Headlines

ಎಸ್‌ಐಆರ್ ಮಹಾ ಅಭಿಯಾನ: ಕಂಕನಾಡಿ ವಾರ್ಡ್‌ಗಳಲ್ಲಿ ಶಾಸಕ ವೇದವ್ಯಾಸ ಕಾಮತ್ ಪರಿಶೀಲನೆ

ಎಸ್ಐಆರ್ ಮಹಾ ಅಭಿಯಾನದ ಪ್ರಯುಕ್ತ ಮಂಗಳೂರು ನಗರ ದಕ್ಷಿಣ ಮಂಡಲದ ವಿವಿಧ ವಾರ್ಡ್ ಗಳಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಕ್ಷಿಣ ಮಹಾಶಕ್ತಿ ಕೇಂದ್ರದ 49 ನೇ ಕಂಕನಾಡಿ ವಾರ್ಡಿನ ಬೂತ್ ಸಂಖ್ಯೆ 182 ಹಾಗೂ 185 ಕ್ಕೆ ಭೇಟಿ ನೀಡಿದ ಶಾಸಕರು, ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಈ ಎಸ್‌ಐಆರ್ ಪ್ರಕ್ರಿಯೆಯು ಅತ್ಯಂತ ಮಹತ್ವದ್ದಾಗಿದ್ದು ಅದರ ಉದ್ದೇಶದ ಸಾಕಾರಕ್ಕಾಗಿ ಎಲ್ಲರ ಸಹಕಾರ ಅತ್ಯಗತ್ಯವಾಗಿದೆ. ಎಲ್ಲಾ ಮತದಾರರು ಜವಾಬ್ದಾರಿಯುತವಾಗಿ ಸಹಕರಿಸುವಂತೆ ಕಳಕಳಿಯ ವಿನಂತಿ…

Read More

ಹುಣಸೂರಿನಲ್ಲಿ ದುರಂತ: ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ

ಮೈಸೂರು: ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಮನಕಲಕುವ ಘಟನೆ ನಡೆದಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದ ಬಳಿಕ ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹರೀಶ್ (42), ಪತ್ನಿ ನಿಶ್ಚಿತಾ (37), ಪುತ್ರಿಯರಾದ ರಕ್ಷಾ (13) ಮತ್ತು ವರ್ಷಾ (8) ಎಂದು ಗುರುತಿಸಲಾಗಿದೆ. ಹರೀಶ್ ಕಾರು ಶೋರೂಮ್‌ನಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಆಯಿಲ್ ಮಿಲ್‌ವೊಂದನ್ನು ಆರಂಭಿಸಿದ್ದರು ಎಂದು ತಿಳಿದುಬಂದಿದೆ. ಸೋಮವಾರ ರಾತ್ರಿ ಮನೆಗೆ ಬಂದ ಹರೀಶ್, ಪತ್ನಿ ಹಾಗೂ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ಬಳಿಕ ಮನೆಯ…

Read More

ದೆಹಲಿ ದರ್ಬಾರ್‌ನಲ್ಲಿ ಸಚಿವ ಸಂಪುಟ ಕಸರತ್ತು; ಇಂದು ಅಂತಿಮ ಪಟ್ಟಿ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ದೆಹಲಿಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೈಕಮಾಂಡ್ ನಾಯಕರೊಂದಿಗೆ ಸರಣಿ ಸಭೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಚಿವರ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ಇಂದೇ ಅಂತಿಮ ಪಟ್ಟಿ ಪ್ರಕಟವಾಗುವ ನಿರೀಕ್ಷೆಯಿದೆ. ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಬುಧವಾರ ಮಧ್ಯಾಹ್ನ 2…

Read More

ಸಾಹಸಿ ಯುವಕನಿಂದ ಪ್ರಾಣಾಪಾಯದಿಂದ ಪಾರಾದ ಯುವತಿ: ಮಂಜೇಶ್ವರದಲ್ಲಿ ಮಾನವೀಯತೆ ಮೆರೆದ ಘಟನೆ

ಮಂಜೇಶ್ವರ: ತುಂಬಿ ಹರಿಯುತ್ತಿದ್ದ ಸುವರ್ಣಗಿರಿ ಹೊಳೆಗೆ ಆಕಸ್ಮಿಕವಾಗಿ ಬಿದ್ದು ಪ್ರವಾಹದಲ್ಲಿ ಕೊಚ್ಚಿಹೋಗುತ್ತಿದ್ದ ಯುವತಿಯೊಬ್ಬರನ್ನು ಸ್ಥಳೀಯ ಯುವಕ ತಮ್ಮ ಜೀವದ ಹಂಗು ತೊರೆದು ರಕ್ಷಿಸಿದ ಅಪರೂಪದ ಘಟನೆ ದೇರಂಬಳದಲ್ಲಿ ಜರುಗಿದೆ. ​ಮೀಂಜ-ಮಂಗಲ್ಪಾಡಿ ಪಂಚಾಯತ್ ಸಂಪರ್ಕಿಸುವ ಶಿಥಿಲಗೊಂಡ ಕಾಲುಸೇತುವೆ ದಾಟುವಾಗ ಅಕ್ಕ-ತಂಗಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಸೇತುವೆ ಮೇಲೆಯೂ ನೀರು ಹರಿಯುತ್ತಿದ್ದುದರಿಂದ ತಲೆಸುತ್ತಿ ಯುವತಿ ಹೊಳೆಗೆ ಬಿದ್ದಿದ್ದಾರೆ. ತಂಗಿಯ ಆಕ್ರಂದನ ಕೇಳಿ ಅದೇ ದಾರಿಯಲ್ಲಿ ಬಂದ ಉದಯಕುಮಾರ್ ಶೆಟ್ಟಿ ತಕ್ಷಣ ಪ್ರವಾಹಕ್ಕೆ ಹಾರಿ ಯುವತಿಯನ್ನು ಸುರಕ್ಷಿತವಾಗಿ ಪಾರು ಮಾಡಿದ್ದಾರೆ….

Read More

ಕೊರೊನಾ ಬಗ್ಗೆ ಆತಂಕ ಬೇಡ, ಎಚ್ಚರಿಕೆ ಅಗತ್ಯ: ಸಚಿವ ಯು.ಟಿ. ಖಾದರ್

ಉಡುಪಿ: ದೇಶದಲ್ಲಿ ಮತ್ತೆ ಕೋವಿಡ್‌-19 ಸೋಂಕಿನ ಬಗ್ಗೆ ಆತಂಕ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಪರೀಕ್ಷೆ ನಡೆಸಿದಾಗ ಕೆಲವರಲ್ಲಿ ಸೋಂಕು ದೃಢಪಟ್ಟರೂ ಆತಂಕಪಡುವ ಪರಿಸ್ಥಿತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು. ಉಡುಪಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈರಸ್‌ಗಳು ಪರಿಸರದಲ್ಲಿ ಇರುವುದು ಸಹಜ. ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಸೋಂಕು ತಗುಲುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ವೈರಸ್‌ಗಿಂತ ನಾವು ಗಟ್ಟಿಯಾಗಬೇಕು. ಉತ್ತಮ ಆಹಾರ ಪದ್ಧತಿ, ಸ್ವಚ್ಛತೆ ಮತ್ತು…

Read More

‘ರಾಮ ಮಂದಿರ ಹಗರಣದ ಬಗ್ಗೆ ಮೋದಿ ಸರ್ಕಾರ ಉತ್ತರಿಸಲಿ’ – ವಿನಯ್ ಕುಮಾರ್ ಸೊರಕೆ

ಪುತ್ತೂರು: ಬಿಜೆಪಿಯವರು ನಮ್ಮನ್ನು ಧರ್ಮಕ್ಕೆ ವಿರೋಧ ಎಂಬ ಪ್ರಚಾರ ಮಾಡುತ್ತಾರೆ. ಆದರೆ ನಾವು ಎಲ್ಲಾ ಧರ್ಮವನ್ನು ಗೌರವಿಸುತ್ತೇವೆ. ನಮ್ಮ ಧರ್ಮವನ್ನು ಪ್ರಥಮವಾಗಿ ಗೌರವಿಸುತ್ತೇವೆ, ಅನುಸರಿಸುತ್ತೇವೆ. ಬೇರೆ ಧರ್ಮಗಳನ್ನು ದ್ವೇಷ ಮಾಡುವುದಿಲ್ಲ. ಆದರೆ ಇವತ್ತು ಬಿಜೆಪಿಯವರಿಗೆ ರಾಮದೇವರ ಶಾಪ ತಟ್ಟಿದೆ. ಅಯೋಧ್ಯೆಯ ರಾಮ ಮಂದಿರದಲ್ಲಿ ಆಗಿರುವ 2 ಸಾವಿರ ಕೋಟಿ ರೂ.ನಷ್ಟು ದೊಡ್ಡ ಹಗರಣದ ಹಿನ್ನೆಲೆಯಲ್ಲಿ ಅಲ್ಲಿನ ಟ್ರಸ್ಟನ್ನು ತಕ್ಷಣ ಬರ್ಕಾಸ್ತುಗೊಳಿಸಬೇಕು. ಭಕ್ತರ ನಂಬಿಕೆಗೆ ತೊಂದರೆ ಆಗದಂತೆ ನರೇಂದ್ರ ಮೋದಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರಚಾರ…

Read More

ಪುತ್ತೂರು ಸರ್ಕಾರಿ ಆಸ್ಪತ್ರೆಗೆ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ ಭೇಟಿ

ಪುತ್ತೂರು ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ ಸದಾನಂದ ನಾಗಪ್ಪ ನಾಯ್ಕ ಇವರು ದಿನಾಂಕ 11-07-2026ರಂದು ಸಂಜೆ ಗಂಟೆ 4.30ರಿಂದ ನಗರ ಠಾಣೆಯ ಪೋಲೀಸ್‍ ಸಿಬ್ಬಂದಿ ಶ್ರೀ ಪ್ರಭಾಕರ ಮೋರೆ ಹಾಗೂ ಸಮಿತಿಯ ಸಿಬ್ಬಂದಿಯವರೊಂದಿಗೆ ಪುತ್ತೂರು ತಾಲೂಕಿನ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು. ಪುತ್ತೂರು ಸರಕಾರಿ ಆಸ್ಪತ್ರೆಗೆ ನ್ಯಾಯಾಧೀಶರು ಭೇಟಿ ನೀಡಿದ ಸಂದರ್ಭ ಡಾ. ಅಜಯ್‍ ಅವರು ಆಸ್ಪತ್ರೆಯ ಬಗ್ಗೆ ವಿಶ್ಲೇಷಣೆ ಮಾಡುತ್ತಾ – ಹೊರ ರೋಗಿಗಳ ವಿಭಾಗ, ಒಳರೋಗಿಗಳ…

Read More

ವಯೋಶ್ರೀ ಯೋಜನೆ ಸ್ಕ್ರೀನಿಂಗ್ ಶಿಬಿರ ಆಯೋಜನೆ

ಕಾಸರಗೋಡು:ಕೇಂದ್ರ ಸರ್ಕಾರದ ರಾಷ್ಟ್ರೀಯ ವಯೋಶ್ರೀ ಯೋಜನೆ ಅಡಿಯಲ್ಲಿ ಹಿರಿಯ ನಾಗರಿಕರು ಹಾಗೂ ದಿವ್ಯಾಂಗರಿಗೆ ಉಚಿತ ಸಹಾಯಕ ಸಾಧನಗಳನ್ನು ವಿತರಿಸುವ ಉದ್ದೇಶದಿಂದ ಸ್ಕ್ರೀನಿಂಗ್ ಶಿಬಿರವನ್ನು ಮಧೂರಿನ ಉಳಿಯತ್ತಡ್ಕದ ಅಟಲ್‌ಜಿ ಸಮುದಾಯ ಭವನದಲ್ಲಿ ಆಯೋಜಿಸಲಾಯಿತು. ಪ್ರಧಾನಮಂತ್ರಿ ದಿವ್ಯಶ ಕೇಂದ್ರ ಹಾಗೂ ವಿಕಸಿತ ಕೇರಳ ಕಾಸರಗೋಡು ಜಿಲ್ಲಾ ಹೆಲ್ಪ್ ಡೆಸ್ಕ್‌ನ ಸಂಯುಕ್ತ ಆಶ್ರಯದಲ್ಲಿ ನಡೆದ ಶಿಬಿರವನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಂ.ಎಲ್. ಅಶ್ವಿನಿ, ಹಿರಿಯ ನಾಗರಿಕರು ಮತ್ತು ದಿವ್ಯಾಂಗರಿಗೆ ಉಚಿತ ಸಹಾಯಕ ಸಾಧನಗಳನ್ನು…

Read More

ನೀಟ್ ಪ್ರತಿಭಟನೆ ಲಾಠಿಚಾರ್ಜ್: ಮೋದಿ ಕ್ಷಮೆ ಕೇಳಲಿ, ಅಮಿತ್ ಶಾ ರಾಜೀನಾಮೆ ನೀಡಲಿ – ರಾಹುಲ್ ಗಾಂಧಿ

ನವದೆಹಲಿ: ನೀಟ್ (NEET) ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ಖಂಡಿಸಿ ದೆಹಲಿಯಲ್ಲಿ ನಡೆದ ‘ಸಂಸತ್ ಚಲೋ’ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿಚಾರ್ಜ್ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಬೇಕು ಹಾಗೂ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಭಾರತೀಯ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಟೀಕಿಸಿದರು. ಸಂಸತ್ತಿನಲ್ಲಿ ಈ ವಿಷಯದ ಕುರಿತು…

Read More

ಚೆಮ್ಮನಾಡ್‌ನ ಮನೆಯೊಂದರಿಂದ ಭಾರಿ ನಗ, ನಗದು ಕಳವು

​ಕಾಸರಗೋಡು: ಚೆಮ್ಮನಾಡ್‌ನಲ್ಲಿರುವ ಮನೆಯೊಂದರ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಅಲ್ಮೇರಾದಲ್ಲಿದ್ದ ಅರ್ಧ ಲಕ್ಷ ರೂಪಾಯಿ ನಗದು ಕಳವು ಮಾಡಿದ್ದಾರೆ. ​ಚೆಮ್ಮನಾಡ್‌ ಕೆನ್ಸ್ ಆಡಿಟೋರಿಯಂ ಸಮೀಪದ ‘ಈಕೋಟ್ ಹೌಸ್’ನಲ್ಲಿ ಈ ಕಳವು ನಡೆದಿದೆ. ಜುಲೈ 19ರ ಬೆಳಿಗ್ಗೆ 6:30ರಿಂದ ಜುಲೈ 20ರ ಮಧ್ಯಾಹ್ನ 11:30ರ ನಡುವಿನ ಅವಧಿಯಲ್ಲಿ ಈ ಕೃತ್ಯ ಎಸಗಲಾಗಿದೆ. ಮನೆಯ ಮುಂಭಾಗದ ಮತ್ತು ಮಲಗುವ ಕೋಣೆಯ ಬಾಗಿಲುಗಳನ್ನು ಮುರಿದು ಒಳಗೆ ನುಗ್ಗಿದ ಕಳ್ಳರು, ಹಣವಿರಿಸಿದ್ದ ಅಲ್ಮೇರಾ ಇರುವ ಕೋಣೆಯನ್ನು ತಲುಪಿದ್ದಾರೆ.

Read More
error: Content is protected !!