ತಂಡಗಳ ಮಧ್ಯೆ ಮಾರಾಮಾರಿ: 17 ಮಂದಿ ವಿರುದ್ಧ ಕೇಸು ಒಬ್ಬ ವಶಕ್ಕೆ

ಮಂಜೇಶ್ವರ: ಮಂಜೇಶ್ವರ ಠಾಣಾ ವ್ಯಾಪ್ತಿಯ ಉದ್ಯಾವರ ಮಾಡ ಎಂಬಲ್ಲಿ ಗುರುವಾರ ಎರಡು ತಂಡಗಳ ಮಧ್ಯೆ ನಡೆದ ಮಾರಾಮಾರಿಗೆ ಸಂಬಂಧಿಸಿ 17 ಮಂದಿ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.ಘಟನೆಗೆ ಸಂಬಂಧಿಸಿ ಒಬ್ಬನನ್ನು ಪೊಲೀಸರು ವಶಕ್ಕೆ ತೆಗೆದಿದ್ದಾರೆ. ಗುರುವಾರದಂದು ಉದ್ಯಾವರ ಮಾಡ ಪರಿಸರದಲ್ಲಿ ಎರಡು ತಂಡಗಳ ಮಧ್ಯ ಪರಸ್ಪರ ಘರ್ಷಣೆ ನಡೆದಿದೆ. ಇದು ಸಾರ್ವಜನಿಕರಿಗೆ ಸಮಸ್ಯೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ಮಾಹಿತಿ ಅರಿತು ಸ್ಥಳಕ್ಕಾಗಮಿಸಿದ ಪೊಲೀಸರು ಅಲ್ಲಿದ ತಂಡಗಳನ್ನು ಚದುರಿಸಿದ್ದಾರೆ. ಈ ಸಂದರ್ಭ ಉದ್ಯಾವರ ಬಿ.ಎಸ್‌.ನಗರ ನಿವಾಸಿ ಮೊಹಮ್ಮದ್ ಬಿಲಾಲ್…

Read More

ರಾಷ್ಟ್ರೀಯ ಹೆದ್ದಾರಿ 75 ರ ಪಾಣೆಮಂಗಳೂರು ಸಮೀಪದ ನೆಹರುನಗರ ಎಂಬಲ್ಲಿ ಘನಗಾತ್ರದ ಲಾರಿ ,ದ್ವಿಚಕ್ರ ವಾಹನಕ್ಕೆ ಡಿಕ್ಕಿ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75 ರ ಪಾಣೆಮಂಗಳೂರು ಸಮೀಪದ ನೆಹರುನಗರ ಎಂಬಲ್ಲಿ ಘನಗಾತ್ರದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ದ್ವಿಚಕ್ರವಾಹನ ಸವಾರನಿಗೆ ಗಂಭೀರವಾಗಿ ಗಾಯಗೊಂಡಿದ್ದು,ಈತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.‌ಕಲ್ಲಡ್ಕ ನಿವಾಸಿ ಸುಶಾಂತ್ ಕುಮಾರ್ ಎಂಬಾತನಿಗೆ ಲಾರಿ ಡಿಕ್ಕಿಯಾಗಿದೆ. ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಕೆ.ಎನ್.ಆರ್ .ಸಿ.ಕಂಪೆನಿಗೆ ಸೇರಿದ ಲಾರಿ ಇದಾಗಿದ್ದು, ಚಾಲಕ ಅಬ್ದುಲ್‌ ನೂರ್ ಖಾಜಿ ಎಂಬಾತ ನೆಹರುನಗರದಲ್ಲಿರುವ ಅನಧಿಕೃತ ‌ಕ್ರಾಸ್ ನಲ್ಲಿ ಬಂದಿದ್ದಲ್ಲದೆ ರಾಂಗ್ ಸೈಡ್ ನಲ್ಲಿ ಚಲಾಯಿಸಿಕೊಂಡು…

Read More

ತಿರೂರಂಗಾಡಿ ನಿವಾಸಿ ಮೆಟ್ರೋ ರೈಲು ಸೇತುವೆಯಿಂದ ಜಿಗಿದು ಸಾವು

ಕೊಚ್ಚಿ: ಮೆಟ್ರೋ ರೈಲು ಸೇತುವೆಯ ಮೇಲಿಂದ ಜಿಗಿದು ಯುವಕನೊಬ್ಬ ಮೃತಪಟ್ಟಿದ್ದಾನೆ. ಮೃತಪಟ್ಟವರು ತಿರೂರಂಗಾಡಿ ಚುಳ್ಳಿಪ್ಪಾರ ವೀರಾಶೇರಿ ಕುಂಞಿಮೊಯ್ದೀನ್ ಅವರ ಪುತ್ರ ನಿಸಾರ್. ಈ ಘಟನೆ ತ್ರಿಪ್ಪುಣಿತುರ ವಡಕ್ಕೇಕೋಟ-ಎಸ್.ಎನ್. ಜಂಕ್ಷನ್ ಮೆಟ್ರೋ ನಿಲ್ದಾಣಗಳ ನಡುವೆ ನಡೆದಿದೆ. ಆತನನ್ನು ತೀವ್ರ ಗಾಯಗಳೊಂದಿಗೆ ಎರ್ನಾಕುಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತದೇಹವನ್ನು ಶೀಘ್ರದಲ್ಲೇ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು. ವಡಕ್ಕೇಕೋಟದಿಂದ ತ್ರಿಪ್ಪುಣಿತುರಾಗೆ ಟಿಕೆಟ್ ಪಡೆದ ನಂತರ ನಿಸಾರ್ ಪ್ಲಾಟ್‌ಫಾರ್ಮ್‌ಗೆ ಪ್ರವೇಶಿಸಿದ್ದ. ನಂತರ ಆತ ಪ್ಲಾಟ್‌ಫಾರ್ಮ್‌ನಿಂದ ಹೊರಗೆ ಓಡಿ ಹೋಗಿದ್ದಾನೆ. ಇದನ್ನು…

Read More

ಜೀಪು ಪಲ್ಟಿಯಾಗಿ ಕೃಷಿಕ ಸಾವು

ಕಡಬ: ಜೀಪು ಪಲ್ಟಿಯಾಗಿ ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ. ಬಿಳಿನೆಲೆ ಗ್ರಾಮದ ಬಿಳಿನೆಲೆ ಬೈಲು ನಿವಾಸಿ ಧರ್ಮಪಾಲ (68) ಮೃತರು. ಧರ್ಮಪಾಲ ಅವರು ತನ್ನ ಮಗನೊಂದಿಗೆ ತೋಟಕ್ಕೆ ಔಷಧಿ ಸಿಂಪಡಿಸಿದ ಬಳಿಕ ತಮ್ಮ ಜೀಪಿನಲ್ಲಿ ಮನೆಗೆ ಹಿಂದಿರುಗುವ ವೇಳೆ ಮನೆ ಸಮೀಪ ಮಣ್ಣಿನ ರಸ್ತೆಯಲ್ಲಿ ಜೀಪು ಹತ್ತದೇ ಇದ್ದುದರಿಂದ ಧರ್ಮಪಾಲ ಅವರು ಜೀಪಿನಿಂದ ಇಳಿದು ರಸ್ತೆ ಬದಿ ನಿಂತಿದ್ದ ವೇಳೆ, ಜೀಪು ಚಲಾಯಿಸುತ್ತಿದ್ದ ಧರ್ಮಪಾಲರ ಮಗ ಜೀಪನ್ನು ಹತ್ತಿಸಲು ಪ್ರಯತ್ನಿಸಿದಾಗ…

Read More

ಕುಡ್ತಮುಗೇರು: ಕಾರು ಡಿಕ್ಕಿ ಪ್ರಗತಿ ಸ್ವೀಟ್ಸ್ ನ ಮಾಲಿಕ ಜಗನ್ನಾಥ ಶೆಟ್ಟಿಗಾ‌ರ್ ಗಂಭೀರ

ವಿಟ್ಲ: ಕಾರೊಂದು ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರು ಗಂಭೀರ‌ ಗಾಯಗೊಂಡ ಘಟನೆ ಆ.೮ರಂದು ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಕುಡ್ತಮುಗೇರಿನ ಪ್ರಗತಿ ಸ್ವೀಟ್ಸ್ ನ ಮಾಲಿಕ ಜಗನ್ನಾಥ ಶೆಟ್ಟಿಗಾ‌ರ್ ಗಂಭೀರ ಗಾಯಗೊಂಡವರಾಗಿದ್ದಾರೆ. ಜಗನ್ನಾಥ ಶೆಟ್ಟಿಗಾರ್ ರವರು ಕುಡ್ತಮುಗೇರಿನಿಂದ ಪರ್ತಿಪ್ಪಾಡಿ ಕಡೆಗೆ ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಅವರ ದ್ವಿಚಕ್ರ‌ವಾಹನದ‌ ಟಯರ್ ಪಂಚರ್ ಆಗಿತ್ತು. ಆದ್ದರಿಂದ ಅವರು ತಮ್ಮ ವಾಹನವನ್ನು‌ ರಸ್ತೆ ಬದಿಯಲ್ಲಿ ನಿಲ್ಲಿಸಿ ಅಲ್ಲೆ ಪಕ್ಕದಲ್ಲಿ ನಿಂತಿದ್ದ ವೇಳೆ ಪುತ್ತೂರು ಭಾಗದಿಂದ ಸಾಲೆತ್ತೂರು…

Read More

ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಟಿ ಪ್ರಭಾಕ‌ರ್ ಕಲ್ಯಾಣಿ ಇನ್ನಿಲ್ಲ

ಉಡುಪಿ: ಕಾಂತಾರ ಚಿತ್ರದ ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಟಿ ಪ್ರಭಾಕ‌ರ್ ಕಲ್ಯಾಣಿ ಹೃದಯಾಘಾತದಿಂದ ನಿಧನರಾದರು.ಪೆರ್ಡೂರಿನ ಮೂಲದವರು ಮತ್ತು ಬ್ಯಾಂಕ್ ಆಫ್ ಬರೋಡಾದ ನಿವೃತ್ತ ಅಧಿಕಾರಿಯಾಗಿದ್ದ ಪ್ರಭಾಕರ್, ‘ಕಾಂತಾರ’ದಲ್ಲಿ ವಕೀಲರ ಪಾತ್ರವನ್ನು ನಿರ್ವಹಿಸುವ ಮೂಲಕ ಪ್ರಸಿದ್ದರಾಗಿದ್ದರು. ಕುಟುಂಬದ ಮೂಲಗಳ ಪ್ರಕಾರ, ಅವರು ಎರಡು ದಿನಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Read More

ಮುಸುಕುದಾರಿಗೆ ಗನ್ ಮ್ಯಾನ್ ಭದ್ರತೆ ನೀಡುವಂತೆ ಎಸ್ ಐಟಿಗೆ ಮನವಿ

ಧರ್ಮಸ್ಥಳದಲ್ಲಿ ಶವಹೂತಿಟ್ಟಿರುವ ಪ್ರಕರಣದ ದೂರುದಾರ ತನಗೆ ಗನ್ ಮ್ಯಾನ್ ಭದ್ರತೆ ನೀಡುವಂತೆ ಎಸ್ ಐಟಿಗೆ ಮನವಿ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಧರ್ಮಸ್ಥಳದಲ್ಲಿ ಗಲಾಟೆ ಪ್ರಕರಣದ ಬೆನ್ನಲ್ಲೇ ದೂರುದಾರ ತನ್ನ ಮೇಲೂ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ತನಗೆ ಗನ್ ಮ್ಯಾನ್ ಭದ್ರತೆ ಒದಗಿಸುವಂತೆ ಮನವಿ ಮಾಡಿದದಗಿ ದೂರುದಾರ ಪರ ವಕೀಲರು ಎಸ್ ಐಟಿ ತಂಡಕ್ಕೆ ಲಿಖಿತ ಮನವಿ ಮಾಡಿದ್ದಾರೆ.ಶೋಧಕಾರ್ಯ ಮುಕ್ತಾಯವಾದ ಬಳಿಕವೂ ತನಗೆ ಗನ್ ಮ್ಯಾನ್ ಭದ್ರತೆ ಕಲ್ಪಿಸುವಂತೆ ಎಸ್ ಐಟಿ ಎಸ್‌ ಪಿ ಜಿತೇಂದ್ರ ದಯಾಮ್…

Read More

ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್

ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಎಸ್ಐಟಿ ಈಗಾಗಲೇ ತನಿಖೆ ಕೈಗೊಂಡಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ಕುಳಿತವರು, ತನಿಖೆ ಹೇಗೆ ನಡೆಯಬೇಕು ಎಂದು ನಿರ್ದೇಶಿಸಿ, ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ಆಗುವಂತಹ ಹೇಳಿಕೆ ನೀಡಿ ಅಂತಿಮ ತೀರ್ಪು ಸಹ ಕೊಟ್ಟು ಬಿಡುತ್ತಿದ್ದಾರೆ. ಇಂತಹ ಅತಿರೇಕದ ವರ್ತನೆಗಳಿಗೆ ರಾಜ್ಯ ಸರ್ಕಾರ ಕೂಡಲೇ ಕಡಿವಾಣ ಹಾಕಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಧರ್ಮಸ್ಥಳವು ರಾಜ್ಯದ ಸಾವಿರಾರು ದೇವಸ್ಥಾನಗಳ ಜೀರ್ಣೋದ್ಧಾರ, ಕೆರೆ ಅಭಿವೃದ್ಧಿ, ಹಿಂದೂ ರುದ್ರಭೂಮಿಗಳ ನವೀಕರಣ, ಸ್ತ್ರೀ ಸಬಲೀಕರಣ,…

Read More

ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ’ಧರ್ಮಸ್ಥಳ’ ಕ್ಷೇತ್ರವನ್ನು ಟಾರ್ಗೆಟ್ ಮಾಡಿರುವ ಆಘಾತಕಾರಿ ಸಂಗತಿ

ಮಂಗಳೂರು ಹೊರ ವಲಯದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಬ್ಲಾಸ್ಟ್ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣಾ ಮಾಹಿತಿ ಆರೋಪಿಯು, ಧರ್ಮಸ್ಥಳದಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಎನ್ನುವುದನ್ನು ಬೆಳಕಿಗೆ ತಂದಿದೆ.ನವೆಂಬರ್ 2022ರಲ್ಲಿ ನಡೆದ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆ ನಡೆಸುತ್ತಿದೆ. ಮಂಗಳೂರಿನಲ್ಲಿ ಹಿಂದೆ ಆಟೋರಿಕ್ಷಾದಲ್ಲಿ ಕಡಿಮೆ ತೀವ್ರತೆಯ ಸ್ಪೋಟ ಸಂಭವಿಸಿತ್ತು. ಜಾರಿ ನಿರ್ದೇಶನಾಲಯವು, ಪ್ರಮುಖ ಆರೋಪಿ ಸಯ್ಯದ್ ಯಾಸಿನ್ ಬ್ಯಾಂಕ್ ಖಾತೆಯಲ್ಲಿದ್ದ 29 ಸಾವಿರ ರೂಪಾಯಿ ಹಣವನ್ನು, ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿಯಲ್ಲಿ ಮುಟ್ಟುಗೋಲು…

Read More

ಆ. 9ರಂದು ಉಡುಪಿಯಲ್ಲಿ “ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯರ ನವತಿ ಜನ್ಮವರ್ಧಂತಿ ಉತ್ಸವ”

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಕೆ. ರಘುಪತಿ ಭಟ್ ಮಾಹಿತಿ ಉಡುಪಿ: ಕನ್ನಡ ಭವನ ಕಾಸರಗೋಡು ಕೇಂದ್ರ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮಂಗಳೂರು ಇದರ ವತಿಯಿಂದ ಡಾ. ಎಚ್ ಪ್ರಭಾಕರರಿಗೆ ಅಭಿನಂದನ ಸನ್ಮಾನ ಸಮಾರಂಭ ನಡೆಯಿತು.ಏಷ್ಯಾನೆಟ್ ಸುವರ್ಣ ಸುದ್ದಿ ವಾಹಿನಿ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಲಲಿತ್ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಹೆಲ್ತ್ ಕೇರ್ ಎಕ್ಸೆಲೆನ್ ಸ್ ಪ್ರಶಸ್ತಿ ಸ್ವೀಕರಿಸಿದ ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಹೃದ್ರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ…

Read More
error: Content is protected !!