ಕೆನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ 21ನೇ ಪದವಿ ಪ್ರಧಾನ ಸಮಾರಂಭ.

“ಸಂಸ್ಥೆಯ ಹೆಮ್ಮೆಯ ಸಾಧನೆಗಳಲ್ಲಿ ನೀವು ಪಾಲುದಾರರು ” – ವಾಸುದೇವ ಕಾಮತ್ಮಂಗಳೂರು, ಆ. 16: “ನಮ್ಮ ಕಾಲೇಜಿನಲ್ಲಿ ನಿರ್ಮಿಸಿದ ಆಧುನಿಕ ಸೌಲಭ್ಯಗಳು, ಈ ತಾಂತ್ರಿಕ ಶಿಕ್ಷಣ ಸಂಸ್ಥೆಗೆ ದೊರಕಿದ ಸ್ವಾಯತ್ತ ಸ್ಥಾನಮಾನ, NAAC ಮಾನ್ಯತೆ, ಅನೇಕ ಶ್ರೇಣಿಗಳು ಹಾಗೂ ಚಿನ್ನದ ಪದಕ ಇವು ಸಂಸ್ಥೆಯ ಹೆಮ್ಮೆಯ ಸಾಧನೆಗಳು. ಈ ಸಾಧನೆಗಳ ಸಹಯಾತ್ರಿಗಳೆಂದರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು. ಬರುವ ಡಿಸೆಂಬರ್ 24, 2025ರಂದು ಜರುಗುವ ಜಾಗತಿಕ ಹಳೆಯ ವಿದ್ಯಾರ್ಥಿ ಸಮಾವೇಶದಲ್ಲಿ ಪ್ರತಿಯೊಬ್ಬ ಪದವೀಧರರೂ ಪಾಲ್ಗೊಳ್ಳಿ, ಸಂಸ್ಥೆಯ ಶಕ್ತಿಯನ್ನು ವಿಶ್ವಮಟ್ಟದಲ್ಲಿ…

Read More

ಮಂಗಲ್ಪಾಡಿಯಲ್ಲಿ ಮೇಲೈಸಿದ ಬಂಟರ ಆಟಿದ ಕೂಟ.

ಉದ್ಯಮಿ,ಕೊಡುಗೈ ದಾನಿ ಕಾಸರಗೋಡು ಜಿಲ್ಲಾ ಬಂಟರ ಭವನ ಕಟ್ಟಡ ಸಮಿತಿಯ ಅಧ್ಯಕ್ಷ ಡಾ. ಸದಾಶಿವ ಶೆಟ್ಟಿ, ಕುಳೂರು ಕನ್ಯಾನ ಇವರ ನೇತೃತ್ವದಲ್ಲಿ ಇತಿಹಾಸ ಪ್ರಸಿದ್ಧ ಮಂಗಲ್ಪಾಡಿ ಮನೆಯ ಗದ್ದೆಯಲ್ಲಿ ಕಾಸರಗೋಡು ಜಿಲ್ಲಾ ಬಂಟರ ಸಮ್ಮಿಲನ ಹಾಗೂ ಆಟಿದ ಕೂಟ ಕಾರ್ಯಕ್ರಮ ಅದ್ದೂರಿಯಿಂದ ಜರುಗಿತು.ಜಿಲ್ಲೆಯ ಬಂಟರ ಸಂಘ, ಫಿರ್ಕಾ ಬಂಟರ ಸಂಘಗಳು, ಪಂಚಾಯತ್ ಮಟ್ಟದ ಎಲ್ಲಾ ಬಂಟರ ಸಂಘದ ಸಹಯೋಗದೊಂದಿಗೆ ಜರಗಿದ ಈ ಕಾರ್ಯಕ್ರಮದಲ್ಲಿ ಆಟಿದ ಕೂಟದ ಸಲುವಾಗಿ ವಿವಿಧ ಗ್ರಾಮೀಣ ಕ್ರೀಡೆಗಳನ್ನು ಹಾಗೂ ಸ್ಪರ್ಧೆಗಳನ್ನು ಮನೋರಂಜನಾ ಕಾರ್ಯಕ್ರಮಗಳನ್ನು…

Read More

ಐಟೆಕ್ ಕುಂಬ್ಳೆಯಲ್ಲಿ ಸ್ವಾತಂತ್ರ್ಯೋತ್ಸವ.

ಕುಂಬಳೆ:: 79ನೇ ಸ್ವಾತಂತ್ರ್ಯೋತ್ಸವವನ್ನು ಐಟೆಕ್ ಟೆಕ್ನಿಕಲ್ ಇನ್ಸ್ಟಿಟ್ಯೂಟ್ ಕುಂಬಳೆಯಲ್ಲಿ ಆಚರಿಸಲಾಯಿತು. ಕುಂಬಳೆ ಗ್ರಾಮ ಪಂಚಾಯತ್ ಸದಸ್ಯೆಯಾದ ಶ್ರೀಮತಿ ವಿದ್ಯಾಪೈ ಧ್ವಜರೋಹಣಗೈದು ಶುಭ ಹಾರೈಕೆ ಮಾಡಿದರು. ಮಹಮ್ಮಾಯ ಟ್ರೇಡರ್ಸ್ ಮಾಲಕರಾದ ಸಂದೇಶ ಭಟ್, ವೈದ್ಯರಾದ ಗಣೇಶ್, ಕುಂಬಳೆ ಮಾಸ್ಟರ್ ಬುಕ್ ಹೌಸಿನ ಮಾಲಕೀಯರಾದ ಶ್ರೀಮತಿ ರಾಜೇಶ್ವರಿ, ವ್ಯಾಪಾರಸ್ಥರಾದ ಗೋಕುಲ್ ದಾಸ್ ರವರು ಉಪಸ್ಥಿತರಿದ್ದರು. ಇನ್ಸ್ಟಿಟ್ಯೂಟ್ ನ ಪ್ರಾಂಶುಪಾಲರಾದ ರವಿ ಮುಡಿಮಾರು ಸ್ವಾಗತಿಸಿ ವಂದಿಸಿದರು.

Read More

ಹಬ್ಬ ಹರಿದಿನಗಳ ಆಚರಣೆ ಮುಂದಿನ ಪೀಳಿಗೆಗೆ ಆದರ್ಶ – ಹರಿನಾಥ ಭಂಡಾರಿ.

ಉಪ್ಪಳ : ಇಲ್ಲಿಗೆ ಸಮೀಪದ ಮುಳಿಂಜ ಮದ್ದಪವಳ್ಳಚ್ಚಲ್ ಮಹಾನಗರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರುಕುಡಿಕೆ ಉತ್ಸವವು ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಸಡಗರ ಸಂಭ್ರಮದಿಂದ ನಡೆಯಿತು.ಮುಳಿಂಜ ಗುತ್ತು ಶ್ರೀ ನಂದರಾಜ ಭಂಡಾರಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು ಶ್ರೀ ಹರಿನಾಥ ಭಂಡಾರಿ ತೆಂಗಿನಕಾಯಿ ಒಡೆಯುವ ಮೂಲಕ ಆಟೋಟ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ಬಳಿಕ ಮಕ್ಕಳಿಗೆ, ಯುವಕ-ಯುವತಿಯರಿಗೆ ಮತ್ತು ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಹಗ್ಗ ಜಗ್ಗಾಟ ಸ್ಪರ್ಧೆಯನ್ನು ನಡೆಸಲಾಯಿತು. ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಯುವಶಕ್ತಿ…

Read More

ಮಂಜೇಶ್ವರ ಅಬಕಾರಿ ಪೊಲೀಸರ ಮುಂದುವರಿದ ಕಾರ್ಯಾಚರಣೆ : ಮತ್ತೆ ದಾಖಲೆಗಳಿಲ್ಲದೆ ಸಾಗಾಟ ಮಾಡುತಿದ್ದ 96 ಪವನ್ ಚಿನ್ನಾಭರಣ ವಶಕ್ಕೆ : ಒಬ್ಬ ವಶಕ್ಕೆ

ಮಂಜೇಶ್ವರ: ಮಂಜೇಶ್ವರ ವಾಮಂಜೂರು ಅಬಕಾರಿ ತಪಾಸಣಾ ಕೇಂದ್ರದಲ್ಲಿ ಅಧಿಕಾರಿಗಳು ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ. ಬಾನುವಾರ ಮಂಗಳೂರಿನಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಕರ್ಣಾಟಕ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮಂಜೇಶ್ವರ ಅಬಕಾರಿ ಇಲಾಖೆ ನಡೆಸಿದ ತಪಾಸಣೆಯಲ್ಲಿ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ಸುಮಾರು 96 ಪವನ್ (762 ಗ್ರಾಂ) ಚಿನ್ನಾಭರಣಗಳೊಂದಿಗೆ ಒಬ್ಬನನ್ನು ಸೆರೆ ಹಿಡಿಯಲಾಗಿದೆ.ಬಾನುವಾರ ಸಂಜೆ ವಾಮಂಜೂರು ಅಬಕಾರಿ ಚೆಕ್ ಪೋಸ್ಟ್ ನಲ್ಲಿ ಕಾರ್ಯಾಚರಣೆ ನಡೆದಿದೆ. ಈ ಸಂಬಂಧ ಮುಂಬೈ ನಿವಾಸಿ ಮುಜಾಸಿರ್ ಹುಸೈನ್ ಎಂಬಾತವನ್ನು ಸೆರೆ ಹಿಡಿಯಲಾಗಿದೆ. ಶನಿವಾರ ಕೂಡಾ ಇದೇ ಶೈಲಿಯಲ್ಲಿ ದಾಖಲೆಗಳಿಲ್ಲದೆ…

Read More

ಉಪರಾಷ್ಟ್ರಪತಿ ಚುನಾವಣೆ ಸೆಪ್ಟೆಂಬರ್ 9 ರಂದು.ಸಿ ಪಿ ರಾಧಾಕೃಷ್ಣನ್ ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಮುಖ್ಯಸ್ಥ ?

ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಮುಖ್ಯಸ್ಥರಾದ ಉಪರಾಷ್ಟ್ರಪತಿ ಚುನಾವಣೆಯು ಸೆಪ್ಟೆಂಬರ್ 9 ರಂದು ನಡೆಸಲು ಚುನಾವಣಾ ಆಯೋಗ ಈಗಾಗಲೇ ನಿರ್ಧರಿಸಿ ಅಧಿಸೂಚನೆ ಹೊರಡಿಸಿದೆ .ಉಪರಾಷ್ಟ್ರಪತಿಯಾಗಿದ್ದ ಜಗದೀಪ್ ಧನಕರ್ ತನ್ನ ಹುದ್ದೆಗೆ ಇತ್ತೀಚಿಗೆ ಧಿಡೀರ್ ರಾಜೀನಾಮೆ ನೀಡಿದ ಕಾರಣ ಈ ಸ್ಥಾನ ತೆರವು ಆಗಿದೆ.ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಂಸತ್ತಿನ ಉಭಯ ಸದನಗಳಾದ ರಾಜ್ಯಸಭೆ ಹಾಗೂ ಲೋಕಸಭೆ ಯ ಚುನಾಯಿತ ಪ್ರತಿನಿಧಿಗಳು ಹಾಗೂ ನಾಮನಿರ್ದೇಶನಗೊಂಡ ಸದಸ್ಯರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹರು. ಸಂವಿಧಾನದ 68 ನೇ ವಿಧಿ ಕಾಲಂ 2…

Read More

ಯುವಶಕ್ತಿ ಫ್ರೆಂಡ್ಷ್ ಸರ್ಕಲ್ ಮತ್ತು ಲೈಬ್ರೆರಿ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರುಕುಡಿಕೆ ಉತ್ಸವ ದ ಅಂಗವಾಗಿ ಪುಟಾಣಿ ಮಕ್ಕಳಿಗೆ ಶ್ರೀಕೃಷ್ಣ ವೇಷ ಸ್ಪರ್ಧೆ

ಯುವಶಕ್ತಿ ಫ್ರೆಂಡ್ಷ್ ಸರ್ಕಲ್ ಮತ್ತು ಲೈಬ್ರೆರಿ (ರಿ) K.G.D 6412ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರುಕುಡಿಕೆ ಉತ್ಸವದ ಅಂಗವಾಗಿ ಪುಟಾಣಿ ಮಕ್ಕಳಿಗೆ ಶ್ರೀಕೃಷ್ಣ ವೇಷ ಸ್ಪರ್ಧೆ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆ ಯನ್ನು ಮಂಜೇಶ್ವರ ತಾಲೂಕು ಲೈಬ್ರೆರಿ ಕೌನ್ಸಿಲ್ ಅಧ್ಯಕ್ಷೆ ಶ್ರೀಕುಮಾರಿ ಟೀಚರ್ ಮಾಡಿ ಮಾತನಾಡಿದರು.ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಶಕ್ತಿಫ್ರೆಂಡ್ಸ್ ಸರ್ಕಲ್ ಅಧ್ಯಕ್ಷರಾದ ಮನೋಜ್ ಕುಮಾರ್ ವಹಿಸಿದರು. ಮಂಗಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತಾ ಯು ಶೆಟ್ಟಿ. ಯುವಶಕ್ತಿ ಲೈಬ್ರೆರಿ ಅಧ್ಯಕ್ಷರಾದ ಲಕ್ಷ್ಮಣ ಪೂಜಾರಿ,ಯುವಶಕ್ತಿ ಲೈಬ್ರೆರಿ ಕಾರ್ಯದರ್ಶಿ…

Read More

ಪ್ರೇರಣಾ ಸಾರ್ವಜನಿಕ ಗ್ರಂಥಾಲಯ ( ರಿ) ಗುವೇದಪಡ್ಪು ನಲ್ಲಿ ಸ್ವಾತಂತ್ರ್ಯ ದಿನಾಚರಣೆ.

ಗುವೇದಪಡ್ಪು: ಪ್ರೇರಣಾ ಸಾರ್ವಜನಿಕ ಗ್ರಂಥಾಲಯ ( ರಿ) ಗುವೇದಪಡ್ಪು ಇಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಗ್ರಂಥಾಲಯದ ಅಧ್ಯಕ್ಷರಾದ ಜಯರಾಮ ಕೊಣಿಬೈಲ್ ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ರವೀಂದ್ರ ಬಗಂಬಿಲ ರವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮಕ್ಕೆ ಚಿದಾನಂದ ಶೆಟ್ಟಿ ಗುವೇದಪಡ್ಪು ,ಚಂದ್ರಹಾಸ ಕತ್ತೆರಿಕೋಡಿ ಶುಭ ಹಾರೈಸಿದರು.ಗ್ರಂಥಾಲಯ ಕಾರ್ಯದರ್ಶಿ ಅಶೋಕ್ ಕೊಡ್ಲಮೊಗರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Read More

ಬೇಟೆಗಾರರ ತಂಡದವರನ್ನು ಬೆದರಿಸಿ ರೈಫಲ್, ಸ್ಕೂಟರ್, ಫೋನ್ ಗಳನ್ನು ದೋಚಿ ಗಂಭೀರ ಹಲ್ಲೆ : ನಾಲ್ಕು ಮಂದಿ ಬಂಧನ

ಮಂಜೇಶ್ವರ : ಕುತ್ತಿಕೋಲ್ ನಿಂದ ಮಂಜೇಶ್ವರಕ್ಕೆ ಪ್ರಾಣಿಗಳ ಬೇಟೆಗಾಗಿ ಬಂದಿಳಿದ ಯುವಕರನ್ನು ಬೆದರಿಸಿ ಅವರಿಂದ ರೈಫಲ್, ಸ್ಕೂಟರ್ ಹಾಗೂ ಮೊಬೈಲ್ ಫೋನ್ ದೋಚಿದ ಪ್ರಕರಣದಲ್ಲಿ, ಕಾಪಾ ಪ್ರಕರಣದ ಆರೋಪಿ ಸೇರಿದಂತೆ ನಾಲ್ಕು ಮಂದಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ರಾಶಿಕ್ ಎಂಬಾತ ಪರಾರಿಯಾಗಿದ್ದಾನೆ. ಹೊಸಂಗಡಿ ಅಂಗಡಿಪದವಿನ ಸೈಫುದ್ದೀನ್ ಆಲಿಯಾಸ್ ಪೂಚ ಸೈಫು (30), ಹಿದಾಯತ್ ನಗರ ಮುಟ್ಟತೋಡಿಯ ಮೊಯಿದಿನ್ ಆಲಿಯಾಸ್ ಚರಮುರು ಮೊಯ್ದು (29), ನ್ಯಾಷನಲ್ ನಗರ ಉಳಿಯತ್ತಡ್ಕದ ಮೊಹಮ್ಮದ್ ಸುಹೈಲ್ (27), ಬಿಲಾಲ್ ನಗರದ…

Read More

ದಾಖಲೆಗಳಿಲ್ಲದೆ ಸಾಗಾಟ ಮಾಡುತಿದ್ದ 55 ಪವನ್ ಚಿನ್ನ ಹಾಗೂ 4 ಲಕ್ಷ ರೂ. ವಶಕ್ಕೆ

ಮಂಜೇಶ್ವರ: ಮಂಗಳೂರಿನಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಕರ್ನಾಟಕ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮಂಜೇಶ್ವರ ಅಬಕಾರಿ ಇಲಾಖೆ ನಡೆಸಿದ ತಪಾಸಣೆಯಲ್ಲಿ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ಸುಮಾರು 55 ಪವನ್ (438.77 ಗ್ರಾಂ) ಚಿನ್ನಾಭರಣ ಹಾಗೂ 4 ಲಕ್ಷ ರೂಪಾಯಿ ಹಣಗಳೊಂದಿಗೆ ಇಬ್ಬರನ್ನು ಸೆರೆ ಹಿಡಿಯಲಾಗಿದೆ .ಶನಿವಾರ ಸಂಜೆ ವಾಮಂಜೂರು ಅಬಕಾರಿ ಚೆಕ್ ಪೋಸ್ಟ್ ನಲ್ಲಿ ಕಾರ್ಯಾಚರಣೆ ನಡೆದಿದೆ. ಕೋಝಿಕ್ಕೋಡ್ ನಿವಾಸಿಗಳಾದ ನಾಸರ್ ಹಾಗೂ ಈತನ ಪುತ್ರ ಮಹಮ್ಮದ್ ಫಾಸಿಲ್ ಸೆರೆಗೀಡಾಗಿದ್ದಾರೆ.ಸೆರೆಗೀಡಾದವರನ್ನು ಹಾಗೂ ವಶಪಡಿಸಲಾದ ಹಣ ಹಾಗೂ ಚಿನ್ನವನ್ನು ಜಿ ಎಸ್ ಟಿ…

Read More
error: Content is protected !!