ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ… !

ಮಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ಸ್ವರೂಪವನ್ನು ಬದಲಾವಣೆ ವಿರುದ್ಧ ಹಾಗೂ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಸ್ವಾಯತ್ತ ಸಂಸ್ಥೆಯಾದ ಇ.ಡಿ.ಯನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ರವರ ವಿರುದ್ಧದ ಷಡ್ಯಂತ್ರ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯು ಪ್ರತಿಭಟನೆಯನ್ನು ನಡೆಸಲಾಯಿತು . ಆದರೆ ಜಿಲ್ಲಾ ಬಿಜೆಪಿ ಕಚೇರಿಯ ತನಕ ಪ್ರತಿಭಟನೆ ನಡೆಯದೆ ಮಲ್ಲಿಕಟ್ಟೆಯ…

Read More

ಮ.ನ.ಪಾ ವ್ಯಾಪ್ತಿಯಲ್ಲಿ ಎಲ್ಲಾ ಅಭಿವೃದ್ಧಿ ಕಾರ್ಯಗಳು ಅರ್ಧಕ್ಕೆ ಕುಂಠಿತ . ತಡೆಹಿಡಿದಿರುವ ಅನುದಾನವನ್ನು ಬಿಡುಗಡೆಗೊಳಿಸಬೇಕು .ಶಾಸಕ ವೇದವ್ಯಾಸ ಕಾಮತ್ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಮನವಿ

ಮ.ನ.ಪಾ ವ್ಯಾಪ್ತಿಯಲ್ಲಿ ಎಲ್ಲಾ ಅಭಿವೃದ್ಧಿ ಕಾರ್ಯಗಳು ಅರ್ಧಕ್ಕೆ ನಿಂತಿದ್ದು, ಜನಸಾಮಾನ್ಯರ ಹಿತದೃಷ್ಟಿಯಿಂದಲಾದರೂ ತಡೆಹಿಡಿದಿರುವ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದರು. ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ್ದ ಅವರು, ರಸ್ತೆ ದುರಸ್ತಿ ಸೇರಿದಂತೆ ಯಾವುದೇ ಅಭಿವೃದ್ಧಿ ಕಾರ್ಯಗಳಿಗೂ ಕಳೆದ ಎರಡೂವರೆ ವರ್ಷಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ನಯಾ ಪೈಸೆ ಅನುದಾನ ನೀಡಿಲ್ಲ. ಅಲ್ಲದೇ ಈ ಹಿಂದೆ ಬಜೆಟ್ ನಲ್ಲೇ ಘೋಷಣೆಯಾದಂತಹ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ -1 ಗೆ 150…

Read More

ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮೆಲ್ಲರ ಕರ್ತವ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಡ್ಯ:ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮನುಷ್ಯ ಸಮಾಜ ನಿರ್ಮಾಣವಾಗಬೇಕು. ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮಳವಳ್ಳಿಯದಲ್ಲಿ ಆಯೋಜಿಸಲಾಗಿದ್ದ ಶ್ರೀ ಮತ್ಸು ತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ಸಮಾರೋಪ ಸಮಾರಂಭ ದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಯಂತೋತ್ಸವಗಳು ಹಲವು ತಾಲ್ಲೂಕು ಮತ್ತುಜಿಲ್ಲಾ ಕೇಂದ್ರಗಳಲ್ಲಿ ನಡೆದುಕೊಂಡು ಬರುತ್ತಿದ್ದು,…

Read More

ಮನ್‌ರೇಗಾವನ್ನು ಕೊಲ್ಲಲಾಗಿದೆ. ಮೋದಿ ಸರ್ಕಾರ ಕೆಲಸದ ಹಕ್ಕನ್ನು ಕಸಿದುಕೊಂಡಿದೆ : ಲೋಕಸಭಾ ಮಾಜಿ ಸಂಸದ ವಿಜಯ್ ಇಂದರ್ ಸಿಂಗ್ಲಾ

ಮಂಗಳೂರು: ಮೋದಿ ಸರ್ಕಾರವು “ಸುಧಾರಣ”, ಹೆಸರಿನಲ್ಲಿ ಲೋಕಸಭೆಯಲ್ಲಿ ಮತ್ತೊಂದು ಮಸೂದೆಯನ್ನು ಬುಲ್ಡೋಜರ್ ಮಾಡುವ ಮೂಲಕ ವಿಶ್ವದ ಅತಿದೊಡ್ಡ ಉದ್ಯೋಗ ಖಾತರಿ ಯೋಜನೆಯಾದ ಮನ್‌ರೇಗಾ ವನ್ನು ಕೊಲೆ ಮಾಡಿದೆ ಎಂದು ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯರು, ಲೋಕಸಭಾ ಮಾಜಿ ಸಂಸದರಾದ ವಿಜಯ್ ಇಂದರ್ ಸಿಂಗ್ಲಾ ತಿಳಿಸಿದರು . ಅವರು ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಇದು ಮಹಾತ್ಮ ಗಾಂಧಿಯವರ ತತ್ವಶಾಸ್ತ್ರವನ್ನು ಕೆಡವಲು ಮತ್ತು ಬಡ ಭಾರತೀಯರಿಂದ ಕೆಲಸ ಮಾಡುವ ಹಕ್ಕನ್ನು ಕಸಿದುಕೊಳ್ಳುವ ಉದ್ದೇಶಪೂರ್ವಕ ಪ್ರಯತ್ನವಾಗಿದೆ. ಮನ್‌ರೇಗಾ…

Read More

ಡಿ.20 ರಿಂದ ಜ.4 ರವರೆಗೆ ಕರಾವಳಿ ಉತ್ಸವ ಪ್ರಯುಕ್ತ ಪಿಲಿಕುಳದಲ್ಲಿ ವಿಶೇಷ ಕಾರ್ಯಕ್ರಮ.

ಮಂಗಳೂರು :ಕರಾವಳಿ ಉತ್ಸವದ ಅಂಗವಾಗಿ ಡಿ.20 ರಿಂದ ಜನವರಿ 4 ರ ತನಕ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರವು ಹಲವು ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಕಾಂಬೋ ಪ್ಯಾಕ್ ಪ್ರವೇಶ ಶುಲ್ಕ 50 ಶೇಕಡಾ ರಿಯಾಯಿತಿಯನ್ನು ನೀಡಿದ್ದು ಈ ಹಿಂದೆ ರೂ 250 ಇದ್ದ ದರವು 125 ರೂ ನಿಗದಿ ಮಾಡಲಾಗಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತ ನಿರ್ದೇಶಕರಾದ ಡಾ. ಅರುಣ್ ಕುಮಾರ್ ಶೆಟ್ಟಿ ತಿಳಿಸಿದರು. ಅವರು ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಕರೆದ…

Read More

ಸಿದ್ದರಾಮಯ್ಯ ಸರ್ಕಾರಕ್ಕೆ ಕೋಮುವಾದ, ದ್ವೇಷಭಾಷಣದ ವಿರುದ್ದ ನೈಜ ಕಾಳಜಿ ಇಲ್ಲ : ಮುನೀರ್ ಕಾಟಿಪಳ್ಳ

ಸಿದ್ದರಾಮಯ್ಯ ಸರ್ಕಾರ ದ್ವೇಷಭಾಷಣದ ಕಾಯ್ದೆ ಮಂಡಿಸಿ ಬೀಗುತ್ತಿದೆ. ವಾಸ್ತವವಾಗಿ ರಾಜ್ಯ ಸರ್ಕಾರಕ್ಕೆ ದ್ವೇಷ ಭಾಷಣ ತಡೆಯುವ ಇಚ್ಚಾಶಕ್ತಿ ಇಲ್ಲ. ದ್ವೇಷಭಾಷಣಕಾರರ ಮೇಲೆ ದಾಖಲಾಗಿರುವ 38 ಮೊಕದ್ದಮೆಗಳಿಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ಸಿದ್ದರಾಮಯ್ಯ ಸರ್ಕಾರ ತೆರವುಗೊಳಿಸಲು ಕ್ರಮ ಕೈಗೊಳ್ಳದೆ ಮೃದು ಹಿಂದುತ್ವ ದೋರಣೆ ಅನುಸರಿಸುತ್ತಿದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ. ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆದ ಜನದನಿ ರ‌್ಯಾಲಿಯಲ್ಲಿ ಅವರು ಮಾತನಾಡುತ್ತಿದ್ದರು. ‘ರಾಜ್ಯದ ಜನಸಾಮಾನ್ಯರ ಬದುಕಿನ ಪ್ರಶ್ನೆ ಮುನ್ನಲೆಗೆ ಬಾರದಂತೆ ಕೋಮುವಾದವನ್ನು ಬಳಕೆ…

Read More

ಯೂಟ್ಯೂಬ್ ನಲ್ಲಿ “ಕಣ್ಣ ರಂಗ್” ತರಂಗ -ಜನವರಿ 23 ರಂದು ಬಿಡುಗಡೆಗೆ ಸಜ್ಜಾಗಿರುವಕಟ್ಟೆಮಾರ್ ಚಿತ್ರ ದ ಹಾಡು ಬಿಡುಗಡೆ

ಮಂಗಳೂರು : ಹಲವು ಕಾರಣಗಳಿಂದ ಸದ್ದು ಮಾಡುತ್ತಿರುವ, ಜನವರಿ 23 ರಂದು ಬಿಡುಗಡೆಗೆ ಸಜ್ಜಾಗಿರುವ ‘ಕಟ್ಟೆಮಾರ್’ ತುಳು ಚಲನಚಿತ್ರದಿಂದ ಹಾಡೊಂದು ಈಗ ಬಿಡುಗಡೆಯಾಗಿದೆ. ‘ಕಣ್ಣ ರಂಗ್’ ಮೆಲೋಡಿ ಟ್ರ್ಯಾಕ್ ಅಸ್ತ್ರಪ್ರೊಡಕ್ಷನ್ ಹೌಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಆರ್ ಕೆ ಮುಲ್ಕಿ ಮತ್ತು ಕಾರ್ತಿಕ್ ಮುಲ್ಕಿ ಸಾಹಿತ್ಯ ಬರೆದಿರುವ ಹಾಡಿಗೆ ಕಾರ್ತಿಕ್ ಮುಲ್ಕಿ ಸಂಗೀತ ನಿರ್ದೇಶನ ಮಾಡಿದ್ದಾರೆ. ವಿಶೇಷ ಎಂದರೆ ಮೊದಲ ಬಾರಿಗೆ ಸಿದ್ದಾರ್ಥ್ ಬೆಲ್ಮಣ್ ತುಳು ಸಾಹಿತ್ಯಕ್ಕೆ ಸ್ವರ ಜೋಡಿಸಿದ್ದಾರೆ. ಜೊತೆಗೆ ಪ್ರಥ್ವಿ ಭಟ್ ಕೂಡ…

Read More

ಕಾನೂನುಬಾಹಿರ ಕೋಳಿ ಅಂಕ; ಪುತ್ತೂರು ಶಾಸಕರ ವಿರುದ್ಧವೇ ಕೇಸ್!

ಪುತ್ತೂರು : ಯಾವುದೇ ಸೂಕ್ತ ಪರವಾನಿಗೆ ಪಡೆಯದೇ ಕಾನೂನುಬಾಹಿರವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೇಪುವಿನಲ್ಲಿ ಕೋಳಿ ಅಂಕ ಆಯೋಜಿಸಿದ ವಿಚಾರಕ್ಕೆ ಸಂಬಂಧಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಹಿತ 16 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.ನಿನ್ನೆ ಬಂಟ್ವಾಳ ಕೇಪು ಗ್ರಾಮದ ಕೇಪು ಎಂಬಲ್ಲಿ, ಮುರಳೀಧರ ರೈ ಎಂಬವರ ಗದ್ದೆಯಲ್ಲಿ, ಕಾನೂನುಬಾಹಿರವಾಗಿ ಕೋಳಿ ಅಂಕ ಆಡುವ ಬಗ್ಗೆ ಮಾಹಿತಿ ಬಂದ ಮೇರೆಗೆ ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಆಗ ಹಲವು ಜನರು ಕೋಳಿ‌ ಅಂಕಕ್ಕೆ…

Read More

ಶ್ರೀ ವಾಸುಕೀ ನಾಗರಾಜ ರಕ್ತೇಶ್ವರೀ ಪರಿವಾರ ದೈವಗಳ ಪ್ರತಿಷ್ಠಾ ವರ್ಧಂತ್ಯುತ್ಸವ

ಪಾವೂರು: ಶ್ರೀ ವಾಸುಕೀ ನಾಗರಾಜ ರಕ್ತೇಶ್ವರೀ ಪರಿವಾರ ದೈವಗಳ ಸನ್ನಿದಿ ಪಾವೂರು ತಚ್ಛಿರೆಪದವಿನಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಇದೇ ಬರುವ ತಾರೀಕು 25 . 12 . 2025 ನೇ ಗುರುವಾರದಂದು ಬ್ರಹ್ಮ ಶ್ರೀ ವರ್ಕಾಡಿ ಹೊಸ ಮನೆ ರಾಜೇಶ ತಾಳಿತ್ತಾಯರ ನೇತೃತ್ವದಲ್ಲಿ ವಿವಿಧ ವೈಧಿಕ , ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿರುವುದು. ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಮಹಾ ಗಣಪತಿ ಹೋಮ , ಕಲಶ ಪೂಜೆ , ಪ್ರಧಾನ ಹೋಮ ,ಪಂಚಾಮೃತ ಅಭಿಷೇಕ…

Read More

ಸಿನಿಮಾ–ಟೂರಿಸಂ ಯೋಜನೆಗಳು ಕೇರಳದ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಬಲ ತುಂಬುತ್ತವೆ: ಸಚಿವ ಪಿ.ಎ. ಮೊಹಮ್ಮದ್ ರಿಯಾಸ್

ಕೇರಳದಲ್ಲಿ ಸಿನಿಮಾ–ಟೂರಿಸಂ ಯೋಜನೆಗಳನ್ನು ಜಾರಿಗೊಳಿಸುವುದರಿಂದ ರಾಜ್ಯದ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಹೊಸ ಉತ್ತೇಜನ ದೊರೆಯಲಿದೆ ಎಂದು ಕೇರಳದ ಪ್ರವಾಸೋದ್ಯಮ ಮತ್ತು ಸಾರ್ವಜನಿಕ ಕಾರ್ಯಗಳ ಸಚಿವ ಪಿ.ಎ. ಮೊಹಮ್ಮದ್ ರಿಯಾಸ್ ಹೇಳಿದರು. 1995ರಲ್ಲಿ ಬಿಡುಗಡೆಯಾದ ಖ್ಯಾತ ಚಿತ್ರ ‘ಬಾಂಬೆ’ಯ ನಿರ್ದೇಶಕ ಮಣಿರತ್ನಂ, ನಾಯಕಿ ಮನೀಷಾ ಕೊಯ್ರಾಲಾ ಹಾಗೂ ಛಾಯಾಗ್ರಾಹಕ ರಾಜೀವ್ ಮೆನನ್ ಅವರೊಂದಿಗೆ ಬೇಕಲ್ ಕೋಟೆ ಭೇಟಿ ನೀಡಿದ ಸಂದರ್ಭದಲ್ಲಿಯೇ ಸಚಿವರು ಈ ಮಾತುಗಳನ್ನು ಹೇಳಿದರು. ಸಿನಿಮಾ–ಟೂರಿಸಂ ಯೋಜನೆಯ ಮೂಲಕ ಹಳೆಯ ಚಿತ್ರಗಳ ಲೊಕೇಶನ್‌ಗಳನ್ನು ಸಾರ್ವಜನಿಕರಿಗೆ ಪರಿಚಯಿಸಿ, ಅದರಿಂದ ಪ್ರವಾಸೋದ್ಯಮದ…

Read More
error: Content is protected !!