ಓಣಂ ಹಬ್ಬ ಸನಿಹ ಹಿನ್ನಲೆ ಬೆಂಗಳೂರು ಮತ್ತು ಕೇರಳ ನಡುವೆ ಹೆಚ್ಚುವರಿ 90 ಬಸ್ ಸಂಚಾರ.

ಬೆಂಗಳೂರು: ಓಣಂ ಹಬ್ಬದ ಪ್ರಯುಕ್ತ ಬೆಂಗಳೂರು ಮತ್ತು ಕೇರಳದ ನಡುವೆ ಸಂಚಾರ ಮಾಡುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಒಂದು ವಿಶೇಷ ಘೋಷಣೆ ಮಾಡಿದೆ . ಸೆಪ್ಟೆಂಬರ್ 2 ರಿಂದ 4 ರವರೆಗೆ ಬೆಂಗಳೂರಿನಿಂದ ಕೇರಳದ ವಿವಿಧ ಪ್ರಮುಖ ನಗರಗಳಿಗೆ 90 ಕ್ಕೂ ಅಧಿಕ ಬಸ್ ಸೇವೆಗಳನ್ನು ನಿಗಮ ನಿರ್ವಹಿಸಲು ತೀರ್ಮಾನಿಸಿದೆ. ಓಣಂ ಹಬ್ಬದ ಹಿನ್ನಲೆಯಲ್ಲಿ ಊರಿಗೆ ಹೊರಡುವ ಪ್ರಯಾಣಿಕರ ದಟ್ಟಣೆ ಗಮನದಲ್ಲಿಟ್ಟುಕೊಂಡು, ಸುಗಮ ಸಂಚಾರವನ್ನು ಕಲ್ಪಿಸಲು ಈ ನಿಲುವನ್ನು ತೆಗೆದುಕೊಳ್ಳಲಾಗಿದೆ. ಈ ಹೆಚ್ಚುವರಿ…

Read More

ಪೂರ್ವ ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪನಕ್ಕೆ 610 ಜನರು ಸಾವು, 1,300ಕ್ಕೂ ಅಧಿಕ ಮಂದಿಗೆ ಗಾಯ.

ಕಾಬೂಲ್,ಅಫ್ಘಾನಿಸ್ತಾನದ ಆಗ್ನೇಯ ಭಾಗದಲ್ಲಿ ಸೋಮವಾರ 6.0 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ. ಭೂಕಂಪದಲ್ಲಿ ಕನಿಷ್ಠ 622 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ 1,300 ಕ್ಕೂ ಅಧಿಕ ಮಂದಿಗೆ ಗಾಯಗಳು ಉಂಟಾಗಿದೆ ಎಂದು ತಿಳಿದು ಬಂದಿದೆ.ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ವರದಿ ಪ್ರಕಾರ, ಸ್ಥಳೀಯ ಸಮಯ ರಾತ್ರಿ 11:47 ಕ್ಕೆ 8 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ನಂಗರ್‌ಹಾರ್ ಪ್ರಾಂತ್ಯದ ಜಲಾಲಾಬಾದ್‌ನಿಂದ ಪೂರ್ವ-ಈಶಾನ್ಯಕ್ಕೆ 27 ಕಿ.ಮೀ ದೂರದಲ್ಲಿದೆ ಎಂದು ಗುರುತಿಸಿದೆ . ಭೂಕಂಪದ ಸಮಯದಲ್ಲಿ ಮನೆಯ…

Read More

ಧರ್ಮಸ್ಥಳದ ಪಾವಿತ್ರ್ಯ ರಕ್ಷಣೆಗೆ ಒಗ್ಗಟ್ಟಿನ ಸಂಕಲ್ಪ–ಎಡನೀರು ಮಠದಲ್ಲಿ ಭಕ್ತರ ಮಹಾಸಭೆ.

ಕಾಸರಗೋಡು ಎಡನೀರು ಮಠದಲ್ಲಿ ಧರ್ಮಸ್ಥಳ ಕ್ಷೇತ್ರ ಭಕ್ತರು ಮತ್ತು ಅಭಿಮಾನಿಗಳ ಮಹತ್ವದ ಸಭೆ ನಿನ್ನೆ ನಡೆಯಿತು. ಈ ಸಭೆಯಲ್ಲಿ ನೂರಾರು ಭಕ್ತರು, ಮಾತೆಯರು, ಗಣ್ಯರು ಮತ್ತು ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದರು. ಸಭೆಯ ಉದ್ದೇಶ, ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯವನ್ನು ಕಾಪಾಡುವುದು ಹಾಗೂ ಕ್ಷೇತ್ರಾಧೀಶರಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ನಡೆಯುತ್ತಿರುವ ಮಾನಹಾನಿಕರ ಕೃತ್ಯಗಳಿಗೆ ಸಂಘಟಿತ ಪ್ರತಿಕ್ರಿಯೆ ನೀಡುವುದಾಗಿತ್ತು. ಚರ್ಚೆಯ ಅಂತ್ಯದಲ್ಲಿ, ಅಕ್ಟೋಬರ್ 26ರಂದು ಭಾನುವಾರ ಬೃಹತ್ ಪ್ರತಿಭಟನೆ ಹಾಗೂ ಧಾರ್ಮಿಕ ಸಮ್ಮೇಳನ ಹಮ್ಮಿಕೊಳ್ಳಲು ಮಹತ್ವದ…

Read More

ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಕಾರ್ಯಕ್ರಮ ಆಯೋಜನೆ

ಬೆಂಗಳೂರು: ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಾಯಕರು ಧರ್ಮಸ್ಥಳ ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು ಇಂದು ಧರ್ಮಸ್ಥಳದಲ್ಲಿ ಸುಮಾರು ಅರ್ಧ ಕಿಲೋಮೀಟರ್ ವರೆಗೂ ಪಾದಯಾತ್ರೆ ನಡೆಸಿ ಬಳಿಕ ಮಧ್ಯಾಹ್ನ 2ರಿಂದ 4.30 ವರೆಗೆ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು. ಮಧ್ಯಾಹ್ನ ಧರ್ಮಸ್ಥಳದಲ್ಲಿ ಬಿಜೆಪಿ ನಾಯಕರಿಂದ ಪಾದಯಾತ್ರೆ ನಡೆಯಲಿದೆ. ಅರ್ಧ ಕಿಲೋಮೀಟರ್ ವರೆಗೂ ಪಾದಯಾತ್ರೆ ನಡೆಸಿದ ಬಳಿಕ ಬೃಹತ್ ಸಮಾವೇಶ ಮಾಡಲಿದ್ದಾರೆ. ಧರ್ಮಸ್ಥಳದಲ್ಲಿ ಎಸ್‌ ಡಿ ಎಮ್…

Read More

ಭತ್ತದ ಕೃಷಿ ಮಾಡಿ ಗಮನ ಸೆಳೆದ ಸಭಾಧ್ಯಕ್ಷ ಯು.ಟಿ. ಖಾದರ್.

ಯುವ ಸಮುದಾಯಕ್ಕೆ ಭತ್ತವನ್ನ ಹೇಗೆ ಬೆಳೆಯಲಾಗುತ್ತದೆ ಮತ್ತು ಅದರ ಬೆಗೆಗಿನ ಸಮಗ್ರ ಮಾಹಿತಿಯ ಜೊತೆಗೆ ಕೃಷಿ ಕಾಯಕದಲ್ಲೂ ಅವರನ್ನು ತೊಡಗಿಸುವ ಕಾರ್ಯ ಅತ್ಯಂತ ಅರ್ಥ ಪೂರ್ಣವಾಗಿದೆ. ಉಳ್ಳಾಲ ತಾಲೂಕು ವ್ಯಾಪ್ತಿಯ ಹಡಿಲು ಬಿದ್ದ ಕೃಷಿ ಭೂಮಿಗಳನ್ನು ಕಂದಾಯ ಇಲಾಖೆಯ ಮೂಲಕ ಸರ್ವೆ ಮಾಡಿಸಿ ಕೃಷಿ ಇಲಾಖೆ ಮೂಲಕ ಗ್ರಾಮವಾರು ಕೇಂದ್ರೀಕರಿಸಿ ಸಹಕಾರಿ ಸಂಘಗಳು, ಸ್ಥಳೀಯ ಸಂಘ ಸಂಸ್ಥೆಗಳ ಜೊತೆ ಸೇರಿ ಫಲವತ್ತಾದ ಉಳ್ಳಾಲ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗುವುದೆಂದು ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ತೊಕ್ಕೊಟ್ಟು…

Read More

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ.

ಮಂಗಳೂರು: ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣ ಇದ್ದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ . ಸೆ.1 ಮತ್ತು ಸೆ.4ರಿಂದ ಸೆ.6ರವರೆಗೆ ಕರಾವಳಿಯ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಸೆ.2 ಮತ್ತು ಸೆ.3ಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡು, ಉತ್ತರ ಒಳ ನಾಡಿನಲ್ಲಿ ಸಾಧಾರಣದಿಂದ ಹಗುರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.ಈ ಮೂಲಕ ಕರಾವಳಿಯಲ್ಲಿ ಜಿಲ್ಲೆಗಳಲ್ಲಿ ಮುಂಗಾರು…

Read More

ರಾಜ್ಯ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ.

ಬಂಟ್ವಾಳ :ಸಜೀಪಮನ್ನೂರು ಗಣೇಶೋತ್ಸವದಲ್ಲಿ ನಡೆಯುತ್ತಿದ್ದ ಯಕ್ಷಗಾನವನ್ನು ಸಮಯಕ್ಕಿಂತ ಮೊದಲೇ ಪೊಲೀಸರು ನಿಲ್ಲಿಸಿದಕ್ಕೆ ಇದೀಗ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಈ ಕುರಿತಂತೆ ಟೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ದಿಕ್ಕು ತಪ್ಪುತ್ತಿದೆ, ಹಿಂದೂ ಉತ್ಸವಗಳು ಧಾರ್ಮಿಕ ಆಚರಣೆಗಳನ್ನು ಅಪಮಾನಿಸುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಗಣೇಶೋತ್ಸವದಲ್ಲಿ ಡಿಜೆ ನಿಷೇಧಿಸುವ ಸರ್ಕಾರ ಸಾಂಸ್ಕೃತಿಕ ಚಟುವಟಿಕೆಗಳನ್ನೂ ಹತ್ತಿಕ್ಕುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಾಣೆ ಮಂಗಳೂರಿನಲ್ಲಿ ನಿಗದಿತ ಸಮಯಕ್ಕೆ ಮುನ್ನವೇ ಪರಂಪರೆಯಿಂದ ನಡೆದುಬಂದ ಯಕ್ಷಗಾನ…

Read More

ನೇತಾಜಿ ಬೋಸ್ ಮೊಮ್ಮಗ ಪ್ರೊ. ಸುಮಂತ್ರ ಬೋಸ್ ರಿಂದ ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ರಿಗೆ ಪುಸ್ತಕ ನೀಡಿ ಗೌರವ.

ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಅವರೀಗೆ ನೇತಾಜಿ ಸುಭಾಷ್ ಬೋಸ್ ಇವರ ಮೂರು ಕೃತಿಗಳನ್ನು ಬೋಸ್ ಅವರ ಮೊಮ್ಮಗ ಪ್ರೊ. ಸುಮಂತ್ರ ಬೋಸ್ ಪುಸ್ತಕ ಗೌರವ ಪ್ರತಿಗಳನ್ನು ನೀಡಿ ಗೌರವ ಸೂಚಿಸಿದರು. ಲೇಖಕ ಪ್ರೊ. ಕೆ. ಈ. ರಾಧಾಕೃಷ್ಣ ಸರ್ ನಿರ್ದೇಶನದಲ್ಲಿ ಕಾರ್ಯಕ್ರಮ ನಡೆಯಿತು.

Read More

ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಆಯ್ಕೆ!

ಮಂಗಳೂರು: ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಅವರು ಆಯ್ಕೆಯಾಗಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ‌ರ್, ಕಾನೂನು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಉಪಾಧ್ಯಕ್ಷರಾದ ಡಾ| ಎಜೆ ಅಕ್ರಂ ಪಾಶಾ ಹಾಗೂ ಇಂಡಿಯನ್ ನ್ಯಾಶನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಅಧ್ಯಕ್ಷ ಟಿ.ವೈ ಕುಮಾರ್ ಅವರಆದೇಶದ ಮೇರೆಗೆ ಈ ಆಯ್ಕೆ ನಡೆದಿದ್ದು ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ (ಐ.ಎನ್.ಟಿ.ಯು.ಸಿ) ಕಾಂಗ್ರೆಸ್ ವಿಭಾಗದ ಮಂಗಳೂರು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಕರಿಷ್ಮಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ…

Read More

ಕಾಲುವೆಯಲ್ಲಿ ನೀರಿನ ಹರಿವಿಗೆ ಸಿಲುಕಿ ಆರನೇ ತರಗತಿ ವಿದ್ಯಾರ್ಥಿಯ ದಾರುಣ ಅಂತ್ಯ

ಕಾಸರಗೋಡು : ಚೆರ್ಕಳ ಪಾಡಿಯಲ್ಲಿ ಆರನೇ ತರಗತಿ ವಿದ್ಯಾರ್ಥಿಯೊಬ್ಬ ನೀರಿನ ಹರಿವಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾನೆ.ಮುಟ್ಟತ್ತೋಡಿ ಗ್ರಾಮದ ಕಲ್ಲಕಟ್ಟ ಬೆಳ್ಳೂರಡ್ಕ ನಿವಾಸಿ ಹಸೈನಾರ್ ಎಂಬವರ ಪುತ್ರ ಮಿತ್ಲಾಜ್ (11) ಸಾವನ್ನಪ್ಪಿದ ದುರ್ದೈವಿ.ಈತ ಆಲಂಪಾಡಿ ಶಾಲೆಯ 6 ನೇ ತರಗತಿ ವಿದ್ಯಾರ್ಥಿ.ಶನಿವಾರ ಸಂಜೆ ಶಾಲೆಯ ಸಹಪಾಠಿಗಳೊಂದಿಗೆ ಕಾಲುವೆಯಲ್ಲಿ ಸ್ನಾನಕ್ಕೆ ಹೋಗಿರುವುದಾಗಿ ಪ್ರಾಥಮಿಕ ಮಾಹಿತಿ. ಈ ಸಂದರ್ಭ ನೀರಿನ ಹರಿವಿಗೆ ಸಿಲುಕಿ ಈ ದುರ್ಘಟನೆ ಸಂಭವಿಸಿದೆ.ವಿದ್ಯಾನಗರ ಪೊಲೀಸರು ಹಾಗೂ ಅಗ್ನಿಶಾಮಕ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಬಾಲಕನ ಶವ ಶರೀರವನ್ನು ಪತ್ತೆ…

Read More
error: Content is protected !!