ದೇರಳಕಟ್ಟೆ ಆಸ್ಪತ್ರೆಯ ಜಂಕ್ಷನ್ ನಲ್ಲಿ ಕೊಳಚೆ ನೀರು ಶೇಖರಣೆ – ವಿಪರೀತ ದುರ್ವಾಸನೆ – ಕಠಿಣ ಕ್ರಮ ಕೈಗೊಳ್ಳಲು ಸಿಪಿಐ(ಎಂ) ಒತ್ತಾಯ
ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಕೆ ಎಸ್ ಹೆಗ್ಡೆ ಆಸ್ಪತ್ರೆಯ ಜಂಕ್ಷನ್ ನಲ್ಲಿ ಕಳೆದ ಹಲವಾರು ತಿಂಗಳಿನಿಂದ ಕೊಳಚೆ ನೀರು ಶೇಖರಣೆಗೊಂಡಿದ್ದು ಇದರಿಂದ ವಿಪರೀತ ದುರ್ವಾಸನೆ ಪರಿಸರದಾದ್ಯಂತ ಬೀರುತ್ತಿದ್ದು, ಇದರ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸ್ವಾದಿ) ಉಳ್ಳಾಲ ವಲಯ ಸಮಿತಿಯು ಇಂದು(26-05-2026) ಉಳ್ಳಾಲ ತಾಲೂಕು ತಹಶೀಲ್ದಾರ್, ಕೋಟೆಕಾರ್ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು,ಬೆಳ್ಮ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಗಳು ಹಾಗೂ ನಾಟೆಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಗಳಿಗೆ ಮನವಿಯನ್ನು ಅರ್ಪಿಸಿತು….
