ಜಿಲ್ಲಾ ನವಜೀವನ ಸಮಿತಿ ವತಿಯಿಂದ “ಕೇಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಕಾರ್ಯಕ್ರಮ

ಕುಂಬಳೆ ಸಮೀಪದ ಕಳತ್ತೂರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಮಂಜೇಶ್ವರ ತಾಲೂಕು , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಿ.ಸಿ. ಟ್ರಸ್ಟ್(ರಿ) ಮಂಜೇಶ್ವರ ತಾಲೂಕು , ಕಳತ್ತೂರು ಶ್ರೀ ಮಹಾದೇವ ನವಜೀವನ ಸಮಿತಿ ಹಾಗೂ ಜಿಲ್ಲಾ ನವಜೀವನ ಆಶ್ರಯದಲ್ಲಿ ದ್ವಿತೀಯ ವರ್ಷದ ನವಜೀವನೋತ್ಸವದ ಅಂಗವಾಗಿ ಕೇಸರ್ದ ಕಂಡೊಡು ಕುಸಲ್ದ ಗೊಬ್ಬುಲು ಕಾರ್ಯಕ್ರಮ ಇಚ್ಲಂಪಾಡಿ ಗದ್ದೆಯಲ್ಲಿ ಇತ್ತೀಚೆಗೆ ನಡೆಯಿತ್ತು . ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್…

Read More

ಸ್ಪಂದನ ಆರ್ಟ್ಸ್ ಆಂಡ್ ಸ್ಪೋರ್ಟ್ ಕ್ಲಬಿನ ವತಿಯಿಂದ 4 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಮೀಂಜ : ಸ್ಪಂದನ ಆರ್ಟ್ಸ್ ಆಂಡ್ ಸ್ಪೋರ್ಟ್ ಕ್ಲಬ್ ತಿಲಕ್ ನಗರ ಎಲಿಯಾಣ ವತಿಯಿಂದ 4ನೇ ವರ್ಷದ ಗಣೇಶೋತ್ಸವವು ಬಹಳ ವಿಜೃಂಭಣೆಯಿಂದ ಜರಗಿತು.ಬೆಳಗ್ಗೆ 6 ಗಂಟೆಗೆ ಗಣಪತಿ ಪ್ರತಿಷ್ಠೆ ಗಣಪತಿ ಹವನ ನಡೆದು ಶ್ರೀ ಶಾಸ್ತ ಭಜನಾ ಮಂದಿರ ಚಿನಾಲದ ವತಿಯಿಂದ ಭಜನಾ ಸೇವೆ ನಡೆಯಿತು.ನಂತರ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆದವು.ನಂತರ ಸಭಾ ಕಾರ್ಯಕ್ರಮ ನಡೆಯಿತು. ಉತ್ತಮ ಕೃಷಿ ಕಾರ್ಮಿಕರಿಗೆ ನೀಡುವ ಈ ವರ್ಷದ ‘ ಸ್ಪಂದನ ಗ್ರಾಮೀಣ ಪ್ರಶಸ್ತಿ’ ಕುಂಞಿ ಪೂಜಾರಿ ಹಾಗೂ ಬಾಗಿ ದಂಪತಿಗಳಿಗೆ…

Read More

ನಗರದ ಹೃದಯ ಭಾಗದಲ್ಲಿ ಮತ್ತೆ ಕಲಶ ಸ್ಥಾಪನೆ

ಮಂಗಳೂರು: ಮಹಾವೀರ ವೃತ್ತದಲ್ಲಿ ಮೇಲ್ಸ್ತುವೆ ಕಾಮಗಾರಿ ಹಿನ್ನಲೆ ತೆರವುಗೊಳಿಸಿದ್ದ ಭಾರಿ ಗಾತ್ರದ ‘ಕಲಶ’ದ ಆಕೃತಿಯನ್ನು ಮರುಸ್ಥಾಪಿಸಲಾಗುತ್ತಿದ್ದು, ಸೋಮವಾರ ರಾತ್ರಿ ಪೀಠದ ಮೇಲೆ ತಂದಿರಿಸಲಾಗಿದೆ. ಪಂಪ್‌ವೆಲ್ ಗೆ 2003ರಲ್ಲಿ ಬೃಹತ್ ಕಲಶವಿಟ್ಟು ಮಹಾವೀರ ಸರ್ಕಲ್ ನಾಮಕರಣ ಮಾಡಲಾಗಿತ್ತು. ಮಂಗಳೂರು ಜೈನ್‌ ಸೊಸೈಟಿ ಇದರ ಉಸ್ತುವಾರಿ ವಹಿಸಿದ್ದರು. ರಾಷ್ಟ್ರೀಯ ಹೆದ್ದಾರಿ 66ರ ಮೇತುವೆಯು ಈ ವೃತ್ತದ ಮೇಲೆಯೇ ಹಾದು ಹೋಗಿದ್ದು, ಅದರ ಕಾಮಗಾರಿ ಸಲುವಾಗಿ 2016ರ ಮಾರ್ಚ್‌ನಲ್ಲಿ ಕಲಶವನ್ನು ತೆರವುಗೊಳಿಸಲಾಗಿತ್ತು. ಈಗ ಮೇಲ್ವೇತುವೆ ಪಕ್ಕದಲ್ಲಿ ಕಲಶಕ್ಕಾಗಿ ಮೀಸಲಿಟ್ಟಿರುವ ಜಾಗದಲ್ಲಿ ವೃತ್ತಾಕಾರದ…

Read More

ಆ್ಯಸಿಡ್ ಕುಡಿದು ಒಂದೇ ಕುಟುಂಬದ ಮೂವರು ಸಾವು …… !

ಕಾಸರಗೋಡು: ಆ್ಯಸಿಡ್ ಕುಡಿದು ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಂಬಲತ್ತರ ಸಮೀಪದ ಪಾರಕ್ಕಾಯಿ ಎಂಬಲ್ಲಿ ನಡೆದಿದೆ. ಗೋಪಿ (58) , ಪತ್ನಿ ಇಂದಿರಾ (54) ,ಪುತ್ರ ರಂಜೇಶ್ (34) ಮೃತಪಟ್ಟವರು. ಇನ್ನೋರ್ವ ಪುತ್ರ ರಾಕೇಶ್ (27) ಗಂಭೀರ ಸ್ಥಿತಿಯಲ್ಲಿ ಕಣ್ಣೂರು ಸರಕಾರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್ಥಿಕ ಸ್ಥಿತಿ ಹದಗೆಟ್ಟಿರುವುದು ಕಾರಣ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದಿದೆ . ಬೆಳ್ಳಂಬೆಳಗ್ಗೆ ಮೂರು ಗಂಟೆ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ. ಸಂಬಂಧಿಕರೋರ್ವರ ಮೊಬೈಲ್‌ಗೆ ಕರೆ…

Read More

ಪುಣೆಯಲ್ಲಿ ಕಾರ್ಕಳ ಮೂಲದ ಹೋಟೆಲ್ ಮಾಲೀಕನ ಬರ್ಬರ್ ಹತ್ಯೆ

ಮಂಗಳವಾರ ರಾತ್ರಿ ಮಹಾರಾಷ್ಟ್ರದ ಪುಣೆಯಲ್ಲಿ ಕಾರ್ಕಳದ ಹೋಟೆಲ್ ಮಾಲೀಕನೊಬ್ಬನ ಕೊಲೆ ನಡೆದ ಘಟನೆಯೊಂದು ನಡೆದಿದೆ . ಮೃತ ವ್ಯಕ್ತಿಯನ್ನು ಕಾರ್ಕಳ ಮೂಲದ ಕುಮೇರುಮನೆಯ ಎಣ್ಣೆಹೊಳೆ ನಿವಾಸಿ ಸಂತೋಷ್ ಶೆಟ್ಟಿ (46) ಎಂದು ಗುರುತಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಕರ್ತವ್ಯದಲ್ಲಿರುವಾಗ ಕುಡಿದ ಅಮಲಿನಲ್ಲಿದ್ದ ಉತ್ತರ ಪ್ರದೇಶದ ಸಿಬ್ಬಂದಿಯೊಬ್ಬರಿಗೆ ಸಂತೋಷ್ ಶೆಟ್ಟಿ ಎಚ್ಚರಿಕೆ ನೀಡಿದ್ದರು. ಗದರಿಸುವಿಕೆಯಿಂದ ಕೋಪಗೊಂಡ ಸಿಬ್ಬಂದಿ ಅಡುಗೆ ಮನೆಯಿಂದ ಚಾಕುವನ್ನು ತಂದು ಶೆಟ್ಟಿ ಮೇಲೆ ಹಲ್ಲೆ ನಡೆಸಿದ್ದ. ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ…

Read More

ಸೌಹಾರ್ದತೆಯೇ ಭಾರತದ ಶಕ್ತಿ : ಯು.ಟಿ.ಖಾದರ್ ಬಂಟ್ಸ್ ಹಾಸ್ಟೇಲ್ ನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಬಂಟ್ಸ್ ಹಾಸ್ಟೇಲ್ ನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮಂಗಳೂರು: ಎಲ್ಲ ಜಾತಿ-ಧರ್ಮಗಳ ನಡುವೆ ಇರುವ ಪರಸ್ಪರ ಸೌಹಾರ್ದತೆಯೇ ಭಾರತ ದೇಶದ ದೊಡ್ಡ ಶಕ್ತಿಯಾಗಿದೆ. ಇಲ್ಲಿನ ಸಂಸ್ಕೃತಿ- ಸಂಸ್ಕಾರವನ್ನು ಯುವ ಜನಾಂಗಕ್ಕೆ ವರ್ಗಾಯಿಸಲು ಗಣೇಶೋತ್ಸವದಂತಹ ಹಬ್ಬಗಳು ಪೂರಕವಾಗಿವೆ ಎಂದು ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ಹೇಳಿದರು.ಅವರು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ನಡೆಯುತ್ತಿರುವ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಮೊದಲ ದಿನದ ಧಾರ್ಮಿಕ ಸಭೆಯ ಮುಖ್ಯ ಅತಿಥಿಯಾಗಿದ್ದರು.ಹಿರಿಯರು ಹಾಕಿಕೊಟ್ಟ ಮಾರ್ಗದರ್ಶನ…

Read More

ಸಂಚಾರಕ್ಕೆ ತೊಡಕಾಗಿರುವ ಡ್ರೈನೇಜ್ ನ ಗುಂಡಿ – ಮಳೆ‌ನೀರು ನಿಂತಿರುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ

ಮಂಗಳೂರು: ಮಂಗಳೂರು ನಗರದ ಸೆಂಟ್ರಲ್ ರೈಲ್ವೇ ನಿಲ್ದಾಣ ಸಮೀಪದ ಮುತ್ತಪ್ಪ ದೇವಾಲಯದ ಮುಂದಿರುವ ಮಾರ್ಗದ ಡ್ರೈನೇಜ್ ನ ಸ್ಪಚ್ಚತೆಗಾಗಿ ತೋಡಲಾದ ಗುಂಡಿಯೊಂದನ್ನು ಮುಚ್ಚದೆ ಬಿಡಲಾಗಿದೆ. ಮಳೆ‌ನೀರು ನಿಂತಿರುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ.ಎರಡು ದಿನಗಳಿಂದ ಕಾಮಗಾರಿ ನಡೆಯುತ್ತಿಲ್ಲ . ಈ ಮಾರ್ಗವಾಗಿ ಸಂಚರಿಸುವ ವಾಹನಗಳಿಗೆ , ಪಾದಚಾರಿಗಳಿಗೆ , ದೇವಾಲಯಕ್ಕೆ ಬರುವ ಭಕ್ತರಿಗೆ ಈ ಗುಂಡಿ ತೊಂದರೆಯನ್ನುಂಟು ಮಾಡುತ್ತಿದೆ.

Read More

ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಬದುಕಿನ ಮಹಾ ಭಾಗ್ಯ- ಚಲನ ಚಿತ್ರ ಸಾಹಿತಿ, ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು

ಕಾಸರಗೋಡು :ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಓರ್ವ ಮಹಾನ್ ವ್ಯಕ್ತಿ, ಅದ್ಭುತ ಪ್ರತಿಭೆ, ಕಾವ್ಯ ಮತ್ತು ಸಂಶೋಧನೆಯನ್ನು ಸವ್ಯಸಾಚಿಸಿದವರು. ಅವರ ಹೆಸರಿನಲ್ಲಿ ಕಾಸರಗೋಡಿನ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಸ್ಥಾಪಿಸಿದ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಬದುಕಿನ ಮಹಾ ಭಾಗ್ಯ ಎಂದು ಚಲನ ಚಿತ್ರ ಸಾಹಿತಿ, ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ಹೇಳಿದರು. ಕನ್ನಡ ಭವನದ ರಜತ ವರ್ಷಾಚರಣೆ ಪ್ರಯುಕ್ತ ಕನ್ನಡ ಭವನ ವೇದಿಕೆಯಲ್ಲಿ ನಡೆದ ಗಣೇಶ ಚತುರ್ಥಿ ವಿಶೇಷ ಕಾರ್ಯಕ್ರಮದಲ್ಲಿ “ರಾಷ್ಟ್ರಕವಿ ಗೋವಿಂದ…

Read More

ತಲಪಾಡಿ ಹೆದ್ದಾರಿಯಲ್ಲಿ ಭೀಕರ ವಾಹನ ಅಪಘಾತ,ಹಲವರ ಸ್ಥಿತಿ ಚಿಂತಾಜನಕ

ಮಂಜೇಶ್ವರ : ತಲಪಾಡಿಯಲ್ಲಿ ಭೀಕರ ವಾಹನ ಅಪಘಾತ ಕಾಸರಗೋಡು ಭಾಗದಿಂದ ಮಂಗಳೂರು ಕಡೆ ಪ್ರಯಾಣಿಕರನ್ನು ಹೇರಿ ಕೊಂಡು ಹೋಗುತಿದ್ದ ಕರ್ನಾಟಕ ಸಾರಿಗೆ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮತ್ತೊಂದು ಭಾಗದಲ್ಲಿ ನಿಲುಗಡೆಗೊಂಡಿದ್ದ ಆಟೋ ರಿಕ್ಷಾ ಹಾಗೂ ಬಸ್ಸಿಗಾಗಿ ಕಾಯತಿದ್ದ ಪ್ರಯಾಣಿಕರಿಗೆ ಡಿಕ್ಕಿ ಹೊಡಿದಿದೆ. ಹೊಡೆತದ ರಭಸಕ್ಕೆ ಆಟೋ ರಿಕ್ಷಾ ಪೂರ್ಣವಾಗಿ ಜಖಂಗೊಂಡಿದೆ.ಆಟೋ ರಿಕ್ಷಾದಲ್ಲಿದ್ದ ಕೆ ಸಿ ರೋಡ್ ನಿವಾಸಿಗಳಾದ ಆಯಿಷಾ, ನಸೀಮ, ಕದೀಜ, ಸೇರಿದಂತೆ 7 ಮಂದಿಯನ್ನು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ನಾಲ್ಕು…

Read More

ಉಪ್ಪಳ ಗೇಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟರ್ ಜೀಪ್ ಡಿಕ್ಕಿಸ್ಕೂಟರ್ ಸವಾರ ಮೃತ್ಯು -ಇನ್ನೊಬ್ಬ ಗಂಭೀರ

ಮಂಜೇಶ್ವರ : ಉಪ್ಪಳ ಗೇಟ್ ರಾಷ್ಟ್ರೀಯ ಹೆದ್ದಾರಿ ಬಳಿ ಬುಧವಾರ ರಾತ್ರಿ 7.30 ರ ಸುಮಾರಿಗೆ ಸ್ಕೂಟರ್ ಹಾಗೂ ಬೊಲೇರೋ ಜೀಪ್ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾನೆ. ಜೊತೆಗಿದ್ದವನಿಗೆ ಗಂಭೀರ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಲಪಾಡಿ ನಿವಾಸಿ ಹಮೀದ್ ಅವಘಾತದಲ್ಲಿ ಸಾವನ್ನಪ್ಪಿದ್ದಾರೆ. ಜೊತೆಗಿದ್ದ ಇಜಾಝ್ ಆಸ್ಪತ್ರೆಗೆ ದಾಖಲಿಸಲಿಸಲ್ಪಟ್ಟ ವ್ಯಕ್ತಿಯಾಗಿದ್ದಾರೆ.ತಲಪಾಡಿ ಭಾಗದಿಂದ ಉಪ್ಪಳ ಭಾಗಕ್ಕೆ ಸಂಚರಿಸುತಿದ್ದ ಸ್ಕೂಟರಿಗೆ ಅದೇ ಭಾಗದಿಂದ ಅಮಿತ ವೇಗದಲ್ಲಿ ಬಂದ ಬೊಲೆರೋ ಜೀಪು ಡಿಕ್ಕಿ ಹೊಡೆದು ಈ…

Read More
error: Content is protected !!