆ ಈ ಪಿಂಚಣಿಯ ಹಣವನ್ನೆ ಆಶ್ರಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿವೃತ್ತರಾದ ಬೀಡಿ ಕಾರ್ಮಿಕರು…

Read More

ಮಂಜೇಶ್ವರ: ಭಾರೀ ಮಳೆ: ಕುಸಿದುಬಿದ್ದ ಜಿಮ್ ಕಟ್ಟಡದ ಆವರಣ ಗೋಡೆ: ಕೂದಲೆಳೆತದ ಅಂತರದಲ್ಲಿ ತಪ್ಪಿದ ಭಾರೀ ದುರಂತ

ಮಂಜೇಶ್ವರ: ಮಂಜೇಶ್ವರದ ಒಳಪೇಟೆಯಲ್ಲಿ ಕಾರ್ಯಾಚರಿಸುತ್ತಿರುವ ‘ಮೈ ಜಿಂ ಹೆಲ್ತ್ ಕ್ಲಬ್’ ಕಟ್ಟಡದ ಆವರಣ ಗೋಡೆಯು ಬುಧವಾರ ಸುರಿದ ಬಿರುಸಿನ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಈ ವೇಳೆ ಯಾವುದೇ ಜೀವಹಾನಿ ಸಂಭವಿಸಿಲ್ಲದಿದ್ದರೂ, ಸ್ಥಳದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ​​ಪ್ರತಿದಿನ ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಮತ್ತು ವಾಹನ ಸವಾರರು ಈ ಜಿಮ್ ಕಟ್ಟಡದ ಸಮೀಪವಿರುವ ರಸ್ತೆಯ ಮೂಲಕ ಸಂಚರಿಸುತ್ತಾರೆ. ಗೋಡೆ ಕುಸಿದುಬಿದ್ದ ಸಂದರ್ಭದಲ್ಲಿ ಅದೃಷ್ಟವಶಾತ್ ಯಾರೂ ಆ ಮಾರ್ಗದಲ್ಲಿ ಸಂಚರಿಸುತ್ತಿರಲಿಲ್ಲ. ಇದರಿಂದಾಗಿ ದೊಡ್ಡದೊಂದು ದುರಂತ ಕೂದಲೆಳೆತದ ಅಂತರದಲ್ಲಿ ತಪ್ಪಿದಂತಾಗಿದೆ….

Read More

ಗ್ರಾಹಕರ ಪರ ತೀರ್ಪು; ಸೌತ್ ಇಂಡಿಯನ್ ಬ್ಯಾಂಕ್‌ಗೆ ಪರಿಹಾರ ಪಾವತಿಸಲು ಆದೇಶ

ಕಾಸರಗೋಡು: ಗ್ರಾಹಕರ ಖಾತೆಯಿಂದ ಕಡಿತಗೊಳಿಸಿದ ಹಣವನ್ನು ಮರುಪಾವತಿಸುವುದರ ಜೊತೆಗೆ, ಉಂಟಾದ ಮಾನಸಿಕ ವೇದನೆ ಹಾಗೂ ಅನಾನುಕೂಲತೆಗೆ ಸೂಕ್ತ ಪರಿಹಾರವನ್ನು ನೀಡುವಂತೆ ಸೌತ್ ಇಂಡಿಯನ್ ಬ್ಯಾಂಕ್‌ನ ಸೀತಾಂಗೋಳಿ ಶಾಖೆಗೆ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗ ಆದೇಶ ನೀಡಿದೆ. ಈ ಆದೇಶವು ಸೌತ್ ಇಂಡಿಯನ್ ಬ್ಯಾಂಕ್, ಸೀತಾಂಗೋಳಿ ಶಾಖೆ ವಿರುದ್ಧ ಶ್ರೀ ರಾಜು ಸ್ಟೀಫನ್ ಡಿಸೋಜಾ ಅವರು ದಾಖಲಿಸಿದ್ದ ದೂರಿನ ವಿಚಾರಣೆಯ ಬಳಿಕ ಹೊರಬಿದ್ದಿದೆ. ದೂರಿನ ಪ್ರಕಾರ, ಶ್ರೀ ರಾಜು ಸ್ಟೀಫನ್ ಡಿಸೋಜಾ ಅವರು 2022ರಲ್ಲಿ ಸೌತ್ ಇಂಡಿಯನ್…

Read More

ವಿಶ್ವ ಹಿಂದೂ ಪರಿಷತ್ ಮುಖಂಡ ರವಿಚಂದ್ರ ಶೆಟ್ಟಿ ಅಶೋಕನಗರ ಅವರ ಅಗಲಿಕೆಗೆ ಆಳವಾದ ಕಂಬನಿ: ವಿಶ್ವ ಹಿಂದೂ ಪರಿಷದ್ ಸಂತಾಪ

ವಿಶ್ವ ಹಿಂದೂ ಪರಿಷತ್ ಉರ್ವಾ ಖಂಡ ಸಮಿತಿಯ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಅತ್ಯಂತ ಶ್ರದ್ಧೆ ಹಾಗೂ ನಿಷ್ಠೆಯಿಂದ ಜವಾಬ್ದಾರಿ ನಿರ್ವಹಿಸಿದ್ದ ರವಿಚಂದ್ರ ಶೆಟ್ಟಿ ಅಶೋಕನಗರ ಅವರ ಅಕಾಲಿಕ ಮರಣಕ್ಕೆ ವಿಶ್ವ ಹಿಂದೂ ಪರಿಷತ್ ತೀವ್ರ ಸಂತಾಪ ವ್ಯಕ್ತಪಡಿಸಿದೆ. ರವಿಚಂದ್ರ ಶೆಟ್ಟಿ ಅವರು ಸನಾತನ ಧರ್ಮದ ಮೇಲಿನ ಅಪಾರ ನಿಷ್ಠೆ, ಅನನ್ಯ ಸೇವಾ ಮನೋಭಾವನೆ ಹಾಗೂ ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿತ್ವಕ್ಕೆ ಹೆಸರಾಗಿದ್ದವರು. ಎಲ್ಲಾಕಾರ್ಯಕರ್ತರೊಡನೆ ಆತ್ಮೀಯರಾಗಿದ್ದ ಸರಳ ವ್ಯಕ್ತಿತ್ವ, ಸಂಘಟನೆಯ ಏಳಿಗೆಗಾಗಿ ಹಗಲಿರುಳು ಶ್ರಮಿಸಿದ ಮಹಾನ್ ಸೇವಕ….

Read More

ಉಡುಪಿ: ಜುಲೈ 25ರಂದು ‘ಗುಜ್ಜಾಡಿ ನರಸಿಂಹ ನಾಯಕ್ ಅವರ ನೆನಪುಗಳು’ ಕೃತಿ ಬಿಡುಗಡೆ

ಉಡುಪಿ: ಗುಜ್ಜಾಡಿ ಸ್ವರ್ಣ ಜುವೆಲರ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕರಾದ ದಿ. ಗುಜ್ಜಾಡಿ ನರಸಿಂಹ ನಾಯಕ್ ಅವರ ಜನ್ಮಶತಮಾನೋತ್ಸವ ವರ್ಷದ ಅಂಗವಾಗಿ ‘ಗುಜ್ಜಾಡಿ ನರಸಿಂಹ ನಾಯಕ್ ಅವರ ನೆನಪುಗಳು’ ಕೃತಿಯ ಬಿಡುಗಡೆ ಸಮಾರಂಭ ಜುಲೈ 25ರಂದು ಬೆಳಿಗ್ಗೆ 10.30ಕ್ಕೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸ್ಮಾರಕ ಸಭಾಭವನದಲ್ಲಿ ನಡೆಯಲಿದೆ ಎಂದು ನಗರಸಭೆಯ ಮಾಜಿ ಅಧ್ಯಕ್ಷ ಗುಜ್ಜಾಡಿ ಪ್ರಭಾಕರ್ ನಾಯಕ್ ತಿಳಿಸಿದರು.ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಪುಸ್ತಕವನ್ನು ಬಿಡುಗಡೆ…

Read More

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ

ಕರ್ನಾಟಕ ಅನಿವಾಸಿ ಭಾರತೀಯರ ಒಕ್ಕೂಟ ಜಿದ್ದಾ ಘಟಕದ ವತಿಯಿಂದ ಕರ್ನಾಟಕ ಮಾರ್ವಾಡಿ ಯೂತ್ ಫೆಡರೇಶನ್ ಬೆಂಗಳೂರು, ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ರೋಶನಿ ನಿಲಯ ಮಂಗಳೂರು ಸಹಯೋಗದೊಂದಿಗೆ ಆಗಸ್ಟ್ 8 ಮತ್ತು 9 ರಂದು ಮಂಗಳೂರಿನ ವೆಲೆನ್ಸಿಯಾ ಜೆಪ್ಪು ಎಂಬಲ್ಲಿರುವ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ಸಭಾಂಗಣದಲ್ಲಿ ಅಂಗವೈಕಲ್ಯ ವಿಕಲಚೇತನರ ಭವಿಷ್ಯದ ಜೀವನಕ್ಕಾಗಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ ನಡೆಯಲಿದೆ. ಉತ್ತಮ ಗುಣಮಟ್ಟದ ಹಗುರ ಗಾತ್ರದ ಜೈಪುರ್ ಲಿಂಬ್ ನ್ನು ಉಚಿತವಾಗಿ ಶಿಬಿರ…

Read More

ಗೋಹತ್ಯಾ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜು.27ರಂದು ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು, ಜು.22: ಗೋಮಾತೆ ರಕ್ಷಣೆ ಹಾಗೂ ದೇಶಾದ್ಯಂತ ಗೋಹತ್ಯಾ ನಿಷೇಧ ಕಾಯಿದೆ ಜಾರಿಗೊಳಿಸುವಂತೆ ಆಗ್ರಹಿಸಿ, ‘ಗೋಮಾತೆಯ ಗೌರವದ ಅಭಿಯಾನ’ದ ಅಂಗವಾಗಿ ಜುಲೈ 27ರಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಶ್ರೀಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠದ ಶ್ರೀಸಾಯಿ ಈಶ್ವರ್ ಗುರೂಜಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಮಾತೆಗೆ ರಾಷ್ಟ್ರ ತಾಯಿ, ರಾಷ್ಟ್ರೀಯ ದೇವರು ಹಾಗೂ ರಾಷ್ಟ್ರೀಯ ಪರಂಪರೆ ಎಂಬ ಗೌರವದ ಮಾನ್ಯತೆ ನೀಡಬೇಕೆಂಬ ಉದ್ದೇಶದಿಂದ…

Read More

ಉದ್ಯಾವರ ಹಿಂದೂ ರುದ್ರಭೂಮಿ ವಿವಾದ: ಸಮಾಧಿ ಧ್ವಂಸ ಆರೋಪ, ಅಭಿವೃದ್ಧಿ ಹಾಗೂ ಸಂರಕ್ಷಣೆಗೆ ಆಗ್ರಹ

ಕಾಸರಗೋಡು: ಉದ್ಯಾವರ ಹಿಂದೂ ರುದ್ರಭೂಮಿಯಲ್ಲಿ ಹಲವು ವರ್ಷಗಳಿಂದ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಇತ್ತೀಚಿನ ಬೆಳವಣಿಗೆಗಳ ಕುರಿತು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್. ಅವರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಯಿತು.ಸುಮಾರು 2.70 ಎಕರೆ ವಿಸ್ತೀರ್ಣ ಹೊಂದಿರುವ ಉದ್ಯಾವರ ಹಿಂದೂ ರುದ್ರಭೂಮಿಯಲ್ಲಿ ಅನೇಕ ವರ್ಷಗಳಿಂದ ಹಿಂದೂ ಸಮುದಾಯದ ಅಂತ್ಯಕ್ರಿಯೆಗಳು ನಡೆಯುತ್ತಿವೆ. ರುದ್ರಭೂಮಿಯ ಸುತ್ತಮುತ್ತ ಕಾನೂನು ಪ್ರಕಾರ ನಿರ್ದಿಷ್ಟ ಅಂತರದೊಳಗೆ ವಸತಿ ನಿರ್ಮಾಣಕ್ಕೆ ಅವಕಾಶ ಇರಬಾರದು. ಆದರೆ, ರುದ್ರಭೂಮಿಯ ಸುತ್ತಲೂ ಮನೆಗಳು ನಿರ್ಮಾಣವಾಗಿರುವ ಬಗ್ಗೆ ಸಭೆಯಲ್ಲಿ ಪ್ರಶ್ನೆ ಎತ್ತಲಾಯಿತು. ಇದೇ ವೇಳೆ,…

Read More

ಹೊಸಂಗಡಿಯಲ್ಲಿ ಭಕ್ತಿಭಾವದಿಂದ ಗಣೇಶೋತ್ಸವ ವಿಗ್ರಹ ಮುಹೂರ್ತ

46ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ವಿಗ್ರಹ ಮುಹೂರ್ತವು ಇಂದು ಬೆಳಿಗ್ಗೆ 8 ಗಂಟೆಗೆ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ವೈದಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಕ್ಷೇತ್ರದ ಅರ್ಚಕರಾದ ಶ್ರೀ ತಿರುಮಲೇಶ್ ಆಚಾರ್ಯ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರೆ, ಶಿಲ್ಪಿ ಶ್ರೀ ಮಹೇಶ್ ಆಚಾರ್ಯ ಬಾಯಾರು ವಿಗ್ರಹ ಮುಹೂರ್ತ ನೆರವೇರಿಸಿದರು.ವಿಗ್ರಹ ಮುಹೂರ್ತವನ್ನು ಶಿಲ್ಪಿ ಶ್ರೀ ಮಹೇಶ್ ಆಚಾರ್ಯ ಬಾಯಾರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಗುರುಸ್ವಾಮಿ ಶ್ರೀ ಉದಯ ಪಾವಳ ಹಾಗೂ ಸಮಿತಿಯ ಅಧ್ಯಕ್ಷರಾದ ಶ್ರೀ ಯಾದವ ಬಡಾಜೆ, ಪ್ರ. ಕಾರ್ಯದರ್ಶಿ…

Read More
error: Content is protected !!