ಮಂಗಳೂರು: ಏ.19ರಂದು ಇಸ್ಕಾನ್ ವತಿಯಿಂದ ರಥಯಾತ್ರೆ, ಅಕ್ಷಯ ತೃತೀಯ ಮಹೋತ್ಸವ
ಮಂಗಳೂರಿನ ಪಿವಿಎಸ್ ಕಲಾಕುಂಜದಲ್ಲಿರುವ ಶ್ರೀ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ಏಪ್ರಿಲ್ 19ರಂದು ರಥಯಾತ್ರೆ ಹಾಗೂ ಅಕ್ಷಯ ತೃತೀಯ ಮಹೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತದೆ ಎಂದು ಇಸ್ಕಾನ್ ಮಂಗಳೂರು ಅಧ್ಯಕ್ಷ ಗುಣಾಕಾರ ರಾಮದಾಸ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಥಯಾತ್ರೆ ಮತ್ತು ಅಕ್ಷಯ ತೃತೀಯ ಎರಡೂ ಹಿಂದೂ ಧರ್ಮದಲ್ಲಿ ಅತ್ಯಂತ ಶುಭ ದಿನಗಳಾಗಿದ್ದು, ಈ ದಿನಗಳಲ್ಲಿ ಧಾರ್ಮಿಕ ಚಟುವಟಿಕೆಗಳು ಮತ್ತು ಹೊಸ ಆರಂಭಗಳು ಅತ್ಯಂತ ಫಲಪ್ರದವಾಗುತ್ತವೆ ಎಂಬ ನಂಬಿಕೆ ಇದೆ ಎಂದು ಹೇಳಿದರು. ಕಾರ್ಯಕ್ರಮವು…