ಪಾಣೆಮಂಗಳೂರು ಪೇಟೆಯಿಂದ ಆಲಡ್ಕವಾಗಿ ಮೆಲ್ಕಾರ್ ವರೆಗಿನ ರಸ್ತೆಗೆ ತೇಪೆ ಭಾಗ್ಯ .. !
ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಪೇಟೆಯಿಂದ ಆಲಡ್ಕವಾಗಿ ಮೆಲ್ಕಾರ್ ವರೆಗಿನ ರಸ್ತೆಯ ಗುಂಡಿಯನ್ನು ಮುಚ್ಚಿ ತೇಪೆ ಕಾರ್ಯ ಆರಂಭಗೊಂಡಿದೆ. ಮೆಲ್ಕಾರ್ ನಿಂದ ಪಾಣೆಮಂಗಳೂರುವರೆಗೆ ರಸ್ತೆಯಲ್ಲಿ ಹೊಂಡಗುಂಡಿಗಳಿಂದ ತುಂಬಿದ್ದು, ಸಂಚಾರ ಮಾಡಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ,ಹಾಗಾಗಿ ಈ ರಸ್ತೆಗೆ ಡಾಮರೀಕರಣ ಮಾಡುವಂತೆ ಇಲ್ಲಿನ ಪುರಸಭಾ ಸದಸ್ಯರಾಗಿದ್ದ ಅಬುಬಕ್ಕರ್ ಸಿದ್ದೀಕ್ ಗುಡ್ಡೆಯಂಗಡಿ ಅವರು ಮನವಿ ಮಾಡಿದ್ದರು. ಡಾಮರು ಕಾಣದೆ ಹತ್ತಾರು ವರ್ಷಗಳನ್ನು ಕಂಡಿರುವ ಈ ರಸ್ತೆಗೆ ಪೂರ್ತಿ ಮರುಡಾಮರೀಕರಣ ಹಾಗೂ ಎರಡು ಬದಿಯ ಚರಂಡಿಯ ಹೊಳೆತ್ತುವಂತೆ ಮತ್ತು ದುರಸ್ತಿ…