ರೈಲು ಹಳಿ ದಾಟುತ್ತಿರುವ ಮಧ್ಯೆ ,ರೈಲು ಡಿಕ್ಕಿ ಹೊಡೆದು-ವ್ಯಕ್ತಿ ಸಾವು

ಮಂಜೇಶ್ವರ : ಕಾಸರಗೋಡು ಭಾಗದಿಂದ ಮಂಗಳೂರು ಭಾಗಕ್ಕೆ ತೆರಳುತಿದ್ದ ಎಗ್ಮೋರ್ ರೈಲಿನಲ್ಲಿ ಮಂಜೇಶ್ವರ ರೈಲ್ವೇ ನಿಲ್ದಾಣದಲ್ಲಿ ಬಂದಿಳಿದ ವ್ಯಕ್ತಿಯೊಬ್ಬರು ರೈಲು ಹಳಿ ದಾಟುತ್ತಿರುವ ಮಧ್ಯೆ ಮಂಗಳೂರು ಭಾಗದಿಂದ ಕಾಸರಗೋಡು ಭಾಗಕ್ಕೆ ತೆರಳುತ್ತಿದ್ದ ಮಾವೇಲಿ ರೈಲು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸೋಮವಾರ ಸಂಜೆ 5.40 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ತಮಿಳ್ನಾಡು ನಿವಾಸಿ ನಜ್ಮುದ್ಧೀನ್ ಕಾದರ್ ಬಾಚಾ (71) ಸಾವನ್ನಪ್ಪಿದ ದುರ್ದೈವಿ.ರೈಲ್ವೇ ಪೊಲೀಸರು ಹಾಗೂ ಮಂಜೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ಶವದ ಮಹಜರು ನಡೆಸಿ ಡಿಕ್ಕಿಯ…

Read More

ಕೇರಳ ವ್ಯಾಪಾರಿ ಏಕೋಪನ ಸಮಿತಿ ,ಮಂಜೇಶ್ವರ ಘಟಕದ ವಾರ್ಷಿಕ ಸಭೆ

ಮಂಜೇಶ್ವರ : ಕೇರಳ ವ್ಯಾಪಾರಿ ಏಕೋಪನ ಸಮತಿ ಇದರ ಮಂಜೇಶ್ವರ ಘಟಕದ ವಾರ್ಷಿಕ ಸಭೆ ಮಂಜೇಶ್ವರ ವ್ಯಾಪಾರಿ ಭವಣದಲ್ಲಿ ಜರಗಿತು.ಸಂಘಟನೆಯ ಅಧ್ಯಕ್ಷ ಬಶೀರ್ ಕನಿಲರವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಸಂಘಟನೆಯ ಜಿಲ್ಲಾಧ್ಯಕ್ಷ ಆಹ್ಮದ್ ಶೆರೀಫ್ ಉದ್ಘಾಟಿಸಿದರು. ಸಮಾರಂಭದಲ್ಲಿ ಮರಣ ಹೊಂದಿದ ವ್ಯಾಪಾರಿಗಳ ಕುಟುಂಬಗಳಿಗೆ 4ಲಕ್ಷ ರೂಪಾಯಿಯಂತೆ ಎರಡು ಕುಟುಂಬಗಳಿಗಿರುವ ಧನ ಸಹಾಯವನ್ನು ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ವಿತರಣೆ ನಡೆಸಿದರು. ಜಿಲ್ಲಾ ವ್ಯಾಪಾರಿ ಭವನ ಕಟ್ಟಡ ಸಹಾಯಾರ್ಥ ಹಮ್ಮಿ ಕೊಳ್ಳಲಾದ ಲಕ್ಕಿ ಕೂಪನ್ ಡ್ರಾ…

Read More

ಬಾಯಿ ತೆರೆದಿದೆ ಡ್ರೈನೇಜ್ ಗುಂಡಿ, ಜನರು ಸಂಕಷ್ಟದಲ್ಲಿ

ಕೆಪಿಟಿ ಕಾಲೇಜು ಬಳಿಯ ಶರಬತ್ ಕಟ್ಟೆಯ ಬಸ್ ನಿಲ್ದಾಣದ ಬಳಿಇರುವ ಡ್ರೈನೇಜ್ ಗುಂಡಿಯೊಂದು ಬಾಯಿ ತೆರೆದು ಅಪಾಯಕ್ಕೆ ಆಸ್ಪದವನ್ನು ನೀಡುತ್ತಾ ಇದೆ . ಈ ಮಾರ್ಗವಾಗಿ ನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಸಂಚಾರವನ್ನು ನಡೆಸುತ್ತೆ . ಮಳೆಗಾಲದಂತಹ ಈ ವಿಷಮ ಕಾಲದಲ್ಲೂ ಈ ರೀತಿಯಾಗಿ ಬಾಯಿ ತೆರೆದು ನಿಂತ ಗುಂಡಿಯ ಸಮೀಪವಾಗಿ ಯಾರಾದರೂ ಪಾದಚಾರಿಗಳು ಅಥವಾ ವಾಹನ ಸವಾರರು ಹೋದರಂತೂ ಆಕಸ್ಮಿಕ ಅಪಘಾತಕ್ಕೆ ತುತ್ತಾಗುವ ಸಾಧ್ಯತೆಗಳು ಹೆಚ್ಚಿದೆ . ಸ್ಥಳೀಯ ಅಧಿಕಾರಿಗಳು ಈ ಬಗ್ಗೆ ಮುತುರ್ವರ್ಜಿಯನ್ನು ವಹಿಸಬೇಕು…

Read More

ಮಾದಕ ವಸ್ತುವಾದ ಎಂಡಿಎಂಎ ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೋಲೀಸರ ಬಲೆಗೆ

ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಫಝಲ್ ಹುಸೇನ್(33) ಮತ್ತು ನೌಶಾದ್(32) ಬಂಧಿತರು. ಇವರಿಂದ 15 ಗ್ರಾಂ ಎಂಡಿಎಂಎ, ಡಿಯೋ ಬೈಕ್, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಅಂದಾಜು ಮೌಲ್ಯ 95,500/-ರೂಪಾಯಿ. ಇವುಗಳನ್ನು ಪಂಚನಾಮೆ ಮೂಲಕ ಅಮಾನತ್ತು ಪಡಿಸಿಕೊಂಡು, ಆರೋಪಿಗಳ ವಿರುದ್ಧ…

Read More

ನಿರ್ಲಜ್ಜ ಓಟ್ ಚೋರತನದಿಂದ ಪ್ರಜಾಪ್ರಭುತ್ವ ಬುಡಮೇಲು-ಕಾಂಗ್ರೆಸ್.

ಶತಾಯಗತಾಯ ಅಧಿಕಾರ ಉಳಿಸಿಕೊಳ್ಳುವ ಧಾವಂತದಲ್ಲಿ ಬಿಜೆಪಿಯು ನಿರ್ಲಜ್ಜವಾಗಿ ಓಟ್ ಕಳ್ಳತನ ನಡೆಸಿದ್ದು ಜಗಜ್ಜಾಹೀರಾಗಿದೆ. ಒಂದೆಡೆ ಲಕ್ಷಾಂತರ ನಕಲಿ ಮತದಾರರ ಸೇರ್ಪಡೆಗೊಳಿಸಿ ತಮ್ಮ ಓಟ್ ಗಳ ಸಂಖ್ಯೆ ಹೆಚ್ಚಿಸುವುದು ಹಾಗೂ ಅರ್ಹ ಮತದಾರರನ್ನು ಅಂತಿಮ ಮತದಾರ ಪಟ್ಟಿಯಿಂದ ಹೊರತು ಪಡಿಸಿ ವಿಪಕ್ಷಗಳ ಬಲ ಕುಗ್ಗಿಸುವುದು ಮುಂತಾದ ವಾಮ ಮಾರ್ಗಗಳ ಮೂಲಕ ಆಡಳಿತವನ್ನು ಕದಿಯಲಾಗಿದೆ. ಇದಕ್ಕೆ ಚುನಾವಣಾ ಆಯೋಗವೂ ಕೈ ಜೋಡಿಸಿದ್ದು ವಿಪರ್ಯಾಸ. ಬಿಜೆಪಿಯಿಂದ ಮಾಸಿಕ ಚಂದಾ ಪಡೆಯುವ ಮಾನಗೇಡಿ ಮಡಿಲ ಮಾಧ್ಯಮಗಳು ಎಲ್ಲವನ್ನು ಕಂಡೂ ಕಾಣದಂತೆ ಜಾಣ ಕುರುಡುತನ…

Read More

ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಆರೋಪದಲ್ಲಿ ಬಿಹಾರದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು : ಮಂಗಳೂರಿನ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ ರೈಲ್ವೇ ಸ್ಟೇಶನ್ ಬಳಿ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಆರೋಪದಲ್ಲಿ ಬಿಹಾರದ ಇಬ್ಬರು ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಬಿಹಾರ ರಾಜ್ಯದ ಅರ್ನೌಟ್ ಗ್ರಾಮದ ಹರ್ಷ ಕುಮಾರ್ (22 ) ಮತ್ತು ಶಾಪುರ್ ಗ್ರಾಮದ ಅಮರ್ ಕುಮಾರ (28) ಬಂಧಿತ ಆರೋಪಿಗಳು.ಹರ್ಷ ಕುಮಾರ್ ಎಂಬಾತನಿಂದ 1 ಕೆ ಜಿ 230 ಗ್ರಾಂ ಮತ್ತು ಅಮರ್ ಕುಮಾರ್ ನಿಂದ 80 ಗ್ರಾಂ…

Read More

ಐಕಳ ಹರೀಶ್ ಶೆಟ್ಟಿ ಅವರಿಗೆ ಶಿವಗಿರಿ ಸಮ್ಮಾನ್ ಪ್ರಶಸ್ತಿ.

ಮಂಗಳೂರು: ಜಯ ಸುವರ್ಣ ಸಂಸ್ಮರಣೆಯ ಅಂಗವಾಗಿ ಜಯ ಸಿ ಸುವರ್ಣ ಜನಸೇವಾ ಪುರಸ್ಕಾರ ಶಿವಗಿರಿ ಸಮ್ಮಾನ್ ಪ್ರಶಸ್ತಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಸೆಪ್ಟಂಬರ್ 7 ರಂದು ಭಾನುವಾರ ಮುಂಬಯಿಯ ಜಯಲೀಲಾ ಬ್ಯಾಂಕ್ವೆಟ್ ಹಾಲ್ ಗೋರೆಗಾಂವ್ ಪೂರ್ವ ಇಲ್ಲಿ ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ಆಯೋಜಿಸಿರುವ 171 ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಐಕಳ ಹರೀಶ್ ಶೆಟ್ಟಿ ಅವರನ್ನು…

Read More

ವಿಚಾರಣೆಗೆ ಹಾಜರಾಗದ ತಹಶೀಲ್ದಾರ್ ಎಸ್.ಬಿ. ಕೂಡಲಗಿ

ಪುತ್ತೂರು: ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಲಂಚ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಆರೋಪಿಯಾಗಿರುವ ತಹಶೀಲ್ದಾರ್ ಎಸ್.ಬಿ. ಕೂಡಲಗಿ ಸೋಮವಾರ ವಿಚಾರಣೆಗೆ ಹಾಜರಾಗಿಲ್ಲ. ಆ. 28ರಂದು ತಾಲೂಕು ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದರು. ಈ ವೇಳೆ ತಹಶೀಲ್ದಾರ್ ನಾಪತ್ತೆ ಆಗಿದ್ದರು. ಸೆ. 1ರಂದು ಮಂಗಳೂರು ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸುವಂತೆ ತಹಶೀಲ್ದಾರ್‌ಗೆ ಲೋಕಾಯುಕ್ತ ಪೊಲೀಸರು ನೋಟಿಸ್‌ ಹೊರಡಿಸಿದ್ದರು. ಅದಾಗ್ಯೂ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಲೋಕಾಯುಕ್ತ ಪೊಲೀಸರು ಇನ್ನೊಮ್ಮೆ ನೋಟಿಸ್ ಹೊರಡಿಸುವ…

Read More

ವ್ಯಾಪಕಗೊಂಡ ಅನಧಿಕೃತ ಮರಳು ಸಾಗಾಟ : ಇತಿಹಾಸದಲ್ಲೇ ಮೊಟ್ಟ ಮೊದಲಾಗಿ ಇಬ್ಬರನ್ನು ಜಾಮೀನು ರಹಿತ ಕೇಸು ದಾಖಲಿಸಿ ಜೈಲಿಗಟ್ಟಿದ ಕುಂಬಳೆ ಪೊಲೀಸರು

ಮಂಜೇಶ್ವರ : ಮಂಜೇಶ್ವರ ಹಾಗೂ ಕುಂಬಳೆ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಟ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಇತಿಹಾಸದಲ್ಲೇ ಮೊತ್ತ ಮೊದಲಾಗಿ ಕುಂಬಳೆ ಪೊಲೀಸರು ಮರಳು ಸಾಗಾಟ ಮಾಡುವವರ ವಿರುದ್ಧ ಜಾಮೀನು ರಹಿತ ಕೇಸು ದಾಖಲಿಸಿದ್ದಾರೆ. ಮರಳು ಸಾಗಾಟ ಮಾಡಲು ಉಪಯೋಗಿಸಿದ ಓಮ್ನಿ ವ್ಯಾನ್ ವಶಕ್ಕೆ ತೆಗೆಯಲಾಗಿದೆ. ಅರಿಕ್ಕಾಡಿ ನಿವಾಸಿ ಮನ್ಸೂರ್ ಅಲಿ (31) ಹಾಗೂ ಕುಂಬಳೆ ಪೆರ್ವಾಡ್ ನಿವಾಸಿ ಜುಸೈರ್ (33) ಬಂಧಿತ ಆರೋಪಿಗಳು. ಆರಿಕ್ಕಾಡಿಯಲ್ಲಿ ಅನಧಿಕೃತ ಕಡವಿನಿಂದ ಓಮ್ನಿ ವ್ಯಾನ್ ನಲ್ಲಿ 25 ಗೋಣಿ ಮರಳು…

Read More

ಜಿ.ವಿ.ಎಚ್.ಎಸ್.ಎಸ್ ಕುಂಜತ್ತೂರು ಶಾಲೆಯಲ್ಲಿ ಓಣಂ ಹಬ್ಬ ಆಚರಣೆ.

ಮಂಜೇಶ್ವರ : ಜಿ.ವಿ.ಎಚ್.ಎಸ್.ಎಸ್ ಕುಂಜತ್ತೂರು ಶಾಲೆಯಲ್ಲಿ ಆಗಸ್ಟ್ 29ರ ಶುಕ್ರವಾರದಂದು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುನೀತಾ ಶುಭ ಹಾರೈಸಿದರು. ವೈವಿಧ್ಯಮಯ ಪೂಕಳಂಗಳನ್ನು ರಚಿಸಿದ ನಂತರ ಶಿಕ್ಷಕಿಯರು ಕೈಕೊಟ್ಟಿಕಲಿ ನೃತ್ಯವನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳಿಗೆ ವೈವಿಧ್ಯಮಯ ಆಟೋಟ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಎಲ್ಲರಿಗೂ ಓಣಂ ಸದ್ಯವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ, ರಕ್ಷಕ ಶಿಕ್ಷಕ ಸಂಘದ ಸದಸ್ಯರು, ಎಸ್ಎಂಸಿ ಸದಸ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Read More
error: Content is protected !!