ಕಾರ್ಕಳ: ನಾರಿಶಕ್ತಿ ಜಾಗೃತಿ ಸಮಾವೇಶ, ಸಾಧಕಿಯರಿಗೆ ಸನ್ಮಾನ
ಕಾರ್ಕಳ: ಮಹಿಳಾ ಸಬಲೀಕರಣ ಎಂದರೆ ಕೇವಲ ಹಕ್ಕುಗಳಿಗಾಗಿ ಸದ್ದು ಮಾಡುವುದಲ್ಲ. ಬದಲಿಗೆ, ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯಯುತ ಅವಕಾಶಗಳನ್ನು ಪಡೆದುಕೊಳ್ಳುತ್ತಲೇ, ಜವಾಬ್ದಾರಿಯುತ ಸ್ಥಾನಗಳನ್ನು ಅಲಂಕರಿಸಿ ಮುನ್ನಡೆಯುವುದಾಗಿದೆ ಎಂದು ವಾಗ್ಮಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಸುರಭಿ ಹೊಡಿಗೆರೆ ಪ್ರತಿಪಾದಿಸಿದರು. ಇಲ್ಲಿನ ಮಂಜುನಾಥ ಪೈ ಸಭಾಂಗಣದಲ್ಲಿ ರವಿವಾರ ಹಮ್ಮಿಕೊಳ್ಳಲಾಗಿದ್ದ ನಾರಿಶಕ್ತಿ ಸಾಧಕ ಮಹಿಳೆಯರ ಅಭಿನಂದನಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡುತ್ತಿದ್ದರು. ಆಧುನಿಕ ಸಮಾಜದಲ್ಲಿ ಮಹಿಳೆಗೆ ಕೇವಲ ಸುರಕ್ಷತೆ ಅಥವಾ ರಕ್ಷಣೆ ನೀಡಿದರೆ ಸಾಲದು. ಅದಕ್ಕಿಂತ ಹೆಚ್ಚಾಗಿ ಆಕೆಗೆ ಸ್ವತಂತ್ರವಾಗಿ…
