ಮಂಗಳೂರಿನಲ್ಲಿ ಹಿಜಾಬ್ ನಿಷೇಧಕ್ಕೆ ಆಗ್ರಹ:ಶಿವಸೇನೆ–ಹಿಂದೂ ಸಂಘಟನೆಗಳಿಂದ ಸರ್ಕಾರಕ್ಕೆ ಮನವಿ

ಮಂಗಳೂರು: ಹಿಜಾಬ್ ನಿಷೇಧವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಶಿವಸೇನೆ ಹಾಗೂ ಸನಾತನ ಹಿಂದೂ ಸಂಘಟನೆಗಳ ಒಕ್ಕೂಟವು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಿತು. ಸಂಘಟನೆಗಳ ಪ್ರತಿನಿಧಿಗಳು ಕರ್ನಾಟಕ ಗೃಹ ಸಚಿವರಿಗೆ ಉದ್ದೇಶಿಸಿದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದರು. ಹಿಜಾಬ್ ನಿಷೇಧವನ್ನು ಕಠಿಣವಾಗಿ ಜಾರಿಗೆ ತರಬೇಕು ಹಾಗೂ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ನಡೆಯುವ ಗೋಹತ್ಯೆಗೆ ಕಡಿವಾಣ ಹಾಕಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ವೇಳೆ ಶಿವಸೇನೆ ಮುಖಂಡರಾದ ಆನಂದ್ ಶೆಟ್ಟಿ ಅಡ್ಯಾರ್, ಗಂಗಾಧರ್ ಕುಲ್ಕರ್ಣಿ…

Read More

ಉಡುಪಿಯಲ್ಲಿ 650ಕ್ಕೂ ಹೆಚ್ಚು ಮೆಡಿಕಲ್ ಅಂಗಡಿಗಳು ಬಂದ್: ಆನ್‌ಲೈನ್ ಔಷಧ ಮಾರಾಟಕ್ಕೆ ವ್ಯಾಪಾರಿಗಳ ತೀವ್ರ ವಿರೋಧ

ಉಡುಪಿ ಜಿಲ್ಲೆಯಾದ್ಯಂತ ಇಂದು 650ಕ್ಕೂ ಹೆಚ್ಚು ಮೆಡಿಕಲ್ ಅಂಗಡಿಗಳು ಬಂದ್‌ನಲ್ಲಿ ಭಾಗವಹಿಸಿ, ಆನ್‌ಲೈನ್ ಮೂಲಕ ನಡೆಯುತ್ತಿರುವ ಔಷಧ ಮಾರಾಟ ಸೇವೆಗೆ ವಿರೋಧ ವ್ಯಕ್ತಪಡಿಸಿವೆ. ಔಷಧ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲು ತೀರ್ಮಾನಿಸಿದ್ದಾರೆ. ಸಂಘದ ಪ್ರತಿನಿಧಿಗಳು ಮಾತನಾಡಿ, ಆನ್‌ಲೈನ್ ಔಷಧ ಮಾರಾಟದಿಂದ ಕಾನೂನುಬಾಹಿರ ಔಷಧ ವ್ಯವಹಾರಗಳಿಗೆ ಅವಕಾಶ ಸಿಗುತ್ತಿದೆ ಎಂದು ಆರೋಪಿಸಿದರು. ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಔಷಧಿಗಳನ್ನು ನೀಡಲಾಗುತ್ತಿದ್ದು, ಎಐ ಮತ್ತು ಪಿಡಿಎಫ್ ಎಡಿಟರ್‌ಗಳ ಸಹಾಯದಿಂದ ನಕಲಿ…

Read More

ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಅಭಿನಂದನಾ ಸಭೆ 24 ರಂದು

ಉಪ್ಪಳ : ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ವತಿಯಿಂದ ಅಭಿನಂದನಾ ಸಭೆಯು ಶ್ರೀ ಭಾರತ್ ಮಾತಾ ಸೇವಾ ಟ್ರಸ್ಟ್ ಪರಂಬಳ ಕಯ್ಯಾರು ಇದರ ಸಭಾಂಗಣದಲ್ಲಿ ನಡೆಯಲಿದೆ ಸಭೆಯ ಅಧ್ಯಕ್ಷತೆಯನ್ನು ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ಗೌರವ ಮಾರ್ಗಧರ್ಶಕಿ ಶ್ರೀಮತಿ ರಮ್ಯಾ ಯನ್ ಸೀತಾಂಗೋಳಿ ವಹಿಸಲಿರುವರು. ದಿಕ್ಸೂಚಿ ಭಾಷಣವನ್ನು ಶ್ರೀ ವಿಠಲ ನಾಯಕ್ ಕಲ್ಲಡ್ಕ (ಗೀತಾ ಸಾಹಿತ್ಯ ಸಂಭ್ರಮದ ರೂವಾರಿ ) ಮಾಡಲಿರುವರು. ಮುಖ್ಯ ಅತಿಥಿಗಳಾಗಿ ಶ್ರೀ…

Read More

ಶ್ರೀ ಚೌಕರು ಗುಳಿಗ-ಕೊರಗ ತನಿಯ ಸನ್ನಿದಿಯಲ್ಲಿ ವಾರ್ಷಿಕ ಕೋಲದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಚೌಕರು ಗುಳಿಗ, ಶ್ರೀ ಕೊರಗ ತನಿಯ ಸನ್ನಿದಿ ದೊಡ್ಡ ಹಿತ್ತಿಲು ಮಠ ಮೊಗ್ರಾಲ್ ಪುತ್ತೂರು , ಮೇ 23, 2026ರಂದು ನಡೆಯಲಿರುವ ವಾರ್ಷಿಕ ಕೋಲದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು. ಸನ್ನಿಧಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಚಾಮುಂಡೇಶ್ವರಿ ಭಜನಾ ಮಂದಿರದ ಆಡಳಿತ ಸಮಿತಿ ಅಧ್ಯಕ್ಷರಾದ ಶ್ರೀದರ ನಡುಹಿತ್ಲು ಅವರ ಸಮ್ಮುಖದಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ದೈವದಪಾತ್ರಿ ಶ್ರೀ ರಾಮ ಪಂಜದಗುಡ್ಡೆ, ಮಂದಿರದ ಅರ್ಚಕರಾದ ಶ್ರೀ ಪ್ರಭಾಕರ ದೊಡ್ಡಹಿತ್ಲು, ಶ್ರೀ…

Read More

ಆಸ್ಪತ್ರೆಯ ವೆರಾಂಡಾದಲ್ಲಿ

​ನಮ್ಮ ಅಕ್ಕನಿಗೆ ವೈದ್ಯರ ಸೂಚನೆಯಂತೆ ಇಕೋ ಕಾರ್ಡಿಯೋಗ್ರಾಫಿ (Echocardiography) ಮಾಡಿಸಲು ಕಾಸರಗೋಡಿನ ಖ್ಯಾತ ವೈದ್ಯರ ಭೇಟಿಗಾಗಿ ಹೋದ ಸಂದರ್ಭ ಅದು. ಆಸ್ಪತ್ರೆಯ ಒಳಗಿನ ಮುಚ್ಚಿದ ಕೋಣೆಯಲ್ಲಿ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು ಮನುಷ್ಯನ ಹೃದಯದ ಬಡಿತವನ್ನು ಯಾಂತ್ರಿಕವಾಗಿ ಅಳೆಯುತ್ತಿದ್ದರೆ, ಹೊರಗಿನ ಸುದೀರ್ಘ ಕಾರಿಡಾರ್‌ನಲ್ಲಿ ಮಾತ್ರ ಇಡೀ ಬದುಕಿನ ನಾಡಿಮಿಡಿತವೇ ನಲ್ಲಿ ತೆರೆದುಕೊಂಡಿತ್ತು. ಈ ಕಾಂಕ್ರೀಟ್ ಕಾರಿಡಾರ್ ಕೇವಲ ಕಾಯುವಿಕೆಗಾಗಿ ಇರುವ ಶೂನ್ಯ ಜಾಗವಲ್ಲ; ಅದು ಮನುಷ್ಯನ ಕಣ್ಣೀರ ಅಸಹಾಯಕತೆ, ಪ್ರಾರ್ಥನೆಯ ಭರವಸೆ, ನಿಶ್ಶಬ್ದ ಪ್ರೀತಿ ಮತ್ತು ಕಡು ನಿರಾಸೆಗಳು…

Read More

ಭೋವಿ ಜನಾಂಗಕ್ಕೆ ಜಾತಿ ಪ್ರಮಾಣ ಪತ್ರ ನಿರಾಕರಣೆ ಆರೋಪ: ಜಿಲ್ಲಾಡಳಿತದ ವಿರುದ್ಧ ಅಸಮಾಧಾನ

ಕರ್ನಾಟಕದ ಅವಿಭಾಜ್ಯ ಭಾಗವಾಗಿರುವ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭೋವಿ ಜನಾಂಗದವರಿಗೆ ಜಾತಿ ಪ್ರಮಾಣ ಪತ್ರ ನೀಡುವುದನ್ನು ಕಳೆದ 7-8 ವರ್ಷಗಳಿಂದ ನಿರಾಕರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಭೋವಿ ಸಮಾಜದ ಯುವ ಮುಖಂಡ ಪವನ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 30 ಸಾವಿರ ಹಾಗೂ ಉಡುಪಿ ಜಿಲ್ಲೆಯಲ್ಲಿ ಸುಮಾರು 40 ಸಾವಿರ ಭೋವಿ ಸಮುದಾಯದ ಜನರು ವಾಸವಾಗಿದ್ದು, ರಾಜ್ಯದ ಇತರ 31 ಜಿಲ್ಲೆಗಳಲ್ಲಿ ಜಾರಿಯಲ್ಲಿರುವ ಒಂದೇ ಕಾನೂನು ಈ ಎರಡು…

Read More

ಬ್ರಿಕ್ಸ್ ಶೃಂಗಸಭೆಗೂ ಮುನ್ನ ಭಾರತಕ್ಕೆ ಜಾಗತಿಕ ಗಮನ: ಕ್ಸಿ ಜಿನ್‌ಪಿಂಗ್, ಪುಟಿನ್ ಭೇಟಿ ಸಾಧ್ಯತೆ

ಈ ವರ್ಷದ ಬ್ರಿಕ್ಸ್ (BRICS) ಶೃಂಗಸಭೆಯ ಅಧ್ಯಕ್ಷತೆಯನ್ನು ಭಾರತ ವಹಿಸಿಕೊಳ್ಳುತ್ತಿರುವ ಹಿನ್ನೆಲೆ, ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ದೇಶ ಮತ್ತೊಮ್ಮೆ ಕೇಂದ್ರಬಿಂದುವಾಗಿದ್ದು, ಸೆಪ್ಟೆಂಬರ್ 12 ಮತ್ತು 13ರಂದು ನವದೆಹಲಿಯಲ್ಲಿ ನಡೆಯಲಿರುವ ಶೃಂಗಸಭೆ ಭಾರೀ ಮಹತ್ವ ಪಡೆದುಕೊಂಡಿದೆ. ಆರ್ಥಿಕ ಮತ್ತು ಭೌಗೋಳಿಕ ರಾಜಕೀಯ ಚರ್ಚೆಗಳ ಜೊತೆಗೆ, ಭಾರತ-ಚೀನಾ ನಡುವಿನ ದೀರ್ಘಕಾಲದ ಬಿಕ್ಕಟ್ಟಿನ ಸಂಬಂಧಗಳಿಗೆ ಹೊಸ ತಿರುವು ಸಿಗುವ ಸಾಧ್ಯತೆಯೂ ಈ ಸಮ್ಮೇಳನದಿಂದ ಮೂಡಿದೆ. ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸುವ ಸಾಧ್ಯತೆ ದಟ್ಟವಾಗಿದ್ದು, ಅವರು…

Read More

ಅಮೆರಿಕದ ‘ಆಪರೇಶನ್ ಎಪಿಕ್ ಫ್ಯೂರಿ’ಗೆ ಭಾರೀ ನಷ್ಟ: ಕಾಂಗ್ರೆಸ್ ಅಧೀನದ CRS ವರದಿ ಬಹಿರಂಗ

ಇರಾನ್ ವಿರುದ್ಧ ಅಮೆರಿಕ ನಡೆಸುತ್ತಿರುವ ‘ಆಪರೇಶನ್ ಎಪಿಕ್ ಫ್ಯೂರಿ’ ಕಾರ್ಯಾಚರಣೆಯಲ್ಲಿ ಅಮೆರಿಕ ಸೇನೆಗೆ ಭಾರೀ ನಷ್ಟ ಉಂಟಾಗಿದೆ ಎಂದು ಅಮೆರಿಕ ಕಾಂಗ್ರೆಸ್ ಅಧೀನದ ಸಂಸತ್ತೀಯ ಸಂಶೋಧನಾ ಸೇವೆ (CRS) ವರದಿ ಬಹಿರಂಗಪಡಿಸಿದೆ. ಫೆಬ್ರವರಿ 28ರಿಂದ ಆರಂಭವಾದ ಕಾರ್ಯಾಚರಣೆಯಲ್ಲಿ ಅಮೆರಿಕದ 42 ಯುದ್ಧ ವಿಮಾನಗಳು ಹಾಗೂ ಡ್ರೋನ್‌ಗಳು ಹಾನಿಗೊಳಗಾಗಿವೆ ಅಥವಾ ನಾಶವಾಗಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹಾನಿಗೊಳಗಾದವುಗಳಲ್ಲಿ F-15E, F-35A, A-10 ಯುದ್ಧ ವಿಮಾನಗಳು, KC-135 ಇಂಧನ ಪೂರೈಕೆ ವಿಮಾನಗಳು, E-3 ಸೆಂಟ್ರಿ AWACS ಹಾಗೂ ವಿಶೇಷ ಕಾರ್ಯಾಚರಣೆ…

Read More

ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ದೇಶವ್ಯಾಪಿ ಪ್ರತಿಭಟನೆ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಆನ್‌ಲೈನ್ ಮೂಲಕ ನಡೆಯುತ್ತಿರುವ ಔಷಧ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘ (AIOCD) ಕರೆ ನೀಡಿದ್ದ ದೇಶವ್ಯಾಪಿ ಮೆಡಿಕಲ್ ಶಾಪ್ ಬಂದ್‌ಗೆ ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದ ಕೆಲವು ವ್ಯಾಪಾರ ಸಂಘಟನೆಗಳು ಸಂಪೂರ್ಣ ಬಂದ್‌ಗೆ ಬೆಂಬಲ ಸೂಚಿಸಿದರೆ, ಇನ್ನೂ ಕೆಲವು ಸಂಘಟನೆಗಳು ಕಪ್ಪುಪಟ್ಟಿ ಧರಿಸಿ ನೈತಿಕ ಬೆಂಬಲ ವ್ಯಕ್ತಪಡಿಸಿ ಅಂಗಡಿಗಳನ್ನು ತೆರೆಯುವ ನಿರ್ಧಾರ ಕೈಗೊಂಡಿವೆ. ರಾಜ್ಯದಲ್ಲಿ ಸುಮಾರು 26 ಸಾವಿರಕ್ಕೂ ಅಧಿಕ ಮೆಡಿಕಲ್ ಶಾಪ್‌ಗಳಿದ್ದು, ಬೆಂಗಳೂರಿನಲ್ಲಿ ಶೇಕಡಾ 90ರಷ್ಟು ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ….

Read More

ಇಂಧನ ಬೆಲೆ ಏರಿಕೆ ನಡುವೆಯೂ ಬಸ್ ದರ ಹೆಚ್ಚಳ ಇಲ್ಲ: ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ

ಜಾಗತಿಕ ಮಟ್ಟದಲ್ಲಿ ಇಂಧನ ತೈಲ ಬೆಲೆ ನಿರಂತರ ಏರಿಕೆಯಾಗುತ್ತಿರುವ ನಡುವೆಯೂ ಮುಂದಿನ ಒಂದು ತಿಂಗಳವರೆಗೆ ಬಸ್ ದರ ಹೆಚ್ಚಳ ಮಾಡದಿರಲು ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ತೀರ್ಮಾನಿಸಿದೆ ಎಂದು ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ತಿಳಿಸಿದ್ದಾರೆ. ಮಂಗಳವಾರ ನಡೆದ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಪರಿಸ್ಥಿತಿಯಲ್ಲಿ ವಾಹನಗಳ ಬಿಡಿಭಾಗಗಳು, ಪೆಟ್ರೋಲ್, ಡೀಸೆಲ್ ಹಾಗೂ ಇಂಜಿನ್ ಆಯಿಲ್ ಬೆಲೆಗಳು ಗಣನೀಯವಾಗಿ ಏರಿಕೆಯಾಗಿರುವುದರಿಂದ ಸಾರಿಗೆ ನಿರ್ವಹಣಾ ವೆಚ್ಚ ಹೆಚ್ಚಾಗಿದೆ…

Read More
error: Content is protected !!