ಬೆಂಗಳೂರು: ಇಡಬ್ಲ್ಯೂಎಸ್ ಪ್ರಮಾಣಪತ್ರ ಅವಧಿ ವಿಸ್ತರಣೆ ಕುರಿತು ಮುಖ್ಯಮಂತ್ರಿಗಳಿಗೆ ಮನವಿ

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಪಿ.ಎಂ. ಮಾಲತೇಶ ಅವರು ಸನ್ಮಾನ್ಯ ಮುಖ್ಯಮಂತ್ರಿ Siddaramaiah ಅವರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಇಡಬ್ಲ್ಯೂಎಸ್ (ಆರ್ಥಿಕವಾಗಿ ಹಿಂದುಳಿದ ವರ್ಗ) ಪ್ರಮಾಣಪತ್ರದ ಅವಧಿ ಕುರಿತ ಸಮಸ್ಯೆಯನ್ನು ವಿವರಿಸಿ ಮನವಿ ಸಲ್ಲಿಸಿದರು. ಬ್ರಾಹ್ಮಣ ಸಮುದಾಯಕ್ಕೆ ಇಡಬ್ಲ್ಯೂಎಸ್ ಪ್ರಮಾಣಪತ್ರವನ್ನು ಕೇವಲ ಒಂದು ವರ್ಷಕ್ಕೆ ಸೀಮಿತಗೊಳಿಸಲಾಗಿದ್ದು, ಇತರ ವರ್ಗಗಳಲ್ಲಿ ಇದು ಐದು ವರ್ಷಗಳ ಕಾಲ ಮಾನ್ಯವಾಗಿರುವುದರಿಂದ ಅಸಮಾನತೆ ಉಂಟಾಗಿದೆ ಎಂದು ಅವರು ತಿಳಿಸಿದರು. ವಿಶೇಷವಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ…

Read More

ಮಂಗಳೂರು: ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಂಭ್ರಮ

ಮಂಗಳೂರಿನ ಪಿ.ಎ. ಪ್ರಥಮ ದರ್ಜೆ ಕಾಲೇಜು 2025–2026 ಸಾಲಿನ ವಾರ್ಷಿಕೋತ್ಸವವನ್ನು ಏಪ್ರಿಲ್ 16ರಂದು ಪೇಸ್ ಸಭಾಂಗಣದಲ್ಲಿ ಭರ್ಜರಿಯಾಗಿ ಆಚರಿಸಿತು. ಪಿ.ಎ.ಇ.ಟಿ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ಅಬ್ದುಲ್ಲಾ ಇಬ್ರಾಹಿಂ ಅವರ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳು, ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಹರ್ಷಭರಿತ ವಾತಾವರಣ ನಿರ್ಮಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದೈಜಿವರ್ಲ್ಡ್ ಮೀಡಿಯಾ ಮಂಗಳೂರು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ವಾಲ್ಟರ್ ನಂದಳಿಕೆ ಅವರು ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್, ವಿಶೇಷವಾಗಿ ಸಂವಹನ ಹಾಗೂ ಭಾವನಾತ್ಮಕ ಬುದ್ಧಿಮತ್ತೆಯ…

Read More

ಮಂಗಳೂರು: ಅಂಗಾಂಗ ದಾನ ಕುರಿತು ಜಾಗೃತಿ ಮೂಡಿಸಿದ ಡಾ. ರೋಹನ್ ಎಸ್. ಮೋನಿಸ್

ಮಂಗಳೂರಿನಲ್ಲಿ ಏಪ್ರಿಲ್ 11 ಮತ್ತು 12ರಂದು ನಡೆದ “ಮಂಗಳೂರು ಫಿಸಿಯೋಕಾನ್ – 2026” ಅಂತರಾಷ್ಟ್ರೀಯ ಫಿಸಿಯೋಥೆರಪಿ ಸಮ್ಮೇಳನದಲ್ಲಿ ಅಂಗಾಂಗ ದಾನದ ಮಹತ್ವದ ಬಗ್ಗೆ ವಿಶಿಷ್ಟ ಚಿಂತನೆಗಳನ್ನು ಆರ್.ಟಿ.ಎನ್ ಡಾ. ರೋಹನ್ ಎಸ್. ಮೋನಿಸ್ ಹಂಚಿಕೊಂಡರು. ಟಿ.ಎಂ.ಎ ಪೈ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಈ ಸಮ್ಮೇಳನವು ದೇಶದ ಅತಿದೊಡ್ಡ ಫಿಸಿಯೋಥೆರಪಿ ಕೂಟವಾಗಿ ಗುರುತಿಸಿಕೊಂಡಿದ್ದು, 6000ಕ್ಕೂ ಹೆಚ್ಚು ಫಿಸಿಯೋಥೆರಪಿಸ್ಟ್‌ಗಳು ಹಾಗೂ ಏಷ್ಯಾದ 30ಕ್ಕೂ ಹೆಚ್ಚು ಖ್ಯಾತ ಭಾಷಣಕಾರರು ಭಾಗವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಡಾ. ಯು.ಟಿ. ಇಫ್ತಿಕಾರ್ ಫರೀದ್ ಅವರ…

Read More

ಕಣ್ಣೂರು ವಾರ್ಡ್‌ನಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ: ಶಾಸಕ ವೇದವ್ಯಾಸ ಕಾಮತ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 52 ನೇ ಕಣ್ಣೂರು ವಾರ್ಡಿನ ಪೇರ್ಲ ಶ್ರೀ ದುರ್ಗಾಪರಮೇಶ್ವರೀ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ರಸ್ತೆ ಕಾಮಗಾರಿಯು ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು ಇಲ್ಲಿಯತನಕ ಇಲ್ಲಿರುವ ದೇವಸ್ಥಾನದವರೆಗೆ ನಾಲ್ಕು ಚಕ್ರದ ವಾಹನಗಳು ಹೋಗಲು ಸಾಧ್ಯವಾಗದಂತಹ ಪರಿಸ್ಥಿತಿಯಿದ್ದ ಕಾರಣ ಸ್ಥಳೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ನಂತರದ ದಿನಗಳಲ್ಲಿ ಶತಾಯಗತಾಯ ಇಲ್ಲಿಗೊಂದು ಸುಸಜ್ಜಿತ ರಸ್ತೆ ನಿರ್ಮಾಣ ಮಾಡಲೇಬೇಕೆಂಬ ನಮ್ಮೆಲ್ಲರ ಆಶಯಕ್ಕೆ ಆಸರೆಯಾಗಿ ನಿಂತವರು ಇಲ್ಲಿನ…

Read More

​ಮಂಜೇಶ್ವರ: ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ – ಕುಂಡುಕೊಳಕೆ ಬೀಚ್‌ನಲ್ಲಿ ಸೂತಕದ ಛಾಯೆ

​ಮಂಜೇಶ್ವರ: ಇಲ್ಲಿನ ಕುಂಡುಕೊಳಕೆ ಸಮುದ್ರ ಕಿನಾರೆಯಲ್ಲಿ ಬುಧವಾರ ಸಂಜೆ ಅಲೆಗಳ ಅಬ್ಬರಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಇಂದು (ಗುರುವಾರ) ಸಂಜೆ ಹೊಸಬೆಟ್ಟು ಕಡಪ್ಪುರದಲ್ಲಿ ಪತ್ತೆಯಾಗಿದೆ. ಮಂಜೇಶ್ವರ ಚೌಕಿ ನಿವಾಸಿಗಳಾದ ಉಮರುಲ್ ಫಾರೂಕ್ ಮತ್ತು ರಝೀನಾ ದಂಪತಿಗಳ ಪುತ್ರ ಮೊಹಮ್ಮದ್ ಝೈನುಲ್ ಹಾಬಿದ್ (18) ಬುಧವಾರ ಸಂಜೆ ತನ್ನ ಸ್ನೇಹಿತರೊಂದಿಗೆ ಕುಂಡುಕೊಳಕೆ ಬೀಚ್‌ಗೆ ವಿಹಾರಕ್ಕೆ ಬಂದಿದ್ದನು. ಈ ಸಂದರ್ಭದಲ್ಲಿ ಅಲೆಗಳ ಅಬ್ಬರಕ್ಕೆ ಸಿಲುಕಿ ಆತ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದನು. ತಕ್ಷಣವೇ ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಹುಡುಕಾಟ…

Read More

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನ ದುರ್ಮರಣ

ಕಡಬ: ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಅಂಬೆಕಲ್ಲು ನಿವಾಸಿ ಹೂವಪ್ಪ ಗೌಡ ಎಂಬವರ ಪುತ್ರ ಕಿಶನ್ ಎ ಹೆಚ್ (32 ವರ್ಷ) ಎಂದು ಗುರುತಿಸಲಾಗಿದೆ. ಇವರು ಕಳೆದ ಎರಡು ವರ್ಷಗಳಿಂದ ಗುತ್ತಿಗಾರಿನ ‘ದಕ್ಷಿಣ ಕನ್ನಡ ಮ್ಯೂಚುಯಲ್ ಬೆನಿಫಿಟ್ ಲಿಮಿಟೆಡ್’ನಲ್ಲಿ ಲೋನ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಎರಡು…

Read More

ಮಂಗಳೂರಿನಲ್ಲಿ ಲಯನ್ಸ್ ಕ್ಲಬ್ “ಸುಮಂಗಲ ಜಿಲ್ಲಾ ಕನ್ವೆನ್ಷನ್” ಏಪ್ರಿಲ್ 18 ಹಾಗೂ 19ರಂದು

ಲಯನ್ಸ್ ಕ್ಲಬ್ ಜಿಲ್ಲೆ 317 ಡಿ ವತಿಯಿಂದ “ಸುಮಂಗಲ ಜಿಲ್ಲಾ ಕನ್ವೆನ್ಷನ್” ಸಮ್ಮೇಳನವನ್ನು ಏಪ್ರಿಲ್ 18 ಹಾಗೂ 19ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿದೆ ಎಂದು ಸಂಘಟನಾ ಸಮಿತಿಯ ಅಧ್ಯಕ್ಷರಾದ ರಾಧಾಕೃಷ್ಣ ರೈ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸಮ್ಮೇಳನವನ್ನು ಜಿಲ್ಲೆಯ ಪ್ರಥಮ ಮಹಿಳೆ ಮಮತಾ ಶೆಣೈ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಜಿಲ್ಲಾ ಗವರ್ನರ್ ಕುಡುಪಿ ಅರವಿಂದ ಶೆಣೈ ವಹಿಸಲಿದ್ದಾರೆ ಎಂದರು . ಮುಖ್ಯ ಅತಿಥಿಗಳಾಗಿ ಅಂತರಾಷ್ಟ್ರೀಯ ನಿರ್ದೇಶಕ ಪಂಕಜ್ ಮೆಹ್ತಾ…

Read More

​ಮಂಜೇಶ್ವರ ಕುಂಡುಕೊಳಕೆ ಬೀಚ್: ಪ್ರವಾಸಿಗರ ಪಾಲಿಗೆ ಮೃತ್ಯುಕೂಪವಾಗುತ್ತಿದೆಯೇ ಈ ಕಿನಾರೆ?

​ಮಂಜೇಶ್ವರ: ಶಾಲಾ ರಜೆ ಅವಧಿಯಾದ್ದರಿಂದ ಮಂಜೇಶ್ವರದ ಪ್ರಸಿದ್ಧ ಕುಂಡುಕೊಳಕೆ ಬೀಚ್‌ಗೆ ಪ್ರತಿದಿನ ಸಾವಿರಾರು ಪ್ರವಾಸಿಗರು ಮತ್ತು ಕುಟುಂಬಗಳು ಆಗಮಿಸುತ್ತಿದ್ದಾರೆ. ಆದರೆ, ಕನಿಷ್ಠ ಭದ್ರತಾ ವ್ಯವಸ್ಥೆಯೂ ಇಲ್ಲದ ಕಾರಣ ಈ ಸುಂದರ ಕಿನಾರೆ ಇದೀಗ ಪ್ರಾಣಭಯ ಹುಟ್ಟಿಸುವ ತಾಣವಾಗಿ ಮಾರ್ಪಟ್ಟಿದೆ. ಬುಧವಾರ ಸಂಜೆ ಸಂಭವಿಸಿದ ದುರಂತದಲ್ಲಿ 18 ವರ್ಷದ ಝೈನುಲ್ ಹಾಬಿದ್ ಸಮುದ್ರ ಪಾಲಾಗಿದ್ದು, ಈತನ ಪತ್ತೆಗಾಗಿ ಶೋಧ ಕಾರ್ಯ ತೀವ್ರಗೊಂಡಿದ್ದರೂ ಇನ್ನು ಸುಳಿವು ಲಭ್ಯವಾಗಿಲ್ಲ. ಇದು ಕೇವಲ ಒಂದು ಆಕಸ್ಮಿಕವಲ್ಲ, ಇಲ್ಲಿನ ಭದ್ರತಾ ವೈಫಲ್ಯಕ್ಕೆ ಬಲಿಯಾದ ಮತ್ತೊಂದು…

Read More

ಮಂಗಳೂರು ನಗರಾಭಿವೃದ್ಧಿಗೆ ₹165 ಕೋಟಿ: ಏಪ್ರಿಲ್ 18ರಂದು ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ (MGNVP) ದ್ವಿತೀಯ ಹಂತದಡಿ ರಾಜ್ಯ ಸರ್ಕಾರವು ಮಂಗಳೂರು ಮಹಾನಗರ ಪಾಲಿಕೆಗೆ ₹165 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಏಪ್ರಿಲ್ 18ರಂದು ಶಿಲಾನ್ಯಾಸ ನೆರವೇರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ. ಅವರು ಮನಪಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಬೆಳಗ್ಗೆ 9ಕ್ಕೆ ಮರವೂರು ಸೇತುವೆ ಬಳಿ ₹3 ಕೋಟಿ ವೆಚ್ಚದ ಕಾಮಗಾರಿ, 9.45ಕ್ಕೆ ವೆಲೆನ್ಸಿಯಾ…

Read More

ಸ್ಥಳೀಯ ಸಂಸ್ಥೆಗಳ ಚುನಾವಣೆ ತಕ್ಷಣ ನಡೆಸಿ: ಎಸ್‌ಡಿಪಿಐ ಆಗ್ರಹ

ರಾಜ್ಯದಲ್ಲಿ ಸ್ಥಳೀಯಾಡಳಿತ ಚುನಾವಣೆ ತಕ್ಷಣ ನಡೆಯಲಿ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ಆಗ್ರಹಿಸಿದ್ದಾರೆ. ಕರ್ನಾಟಕ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲು ತಕ್ಷಣ ಕ್ರಮಕೈ ಗೊಳ್ಳಬೇಕು ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ಮೈಸೂರು ಸುದ್ದಿ ಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ. 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಬಿಡುಗಡೆಯಾಗಬೇಕಿದ್ದ ಸುಮಾರು 2133 ಕೋಟಿ ರೂ. ಅನುದಾನ ವನ್ನು ಕೇಂದ್ರ ಸರ್ಕಾರ ಇನ್ನೂ ಬಿಡುಗಡೆ ಮಾಡಿಲ್ಲ. ನಾಲ್ಕು ಕಂತುಗಳಲ್ಲಿ ಬಿಡುಗಡೆಯಾಗಬೇಕಿದ್ದ ಹಣ ಮಾರ್ಚ್‌ ಅಂತ್ಯದವರೆಗೂ ಬಂದಿಲ್ಲ. ಇದರಿಂದ ಗ್ರಾಮ ಪಂಚಾಯಿತಿಗಳು…

Read More
error: Content is protected !!