ಸಂಸ್ಕಾರಯುತ ಸಮಾಜ ನಿರ್ಮಾಣ: ನಳಿನ್ ಕುಮಾರ್ ಕಟೀಲ್.ಬಂಟ್ಸ್ ಹಾಸ್ಟೇಲ್ ನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ.
ಮಂಗಳೂರು: ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಗಣೇಶೋತ್ಸವ ಪೂರಕವಾಗಿದ್ದು, ಆಡಂಬರವಿಲ್ಲದೆ ಇಲ್ಲಿ ಕೇವಲ ದೇವರ ಸಂಕೀರ್ತನೆಯ ಭಜನೆಯ ಮೂಲಕ ಗಣಪತಿಯ ಶೋಭಾಯಾತ್ರೆ ಸಾಗುವುದು ಎಲ್ಲರಿಗೂ ಮಾದರಿಯಾಗಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ನಡೆಯುತ್ತಿರುವ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಾಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.ಶಾಸಕ ವೇದವ್ಯಾಸ ಕಾಮತ್…